Connect with us

ದಿನದ ಸುದ್ದಿ

ಪತ್ರಕರ್ತ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಹಿನ್ನೆಲೆ ಇಲ್ಲಿದೆ ನೋಡಿ

Published

on

ಸುದ್ದಿದಿನ, ಬೆಂಗಳೂರು: ಪತ್ರಕರ್ತರ ಸಂಘ ಎಂದಾಕ್ಷಣ ಕಾರ್ಯಮರೆತವರ ಸಂಖ್ಯೆಯೇ ಹೆಚ್ಚು ಎಂಬುದು ಸಂಘದಿಂದ ದೂರವಿರುವ ಕಾರ್ಯನಿರತ ಪತ್ರಕರ್ತರ ದೂರು. ಇಂತಹ ದೂರು ಬಹುತೇಕ ವರ್ಷದಿಂದ ಕೇಳಿ ಬರುತ್ತಲೇ ಇದೆ. ಇದು ಸತ್ಯವಾದ ಮಾತು ಎಂಬುದರಲ್ಲಿ ಸಂಶಯವಿಲ್ಲ. ಇದನ್ನು ಅಳಿಸಬೇಕೆಂದು ಸಂಘದಲ್ಲಿನ ಕೆಲವರ ಹೋರಾಟಕ್ಕೆ ಇಲ್ಲಿಯವರೆಗೂ ಮನ್ನಣೆ ದೊರೆತಿಲ್ಲ.

ಪೀತಪತ್ರಿಕೋದ್ಯಮ ಹೆಚ್ಚಾಗಿದ್ದು, ಆರ್‌ಎನ್‌ಐ ಪಡೆದು ವರ್ಷಕ್ಕೆ ಒಂದೆರಡು ಬಾರಿ ಪತ್ರಿಕೆತಂದಾಕ್ಷಣ ಆತ ತನ್ನ ಜೀವಿತಾವಧಿ ಕೊನೆಯವರೆಗೂ ಪತ್ರಕರ್ತನ ಪಟ್ಟ ಕಳೆದುಕೊಳ್ಳುವುದಿಲ್ಲ. ಜತೆಗೆ ಇದಕ್ಕೆ ಪತ್ರಕರ್ತ ಸಂಘದಲ್ಲಿ ಸದಸ್ಯತ್ವ ಕೂಡ ಸಾಥ್ ನೀಡುತ್ತದೆ. ಇದು ಹತ್ತಾರು ವರ್ಷಗಳಿಂದ ನಡೆದುಕೊಂಡು ಬರುತ್ತಿರುವ ಕೆಟ್ಟ ಪದ್ಧತಿ. ಈ ಕಾರಣಕ್ಕೆ ಕಾರ್ಯನಿರತಪತ್ರಕರ್ತರು ಸಂಘದಲ್ಲಿ ಸದಸ್ಯತ್ವ ಪಡೆಯಲು ಹಿಂಜರಿಯುತ್ತಾರೆ.

