Connect with us

ದಿನದ ಸುದ್ದಿ

ಪತ್ರಕರ್ತ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಹಿನ್ನೆಲೆ ಇಲ್ಲಿದೆ ನೋಡಿ

Published

on

ಸುದ್ದಿದಿನ, ಬೆಂಗಳೂರು: ಪತ್ರಕರ್ತರ ಸಂಘ ಎಂದಾಕ್ಷಣ ಕಾರ್ಯಮರೆತವರ ಸಂಖ್ಯೆಯೇ ಹೆಚ್ಚು ಎಂಬುದು ಸಂಘದಿಂದ ದೂರವಿರುವ ಕಾರ್ಯನಿರತ ಪತ್ರಕರ್ತರ ದೂರು. ಇಂತಹ ದೂರು ಬಹುತೇಕ ವರ್ಷದಿಂದ ಕೇಳಿ ಬರುತ್ತಲೇ ಇದೆ. ಇದು ಸತ್ಯವಾದ ಮಾತು ಎಂಬುದರಲ್ಲಿ ಸಂಶಯವಿಲ್ಲ. ಇದನ್ನು ಅಳಿಸಬೇಕೆಂದು ಸಂಘದಲ್ಲಿನ ಕೆಲವರ ಹೋರಾಟಕ್ಕೆ ಇಲ್ಲಿಯವರೆಗೂ ಮನ್ನಣೆ ದೊರೆತಿಲ್ಲ.

ಪೀತಪತ್ರಿಕೋದ್ಯಮ ಹೆಚ್ಚಾಗಿದ್ದು, ಆರ್‌ಎನ್‌ಐ ಪಡೆದು ವರ್ಷಕ್ಕೆ ಒಂದೆರಡು ಬಾರಿ ಪತ್ರಿಕೆತಂದಾಕ್ಷಣ ಆತ ತನ್ನ ಜೀವಿತಾವಧಿ ಕೊನೆಯವರೆಗೂ ಪತ್ರಕರ್ತನ ಪಟ್ಟ ಕಳೆದುಕೊಳ್ಳುವುದಿಲ್ಲ. ಜತೆಗೆ ಇದಕ್ಕೆ ಪತ್ರಕರ್ತ ಸಂಘದಲ್ಲಿ ಸದಸ್ಯತ್ವ ಕೂಡ ಸಾಥ್ ನೀಡುತ್ತದೆ. ಇದು ಹತ್ತಾರು ವರ್ಷಗಳಿಂದ ನಡೆದುಕೊಂಡು ಬರುತ್ತಿರುವ ಕೆಟ್ಟ ಪದ್ಧತಿ. ಈ ಕಾರಣಕ್ಕೆ ಕಾರ್ಯನಿರತಪತ್ರಕರ್ತರು ಸಂಘದಲ್ಲಿ ಸದಸ್ಯತ್ವ ಪಡೆಯಲು ಹಿಂಜರಿಯುತ್ತಾರೆ.

ಅದರಲ್ಲೂ ಇತ್ತೀಚೆಗೆ ರಾಜ್ಯಾಧ್ಯಕ್ಷರಾಗಿದ್ದ ಎನ್.ರಾಜು ವಿರುದ್ಧ ಗಂಭೀರ ಆರೋಪಗಳು ಕೇಳಿಬಂದು ಇಡೀ ಸಂಘವನ್ನು ಬೀದಿಗೆ ತಂದು ನಿಲ್ಲಿಸಿತ್ತು. ಜತೆಗೆ ಬೆಂಗಳೂರು ಸಮೀಪದ ಠಾಣೆಯೊಂದರಲ್ಲಿ ರಾಜ್ಯಾಧ್ಯಕ್ಷರ ವಿರುದ್ಧವೇ ದೂರು ದಾಖಲು. ಇದರಿಂದ ನೈತಿಕ ಹೊಣೆವೊತ್ತು ಎನ್.ರಾಜು ರಾಜೀನಾಮೆ ನೀಡಿದ್ದಾರೆ. ಸಂಘದ ಘನತೆ, ಗೌರವ ಉಳಿಸಲು ಅ.5ರಂದು ಬೆಂಗಳೂರಿನ ಕಂದಾಯ ಭವನದಲ್ಲಿರುವ ಸಂಘದ ಕಚೇರಿಯಲ್ಲಿ ಕಾರ‌್ಯಕಾರಿಣಿ ಸಭೆ ಸಂಘದ ಹಿರಿಯ ಉಪಾಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆಯಲ್ಲಿ ಕರೆಯಲಾಗಿತ್ತು. ವಿಶೇಷವೆಂದರೆ ಪ್ರಥಮ ಬಾರಿಗೆ ಸಂಘದ ಸದಸ್ಯರು ಮುಕ್ತವಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಸತತ ನಾಲ್ಕು ಗಂಟೆಗಳ ಕಾಲ ಸುಧೀರ್ಘ ಚರ್ಚೆ, ಅದರಲ್ಲೂ ಪ್ರತಿ ಸದಸ್ಯರೂ ಸಂಘವನ್ನು ಉಳಿಸುವ ಜತೆಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಸಹಕಾರದಿಂದ ಡಿವಿಜಿ ಅವರಿಂದ ಸ್ಥಾಪನೆಗೊಂಡ ಸಂಘವನ್ನು ಬಲಿಷ್ಠಗೊಳಿಸಬೇಕು. ಸಂಘದತ್ತ ಕಾರ್ಯನಿರತ ಪತ್ರಕರ್ತರು ಮುಖ ಮಾಡುವಂತೆ ಕಾರ್ಯಪ್ರವೃತ್ತರಾಗಬೇಕು ಎಂಬ ಕೂಗು ಹಾಕಿದರು.
ಈ ನಿಟ್ಟಿನಲ್ಲಿ ಸಂಘದ ಅಧ್ಯಕ್ಷ ಸ್ಥಾನಕ್ಕೆ ಶಿವಾನಂದ ತಗಡೂರು ಅವರೇ ಸೂಕ್ತ ಆಯ್ಕೆಯಾಗಿದ್ದು, ಅವರನ್ನು ಖಾಯಂ ಅಧ್ಯಕ್ಷರನ್ನಾಗಿ ನೇಮಿಸಬೇಕು ಎಂದು ಎಲ್ಲ ಸದಸ್ಯರೂ ಧ್ವನಿಯೆತ್ತಿದರು. ಆರಂಭದಲ್ಲಿ ಖಾಯಂ ಅಧ್ಯಕ್ಷರ ಆಯ್ಕೆಗೆ ವಿರೋಧಿಸಿದ್ದ ಇಬ್ಬರು ಸದಸ್ಯರು ಕೂಡ ಕೊನೆಗೆ ಸಮ್ಮತಿ ವ್ಯಕ್ತಪಡಿಸುವ ಮೂಲಕ ಸಭೆ ಒಮ್ಮತ ನಿರ್ಣಯಕ್ಕೆ ಬಂದಿತು. ಕೊನೆಗೂ ವಿಜಯವಾಣಿ ಪತ್ರಿಕೆ ವಿಶೇಷ ವರದಿಗಾರ ಶಿವಾನಂದ ತಗಡೂರು (ಮೊ.ನಂ: 9845087374) ರಾಜ್ಯಾಧ್ಯಕ್ಷರಾಗಿ ಸರ್ವಸಮ್ಮತದಿಂದ ಸಭೆಯಲ್ಲಿ ಆಯ್ಕೆಗೊಂಡರು.

