ದಿನದ ಸುದ್ದಿ
ಬೆಂಗಳೂರಿನಲ್ಲಿ ವರ್ಕ್ಈಝಿ ಮೊದಲ ಕೇಂದ್ರ ಆರಂಭ
ಸುದ್ದಿದಿನ,ಬೆಂಗಳೂರು:ವರ್ಕ್ಈಝಿ ಬೆಂಗಳೂರಿನಲ್ಲಿ ಮೊದಲ ಕೇಂದ್ರವನ್ನು ಪ್ರಾರಂಭಿಸಿದೆ: ಈ ಮೂಲಕ ತನ್ನ ರಾಷ್ಟ್ರೀಯ ಅಡಿ-ಅಂಕಿತವನ್ನು ವಿಸ್ತರಿಸಿ, ಹೆಚ್ಚುವರಿ 2,00,000 ಚದರ ಅಡಿಯನ್ನು ತನ್ನ ಪೋರ್ಟ್ಫೋಲಿಯೋಗೆ ಸೇರಿಸಿದೆ.
ವರ್ಕ್ಈಝಿ ಬೆಂಗಳೂರು ಮಾರುಕಟ್ಟೆಗೆ ತನ್ನ ಪ್ರವೇಶವನ್ನು ಗುರುತಿಸಿದೆ, ವರ್ಕ್ಈಝಿ ಟೆಕ್ಶೈರ್ ಎಂಬ 2,00,000 ಚದರ ಅಡಿ ಪ್ರಮುಖ ಕೇಂದ್ರದ ಪ್ರಾರಂಭಿಸಿದೆ. ಹೊಸ ಕೇಂದ್ರವು 3,300+ ಸೀಟ್ಗಳು, ಚಟುವಟಿಕೆಯ ಜನಸಮೂಹ ಪ್ರದೇಶಗಳು, ಸಹಯೋಗಿ ವಲಯಗಳು ಮತ್ತು ಮಹತ್ವದ ಆಹಾರಗೃಹವನ್ನು ನೀಡುತ್ತದೆ. ಟೆಕ್ಶೈರ್ ಅನ್ನು LEED ಪ್ರಮಾಣೀಕರಣಕ್ಕಾಗಿ ರೂಪಿಸಲಾಗಿದ್ದು, ಗುಣಮಟ್ಟ ಮತ್ತು ಬಾಳಿಕೆನ್ನು ಒಂದುಗೂಡಿಸುತ್ತದೆ.
ಕರ್ನಾಟಕ, ಬೆಂಗಳೂರು, ಅಕ್ಟೋಬರ್ 10, 2025 :ಸೌತ್ ಇಂಡಿಯಾದ ಪ್ರಮುಖ ನಿರ್ವಹಣೆಯ ಕಚೇರಿ ಸ್ಥಳಗಳ ಪೂರೈಕೆದಾರರಲ್ಲಿ ಒಂದಾದ *ವರ್ಕ್ಈಝಿ* ಸ್ಪೇಸ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ (ವರ್ಕ್ಈಝಿ), ಬೆಂಗಳೂರಿನಲ್ಲಿ ತನ್ನ ಮೊದಲ ಕೇಂದ್ರವಾದ ವರ್ಕ್ಈಝಿ ಟೆಕ್ಶೈರ್ ಅನ್ನು ಪ್ರಾರಂಭಿಸುವುದನ್ನು ಹೊಗಳಿ ಘೋಷಿಸಿದೆ. ಬೆಳ್ಳಂದೂರು ನಗರದ ತಂತ್ರಜ್ಞಾನ ಕಾರಿಡಾರ್ (ಒಆರ್ಆರ್)ನ ಹೃದಯಭಾಗದಲ್ಲಿ ಸ್ಥಿತವಾಗಿರುವ ಈ ಹಬ್, ವರ್ಕ್ಈಝಿನ ವಿಸ್ತರಣಾ ಪಯಣದಲ್ಲಿ ಮಹತ್ವದ ಮೈಲಿಗಲ್ಲು ಎಂದು ಗುರುತಿಸಲ್ಪಟ್ಟಿದೆ.