ಅದರಲ್ಲೂ ಇತ್ತೀಚೆಗೆ ರಾಜ್ಯಾಧ್ಯಕ್ಷರಾಗಿದ್ದ ಎನ್.ರಾಜು ವಿರುದ್ಧ ಗಂಭೀರ ಆರೋಪಗಳು ಕೇಳಿಬಂದು ಇಡೀ ಸಂಘವನ್ನು ಬೀದಿಗೆ ತಂದು ನಿಲ್ಲಿಸಿತ್ತು. ಜತೆಗೆ ಬೆಂಗಳೂರು ಸಮೀಪದ ಠಾಣೆಯೊಂದರಲ್ಲಿ ರಾಜ್ಯಾಧ್ಯಕ್ಷರ ವಿರುದ್ಧವೇ ದೂರು ದಾಖಲು. ಇದರಿಂದ ನೈತಿಕ ಹೊಣೆವೊತ್ತು ಎನ್.ರಾಜು ರಾಜೀನಾಮೆ ನೀಡಿದ್ದಾರೆ. ಸಂಘದ ಘನತೆ, ಗೌರವ ಉಳಿಸಲು ಅ.5ರಂದು ಬೆಂಗಳೂರಿನ ಕಂದಾಯ ಭವನದಲ್ಲಿರುವ ಸಂಘದ ಕಚೇರಿಯಲ್ಲಿ ಕಾರ‌್ಯಕಾರಿಣಿ ಸಭೆ ಸಂಘದ ಹಿರಿಯ ಉಪಾಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆಯಲ್ಲಿ ಕರೆಯಲಾಗಿತ್ತು. ವಿಶೇಷವೆಂದರೆ ಪ್ರಥಮ ಬಾರಿಗೆ ಸಂಘದ ಸದಸ್ಯರು ಮುಕ್ತವಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಸತತ ನಾಲ್ಕು ಗಂಟೆಗಳ ಕಾಲ ಸುಧೀರ್ಘ ಚರ್ಚೆ, ಅದರಲ್ಲೂ ಪ್ರತಿ ಸದಸ್ಯರೂ ಸಂಘವನ್ನು ಉಳಿಸುವ ಜತೆಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಸಹಕಾರದಿಂದ ಡಿವಿಜಿ ಅವರಿಂದ ಸ್ಥಾಪನೆಗೊಂಡ ಸಂಘವನ್ನು ಬಲಿಷ್ಠಗೊಳಿಸಬೇಕು. ಸಂಘದತ್ತ ಕಾರ್ಯನಿರತ ಪತ್ರಕರ್ತರು ಮುಖ ಮಾಡುವಂತೆ ಕಾರ್ಯಪ್ರವೃತ್ತರಾಗಬೇಕು ಎಂಬ ಕೂಗು ಹಾಕಿದರು.
ಈ ನಿಟ್ಟಿನಲ್ಲಿ ಸಂಘದ ಅಧ್ಯಕ್ಷ ಸ್ಥಾನಕ್ಕೆ ಶಿವಾನಂದ ತಗಡೂರು ಅವರೇ ಸೂಕ್ತ ಆಯ್ಕೆಯಾಗಿದ್ದು, ಅವರನ್ನು ಖಾಯಂ ಅಧ್ಯಕ್ಷರನ್ನಾಗಿ ನೇಮಿಸಬೇಕು ಎಂದು ಎಲ್ಲ ಸದಸ್ಯರೂ ಧ್ವನಿಯೆತ್ತಿದರು. ಆರಂಭದಲ್ಲಿ ಖಾಯಂ ಅಧ್ಯಕ್ಷರ ಆಯ್ಕೆಗೆ ವಿರೋಧಿಸಿದ್ದ ಇಬ್ಬರು ಸದಸ್ಯರು ಕೂಡ ಕೊನೆಗೆ ಸಮ್ಮತಿ ವ್ಯಕ್ತಪಡಿಸುವ ಮೂಲಕ ಸಭೆ ಒಮ್ಮತ ನಿರ್ಣಯಕ್ಕೆ ಬಂದಿತು. ಕೊನೆಗೂ ವಿಜಯವಾಣಿ ಪತ್ರಿಕೆ ವಿಶೇಷ ವರದಿಗಾರ ಶಿವಾನಂದ ತಗಡೂರು (ಮೊ.ನಂ: 9845087374) ರಾಜ್ಯಾಧ್ಯಕ್ಷರಾಗಿ ಸರ್ವಸಮ್ಮತದಿಂದ ಸಭೆಯಲ್ಲಿ ಆಯ್ಕೆಗೊಂಡರು.

ಈ ವೇಳೆ ಸದಸ್ಯರೆಲ್ಲರೂ ನೂತನ ಅಧ್ಯಕ್ಷರಿಗೆ ಅಭಿನಂದಿಸಿ, ಸಂಘವನ್ನು ಬಲಿಷ್ಠಗೊಳಿಸಬೇಕು. ಜತೆಗೆ ಸಂಘಕ್ಕೆ ಈಗ ಅಂಟಿರುವ ಕಳಂಕ ತೊಳೆಯಲು ಕಂಕಣಬದ್ಧರಾಗಬೇಕು ಎಂದು ಸಲಹೆ ನೀಡಿದರು.
ಸಭೆಯಲ್ಲಿ ರಾಜ್ಯ ಉಪಾಧ್ಯಕ್ಷ ಮತ್ತಿಕೆರೆ ಜಯರಾಮ್, ಕಾರ್ಯದರ್ಶಿ ಲಿಥಕರ್ ಜೈನ್, ಸೊಗಡು ವೆಂಕಟೇಶ್, ಮೈಸೂರಿನ ಸಿ.ಕೆ.ಮಹೇಂದ್ರ, ಲೋಕೇಶ್‌ಬಾಬು, ಟೆಲೆಕ್ಸ್ ಎನ್.ರವಿಕುಮಾರ್, ರವೀಶ್, ಚಿಕ್ಕಮಗಳೂರು ಶ್ರೀನಿವಾಸ್, ದಾವಣಗೆರೆ ಚಂದ್ರಪ್ಪ, ದುರುಗೇಶಪ್ಪ, ಕುಟ್ಟಪ್ಪ, ಲೊಚೇನೇಶ್ ಹೂಗಾರ್, ನಿಂಗಪ್ಪ ಚಾವಡಿ, ಸತ್ಯನಾರಾಯಣ, ಶಿವಮೊಗ್ಗ ವೈದ್ಯ, ಸೋಮಶೇಖರ್ ಗಾಂಧಿ, ಕೆರಗೋಡು ಸೇರಿದಂತೆ ವಿವಿಧ ಜಿಲ್ಲೆಗಳ
ಅಧ್ಯಕ್ಷರು, ರಾಜ್ಯ ಸಮಿತಿ ಸದಸ್ಯರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