ಈ ವೇಳೆ ಸದಸ್ಯರೆಲ್ಲರೂ ನೂತನ ಅಧ್ಯಕ್ಷರಿಗೆ ಅಭಿನಂದಿಸಿ, ಸಂಘವನ್ನು ಬಲಿಷ್ಠಗೊಳಿಸಬೇಕು. ಜತೆಗೆ ಸಂಘಕ್ಕೆ ಈಗ ಅಂಟಿರುವ ಕಳಂಕ ತೊಳೆಯಲು ಕಂಕಣಬದ್ಧರಾಗಬೇಕು ಎಂದು ಸಲಹೆ ನೀಡಿದರು.
ಸಭೆಯಲ್ಲಿ ರಾಜ್ಯ ಉಪಾಧ್ಯಕ್ಷ ಮತ್ತಿಕೆರೆ ಜಯರಾಮ್, ಕಾರ್ಯದರ್ಶಿ ಲಿಥಕರ್ ಜೈನ್, ಸೊಗಡು ವೆಂಕಟೇಶ್, ಮೈಸೂರಿನ ಸಿ.ಕೆ.ಮಹೇಂದ್ರ, ಲೋಕೇಶ್‌ಬಾಬು, ಟೆಲೆಕ್ಸ್ ಎನ್.ರವಿಕುಮಾರ್, ರವೀಶ್, ಚಿಕ್ಕಮಗಳೂರು ಶ್ರೀನಿವಾಸ್, ದಾವಣಗೆರೆ ಚಂದ್ರಪ್ಪ, ದುರುಗೇಶಪ್ಪ, ಕುಟ್ಟಪ್ಪ, ಲೊಚೇನೇಶ್ ಹೂಗಾರ್, ನಿಂಗಪ್ಪ ಚಾವಡಿ, ಸತ್ಯನಾರಾಯಣ, ಶಿವಮೊಗ್ಗ ವೈದ್ಯ, ಸೋಮಶೇಖರ್ ಗಾಂಧಿ, ಕೆರಗೋಡು ಸೇರಿದಂತೆ ವಿವಿಧ ಜಿಲ್ಲೆಗಳ
ಅಧ್ಯಕ್ಷರು, ರಾಜ್ಯ ಸಮಿತಿ ಸದಸ್ಯರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

ನೂತನ ಅಧ್ಯಕ್ಷರಾದ ಶಿವಾನಂದ ತಗಡೂರು ಹಿನ್ನೆಲೆ 

ಶಿವಾನಂದ ತಗಡೂರು ಚನ್ನರಾಯಪಟ್ಟಣ ತಾಲೂಕು ತಗಡೂರಿನ ರೈತ ಕುಟುಂಬದ ಕಮಲಮ್ಮ, ವೀರೇಗೌಡ
ದಂಪತಿ ಪುತ್ರನಾಗಿ ಜುಲೈ 1, 1971ಲ್ಲಿ ಜನನ. ಎಸ್‌ಎಸ್‌ಎಲ್‌ಸಿ ತನಕ ಹುಟ್ಟೂರಿನಲ್ಲಿಯೇ ವಿದ್ಯಾಭ್ಯಾಸ. ಹಾಸನದಲ್ಲಿ ವಿದ್ಯಾಭ್ಯಾಸ ಮುಂದುವರಿಕೆ. ಕಾಲೇಜಿನಲ್ಲಿ ಸಾಂಸ್ಕೃತಿಕ ಸಂಘಟನೆ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಣೆ. ಗೊರೂರು ಹೇಮಾವತಿ ಯೋಜನೆಯಿಂದ ತುಮಕೂರು ಜಿಲ್ಲೆಗೆ ನೀರು ಹರಿಸಲು, ಭೂಮಿಯ 200 ಅಡಿ ಆಳದಲ್ಲಿ ನಿರ್ಮಾಣ ಮಾಡಿದ ಬಾಗೂರು-ನವಿಲೆ ಸುರಂಗದಿಂದಾಗಿ ಸಂತ್ರಸ್ತರಾದ ಹಳ್ಳಿಗಳ ಪರವಾಗಿ ಒಂದು ದಶಕಗಳ ಕಾಲ ಹೋರಾಟ ನಡೆಸಿದ್ದಾರೆ.