ಸುಮಾರು 2,00,000 ಚದರ ಅಡಿಗಳಲ್ಲಿ ವ್ಯಾಪಿಸಿರುವ ಟೆಕ್ಶೈರ್, ಬೆಂಗಳೂರಿಗೆ 3,300ಕ್ಕೂ ಹೆಚ್ಚು ಪ್ರೀಮಿಯಂ ಸೀಟ್ಗಳು, ಚಟುವಟಿಕೆಯ ಸಮುದಾಯ ಮತ್ತು ಬ್ರೇಕ್ಔಟ್ ಸ್ಥಳಗಳು, ಸ್ಟೇಡಿಯಂ-ಶೈಲಿಯ ಸ್ಟೆಪ್ ಸೀಟಿಂಗ್, ಕಟ್ಟಿಂಗ್-ಎಡ್ಜ್ ಸಭೆ ಕೋಣೆಗಳು ಮತ್ತು ಮಹತ್ವದ ಆಹಾರಗೃಹವನ್ನು ತರಲು ಬಂದಿದೆ. ಈ ಸೌಲಭ್ಯವು LEED ಪ್ರಮಾಣೀಕರಣವನ್ನು ಸಾಧಿಸಲು ರೂಪಿಸಲಾಗಿದ್ದು, ಮಟ್ಟ ಮತ್ತು ಕಾರ್ಯಕ್ಷಮತೆಯ ಜೊತೆಗೆ ಇಳುವರಿಯತೆಗೆ ವರ್ಕ್ಈಝಿನ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ.
ಈ ಉಪಕ್ರಮದ ಬಗ್ಗೆ *ವರ್ಕ್ಈಝಿನ ಪ್ರಧಾನ ನಿರ್ದೇಶಕ ಶ್ರೀ ಪ್ರತಾಪ್ ಮುರಳಿ* ಅವರು ಮಾತನಾಡಿ: “ನಮ್ಮ ಮೊದಲ ವರ್ಕ್ಈಝಿ ಕೇಂದ್ರವನ್ನು ಬೆಂಗಳೂರಿನಲ್ಲಿ ಪ್ರಾರಂಭಿಸುವುದನ್ನು ಘೋಷಿಸುವುದು ನಮಗೆ ಸಂತೋಷ ನೀಡುತ್ತದೆ, ಇದು ನಮ್ಮ ಬೆಳವಣಿಗೆಯ ಪಯಣದಲ್ಲಿ ಮಹತ್ವದ ಮೈಲಿಗಲ್ಲು. ಚೆನ್ನೈಯಲ್ಲಿ ಯಶಸ್ವಿಯಾದ ಐದು ವರ್ಷಗಳ ನಂತರ, ಕೇವಲ 0.1 ಮಿಲಿಯನ್ ಚದರ ಅಡಿ ಪೋರ್ಟ್ಫೋಲಿಯೋದೊಂದಿಗೆ ಆರಂಭಿಸಿ, ನಾವು ಪ್ರಸ್ತುತ 1.25 ಮಿಲಿಯನ್ ಚದರ ಅಡಿಗಳಿಗೆ ವಿಸ್ತರಿಸಿದ್ದೇವೆ, 3 ನಗರಗಳಲ್ಲಿ ವ್ಯಾಪಿಸಿದ್ದೇವೆ. ಈ ಚಟುವಟಿಕೆಯ ನಗರಕ್ಕೆ ವರ್ಕ್ಇಜ್ ಅನುಭವವನ್ನು ತರಲು ನಾವು ಉತ್ಸಾಹದಲ್ಲಿದ್ದೇವೆ.
ಬಲಿಷ್ಠ ಕ್ಲೈಂಟ್ಗಳ ಬೆಂಬಲ ಮತ್ತು ಕಾರ್ಯಾಚರಣೆಯ ಉತ್ತಮತೆಗೆ ಹೆಸರುವಾಸಿಯಾಗಿ, ನಾವು ಆರಂಭದಿಂದಲೂ ವರ್ಷಕ್ಕೊಂದು ವರ್ಷಕ್ಕೆ 45 ಪ್ರತಿಶತಕ್ಕೂ ಹೆಚ್ಚು ಪೋರ್ಟ್ಫೋಲಿಯೋ ಬೆಳವಣಿಗೆಯನ್ನು ಸಾಧಿಸಿದ್ದೇವೆ, ಎಲ್ಲಾ ಆಸ್ತಿಗಳಲ್ಲಿ ಸರಾಸರಿ ಆಕ್ರಮಣ ಪ್ರಮಾಣ 90 ಪ್ರತಿಶತಕ್ಕೂ ಹೆಚ್ಚು ಕಾಯ್ದುಕೊಂಡಿದ್ದೇವೆ. ನಮ್ಮ ಯಶಸ್ಸು ಬಲಿಷ್ಠ ಮತ್ತು ಭಕ್ತಿಯ ತಂಡ, ಗುಣಮಟ್ಟದ ಮೂಲಸೌಕರ್ಯಗಳ ಮೇಲಿನ ಗಮನ, ಸೇವಾ ಉತ್ತಮತೆ ಮತ್ತು ಆಧುನಿಕ ವಿನ್ಯಾಸದಿಂದ ಚಾಲಿತವಾಗಿದೆ. ಈ ಹೊಸ ಕೇಂದ್ರದೊಂದಿಗೆ, ನಾವು ಸಹಯೋಗ ಮತ್ತು ನವೀನತೆಯ ಮೂಲಕ ಬೆಂಗಳೂರು ಫ್ಲೆಕ್ಸ್-ಸ್ಪೇಸ್ ಮಾರುಕಟ್ಟೆಯಲ್ಲಿ ಬಲಿಷ್ಠ ಉಪಸ್ಥಿತಿಯನ್ನು ನಿರ್ಮಿಸುವ ಗುರಿಯನ್ನು ಹೊಂದಿದ್ದೇವೆ. ಪ್ರೊಡಕ್ಟಿವಿಟಿ ಬೆಳವಣಿಗೆಯನ್ನು ಚಾಲನೆ ಮಾಡಲು ಉದ್ಯಮದ ಹಂತಹಂತದವರೊಂದಿಗೆ ಪಾಲುದಾರಿಕೆ ಮಾಡಲು ನಾವು ನಿರೀಕ್ಷೆಯಲ್ಲಿದ್ದೇವೆ.” ಎಂದು ಹೇಳಿದರು.