ನೂತನ ಅಧ್ಯಕ್ಷರಾದ ಶಿವಾನಂದ ತಗಡೂರು ಹಿನ್ನೆಲೆ 

ಶಿವಾನಂದ ತಗಡೂರು ಚನ್ನರಾಯಪಟ್ಟಣ ತಾಲೂಕು ತಗಡೂರಿನ ರೈತ ಕುಟುಂಬದ ಕಮಲಮ್ಮ, ವೀರೇಗೌಡ
ದಂಪತಿ ಪುತ್ರನಾಗಿ ಜುಲೈ 1, 1971ಲ್ಲಿ ಜನನ. ಎಸ್‌ಎಸ್‌ಎಲ್‌ಸಿ ತನಕ ಹುಟ್ಟೂರಿನಲ್ಲಿಯೇ ವಿದ್ಯಾಭ್ಯಾಸ. ಹಾಸನದಲ್ಲಿ ವಿದ್ಯಾಭ್ಯಾಸ ಮುಂದುವರಿಕೆ. ಕಾಲೇಜಿನಲ್ಲಿ ಸಾಂಸ್ಕೃತಿಕ ಸಂಘಟನೆ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಣೆ. ಗೊರೂರು ಹೇಮಾವತಿ ಯೋಜನೆಯಿಂದ ತುಮಕೂರು ಜಿಲ್ಲೆಗೆ ನೀರು ಹರಿಸಲು, ಭೂಮಿಯ 200 ಅಡಿ ಆಳದಲ್ಲಿ ನಿರ್ಮಾಣ ಮಾಡಿದ ಬಾಗೂರು-ನವಿಲೆ ಸುರಂಗದಿಂದಾಗಿ ಸಂತ್ರಸ್ತರಾದ ಹಳ್ಳಿಗಳ ಪರವಾಗಿ ಒಂದು ದಶಕಗಳ ಕಾಲ ಹೋರಾಟ ನಡೆಸಿದ್ದಾರೆ.

ರೈತ ಹಿತರಕ್ಷಣಾ ಸಮಿತಿ ಸಂಚಾಲಕ ಮತ್ತು ಹಾಸನ ಜಿಲ್ಲಾ ನೀರಾವರಿ ಹೋರಾಟ ಸಮಿತಿಗಳ ಒಕ್ಕೂಟದ ಕಾರ್ಯದರ್ಶಿಯಾಗಿ ಜವಾಬ್ದಾರಿ ನಿರ್ವಹಣೆ. ಇಷ್ಟೇಲ್ಲ ಜನಪರ ಹೋರಾಟ ನಡೆಸುವ ಮೂಲಕ ಜಿಲ್ಲೆಯಲ್ಲಿ ಜನರ ಪ್ರೀತಿ ಗಳಿಸಿದ್ದ ಶಿವಾನಂದ ತಗಡೂರು ಬದುಕಿಗಾಗಿ ಆಯ್ಕೆ ಮಾಡಿಕೊಂಡಿದ್ದು ಪತ್ರಿಕಾ ಕ್ಷೇತ್ರವನ್ನು. ಹಾಸನ ಜಿಲ್ಲೆಯ ಜನಮಿತ್ರ ದಿನ ಪತ್ರಿಕೆ ಮೂಲಕ ಪತ್ರಿಕೋದ್ಯಮ ಪ್ರವೇಶ ಮಾಡಿದ ಶಿವಾನಂದ ಅವರು, ಜ್ಞಾನದೀಪ, ಈ ವಾರ ಕರ್ನಾಟಕ, ಜನವಾಹಿನಿ ಸೇರಿದಂತೆ ಹಲವಾರು ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ.