ರೈತ ಹಿತರಕ್ಷಣಾ ಸಮಿತಿ ಸಂಚಾಲಕ ಮತ್ತು ಹಾಸನ ಜಿಲ್ಲಾ ನೀರಾವರಿ ಹೋರಾಟ ಸಮಿತಿಗಳ ಒಕ್ಕೂಟದ ಕಾರ್ಯದರ್ಶಿಯಾಗಿ ಜವಾಬ್ದಾರಿ ನಿರ್ವಹಣೆ. ಇಷ್ಟೇಲ್ಲ ಜನಪರ ಹೋರಾಟ ನಡೆಸುವ ಮೂಲಕ ಜಿಲ್ಲೆಯಲ್ಲಿ ಜನರ ಪ್ರೀತಿ ಗಳಿಸಿದ್ದ ಶಿವಾನಂದ ತಗಡೂರು ಬದುಕಿಗಾಗಿ ಆಯ್ಕೆ ಮಾಡಿಕೊಂಡಿದ್ದು ಪತ್ರಿಕಾ ಕ್ಷೇತ್ರವನ್ನು. ಹಾಸನ ಜಿಲ್ಲೆಯ ಜನಮಿತ್ರ ದಿನ ಪತ್ರಿಕೆ ಮೂಲಕ ಪತ್ರಿಕೋದ್ಯಮ ಪ್ರವೇಶ ಮಾಡಿದ ಶಿವಾನಂದ ಅವರು, ಜ್ಞಾನದೀಪ, ಈ ವಾರ ಕರ್ನಾಟಕ, ಜನವಾಹಿನಿ ಸೇರಿದಂತೆ ಹಲವಾರು ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ.

ವಿಶೇಷವಾಗಿ ವಿಜಯಕರ್ನಾಟಕ ಪತ್ರಿಕೆ ಪ್ರಾರಂಭದಿಂದಲೂ 12 ವರ್ಷಗಳ ಕಾಲ ಹಿರಿಯ ವರದಿಗಾರನಾಗಿ ಕಾರ್ಯ ನಿರ್ವಹಿಸಿದ್ದಾರೆ. ಆನಂತರ ವಿಜಯವಾಣಿ ಪತ್ರಿಕೆ ಪ್ರಾರಂಭವಾದ ಬಳಿಕ ಬೆಂಗಳೂರಿನಲ್ಲಿ ವಿಶೇಷ ಹಿರಿಯ
ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಹಾಸನದಿಂದ ಬೆಂಗಳೂರಿಗೆ ಆಗಮಿಸಿದ ಶಿವಾನಂದ ತಗಡೂರು, ಬೆಂಗಳೂರಿನಲ್ಲಿ ಕೇವಲ ಪತ್ರಿಕಾ
ಕ್ಷೇತ್ರಕ್ಕಷ್ಟೇ ಸೀಮಿತವಾಗದೇ ವೃತ್ತಿಧರ್ಮ ಜತೆಗೆ ಸಾಹಿತ್ಯ, ಸಾಂಸ್ಕೃತಿಕ ಸಂಘಟನೆಗಳಲ್ಲಿ ಸಕ್ರಿಯರಾಗಿ ಹಿರಿಯ ಸಾಹಿತಿಗಳು, ಹೋರಾಟಗಾರರು, ಸಜ್ಜನ
ರಾಜಕಾರಣಿಗಳು, ದಕ್ಷ ಅಧಿಕಾರಿಗಳ ಪ್ರೀತಿ ಗಳಿಸಿದ್ದಾರೆ. ಜನಮಿತ್ರ ಪತ್ರಿಕೆಯ 50ನೇ ವರ್ಷದ ಸಂಭ್ರಮ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಹಾಸನ
ಜಿಲ್ಲಾ ಸಮಾವೇಶಕ್ಕೆ ತಮ್ಮ ಸಂಪಾದಕತ್ವದಲ್ಲಿ ಸ್ಮರಣ ಸಂಚಿಕೆ ತಂದ ಕೀರ್ತಿ ಇವರದ್ದಾಗಿದೆ.

ಹಾಸನ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ 4 ವರ್ಷ ಕಾರ್ಯನಿರ್ವಹಿಸಿದ್ದ ವೇಳೆ, ಬಹಳ ವರ್ಷದ ಕನಸಾಗಿದ್ದ ಪತ್ರಕರ್ತರ ಭವನ ನಿರ್ಮಾಣ ಕೈಗೆತ್ತಿಕೊಂಡು, ಒಂದೇ ವರ್ಷದಲ್ಲಿ ಶಂಕುಸ್ಥಾಪನೆ ಮಾಡಿ ಕಟ್ಟಡ ಪೂರ್ಣಗೊಳಿಸಿ ಉದ್ಘಾಟಿಸಿದ್ದು ಇಡೀ ರಾಜ್ಯಕ್ಕೆ ಮಾದರಿ ಆಗಿದೆ.

ಶ್ರವಣಬೆಳಗೊಳದಲ್ಲಿ ರಾಷ್ಟ್ರೀಯ ಪತ್ರಕರ್ತರ ಸಮ್ಮೇಳನವನ್ನು ಯಶಸ್ವಿಯಾಗಿ ಸಂಘಟಿಸಿದ ಹೆಗ್ಗಳಿಕೆ. ಬೇಲೂರಿನಲ್ಲಿ ರಾಜ್ಯ ಮಟ್ಟದ ಪತ್ರಕರ್ತರ ಸಂಘದ ಪದಾಧಿಕಾರಿಗಳ ಸಮಾವೇಶ. ಮಾಧ್ಯಮ ಅಕಾಡೆಮಿ ಜತೆಯಲ್ಲಿ ಮಾಧ್ಯಮ ಸಂವಾದ ಕಾರ್ಯಕ್ರಮ.
2011ರಿಂದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಉಪಾಧ್ಯಕ್ಷರಾಗಿದ್ದು, ಪ್ರಸ್ತುತ ರಾಜ್ಯಾಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ.