ಈ ಮೈಲಿಗಲ್ಲಿನ ಬಗ್ಗೆ ವ್ಯಾಖ್ಯಾನಿಸುತ್ತಾ, *ವರ್ಕ್ಈಝಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಸತೀಶ್* ಅವರು “ಬೆಂಗಳೂರು ವರ್ಕ್ಈಝಿನ ಬೆಳವಣಿಗೆಯ ಪಯಣದಲ್ಲಿ ನಿರ್ಣಾಯಕ ಅಧ್ಯಾಯವನ್ನು ಪ್ರತಿನಿಧಿಸುತ್ತದೆ. ವರ್ಕ್ಇಜ್ ಟೆಕ್ಶೈರ್ನೊಂದಿಗೆ, ನಾವು ಕೇವಲ ನಮ್ಮ ಅಡಿ-ಅಂಕಿತವನ್ನು ವಿಸ್ತರಿಸುತ್ತಿಲ್ಲ—ನಾವು ನವೀನತೆ, ಸಮುದಾಯ ಮತ್ತು ಪ್ರೊಡಕ್ಟಿವಿಟಿಯನ್ನು ಮೌಲ್ಯವಾಗಿ ಹೊಂದಿರುವ ಮಾರುಕಟ್ಟೆಗೆ ಫ್ಲೆಕ್ಸಿಬಲ್ ವರ್ಕ್ಸ್ಪೇಸ್ನ ಹೊಸ ಮಾನದಂಡವನ್ನು ತರಲು ಬಂದಿದ್ದೇವೆ. ಈ ಪ್ರಾರಂಭ, ಆಧುನಿಕ ವ್ಯವಹಾರಗಳ ಅಗತ್ಯಗಳೊಂದಿಗೆ ಆಳವಾಗಿ ಹೊಂದಿಕೊಳ್ಳುವ ಮತ್ತು ಭವಿಷ್ಯಕ್ಕೆ ಸಿದ್ಧವಾದ ವರ್ಕ್ಸ್ಪೇಸ್ ಸೊಲ್ಯೂಷನ್ಗಳನ್ನು ಒದಗಿಸುವ ಕಡೆಗಿನ ನಮ್ಮ ಬದ್ಧತೆಯನ್ನು ಬಲಪಡಿಸುತ್ತದೆ.” ಎಂದು ತಿಳಿಸಿದರು.