ವಿಶೇಷವಾಗಿ ವಿಜಯಕರ್ನಾಟಕ ಪತ್ರಿಕೆ ಪ್ರಾರಂಭದಿಂದಲೂ 12 ವರ್ಷಗಳ ಕಾಲ ಹಿರಿಯ ವರದಿಗಾರನಾಗಿ ಕಾರ್ಯ ನಿರ್ವಹಿಸಿದ್ದಾರೆ. ಆನಂತರ ವಿಜಯವಾಣಿ ಪತ್ರಿಕೆ ಪ್ರಾರಂಭವಾದ ಬಳಿಕ ಬೆಂಗಳೂರಿನಲ್ಲಿ ವಿಶೇಷ ಹಿರಿಯ
ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಹಾಸನದಿಂದ ಬೆಂಗಳೂರಿಗೆ ಆಗಮಿಸಿದ ಶಿವಾನಂದ ತಗಡೂರು, ಬೆಂಗಳೂರಿನಲ್ಲಿ ಕೇವಲ ಪತ್ರಿಕಾ
ಕ್ಷೇತ್ರಕ್ಕಷ್ಟೇ ಸೀಮಿತವಾಗದೇ ವೃತ್ತಿಧರ್ಮ ಜತೆಗೆ ಸಾಹಿತ್ಯ, ಸಾಂಸ್ಕೃತಿಕ ಸಂಘಟನೆಗಳಲ್ಲಿ ಸಕ್ರಿಯರಾಗಿ ಹಿರಿಯ ಸಾಹಿತಿಗಳು, ಹೋರಾಟಗಾರರು, ಸಜ್ಜನ
ರಾಜಕಾರಣಿಗಳು, ದಕ್ಷ ಅಧಿಕಾರಿಗಳ ಪ್ರೀತಿ ಗಳಿಸಿದ್ದಾರೆ. ಜನಮಿತ್ರ ಪತ್ರಿಕೆಯ 50ನೇ ವರ್ಷದ ಸಂಭ್ರಮ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಹಾಸನ
ಜಿಲ್ಲಾ ಸಮಾವೇಶಕ್ಕೆ ತಮ್ಮ ಸಂಪಾದಕತ್ವದಲ್ಲಿ ಸ್ಮರಣ ಸಂಚಿಕೆ ತಂದ ಕೀರ್ತಿ ಇವರದ್ದಾಗಿದೆ.

ಹಾಸನ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ 4 ವರ್ಷ ಕಾರ್ಯನಿರ್ವಹಿಸಿದ್ದ ವೇಳೆ, ಬಹಳ ವರ್ಷದ ಕನಸಾಗಿದ್ದ ಪತ್ರಕರ್ತರ ಭವನ ನಿರ್ಮಾಣ ಕೈಗೆತ್ತಿಕೊಂಡು, ಒಂದೇ ವರ್ಷದಲ್ಲಿ ಶಂಕುಸ್ಥಾಪನೆ ಮಾಡಿ ಕಟ್ಟಡ ಪೂರ್ಣಗೊಳಿಸಿ ಉದ್ಘಾಟಿಸಿದ್ದು ಇಡೀ ರಾಜ್ಯಕ್ಕೆ ಮಾದರಿ ಆಗಿದೆ.

ಶ್ರವಣಬೆಳಗೊಳದಲ್ಲಿ ರಾಷ್ಟ್ರೀಯ ಪತ್ರಕರ್ತರ ಸಮ್ಮೇಳನವನ್ನು ಯಶಸ್ವಿಯಾಗಿ ಸಂಘಟಿಸಿದ ಹೆಗ್ಗಳಿಕೆ. ಬೇಲೂರಿನಲ್ಲಿ ರಾಜ್ಯ ಮಟ್ಟದ ಪತ್ರಕರ್ತರ ಸಂಘದ ಪದಾಧಿಕಾರಿಗಳ ಸಮಾವೇಶ. ಮಾಧ್ಯಮ ಅಕಾಡೆಮಿ ಜತೆಯಲ್ಲಿ ಮಾಧ್ಯಮ ಸಂವಾದ ಕಾರ್ಯಕ್ರಮ.
2011ರಿಂದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಉಪಾಧ್ಯಕ್ಷರಾಗಿದ್ದು, ಪ್ರಸ್ತುತ ರಾಜ್ಯಾಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ.