ಹತ್ತು ಹಲವಾರು ಸಂಸ್ಥೆಗಳಲ್ಲಿ ಪದಾಧಿಕಾರಿಯಾಗಿ ಸೇವೆ ಸಲ್ಲಿಸಿದ ಶಿವಾನಂದ ತಗಡೂರು ಅವರಿಗೆ ಅತ್ಯುತ್ತಮ ವಿಮರ್ಶಾತ್ಮಕ ವರದಿಗಾಗಿ ನೀಡುವ ಖಾದ್ರಿಶಾಮಣ್ಣ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ, ಸಂಘ ಸಂಸ್ಥೆಗಳಿಂದ ಸನ್ಮಾನಗಳು ಹುಡುಕಿಕೊಂಡು ಬಂದಿವೆ. ಹಲವಾರು ಬಾರಿ ವಿದೇಶ ಪ್ರವಾಸ. ಶ್ರೀಲಂಕಾ ಪ್ರಧಾನಿ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಪಾಲ್ಗೊಂಡಿರುವುದು ವಿಶೇಷ.

ಪತ್ರಕರ್ತರಲ್ಲಿ ಬೆಟ್ಟದಷ್ಟು ನಿರೀಕ್ಷೆ ಇವೆ

ಶಿವಾನಂದ ತಗಡೂರು ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆಂಬ ಸುದ್ದಿ ರಾಜ್ಯದ ಬಹಳಷ್ಟು ಪತ್ರಕರ್ತರಲ್ಲಿ ನೂರಾರು ಕನಸುಗಳನ್ನು ಬಿತ್ತಿವೆ. ಕಾರ್ಯನಿರತ ಪತ್ರಕರ್ತರಿಗೆ ಸದಸ್ಯತ್ವ ನೀಡುವ ಜತೆಗೆ, ಸಂಘವನ್ನು ಶುದ್ಧೀಕರಿಸುವ ಸವಾಲು ನೂತನ
ಅಧ್ಯಕ್ಷರ ಮುಂದಿದೆ.

ಸಂಘದಿಂದ ನೀಡುವ ಪ್ರಶಸ್ತಿಗೆ ಅರ್ಹರನ್ನು ಗುರುತಿಸಿ ಆಯ್ಕೆ ಮಾಡುವುದು, ಸಂಘದ
ಹಣಕಾಸು ವಹಿವಾಟು ಪಾರದರ್ಶಕವಾಗಿರುವಂತೆ ಜಾಗ್ರತೆ ವಹಿಸಬೇಕಾಗಿದೆ. ಮಾನ್ಯತೆ ಪಡೆದ ಪತ್ರಕರ್ತರಿಗೆ ದೊರೆಯುತ್ತಿರುವ ಉಚಿತ ಬಸ್ ಸೌಲಭ್ಯ, ಆರೋಗ್ಯ ವಿಮೆ ಸೇರಿದಂತೆ ಎಲ್ಲ ಸೌಲಭ್ಯಗಳನ್ನು ರಾಜ್ಯದ ಎಲ್ಲ ಪತ್ರಕರ್ತರಿಗೂ ದೊರೆಯುವಂತೆ ಮಾಡಬೇಕಾಗಿದೆ.

ರೈತಕುಟುಂಬದ ಹಿನ್ನೆಲೆಯಿಂದ ಪತ್ರಿಕಾ ಕ್ಷೇತ್ರಕ್ಕೆ ಬಂದಿರುವ ಶಿವಾನಂದ ತಗಡೂರು ಇಂತಹ ಹತ್ತಾರು ಸವಾಲುಗಳನ್ನು ದಿಟ್ಟವಾಗಿ ಎದುರಿಸಿ, ಸಂಘದ ಘನತೆ ಹೆಚ್ಚಿಸಬೇಕಾಗಿದೆ. ಇದು ರಾಜ್ಯದ ಎಲ್ಲ ಪತ್ರಕರ್ತರೆಲ್ಲರ ಆಶಯ, ಒತ್ತಾಸೆ.

ದಿನದ ಸುದ್ದಿ

ಡಾ. ಶಾಮನೂರು ಶಿವಶಂಕರಪ್ಪ ನಿಧನ ; ವೀರಶೈವ ವಿಧಿವಿಧಾನದಂತೆ ಕಲ್ಲೇಶ್ವರ ಮಿಲ್‍ನಲ್ಲಿ ಅಂತ್ಯ ಸಂಸ್ಕಾರ

Published

on

ಸುದ್ದಿದಿನ,ದಾವಣಗೆರೆ:ಮಾಜಿ ಸಚಿವರು ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ; ಶಾಮನೂರು ಶಿವಶಂಕರಪ್ಪನವರು ನಿಧನರಾಗಿದ್ದು ಅವರ ಅಂತ್ಯ ಸಂಸ್ಕಾರವು ಸರ್ಕಾರಿ ಸಕಲ ಗೌರವಗಳೊಂದಿಗೆ ಹಾಗೂ ವೀರಶೈವ ಸಂಪ್ರದಾಯದಂತೆ ಕಲ್ಲೇಶ್ವರ ರೈಸ್ ಮಿಲ್ ಆವರಣದಲ್ಲಿ ಅಪಾರ ಜನಸ್ತೋಮದೊಂದಿಗೆ ಸೋಮವಾರ ಸಂಜೆ ಜರುಗಿತು.

ಡಾ; ಶಾಮನೂರು ಶಿವಶಂಕರಪ್ಪನವರಿಗೆ 95 ವರ್ಷವಾಗಿದ್ದು ವಯೋಸಹಜ ಅನಾರೋಗ್ಯದಿಂದ ಡಿಸೆಂಬರ್ 14 ರಂದು ನಿಧನ ಹೊಂದಿದ್ದರು. 6 ಭಾರಿ ಶಾಸಕರಾಗಿ, ಒಮ್ಮೆ ಸಂಸದರಾಗಿ ಸುಧೀರ್ಘ ರಾಜಕೀಯ ಸೇವೆಯಲ್ಲಿದ್ದ ಇವರು ರಾಜ್ಯ ಸೇರಿದಂತೆ ದಾವಣಗೆರೆಗೆ ಹೊಸ ರೂಪಕೊಟ್ಟಿದ್ದರು.
ಸೋಮವಾರ ಬೆಳಗ್ಗೆ 7.30 ಗಂಟೆಯಿಂದ ಪಾರ್ಥಿವ ಶರೀರಕ್ಕೆ ಸ್ವಗೃಹದಲ್ಲಿ ಕುಟುಂಬಸ್ಥರ ವಿವಿಧ ಪೂಜೆ ಪುನಸ್ಕಾರಗಳೊಂದಿಗೆ ವಿಧಿ ವಿಧಾನಗಳು ನಡೆದು, ಮಧ್ಯಾಹ್ನದಿಂದ ಹೈಸ್ಕೂಲ್ ಮೈದಾನದಲ್ಲಿ ಸಾರ್ವಜನಿಕರ ದರ್ಶನಕ್ಕೆ ಪಾರ್ಥಿವ ಶರೀರವನ್ನು ಇಡಲಾಗಿತ್ತು. ಸಾವಿರಾರು ಜನರು ಆಗಮಿಸಿ ಸರತಿ ಸಾಲಿನಲ್ಲಿ ಅಂತಿಮ ದರ್ಶನ ಪಡೆದರು.