ವರ್ಕ್ಈಝಿ ಬಗ್ಗೆ
ವರ್ಕ್ಈಝಿ ಸೌತ್ ಇಂಡಿಯಾದ ಅತ್ಯಂತ ನಂಬಿಕೆಯ ನಿರ್ವಹಣೆಯ ಕಚೇರಿ ಸ್ಥಳಗಳ ಸೊಲ್ಯೂಷನ್ ಕಂಪನಿಗಳಲ್ಲಿ ಒಂದಾಗಿದ್ದು, 12 ಕೇಂದ್ರಗಳಲ್ಲಿ 22,000ಕ್ಕೂ ಹೆಚ್ಚು ಸೀಟ್ಗಳನ್ನು ನಿರ್ವಹಿಸುತ್ತದೆ, ಚೆನ್ನೈ, ಬೆಂಗಳೂರು ಮತ್ತು ಕೊಯಂಬತೂರ್ನಲ್ಲಿ 1.2 ಮಿಲಿಯನ್ ಚದರ ಅಡಿಗಳಿಗಿಂತ ಹೆಚ್ಚು ಫ್ಲೆಕ್ಸಿಬಲ್ ವರ್ಕ್ಸ್ಪೇಸ್ಗಳಲ್ಲಿ ವ್ಯಾಪಿಸಿದೆ. 2019ರಲ್ಲಿ ಚೆನ್ನೈಯಲ್ಲಿ ಸ್ಥಾಪಿಸಲ್ಪಟ್ಟ ಕಂಪನಿ, ತನ್ನ ಸ್ಥಾಪಕ ಮತ್ತು ಪ್ರಧಾನ ನಿರ್ದೇಶಕ ಶ್ರೀ ಸುನಿಲ್ ರೆಡ್ಡಿ ಅವರ ಬಲಿಷ್ಠ ನಾಯಕತ್ವ ಮತ್ತು ಸ್ಪಷ್ಟ ದೃಷ್ಟಿಯಡಿಯಲ್ಲಿ ಕಾರ್ಗಟ್ಟಾಗಿ ಬೆಳೆದಿದೆ. ಕಂಪನಿ ಇತ್ತೀಚೆಗೆ ಕೊಯಂಬತೂರ್ನಲ್ಲಿ ತನ್ನ ಉಪಸ್ಥಿತಿಯನ್ನು ವಿಸ್ತರಿಸಿದೆ. ಚೆನ್ನೈಯಲ್ಲಿ ಮುಖ್ಯ ಫ್ಲೆಕ್ಸ್ ಸ್ಪೇಸ್ ಪೂರೈಕೆದಾರನಾಗಿ, ವರ್ಕ್ಈಝಿ ಫಾರ್ಚ್ಯೂನ್ 500 ಕ್ಲೈಂಟ್ಗಳ ಬಲಿಷ್ಠ ಪೋರ್ಟ್ಫೋಲಿಯೋವನ್ನು ನಿರ್ಮಿಸಿದ್ದು, ತನ್ನ ವಿಶ್ವಾಸಾರ್ಹತೆ, ಸಮಯಕ್ಕೆ ಒಪ್ಪಂದ ನಿರ್ವಹಣೆ ಮತ್ತು ಉತ್ತಮತೆಗೆ ಬದ್ಧತೆಗಾಗಿ ಲ್ಯಾಂಡ್ಲಾರ್ಡ್ಗಳು ಮತ್ತು ಅಂತರರಾಷ್ಟ್ರೀಯ ಆಸ್ತಿ ಸಲಹೆಗಾರರು (ಐಪಿಸಿಗಳು) ಗಳಿಂದ ಅತ್ಯುನ್ನತ ಗೌರವವನ್ನು ಪಡೆದಿದ್ದಾರೆ.
ಮಾಧ್ಯಮ ಸಂಪರ್ಕ: ರೆಡ್ ಕನ್ಸಲ್ಟಿಂಗ್ – ರಾಜಾ / ಸುನಿತಾ 9841570091 / 9841234535
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಶ್ರೀ ದುರ್ಗಾಂಬಿಕಾ ದೇವಿ ಜಾತ್ರೆ – ಪ್ರಾಣಿಬಲಿ ಮತ್ತು ಮದ್ಯಪಾನ ನಿಷೇಧ, ಬ್ಯಾನರ್ ಅಳವಡಿಕೆಗೆ ಅನುಮತಿ ಕಡ್ಡಾಯ
ಸುದ್ದಿದಿನ,ದಾವಣಗೆರೆ:ನಗರದೇವತೆ ಶ್ರೀ ದುರ್ಗಾಂಬಿಕಾ ದೇವಿ ಜಾತ್ರೆಯು ಫೆ. 22 ರಿಂದ 25 ರವರೆಗೆ 3 ದಿನಗಳ ಕಾಲ ನಡೆಯಲಿದ್ದು, ಭಕ್ತಿಪೂರಕವಾಗಿ ವಿಜೃಂಭಣೆಯಿಂದ ನಡೆಯಲು ಕ್ರಮವಹಿಸಲಾಗಿದೆ, ಜಾತ್ರೆ ಸಮಯದಲ್ಲಿ ದೇವಸ್ಥಾನದ ಸುತ್ತಮುತ್ತಲು ಪ್ರಾಣಿಬಲಿಯನ್ನು ನಿಷೇಧಿಸಲಾಗಿದೆ. ಹಾಗೂ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಮುಂಜಾಗ್ರತೆಯಾಗಿ ಮದ್ಯಪಾನವನ್ನು ನಿಷೇದಿಸಲಾಗಿದೆ. ಸಾರ್ವಜನಿಕರು ಸಹಕಾರ ನೀಡುವಂತೆ ಹಾಗೂ ಬ್ಯಾನರ್ ಅಳವಡಿಕೆಗೆ ಅನುಮತಿ ಕಡ್ಡಾಯವೆಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರ ಸ್ವಾಮಿ ತಿಳಿಸಿದರು.