ಹತ್ತು ಹಲವಾರು ಸಂಸ್ಥೆಗಳಲ್ಲಿ ಪದಾಧಿಕಾರಿಯಾಗಿ ಸೇವೆ ಸಲ್ಲಿಸಿದ ಶಿವಾನಂದ ತಗಡೂರು ಅವರಿಗೆ ಅತ್ಯುತ್ತಮ ವಿಮರ್ಶಾತ್ಮಕ ವರದಿಗಾಗಿ ನೀಡುವ ಖಾದ್ರಿಶಾಮಣ್ಣ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ, ಸಂಘ ಸಂಸ್ಥೆಗಳಿಂದ ಸನ್ಮಾನಗಳು ಹುಡುಕಿಕೊಂಡು ಬಂದಿವೆ. ಹಲವಾರು ಬಾರಿ ವಿದೇಶ ಪ್ರವಾಸ. ಶ್ರೀಲಂಕಾ ಪ್ರಧಾನಿ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಪಾಲ್ಗೊಂಡಿರುವುದು ವಿಶೇಷ.

ಪತ್ರಕರ್ತರಲ್ಲಿ ಬೆಟ್ಟದಷ್ಟು ನಿರೀಕ್ಷೆ ಇವೆ

ಶಿವಾನಂದ ತಗಡೂರು ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆಂಬ ಸುದ್ದಿ ರಾಜ್ಯದ ಬಹಳಷ್ಟು ಪತ್ರಕರ್ತರಲ್ಲಿ ನೂರಾರು ಕನಸುಗಳನ್ನು ಬಿತ್ತಿವೆ. ಕಾರ್ಯನಿರತ ಪತ್ರಕರ್ತರಿಗೆ ಸದಸ್ಯತ್ವ ನೀಡುವ ಜತೆಗೆ, ಸಂಘವನ್ನು ಶುದ್ಧೀಕರಿಸುವ ಸವಾಲು ನೂತನ
ಅಧ್ಯಕ್ಷರ ಮುಂದಿದೆ.

ಸಂಘದಿಂದ ನೀಡುವ ಪ್ರಶಸ್ತಿಗೆ ಅರ್ಹರನ್ನು ಗುರುತಿಸಿ ಆಯ್ಕೆ ಮಾಡುವುದು, ಸಂಘದ
ಹಣಕಾಸು ವಹಿವಾಟು ಪಾರದರ್ಶಕವಾಗಿರುವಂತೆ ಜಾಗ್ರತೆ ವಹಿಸಬೇಕಾಗಿದೆ. ಮಾನ್ಯತೆ ಪಡೆದ ಪತ್ರಕರ್ತರಿಗೆ ದೊರೆಯುತ್ತಿರುವ ಉಚಿತ ಬಸ್ ಸೌಲಭ್ಯ, ಆರೋಗ್ಯ ವಿಮೆ ಸೇರಿದಂತೆ ಎಲ್ಲ ಸೌಲಭ್ಯಗಳನ್ನು ರಾಜ್ಯದ ಎಲ್ಲ ಪತ್ರಕರ್ತರಿಗೂ ದೊರೆಯುವಂತೆ ಮಾಡಬೇಕಾಗಿದೆ.

ರೈತಕುಟುಂಬದ ಹಿನ್ನೆಲೆಯಿಂದ ಪತ್ರಿಕಾ ಕ್ಷೇತ್ರಕ್ಕೆ ಬಂದಿರುವ ಶಿವಾನಂದ ತಗಡೂರು ಇಂತಹ ಹತ್ತಾರು ಸವಾಲುಗಳನ್ನು ದಿಟ್ಟವಾಗಿ ಎದುರಿಸಿ, ಸಂಘದ ಘನತೆ ಹೆಚ್ಚಿಸಬೇಕಾಗಿದೆ. ಇದು ರಾಜ್ಯದ ಎಲ್ಲ ಪತ್ರಕರ್ತರೆಲ್ಲರ ಆಶಯ, ಒತ್ತಾಸೆ.

ದಿನದ ಸುದ್ದಿ

ಮೇ 22 | ಇಂದಿನ ಅಡಿಕೆ ದರ

Published

on

ಇಂದು, ಮೇ 22, 2025 ರಂದು ಕರ್ನಾಟಕದ ವಿವಿಧ ಮಾರುಕಟ್ಟೆಗಳಲ್ಲಿ ಅಡಿಕೆ ದರಗಳು ಹೀಗಿವೆ (ಪ್ರತಿ ಕ್ವಿಂಟಾಲ್‌ಗೆ ರೂಪಾಯಿಗಳಲ್ಲಿ):

ಶಿವಮೊಗ್ಗ ಮಾರುಕಟ್ಟೆ:

ರಾಶಿ: ₹48,169 (ಕನಿಷ್ಠ) – ₹58,099 (ಗರಿಷ್ಠ), ಮೋಡಲ್ ಬೆಲೆ: ₹55,869
ಸರಕು: ₹60,399 (ಕನಿಷ್ಠ) – ₹92,510 (ಗರಿಷ್ಠ), ಮೋಡಲ್ ಬೆಲೆ: ₹77,009
ಬೆಟ್ಟೆ: ₹51,319 (ಕನಿಷ್ಠ) – ₹58,219 (ಗರಿಷ್ಠ), ಮೋಡಲ್ ಬೆಲೆ: ₹57,989
ಗೊರಬಲು: ₹15,499 (ಕನಿಷ್ಠ) – ₹30,699 (ಗರಿಷ್ಠ), ಮೋಡಲ್ ಬೆಲೆ: ₹28,429

ಚನ್ನಗಿರಿ ಮಾರುಕಟ್ಟೆ (ದಾವಣಗೆರೆ):

ರಾಶಿ: ₹41,199 (ಕನಿಷ್ಠ) – ₹59,312 (ಗರಿಷ್ಠ), ಮೋಡಲ್ ಬೆಲೆ: ₹57,767

ಸಾಗರ ಮಾರುಕಟ್ಟೆ (ಶಿವಮೊಗ್ಗ):

ಚಾಲಿ: ₹35,699 (ಕನಿಷ್ಠ) – ₹37,141 (ಗರಿಷ್ಠ), ಮೋಡಲ್ ಬೆಲೆ: ₹36,699
ಬಿಳೆಗೋಟು: ₹21,611 (ಕನಿಷ್ಠ) – ₹25,587 (ಗರಿಷ್ಠ), ಮೋಡಲ್ ಬೆಲೆ: ₹24,111
ಕೆಂಪುಗೋಟು: ₹17,599 (ಕನಿಷ್ಠ) – ₹27,499 (ಗರಿಷ್ಠ), ಮೋಡಲ್ ಬೆಲೆ: ₹24,919
ರಾಶಿ: ₹22,899 (ಕನಿಷ್ಠ) – ₹57,470 (ಗರಿಷ್ಠ), ಮೋಡಲ್ ಬೆಲೆ: ₹56,621

ಕುಮಟಾ ಮಾರುಕಟ್ಟೆ (ಉತ್ತರ ಕನ್ನಡ):

ಚಿಪ್ಪು: ₹11,199 (ಕನಿಷ್ಠ) – ₹26,919 (ಗರಿಷ್ಠ), ಮೋಡಲ್ ಬೆಲೆ: ₹24,549
ಕೋಕಾ: ₹6,899 (ಕನಿಷ್ಠ) – ₹22,189 (ಗರಿಷ್ಠ), ಮೋಡಲ್ ಬೆಲೆ: ₹20,429
ಹಣ್ಣು: ₹32,589 (ಕನಿಷ್ಠ) – ₹42,500 (ಗರಿಷ್ಠ), ಮೋಡಲ್ ಬೆಲೆ: ₹39,729

ಚಿತ್ರದುರ್ಗ ಮಾರುಕಟ್ಟೆ:

ರಾಶಿ: ₹52,449 (ಕನಿಷ್ಠ) – ₹52,899 (ಗರಿಷ್ಠ), ಮೋಡಲ್ ಬೆಲೆ: ₹52,679

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಾದಕ ವ್ಯಸನಿಗಳು ಸಮಾಜಘಾತುಕ ವ್ಯಕ್ತಿಗಳು : ಹಿರಿಯ ಸಿವಿಲ್ ನ್ಯಾಯಾಧೀಶ ಮಹಾವೀರ ಮ.ಕರೆಣ್ಣವರ