ಮಧ್ಯಾಹ್ನ 3.30 ರಿಂದ ಹೈಸ್ಕೂಲ್ ಮೈದಾನದಿಂದ ಹೊರಟು ಹಳೇ ದಾವಣಗೆರೆ ಮಂಡಿಪೇಟೆ, ಕಾಯಿಪೇಟೆ, ಅರಳಿವೃತ್ತದ ಮೂಲಕ ಕಲ್ಲೇಶ್ವರ ಮಿಲ್‍ಗೆ ಪಾರ್ಥಿವ ಶರೀರ ತಲುಪಿತು. ಸಂಜೆ 4.30 ರಿಂದ ಅಂತಿಮ ವಿಧಿ ವಿಧಾನಗಳು ನಡೆದವು.

ಅಂತಿಮ ಸಂಸ್ಕಾರದಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು, ರಾಜ್ಯಸಭೆ ವಿರೋಧ ಪಕ್ಷದ ನಾಯಕರು ಹಾಗೂ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು, ಉಪ ಮುಖ್ಯಮಂತ್ರಿಯವರಾದ ಡಿ.ಕೆ.ಶಿವಕುಮಾರ್ ಅವರು, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಅರಣ್ಯ ಸಚಿವರಾದ ಈಶ್ವರ ಖಂಡ್ರೆ, ಬೃಹತ್ ಕೈಗಾರಿಕೆ ಸಚಿವರಾದ ಎಂ.ಬಿ.ಪಾಟೀಲ್ ಅವರು, ಇಂಧನ ಸಚಿವರಾದ ಕೆ.ಜೆ.ಜಾರ್ಜ್‍ರವರು, ಸಮಾಜ ಕಲ್ಯಾಣ ಸಚಿವರಾದ ಡಾ; ಹೆಚ್.ಸಿ.ಮಹದೇವಪ್ಪ, ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್, ಆಹಾರ ಸಚಿವರಾದ ಕೆ.ಎಚ್.ಮುನಿಯಪ್ಪ, ಅಲ್ಪಸಂಖ್ಯಾತರ ಕಲ್ಯಾಣ, ವಸತಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್, ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಾದ ಎಚ್.ಕೆ ಪಾಟೀಲ, ಜವಳಿ, ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ.ಎಸ್.ಪಾಟೀಲ, ಯೋಜನೆ ಮತ್ತು ಸಾಂಖ್ಯಿಕ ಸಚಿವರಾದ ಡಿ.ಸುಧಾಕರ್ ಸೇರಿದಂತೆ ಶಾಸಕರು ಸೇರಿದಂತೆ ವಿವಿಧ ಮಠಾಧೀಶರು ಭಾಗವಹಿಸಿ ಪುಷ್ಪ ನಮನ ಸಲ್ಲಿಸಿ ಅಂತಿಮ ದರ್ಶನ ಪಡೆದರು.

ಸರ್ಕಾರಿ ಗೌರವಗಳೊಂದಿಗೆ ಅಂತಿಮ ಸಂಸ್ಕಾರ ನೆರವೇರಿಸಲಾಯಿತು. ರಾಷ್ಟ್ರಧ್ವಜವನ್ನು ಪಾರ್ಥಿವ ಶರೀರಕ್ಕೆ ಹೊದಿಸಿ ಪೊಲೀಸ್ ಬ್ಯಾಂಡ್ ಮೂಲಕ ರಾಷ್ಟ್ರಗೀತೆ ನುಡಿಸಿ ಗೌರವ ಸಲ್ಲಿಸಲಾಯಿತು. ನಂತರ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಗೌರವ ಸಲ್ಲಿಸಿ ಅಂತಿಮವಾಗಿ ಶೋಕ ವ್ಯಕ್ತಪಡಿಸಲಾಯಿತು. ರಾಷ್ಟ್ರಧ್ವಜವನ್ನು ಅವರ ಪುತ್ರರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಸ್ತಾಂತರಿಸಿದರು. ನಂತರ ಸಾಂಪ್ರದಾಯಿಕ ಪೂಜೆ, ವಿಧಿ, ವಿಧಾನಗಳೊಂದಿಗೆ ಪಾರ್ಥಿವ ಶರೀರವನ್ನು ಐಕ್ಯ ಮಂಟಪದಲ್ಲಿ ಇಡಲಾಯಿತು.

ಡಾ; ಶಾಮನೂರು ಶಿವಶಂಕರಪ್ಪನವರ ಪುತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್, ಸೊಸೆ ಹಾಗೂ ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್, ಇನ್ನಿಬ್ಬರು ಪುತ್ರರಾದ ಎಸ್.ಎಸ್.ಬಕ್ಕೇಶ್, ಎಸ್.ಎಸ್.ಗಣೇಶ್ ಸೇರಿದಂತೆ ಶಾಮನೂರು ಶಿವಶಂಕರಪ್ಪನವರ ಕುಟುಂಬಸ್ಥರು ಅಂತಿಮ ವಿಧಿ ವಿಧಾನದಲ್ಲಿ ಭಾಗವಹಿಸಿ ಅಂತಿಮ ಸಂಸ್ಕಾರ ನೆರವೇರಿಸಲಾಯಿತು.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಎಸ್.ಆರ್.ಬೊಮ್ಮಾಯಿ, ಗೃಹ ಸಚಿವರಾದ ಜಿ.ಪರಮೇಶ್ವರ್, ಕಂದಾಯ ಸಚಿವರಾದ ಕೃಷ್ಣಬೈರೇಗೌಡ, ಕೃಷಿ ಸಚಿವರಾದ ಚಲುವರಾಯಸ್ವಾಮಿ, ಬಿ.ಜೆ.ಪಿ.ಪಕ್ಷದ ರಾಜ್ಯಾದ್ಯಕ್ಷರಾದ ಬಿ.ವೈ.ವಿಜಯೇಂದ್ರ ಸೇರಿದಂತೆ ಅನೇಕ ಶಾಸಕರು, ವಿಧಾನ ಪರಿಷತ್ ಸದಸ್ಯರು ಅಂತಿಮ ದರ್ಶನ ಪಡೆದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

2027ರ ಜನಗಣತಿ ನಡೆಸಲು ಬಜೆಟ್ ಅಂಗೀಕಾರ

Published

on

ಸುದ್ದಿದಿನ,ದೆಹಲಿ:2027ರ ಜನಗಣತಿಯನ್ನು ನಡೆಸಲು ಸಂಪುಟವು 11 ಸಾವಿರದ 718 ಕೋಟಿ ರೂಪಾಯಿಗಳ ಬಜೆಟ್‌ಅನ್ನು ಅಂಗೀಕರಿಸಿದೆ. ಈ ಕುರಿತು ಮಾಹಿತಿ ನೀಡಿದ ಸಚಿವರು, 2027ರ ಜನಗಣತಿಯನ್ನು ಎರಡು ಹಂತಗಳಲ್ಲಿ ನಡೆಸಲಾಗುವುದು ಎಂದು ಹೇಳಿದರು.

ಇದು ಮೊದಲ ಡಿಜಿಟಲ್ ಜನಗಣತಿಯಾಗಲಿದೆ. 2027 ರ ಜನಗಣತಿಯು ಒಟ್ಟಾರೆ 16ನೇ ಮತ್ತು ಸ್ವಾತಂತ್ರ‍್ಯದ ನಂತರದ 8 ನೇ ಜನಗಣತಿಯಾಗಲಿದೆ. ಭಾರತದ ಜನಗಣತಿಯನ್ನು ವಿಶ್ವದ ಅತಿದೊಡ್ಡ ಆಡಳಿತಾತ್ಮಕ ಮತ್ತು ಸಂಖ್ಯಾಶಾಸ್ತ್ರೀಯ ಕ್ರಮವೆಂದು ಪರಿಗಣಿಸಲಾಗಿದೆ ಎಂದು ಅವರು ತಿಳಿಸಿದರು.

ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು 2026ರ ಹಂಗಾಮಿಗೆ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆಗೆ ಅನುಮೋದನೆ ನೀಡಿದೆ. ಬೆಳೆಗಾರರಿಗೆ ಲಾಭದಾಯಕ ಬೆಲೆಗಳನ್ನು ಒದಗಿಸುವ ಸಲುವಾಗಿ, ಸರ್ಕಾರವು 2018-19 ರ ಕೇಂದ್ರ ಬಜೆಟ್‌ನಲ್ಲಿ ಎಲ್ಲಾ ಕಡ್ಡಾಯ ಬೆಳೆಗಳ ಎಂಎಸ್‌ಪಿ ಅನ್ನು ಅಖಿಲ ಭಾರತ ಸರಾಸರಿ ಉತ್ಪಾದನಾ ವೆಚ್ಚದ ಕನಿಷ್ಠ 1.5 ಪಟ್ಟು ಮಟ್ಟದಲ್ಲಿ ನಿಗದಿಪಡಿಸಲಾಗುವುದು ಎಂದು ಘೋಷಿಸಿತ್ತು. ಮಿಲ್ಲಿಂಗ್ ಕೊಬ್ಬರಿಗೆ ಎಂಎಸ್‌ಪಿಯನ್ನು ಕ್ವಿಂಟಲ್‌ಗೆ 445 ರೂಪಾಯಿಗಳಿಂದ 12 ಸಾವಿರದ 27 ರೂಪಾಯಿಗಳಿಗೆ ಹೆಚ್ಚಿಸಲಾಗಿದೆ ಮತ್ತು ಅದೇ ಅವಧಿಗೆ ಉಂಡೆ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆ 2026ರ ಹಂಗಾಮಿಗೆ ಕ್ವಿಂಟಲ್‌ಗೆ 400 ರೂಪಾಯಿಗಳಿಂದ 12 ಸಾವಿರದ 500 ರೂಪಾಯಿಗಳಿಗೆ ಹೆಚ್ಚಿಸಲಾಗಿದೆ.

ಹೆಚ್ಚಿನ ಕನಿಷ್ಠ ಬೆಂಬಲ ಬೆಲೆಯು ತೆಂಗಿನ ಬೆಳೆಗಾರರಿಗೆ ಉತ್ತಮ ಲಾಭದಾಯಕ ಆದಾಯವನ್ನು ಖಚಿತಪಡಿಸುವುದಲ್ಲದೆ, ದೇಶೀಯವಾಗಿ ಮತ್ತು ಅಂತಾರಾಷ್ಟ್ರೀಯವಾಗಿ ತೆಂಗಿನ ಉತ್ಪನ್ನಗಳಿಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ಕೊಬ್ಬರಿ ಉತ್ಪಾದನೆಯನ್ನು ವಿಸ್ತರಿಸಲು ರೈತರನ್ನು ಪ್ರೋತ್ಸಾಹಿಸುತ್ತದೆ ಎಂದು ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕೋಲ್‌ಸೇತು ನೀತಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ; ಸಂಪನ್ಮೂಲಗಳ ನ್ಯಾಯಯುತ ಬಳಕೆಗೆ ಒತ್ತು

Published

on

ಸುದ್ದಿದಿನ,ದೆಹಲಿ:ಕೇಂದ್ರ ಸರ್ಕಾರವು ’ಕೋಲ್‌ಸೇತು’ ನೀತಿಯನ್ನು ಅನುಮೋದಿಸಿದೆ. ಇದು ವಿವಿಧ ಕೈಗಾರಿಕಾ ಬಳಕೆಗಳು ಮತ್ತು ರಫ್ತಿಗೆ ಕಲ್ಲಿದ್ದಲು ಸಂಪರ್ಕಗಳ ಹರಾಜಿಗೆ ಹೊಸ ವ್ಯವಸ್ಥೆ ಸೃಷ್ಟಿಸುತ್ತದೆ, ಹಾಗೂ ಸಂಪನ್ಮೂಲಗಳ ನ್ಯಾಯಯುತ ಪ್ರವೇಶ ಮತ್ತು ಅತ್ಯುತ್ತಮ ಬಳಕೆಯನ್ನು ಖಚಿತಪಡಿಸುತ್ತದೆ.

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿಯು ನಿನ್ನೆ ತಡೆರಹಿತ, ದಕ್ಷ ಮತ್ತು ಪಾರದರ್ಶಕ ಬಳಕೆಗಾಗಿ ಕಲ್ಲಿದ್ದಲು ಸಂಪರ್ಕದ ಹರಾಜು ನೀತಿಗೆ ಅನುಮೋದನೆ ನೀಡಿತು.

ನವದೆಹಲಿಯಲ್ಲಿ ನಿನ್ನೆ ಸಂಜೆ ಸಂಪುಟದ ನಿರ್ಧಾರಗಳ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್, 2016ರ ಎನ್‌ಆರ್‌ಎಸ್ ನಿಯಂತ್ರಿತವಲ್ಲದ ವಲಯದ ಸಂಪರ್ಕ ಹರಾಜು ನೀತಿಯಲ್ಲಿ ’ಕೋಲ್‌ಸೇತು’ ಎಂಬ ಪ್ರತ್ಯೇಕ ವ್ಯವಸ್ಥೆಯನ್ನು ಸೇರಿಸುವ ಮೂಲಕ ಯಾವುದೇ ಕೈಗಾರಿಕಾ ಬಳಕೆ ಮತ್ತು ರಫ್ತಿಗೆ ದೀರ್ಘಾವಧಿಯವರೆಗೆ ಹರಾಜು ಆಧಾರದ ಮೇಲೆ ಕಲ್ಲಿದ್ದಲು ಸಂಪರ್ಕಗಳ ಹಂಚಿಕೆಗೆ ಈ ನೀತಿಯು ಅವಕಾಶ ನೀಡುತ್ತದೆ ಎಂದು ಹೇಳಿದರು.

ಕಲ್ಲಿದ್ದಲು ಅಗತ್ಯವಿರುವ ಯಾವುದೇ ದೇಶೀಯ ಖರೀದಿದಾರರು ಅಂತಿಮ ಬಳಕೆಯನ್ನು ಲೆಕ್ಕಿಸದೆ ಸಂಪರ್ಕ ಹರಾಜಿನಲ್ಲಿ ಭಾಗವಹಿಸಬಹುದು ಎಂದು ಅವರು ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ4 hours ago

ಡಾ. ಶಾಮನೂರು ಶಿವಶಂಕರಪ್ಪ ನಿಧನ ; ವೀರಶೈವ ವಿಧಿವಿಧಾನದಂತೆ ಕಲ್ಲೇಶ್ವರ ಮಿಲ್‍ನಲ್ಲಿ ಅಂತ್ಯ ಸಂಸ್ಕಾರ

ಸುದ್ದಿದಿನ,ದಾವಣಗೆರೆ:ಮಾಜಿ ಸಚಿವರು ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ; ಶಾಮನೂರು ಶಿವಶಂಕರಪ್ಪನವರು ನಿಧನರಾಗಿದ್ದು ಅವರ ಅಂತ್ಯ ಸಂಸ್ಕಾರವು ಸರ್ಕಾರಿ ಸಕಲ ಗೌರವಗಳೊಂದಿಗೆ ಹಾಗೂ ವೀರಶೈವ...

ದಿನದ ಸುದ್ದಿ3 days ago

2027ರ ಜನಗಣತಿ ನಡೆಸಲು ಬಜೆಟ್ ಅಂಗೀಕಾರ

ಸುದ್ದಿದಿನ,ದೆಹಲಿ:2027ರ ಜನಗಣತಿಯನ್ನು ನಡೆಸಲು ಸಂಪುಟವು 11 ಸಾವಿರದ 718 ಕೋಟಿ ರೂಪಾಯಿಗಳ ಬಜೆಟ್‌ಅನ್ನು ಅಂಗೀಕರಿಸಿದೆ. ಈ ಕುರಿತು ಮಾಹಿತಿ ನೀಡಿದ ಸಚಿವರು, 2027ರ ಜನಗಣತಿಯನ್ನು ಎರಡು ಹಂತಗಳಲ್ಲಿ...

ದಿನದ ಸುದ್ದಿ3 days ago

ಕೋಲ್‌ಸೇತು ನೀತಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ; ಸಂಪನ್ಮೂಲಗಳ ನ್ಯಾಯಯುತ ಬಳಕೆಗೆ ಒತ್ತು

ಸುದ್ದಿದಿನ,ದೆಹಲಿ:ಕೇಂದ್ರ ಸರ್ಕಾರವು ’ಕೋಲ್‌ಸೇತು’ ನೀತಿಯನ್ನು ಅನುಮೋದಿಸಿದೆ. ಇದು ವಿವಿಧ ಕೈಗಾರಿಕಾ ಬಳಕೆಗಳು ಮತ್ತು ರಫ್ತಿಗೆ ಕಲ್ಲಿದ್ದಲು ಸಂಪರ್ಕಗಳ ಹರಾಜಿಗೆ ಹೊಸ ವ್ಯವಸ್ಥೆ ಸೃಷ್ಟಿಸುತ್ತದೆ, ಹಾಗೂ ಸಂಪನ್ಮೂಲಗಳ ನ್ಯಾಯಯುತ...

ದಿನದ ಸುದ್ದಿ3 days ago

ಮಹಿಳೆಯರ ಪುನರ್ ವಸತಿ ಯೋಜನೆ | ಅರ್ಜಿ ಆಹ್ವಾನ ; ಅವಧಿ ವಿಸ್ತರಣೆ

ಸುದ್ದಿದಿನ,ದಾವಣಗೆರೆ: ಪ್ರಸಕ್ತ ಸಾಲಿಗೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಉದ್ಯೋಗಿನಿ, ಚೇತನಾ, ಧನಶ್ರೀ, ಲಿಂಗತ್ವ ಅಲ್ಪ ಸಂಖ್ಯಾತರ ಪುನರ್ವಸತಿ ಯೋಜನೆ ಹಾಗೂ ಮಾಜಿ ದೇವದಾಸಿ ಮಹಿಳೆಯರ...

ದಿನದ ಸುದ್ದಿ4 days ago

ಅಂಚೆ ಇಲಾಖೆಯಿಂದ ಸೆಲ್ಪ್ ಬುಕ್ಕಿಂಗ್ ಸೌಲಭ್ಯ

ಸುದ್ದಿದಿನ,ದಾವಣಗೆರೆ:ಭಾರತೀಯ ಅಂಚೆ ಇಲಾಖೆಯಿಂದ ಸೆಲ್ಪ್ ಬುಕ್ಕಿಂಗ್ ಹೊಸ ಸೌಲಭ್ಯವನ್ನು ಆಯೋಜಿಸಲಾಗಿದೆ. ಈ ಸೌಲಭ್ಯದಿಂದ ನಾಗರಿಕರು ತಮ್ಮ ಮೊಬೈಲ್ ಅಥವಾ ಕಂಪ್ಯೂಟರ್ ಬಳಸಿ ಸ್ಪೀಡ್ ಪೊಸ್ಟ್ , ಪಾರ್ಸಲ್...

ದಿನದ ಸುದ್ದಿ5 days ago

ಪತ್ರಿಕೋದ್ಯಮ ಪದವೀಧರರಿಗೆ ಸಿಹಿ ಸುದ್ದಿ | ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ತರಬೇತಿ ; ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ದಾವಣಗೆರೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಹಿರಿಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ಮಾಧ್ಯಮ ಕ್ಷೇತ್ರದಲ್ಲಿ ಮತ್ತು ಮಾಧ್ಯಮ ಚಟುವಟಿಕೆಗಳ...

ದಿನದ ಸುದ್ದಿ6 days ago

ಬೆಂಬಲ ಬೆಲೆ | ಮೆಕ್ಕೆಜೋಳ ಖರೀದಿ ಪ್ರಕ್ರಿಯೆ ಪ್ರಾರಂಭ: ಡಿಸಿ ಗಂಗಾಧರಸ್ವಾಮಿ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ರೈತರು ಬೆಳೆದ ಮೆಕ್ಕೆಜೋಳವನ್ನು ಬುಧುವಾರದಿಂದ ರೈತರಿಂದ ಖರೀದಿಸಲಾಗುವುದು ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ರವರು ತಿಳಿಸಿದರು. ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ...

ದಿನದ ಸುದ್ದಿ7 days ago

ಯಮ ಸ್ವರೂಪಿ ಗ್ಯಾಸ್ ಗೀಸರ್ ಬಳಸೋ ಮುನ್ನ ಎಚ್ಚರ ; ಇವಿಷ್ಟನ್ನು ಪಾಲಿಸಿ ಅಪಾಯ ತಡೆಗಟ್ಟಿ

~ಅನಿರೀಕ್ಷಿತ್ ನಾರಾಯಣ ಕೆಲ ಮುನ್ನೆಚ್ಚರಿಕೆಯ ಅಂಶಗಳನ್ನು ಪಾಲಿಸುವುದರಿಂದ ಗ್ಯಾಸ್ ಗೀಸರ್ ನಿಂದ ಆಗುವ ಅಪಾಯವನ್ನು ತಡೆಗಟ್ಟಬಹುದು. 1. ಮೊದಲಿಗೆ ಇದು ಎಲ್ಲರಿಗೂ ಗೊತ್ತಿರುವ ವಿಷಯ. ಗ್ಯಾಸ್ ಗೀಸರ್...

ದಿನದ ಸುದ್ದಿ1 week ago

ಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ

ಸುದ್ದಿದಿನ,ದಾವಣಗೆರೆ: ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಪ್ರಸ್ತಾವನೆ ಎನ್ಎಚ್ ಎಂ ಸಿಬ್ಬಂದಿಗಳಲ್ಲಿ ಆತಂಕ ಮೂಡಿಸಿದ್ದು, ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು ಮಧ್ಯಸ್ತಿಕೆ ವಹಿಸಿ ಸರಿಪಡಿಸಲು ಶಿಪಾರಸ್ಸು ಮಾಡಬೇಕು....

ದಿನದ ಸುದ್ದಿ1 week ago

ದಾವಣಗೆರೆ | ಕನ್ನಡ ಚಳವಳಿ ಸಮಿತಿಯಿಂದ ಇಮ್ಮಡಿ ಪುಲಕೇಶಿ ಜಯಂತಿ ಆಚರಣೆ

ಸುದ್ದಿದಿನ,ದಾವಣಗೆರೆ:ನಗರದ ಜಯದೇವ ವೃತ್ತದಲ್ಲಿರುವ ಅಖಿಲ ಕರ್ನಾಟಕ ಕನ್ನಡ ಚಳವಳಿ ಕೇಂದ್ರ ಸಮಿತಿಯಿಂದ ಗುರುವಾರ (ಡಿಸೆಂಬರ್.4) ಕನ್ನಡ ಚಳವಳಿಯ ಕಚೇರಿಯ ಆವರಣದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಟಿ...

Trending