ಅವರು ಫೆ.17 ರಂದು ನಗರದೇವತೆ ಶ್ರೀ ದುರ್ಗಾಂಬಿಕಾ ದೇವಿ ಜಾತ್ರೆ ಮಹೋತ್ಸವದ ಅಂಗವಾಗಿ ದೇವಸ್ಥಾನದ ಬಳಿ ಏರ್ಪಡಿಸಿದ್ದ ಪೂರ್ವಬಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಚಿವರ ಅಧ್ಯಕ್ಷತೆಯಲ್ಲಿ ಮತ್ತು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಒಟ್ಟು ಐದು ಸಭೆಗಳನ್ನು ನಡೆಸಲಾಗಿದೆ. ಕಳೆದ ಜಾತ್ರೆಯಲ್ಲಿನ ಅನುಭವಗಳ ಆಧಾರದ ಮೇಲೆ ಪೊಲೀಸ್ ಅಧಿಕಾರಿಗಳು ಮತ್ತು ಧರ್ಮದರ್ಶಿಗಳು ನೀಡಿದ ಸಲಹೆಗಳನ್ನು ಈ ಬಾರಿ ಜಾರಿಗೆ ತರಲಾಗುತ್ತಿದೆ. ದೇವಸ್ಥಾನದ ಸುತ್ತಮುತ್ತಲ 500 ಮೀಟರ್ ವ್ಯಾಪ್ತಿಯಲ್ಲಿ ಸುಮಾರು ವರ್ಷಗಳಿಂದ ಸ್ವಚ್ಛಗೊಳಿಸದ ಚರಂಡಿಗಳನ್ನು ಸ್ವಚ್ಛಗೊಳಿಸಲಾಗಿದೆ. ಈ ಪ್ರಕ್ರಿಯೆಯಲ್ಲಿ ಸುಮಾರು 100 ಟ್ರಕ್ ಲೋಡ್ಗಳಷ್ಟು ಹೂಳನ್ನು ಹೊರತೆಗೆಯಲಾಗಿದೆ. ಬಾರ್ಲೈನ್ ರಸ್ತೆ, ರೇಣುಕಾ ಮಂದಿರ ರಸ್ತೆ ಮತ್ತು ಡಬಲ್ ರೋಡ್ಗಳಲ್ಲಿ ಚರಂಡಿ ನೀರು ಉಕ್ಕಿ ಹರಿಯದಂತೆ ಕ್ರಮ ಕೈಗೊಂಡು ರಸ್ತೆಗಳನ್ನು ಸರಿಪಡಿಸಲಾಗಿದೆ ಎಂದು ತಿಳಿಸಿದರು.
ಬೆಸ್ಕಾಂ ಲೈನ್ಗಳಲ್ಲಿನ ತೊಂದರೆಗಳನ್ನು ಸರಿಪಡಿಸಲಾಗಿದೆ ಮತ್ತು ತೆರೆದಿದ್ದ ಟ್ರಾನ್ಸ್ಫಾರ್ಮರ್ಗಳನ್ನು ಮುಚ್ಚಿ ರಕ್ಷಣೆ ಒದಗಿಸಲಾಗಿದೆ. ಆರೋಗ್ಯ ಇಲಾಖೆಯ ಮೂಲಕ ಸೊಳ್ಳೆಗಳ ಕಾಟವಿಲ್ಲದಂತೆ ಮತ್ತು ನೀರು ನಿಲ್ಲದಂತೆ ಕ್ರಮ ವಹಿಸಲಾಗಿದೆ. ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಸೇರಿ ಸುಗಮ ಸಂಚಾರಕ್ಕಾಗಿ ಎರಡು ಬಾರಿ ಸ್ಥಳ ಪರಿಶೀಲನೆ ನಡೆಸಲಾಗಿದೆ. ದೇವಸ್ಥಾನದ ಸುತ್ತಮುತ್ತಲು ಇರುವ ದೇವಸ್ಥಾನಗಳು ಮತ್ತು ಕಳೆದ ಬಾರಿ ಬಿಟ್ಟುಹೋಗಿದ್ದ ದೇವಸ್ಥಾನಗಳಿಗೆ ಬಣ್ಣ ಬಳಿಯುವ ಕೆಲಸ ನಡೆಯುತ್ತಿದ್ದು, ಎರಡು ದಿನಗಳಲ್ಲಿ ಪೂರ್ಣಗೊಳ್ಳಲಿದೆ. ಶಿವಾಜಿ ಮಹಾರಾಜರು ಮತ್ತು ಸಂಗೊಳ್ಳಿ ರಾಯಣ್ಣನವರಂತಹ ಮಹನೀಯರ ಪ್ರತಿಮೆಗಳನ್ನು ಜಲಪ್ರೋಕ್ಷಣೆ ಮಾಡಿ ಸ್ವಚ್ಛಗೊಳಿಸಲು ಆದೇಶಿಸಲಾಗಿದೆ, ಸ್ವಚ್ಛತಾ ಕಾರ್ಯ ಮುಗಿದ ನಂತರ ಪ್ರಮುಖ ರಸ್ತೆ ಮತ್ತು ವೃತ್ತಗಳಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲು ವ್ಯವಸ್ಥೆ ಮಾಡಲಾಗಿದೆ.
ಸುರಕ್ಷತಾ ದೃಷ್ಠಿಯಿಂದ ದುರ್ಗಾಂಭ ದೇವಸ್ಥಾನದ ಸುತ್ತಮುತ್ತಲು ಉಪವಿಭಾಗಾಧಿಕಾರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು, ಪಶುಪಾಲನೆ ಮತ್ತು ಪಶುವೈದ್ಯಕೀಯ ಇಲಾಖೆಯ ಉಪ ನಿರ್ದೇಶಕರು ಇವರುಗಳನ್ನ ನೊಡೆಲ್ ಅಧಿಕಾರಿಗಳು, ಚೌಡೇಶ್ವರಿ ದೇವಸ್ಥಾನ ಮತ್ತು ವಿನೋಬ್ ನಗರ ಸುತ್ತಮುತ್ತಲು ನೋಡಲ್ ಅಧಿಕಾರಿಗಳು ಮತ್ತು ಕಾಯಿ ಪೇಟೆ ಮತ್ತು ವಸಂತ ಟಾಕೀಸ್ ಪ್ರದೇಶಗಳಿಗೆ ಮಹಾನಗರ ಪಾಲಿಕೆ ಆಯುಕ್ತರು ರವರನ್ನು ನೋಡಲ್ ಅಧಿಕಾರಿಗಳನ್ನು ನೇಮಿಸಿದ್ದು, ಸದರಿ ಅಧಿಕಾರಿಗಳು ಯಾವುದೇ ಅಹಿತಕರ ಘಟನೆ ನಡೆಯದಂತೆ ಸುರಕ್ಷತಾ ಕ್ರಮಗಳನ್ನು ವಹಿಸುವರು ಎಂದು ತಿಳಿಸಿದರು.
ಮಹಾನಗರ ಪಾಲಿಕೆ ಆಯುಕ್ತೆ ರೇಣುಕಾ ಮಾತನಾಡಿ ದುರ್ಗಾಂಭಿಕ ದೇವಸ್ಥಾನದ ಸುತ್ತಮುತ್ತಲ ದೇವಸ್ಥಾನಗಳಿಗೆ ಸುಮಾರು 51 ಲಕ್ಷ ವೆಚ್ಚದಲ್ಲಿ ಬಣ್ಣವನ್ನು ಬಳಿಯಲಾಗುತ್ತಿದೆ, ದೇವಸ್ಥಾನದ ಬಳಿ 24 ಗಂಟೆ ಕುಡಿಯುವ ನೀರು , 30 ಸ್ವಚ್ಚತಾ ಸಿಬ್ಬಂದಿಗಳ ನೇಮಕ, ಉರುಳು ಸೇವೆ ಮಾಡಲು ಮರಳು, ಸ್ನಾನ ಮಾಡಲು 20 ನಳಗಳ ವ್ಯವಸ್ಥೆ ಮಾಡಲಾಗಿದ್ದು ಇವುಗಳಿಗೆ 11 ಲಕ್ಷ ವೆಚ್ಚ ಮಾಡಲಾಗುತ್ತಿದೆ. ಚೌಡೇಶ್ವರಿನಗರ, ವಿನೋಬ ನಗರ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಲಾಗಿದೆ. ಮತ್ತು ಒಳಚರಂಡಿ ವ್ಯವಸ್ಥೆಯನ್ನು ದುರಸ್ತಿ ಮಾಡಲಾಗಿದೆ. ದೇವಸ್ಥಾನದ ಸುತ್ತಮುತ್ತಲು, ಸಂಗೊಳ್ಳಿ ರಾಯಣ್ಣ ಸರ್ಕಲ್, ಗುಂಡಿ ಸರ್ಕಲ್, ದಾವಣಗೆರೆ ನಗರಕ್ಕೆ ಪ್ರವೇಶಿಸುವ ರಸ್ತೆಗಳು, ಮಹಾನಗರ ಪಾಲಿಕೆ ಕಚೇರಿ, ಡಾ.ಬಿ.ಆರ್.ಅಂಬೇಡ್ಕರ್ ಸರ್ಕಲ್ ಗಳಲ್ಲಿ ದೀಪಾಲಂಕಾರ ಮಾಡಲಾಗಿದೆ , ದೇವಸ್ಥಾನದ ಸುತ್ತಮುತ್ತಲು ಪಾರ್ಕಿಂಗ್ ಸ್ಥಳದಲ್ಲಿ ಶೌಚಾಲಯಗಳನ್ನು ಅಳವಡಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೇಖರ್ ಹೆಚ್.ಟಿ ಅವರು ಮಾತನಾಡಿ, ನಗರದೇವತೆ ಶ್ರೀ ದುರ್ಗಾಂಬಿಕಾ ದೇವಿ ಜಾತ್ರೆ ಪ್ರಯುಕ್ತ ದೇವಸ್ಥಾನದ ಸುತ್ತಮುತ್ತಲು ಸಿಸಿಟಿವಿಗಳನ್ನು ಅಳವಡಿಸಲಾಗಿದೆ, ಸರಗಳ್ಳತನ, ಮಹಿಳೆಯರು ಮತ್ತು ಮಕ್ಕಳ ಸುರಕ್ಷತಾ ದೃಷ್ಠಿಯಿಂದ ಅಗತ್ಯ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ, ದೇವಸ್ಥಾನದ ಪಕ್ಕದಲ್ಲಿ ತಾತ್ಕಾಲಿಕ ಪೊಲೀಸ್ ಠಾಣೆಯನ್ನು ತೆರೆಯಲಾಗಿದೆ. ಭಕ್ತಾಧಿಗಳಿಗೆ ಹಾಗೂ ವಿವಿಐಪಿಗಳಿಗೆ ದರ್ಶನಕ್ಕೆ ಅನುಕೂಲಕರವಾಗಲು ಬ್ಯಾರಿಕೇಡ್ ವ್ಯವಸ್ಥೆ ಮಾಡಲಾಗಿದೆ.
ಸುಗಮ ಸಂಚಾರ ನಡೆಸಲು ಪೊಲೀಸ್ ವ್ಯವಸ್ಥೆ ಮಾಡಲಾಗಿದೆ. ಬ್ಯಾನರ್ ಮತ್ತು ಬಂಟಿಂಗ್ ಅಳವಡಿಸಲು ಕಡ್ಡಾಯವಾಗಿ ಅನುಮತಿ ಪಡೆದು ಅಳವಡಿಸಬೇಕು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುವವರ ವಿರುದ್ದ ಕ್ರಮಕೈಗೊಳ್ಳಲಾಗುವುದು ಮತ್ತು ಪ್ರಜೋದನಕಾರಿ ಮತ್ತು ದೇವಸ್ಥಾನಕ್ಕೆ ಸಂಬಂಧಿಸಿದ ಪ್ರಾಣಿಬಲಿ ಕುರಿತು ಹಳೆಯ ಛಾಯಾಚಿತ್ರಗಳನ್ನು ಅಪ್ ಲೋಡ್ ಮಾಡಬಾರದು, ಕಾನೂನು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೆಲಸಗಳನ್ನು ಮಾಡಬಾರದು ಎಂದು ತಿಳಿಸಿದರು.
ದೂಡಾ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ, ಸಿಇಒ ಗಿತ್ತೇ ಮಾಧವ ವಿಠಲ್ ರಾವ್, ಶ್ರೀ ದುರ್ಗಾಂಭಿಕಾ ದೇವಿ ಜಾತ್ರೆ ಸಮಿತಿಯ ಸದಸ್ಯರುಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಯಶಸ್ವಿ ಬೃಹತ್ ಉದ್ಯೋಗ ಮೇಳಕ್ಕೆ ಕ್ರಮವಹಿಸಿ: ಡಿಸಿ ಗಂಗಾಧರ್ ಸ್ವಾಮಿ
ಸುದ್ದಿದಿನ,ದಾವಣಗೆರೆ:ನಗರದ ಎಂಸಿಸಿ ಬ್ಲಾಕ್ ನಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಫೆಬ್ರವರಿ 23 ರಂದು ಉದ್ಯೋಗ ಮೇಳ ನಡೆಯಲಿದೆ, ಮೇಳದಲ್ಲಿ ಮೂಲಭೂತ ಸೌಕರ್ಯಗಳನ್ನು ಒಳಗೊಂಡಂತೆ ಕಾರ್ಯಕ್ರಮ ಯಶಸ್ವಿಗೆ ಅಧಿಕಾರಿಗಳು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಅವರು ತಿಳಿಸಿದರು .
ಅವರು ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಬೃಹತ್ ಉದ್ಯೋಗ ಮೇಳ ಕಾರ್ಯಕ್ರಮದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು .
ಬೃಹತ್ ಉದ್ಯೋಗ ಮೇಳಕ್ಕಾಗಿ ಈಗಾಗಲೇ ಪೋರ್ಟಲ್ ಮೂಲಕ ನೋಂದಣಿ ಆರಂಭವಾಗಿದ್ದು, 45ಕ್ಕೂ ಹೆಚ್ಚು ಕಂಪನಿಗಳು ನೋಂದಾಯಿಸಿಕೊಂಡಿವೆ. ಇನ್ನು ಸುಮಾರು 20 ಕಂಪನಿಗಳು ಬರುವ ಸಾಧ್ಯತೆ ಇದೇ, ಇದರಲ್ಲಿ ಐಟಿ, ಮಾಸ್ಟರ್ ಡಿಗ್ರಿ, ಐಟಿಐ ಮತ್ತು ಎಸ್ಎಸ್ಎಲ್ಸಿ, ಪಿಯುಸಿ ಅಭ್ಯರ್ಥಿಗಳಿಗೆ ಐಟಿ ವಲಯ ಬ್ಯಾಂಕ್ ಕ್ಷೇತ್ರ, ಮಾರ್ಕೆಟಿಂಗ್ ಮ್ಯಾನೇಜ್ಮೆಂಟ್, ಫಾರ್ಮಸಿಟಿಕಲ್ ಸೇರಿದಂತೆ ಇನ್ನು ಅನೇಕ ಕ್ಷೇತ್ರದಲ್ಲಿ ಉದ್ಯೋಗ ಅವಕಾಶ ನೀಡುವ ವಿವಿಧ ಕಂಪನಿಗಳು ಸೇರಿವೆ. ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸುವಂತೆ ಕಾಲೇಜುಗಳಿಗೆ ಪತ್ರ ವ್ಯವಹಾರ ಮಾಡಿದ್ದು ಪ್ಲೇಸ್ಮೆಂಟ್ ಆಫೀಸರ್ಗಳ ಭೇಟಿ ಮಾಡಲಾಗಿದೆ ಎಂದು ತಿಳಿಸಿದರು.
ಸಾಮಾಜಿಕ ಜಾಲತಾಣದಲ್ಲಿ, ಪೋಸ್ಟರ್ಗಳು, ಜಿಂಗಲ್ಸ್ ಮತ್ತು ಸ್ವಚ್ಛ ಭಾರತ್ ವಾಹನಗಳ ಮೂಲಕ ವ್ಯಾಪಕ ಪ್ರಚಾರ ಮಾಡಲು ಕೈಗೊಳ್ಳಬೇಕು, ಸುಮಾರು 4,000 ವಿದ್ಯಾರ್ಥಿಗಳಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸುವ ಸಾಧ್ಯತೆ ಇದೆ, ಆದುದರಿಂದ ಸ್ವಚ್ಛತೆಗೆ ಹೆಚ್ಚು ಒತ್ತು ನೀಡಬೇಕು,
ವಿದ್ಯಾರ್ಥಿಗಳಿಗೆ ಲಘು ಉಪಹಾರ, ನೀರು, ಪ್ರಾಥಮಿಕ ಆರೋಗ್ಯ ಕೇಂದ್ರದ ಆಂಬುಲೆನ್ಸ್ ವ್ಯವಸ್ಥೆ, ವಿಶೇಷ ಬಸ್ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದರು.
ಸುಮಾರು 1,200 ಅಭ್ಯರ್ಥಿಗಳು ಈಗಾಗಲೇ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಗೆ ಸಚಿವರು, ಗಣ್ಯರನ್ನು ಆಹ್ವಾನಿಸಬೇಕು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಬೃಹತ್ ಉದ್ಯೋಗ ಮೇಳದ ಪೋಸ್ಟರ್ ಬಿಡುಗಡೆ ಮಾಡಲಾಯಿತು.
ಸಭೆಯಲ್ಲಿ ಸಿಇಒ ಗಿತ್ತೆ ಮಾಧವ ವಿಠಲ್ ರಾವ್, ಯೋಜನಾ ನಿರ್ದೇಶಕ ಮಹಾಂತೇಶ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ
ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.
ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ6 days agoಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ5 days agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ7 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ5 days agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
-
ದಿನದ ಸುದ್ದಿ2 days agoಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ2 days agoದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ
-
ದಿನದ ಸುದ್ದಿ16 hours agoಯಶಸ್ವಿ ಬೃಹತ್ ಉದ್ಯೋಗ ಮೇಳಕ್ಕೆ ಕ್ರಮವಹಿಸಿ: ಡಿಸಿ ಗಂಗಾಧರ್ ಸ್ವಾಮಿ