Published

on

ಸುದ್ದಿದಿನ,ದಾವಣಗೆರೆ:ಇತ್ತೀಚಿನ ದಿನಗಳಲ್ಲಿ ಹದಿಹರೆಯದ ಯುವಕ – ಯುವತಿಯರೇ ಹೆಚ್ಚಿನ ಸಂಖ್ಯೆಯಲ್ಲಿ ಗಾಂಜಾ, ಹಫೀಮು, ಬೌನ್‌ಶುಗರ್, ಕೋಕೆನ್, ನಿಕೋಟಿನ್‌ನಂತಹ ಮಾದಕ ವಸ್ತುಗಳಿಗೆ ದಾಸರಾಗುತ್ತಿದ್ದಾರೆ. ಇವರೆಲ್ಲಾ ಸಮಾಜಘಾತುಕ ವ್ಯಕ್ತಿಗಳು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಮಹಾವೀರ ಮ.ಕರೆಣ್ಣವರ ಹೇಳಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಜಿಲ್ಲಾ ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ನೆರಳು ಬೀಡಿ ಕಾರ್ಮಿಕರ ಯೂನಿಯನ್ ಇವರ ಸಂಯುಕ್ತಶ್ರಯದಲ್ಲಿ ಗುರುವಾರ ನಗರದ ಭಾಷಾ ನಗರದಲ್ಲಿನ ನಗರ ಆರೋಗ್ಯ ಕೇಂದ್ರ (ಪ್ರಸೂತಿ ಆರೋಗ್ಯ ಕೇಂದ್ರ) ದಲ್ಲಿ ಆಯೋಜಿಸಲಾಗಿದ್ದ “ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ 2005 ಮತ್ತು ಮಾದಕ ವಸ್ತುಗಳ ನಿಯಂತ್ರಣ ಕಾಯ್ದೆ” ಕುರಿತು ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸಾರ್ವಜನಿಕವಾಗಿ ಮಾದಕ ವಸ್ತುಗಳ ಸೇವನೆ, ಮಾರಾಟ, ಸಾಗಾಣೆ ಇಂತಹ ಪ್ರಕರಣಗಳು ಕಂಡುಬAದಲ್ಲಿ ಆಲಸ್ಯ ಮಾಡದೇ ಸಂಬAಪಟ್ಟ ಇಲಾಖೆಗೆ ಮಾಹಿತಿ ನೀಡಬೇಕು. ಮಾದಕ ವ್ಯಸನಗಳಿಗೆ ದಾಸರಾಗುವುದರಿಂದ ದೈಹಿಕ ಮತ್ತು ಮಾನಸಿಕವಾಗಿ ಗಾಢವಾದ ಪರಿಣಾಮ ಬೀರುತ್ತದೆ. ಅಲ್ಲದೇ ಪುರುಷತ್ವ ಮತ್ತು ಲೈಂಗಿಕತೆಯನ್ನು ಕುಂದಿಸುತ್ತದೆ. ಮಾದಕ ವ್ಯಸನಗಳಿಂದ ವಿವಿ ರೀತಿಯ ಕೃತ್ಯಗಳ್ಲಲಿ ಭಾಗಿಯಾಗಿ ಶಿಕ್ಷೆಗೆ ಗುರಿಯಾಗುವುದಲ್ಲದೇ ಕುಟುಂಬಗಳು ಬೀದಿಗೆ ಬರುತ್ತವೆ. ಆದ್ದರಿಂದ ವ್ಯಸನಮುಕ್ತರಾಗಿ ಸಮಾಜದಲ್ಲಿ ಮೌಲ್ಯಯುತವಾದ ಜೀವನ ಕಟ್ಟಿಕೊಳ್ಳಬೇಕು. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಉನ್ನತ ಮಟ್ಟದ ವ್ಯಕತಿಗಳಾಗಿ ಬಾಳಬೇಕು. ಈ ನಿಟ್ಟಿನಲ್ಲಿ ತಮ್ಮಗಳ ಸಹಕಾರ ಅತ್ಯಗತ್ಯ ಎಂದರು.

ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ 2005 ರಲ್ಲಿ ಜಾರಿ ಮಾಡಿದ್ದು, ಕೇವಲ ದೈಹಿಕ ಹಿಂಸೆಗೆ ಸೀಮಿತಗೊಳಿಸದೆ, ಲೈಂಗಿಕ, ಮೌಖಿಕ, ಭಾವನಾತ್ಮಕ, ಆರ್ಥಿಕ, ಮತ್ತು ಮಾನಸಿಕ ಹಿಂಸೆಯನ್ನು ಸಹ ಒಳಗೊಂಡಿದೆ. ವರದಕ್ಷಿಣೆಗಾಗಿ ಕಿರುಕುಳ ನೀಡುವುದು, ಮನೆಯಿಂದ ಹೊರಹಾಕುವುದು ಇವೆಲ್ಲವೂ ದೌರ್ಜನ್ಯ ತಡೆ ಕಾಯ್ದೆ ವ್ಯಾಪ್ತಿಗೆ ಬರುತ್ತವೆ. ಕಾಯ್ದೆಯ ಮೂಲಕ ಮಹಿಳೆಯರಿಗೆ ಅರ್ಥಿಕ, ಸಾಮಾಜಿಕ, ಭದ್ರತೆಯನ್ನು ಒದಗಿಸಲಾಗುತ್ತದೆ. ಮಹಿಳೆಯರಿಗೆ ಕೌಟುಂಬಿಕ ದೌರ್ಜನ್ಯಗಳಂತಹ ದೈಹಕ ಮತ್ತು ಮಾನಸಿಕ ಹಿಂಸೆ, ಕಿರುಕುಳ ನೀಡಿದಲ್ಲಿ ಹತ್ತಿರದ ಸಖಿ ಒನ್ ಸ್ಟಾಪ್ ಸೆಂಟರ್ ಅಥವಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಪರ್ಕಿಸಿ ಸಲಹೆ ಸೂಚನೆಗಳನ್ನು ಪಡೆಯಬಹುದು. ಇದಕ್ಕೆ ಸಂಬAಧಿಸಿದAತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಕಾರದ ವತಿಯಿಂದ ಉಚಿತ ಕಾನೂನು ನರೆವು ನೀಡಲು 40 ವಕೀಲರಿದ್ದಾರೆ. ಇದನ್ನು ಪ್ರತಿಯೊಬ್ಬರು ಸದುಪಯೋಗಪಡೆದುಕೊಳ್ಳಬೇಕು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಉಚಿತ ಕಾನೂನು ಸೇವೆಗಳ ಕುರಿತು ಮಾಹಿತಿ ನೀಡಲು 15100 ಸಹಾಯವಾಣಿ ಸಂಖ್ಯೆ ಸ್ಥಾಪಿಸಿದ್ದು, ಕರೆ ಮಾಡಿ ಸೂಕ್ತ ಕಾನೂನು ಸಲಹೆ ಪಡೆಯಬಹುದು. ಸಮಾಜದಲ್ಲಿ ಹಿಂದುಳಿದ ಪ್ರತಿಯೊಬ್ಬರನ್ನು ಮುಖ್ಯವಾಹಿನಿಗೆ ತರಲು ಕಂಕಣಬದ್ದರಾಗಿ ಕಾರ್ಯನಿರ್ವಹಿಸಬೇಕು. ಈ ಎರಡೂ ಕಾಯ್ದೆಗಳು ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಮತ್ತು ಸುರಕ್ಷತೆಯನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಮಹಾವೀರ ಮ.ಕರೆಣ್ಣವರ ಹೇಳಿದರು.

ಇದೇ ವೇಳೆ ನೆರಳು ಬೀಡಿ ಕಾರ್ಮಿಕ ಯೂನಿಯನ್ ಅಧ್ಯಕ್ಷೆ ಜಬೀನಾ ಖಾನಂ ಸಂವಿಧಾನ ಪೀಠಿಕೆ ವಾಚಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಹೆಚ್.ಅರುಣ್ ಕುಮಾರ್, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಿಯದರ್ಶಿನಿ, ತಾಲ್ಲೂಕು ಆರೋಗ್ಯಾಧಿಕಾರಿ ದೇವರಾಜ್ ಪಟ್ಟಿಗೆ, ಸಖಿ ಕೇಂದ್ರದ ಕಾನೂನು ಸಲಹೆಗಾರರಾದ ತಂಜಿಮ್ ಕೌಸರಿ, ನಗರ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ.ಎನ್.ರೇಖಾ, ನೆರಳು ಬೀಡಿ ಕಾರ್ಮಿಕ ಯೂನಿಯನ್ ಪ್ರಧಾನ ಕಾರ್ಯದರ್ಶಿ ಎಂ.ಕರಿಬಸಪ್ಪ, ಸದಸ್ಯೆ ಸಬ್ರಿನ್ ತಾಜ್ ಸೇರಿದಂತೆ ಆಶಾ ಕಾರ್ಯಕರ್ತೆಯರು, ಸಾರ್ವಜನಿಕರು ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಮೆಟ್ರಿಕ್ ನಂತರದ ಬಾಲಕ, ವಿದ್ಯಾರ್ಥಿನಿಲಯ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ, ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ ಮತ್ತು ಪ.ವರ್ಗದ ಪಿ.ಯು.ಸಿ. ಐ.ಟಿ.ಐ. ಮತ್ತು ಡಿಪ್ಲೊಮೋ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು https://shp.karnataka.gov.in/bcwd ಆನ್‍ಲೈನ್‍ನಲ್ಲಿ ಜೂನ್ 20 ರೊಳಗಾಗಿ ಅರ್ಜಿಯನ್ನು ಸಲ್ಲಿಸಬೇಕು.

ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್ ಸೈಟ್ https://bcwd.karnataka.gov.in ನ್ನು ನೋಡಬಹುದು.

ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwdhelpline@gmail.com ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ, ತಾಲ್ಲೂಕು ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ದೂ.ಸಂ: 8050770004 ಮತ್ತು 8050770005.ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಲು ಇಲಾಖೆ ಅಧಿಕಾರಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending