ದಿನದ ಸುದ್ದಿ
ಪತ್ರಕರ್ತ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಹಿನ್ನೆಲೆ ಇಲ್ಲಿದೆ ನೋಡಿ
ಸುದ್ದಿದಿನ, ಬೆಂಗಳೂರು: ಪತ್ರಕರ್ತರ ಸಂಘ ಎಂದಾಕ್ಷಣ ಕಾರ್ಯಮರೆತವರ ಸಂಖ್ಯೆಯೇ ಹೆಚ್ಚು ಎಂಬುದು ಸಂಘದಿಂದ ದೂರವಿರುವ ಕಾರ್ಯನಿರತ ಪತ್ರಕರ್ತರ ದೂರು. ಇಂತಹ ದೂರು ಬಹುತೇಕ ವರ್ಷದಿಂದ ಕೇಳಿ ಬರುತ್ತಲೇ ಇದೆ. ಇದು ಸತ್ಯವಾದ ಮಾತು ಎಂಬುದರಲ್ಲಿ ಸಂಶಯವಿಲ್ಲ. ಇದನ್ನು ಅಳಿಸಬೇಕೆಂದು ಸಂಘದಲ್ಲಿನ ಕೆಲವರ ಹೋರಾಟಕ್ಕೆ ಇಲ್ಲಿಯವರೆಗೂ ಮನ್ನಣೆ ದೊರೆತಿಲ್ಲ.
ಪೀತಪತ್ರಿಕೋದ್ಯಮ ಹೆಚ್ಚಾಗಿದ್ದು, ಆರ್ಎನ್ಐ ಪಡೆದು ವರ್ಷಕ್ಕೆ ಒಂದೆರಡು ಬಾರಿ ಪತ್ರಿಕೆತಂದಾಕ್ಷಣ ಆತ ತನ್ನ ಜೀವಿತಾವಧಿ ಕೊನೆಯವರೆಗೂ ಪತ್ರಕರ್ತನ ಪಟ್ಟ ಕಳೆದುಕೊಳ್ಳುವುದಿಲ್ಲ. ಜತೆಗೆ ಇದಕ್ಕೆ ಪತ್ರಕರ್ತ ಸಂಘದಲ್ಲಿ ಸದಸ್ಯತ್ವ ಕೂಡ ಸಾಥ್ ನೀಡುತ್ತದೆ. ಇದು ಹತ್ತಾರು ವರ್ಷಗಳಿಂದ ನಡೆದುಕೊಂಡು ಬರುತ್ತಿರುವ ಕೆಟ್ಟ ಪದ್ಧತಿ. ಈ ಕಾರಣಕ್ಕೆ ಕಾರ್ಯನಿರತಪತ್ರಕರ್ತರು ಸಂಘದಲ್ಲಿ ಸದಸ್ಯತ್ವ ಪಡೆಯಲು ಹಿಂಜರಿಯುತ್ತಾರೆ.
ಅದರಲ್ಲೂ ಇತ್ತೀಚೆಗೆ ರಾಜ್ಯಾಧ್ಯಕ್ಷರಾಗಿದ್ದ ಎನ್.ರಾಜು ವಿರುದ್ಧ ಗಂಭೀರ ಆರೋಪಗಳು ಕೇಳಿಬಂದು ಇಡೀ ಸಂಘವನ್ನು ಬೀದಿಗೆ ತಂದು ನಿಲ್ಲಿಸಿತ್ತು. ಜತೆಗೆ ಬೆಂಗಳೂರು ಸಮೀಪದ ಠಾಣೆಯೊಂದರಲ್ಲಿ ರಾಜ್ಯಾಧ್ಯಕ್ಷರ ವಿರುದ್ಧವೇ ದೂರು ದಾಖಲು. ಇದರಿಂದ ನೈತಿಕ ಹೊಣೆವೊತ್ತು ಎನ್.ರಾಜು ರಾಜೀನಾಮೆ ನೀಡಿದ್ದಾರೆ. ಸಂಘದ ಘನತೆ, ಗೌರವ ಉಳಿಸಲು ಅ.5ರಂದು ಬೆಂಗಳೂರಿನ ಕಂದಾಯ ಭವನದಲ್ಲಿರುವ ಸಂಘದ ಕಚೇರಿಯಲ್ಲಿ ಕಾರ್ಯಕಾರಿಣಿ ಸಭೆ ಸಂಘದ ಹಿರಿಯ ಉಪಾಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆಯಲ್ಲಿ ಕರೆಯಲಾಗಿತ್ತು. ವಿಶೇಷವೆಂದರೆ ಪ್ರಥಮ ಬಾರಿಗೆ ಸಂಘದ ಸದಸ್ಯರು ಮುಕ್ತವಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ಸತತ ನಾಲ್ಕು ಗಂಟೆಗಳ ಕಾಲ ಸುಧೀರ್ಘ ಚರ್ಚೆ, ಅದರಲ್ಲೂ ಪ್ರತಿ ಸದಸ್ಯರೂ ಸಂಘವನ್ನು ಉಳಿಸುವ ಜತೆಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಸಹಕಾರದಿಂದ ಡಿವಿಜಿ ಅವರಿಂದ ಸ್ಥಾಪನೆಗೊಂಡ ಸಂಘವನ್ನು ಬಲಿಷ್ಠಗೊಳಿಸಬೇಕು. ಸಂಘದತ್ತ ಕಾರ್ಯನಿರತ ಪತ್ರಕರ್ತರು ಮುಖ ಮಾಡುವಂತೆ ಕಾರ್ಯಪ್ರವೃತ್ತರಾಗಬೇಕು ಎಂಬ ಕೂಗು ಹಾಕಿದರು.
ಈ ನಿಟ್ಟಿನಲ್ಲಿ ಸಂಘದ ಅಧ್ಯಕ್ಷ ಸ್ಥಾನಕ್ಕೆ ಶಿವಾನಂದ ತಗಡೂರು ಅವರೇ ಸೂಕ್ತ ಆಯ್ಕೆಯಾಗಿದ್ದು, ಅವರನ್ನು ಖಾಯಂ ಅಧ್ಯಕ್ಷರನ್ನಾಗಿ ನೇಮಿಸಬೇಕು ಎಂದು ಎಲ್ಲ ಸದಸ್ಯರೂ ಧ್ವನಿಯೆತ್ತಿದರು. ಆರಂಭದಲ್ಲಿ ಖಾಯಂ ಅಧ್ಯಕ್ಷರ ಆಯ್ಕೆಗೆ ವಿರೋಧಿಸಿದ್ದ ಇಬ್ಬರು ಸದಸ್ಯರು ಕೂಡ ಕೊನೆಗೆ ಸಮ್ಮತಿ ವ್ಯಕ್ತಪಡಿಸುವ ಮೂಲಕ ಸಭೆ ಒಮ್ಮತ ನಿರ್ಣಯಕ್ಕೆ ಬಂದಿತು. ಕೊನೆಗೂ ವಿಜಯವಾಣಿ ಪತ್ರಿಕೆ ವಿಶೇಷ ವರದಿಗಾರ ಶಿವಾನಂದ ತಗಡೂರು (ಮೊ.ನಂ: 9845087374) ರಾಜ್ಯಾಧ್ಯಕ್ಷರಾಗಿ ಸರ್ವಸಮ್ಮತದಿಂದ ಸಭೆಯಲ್ಲಿ ಆಯ್ಕೆಗೊಂಡರು.
ಈ ವೇಳೆ ಸದಸ್ಯರೆಲ್ಲರೂ ನೂತನ ಅಧ್ಯಕ್ಷರಿಗೆ ಅಭಿನಂದಿಸಿ, ಸಂಘವನ್ನು ಬಲಿಷ್ಠಗೊಳಿಸಬೇಕು. ಜತೆಗೆ ಸಂಘಕ್ಕೆ ಈಗ ಅಂಟಿರುವ ಕಳಂಕ ತೊಳೆಯಲು ಕಂಕಣಬದ್ಧರಾಗಬೇಕು ಎಂದು ಸಲಹೆ ನೀಡಿದರು.
ಸಭೆಯಲ್ಲಿ ರಾಜ್ಯ ಉಪಾಧ್ಯಕ್ಷ ಮತ್ತಿಕೆರೆ ಜಯರಾಮ್, ಕಾರ್ಯದರ್ಶಿ ಲಿಥಕರ್ ಜೈನ್, ಸೊಗಡು ವೆಂಕಟೇಶ್, ಮೈಸೂರಿನ ಸಿ.ಕೆ.ಮಹೇಂದ್ರ, ಲೋಕೇಶ್ಬಾಬು, ಟೆಲೆಕ್ಸ್ ಎನ್.ರವಿಕುಮಾರ್, ರವೀಶ್, ಚಿಕ್ಕಮಗಳೂರು ಶ್ರೀನಿವಾಸ್, ದಾವಣಗೆರೆ ಚಂದ್ರಪ್ಪ, ದುರುಗೇಶಪ್ಪ, ಕುಟ್ಟಪ್ಪ, ಲೊಚೇನೇಶ್ ಹೂಗಾರ್, ನಿಂಗಪ್ಪ ಚಾವಡಿ, ಸತ್ಯನಾರಾಯಣ, ಶಿವಮೊಗ್ಗ ವೈದ್ಯ, ಸೋಮಶೇಖರ್ ಗಾಂಧಿ, ಕೆರಗೋಡು ಸೇರಿದಂತೆ ವಿವಿಧ ಜಿಲ್ಲೆಗಳ
ಅಧ್ಯಕ್ಷರು, ರಾಜ್ಯ ಸಮಿತಿ ಸದಸ್ಯರು, ಪದಾಧಿಕಾರಿಗಳು ಉಪಸ್ಥಿತರಿದ್ದರು.
ನೂತನ ಅಧ್ಯಕ್ಷರಾದ ಶಿವಾನಂದ ತಗಡೂರು ಹಿನ್ನೆಲೆ
ಶಿವಾನಂದ ತಗಡೂರು ಚನ್ನರಾಯಪಟ್ಟಣ ತಾಲೂಕು ತಗಡೂರಿನ ರೈತ ಕುಟುಂಬದ ಕಮಲಮ್ಮ, ವೀರೇಗೌಡ
ದಂಪತಿ ಪುತ್ರನಾಗಿ ಜುಲೈ 1, 1971ಲ್ಲಿ ಜನನ. ಎಸ್ಎಸ್ಎಲ್ಸಿ ತನಕ ಹುಟ್ಟೂರಿನಲ್ಲಿಯೇ ವಿದ್ಯಾಭ್ಯಾಸ. ಹಾಸನದಲ್ಲಿ ವಿದ್ಯಾಭ್ಯಾಸ ಮುಂದುವರಿಕೆ. ಕಾಲೇಜಿನಲ್ಲಿ ಸಾಂಸ್ಕೃತಿಕ ಸಂಘಟನೆ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಣೆ. ಗೊರೂರು ಹೇಮಾವತಿ ಯೋಜನೆಯಿಂದ ತುಮಕೂರು ಜಿಲ್ಲೆಗೆ ನೀರು ಹರಿಸಲು, ಭೂಮಿಯ 200 ಅಡಿ ಆಳದಲ್ಲಿ ನಿರ್ಮಾಣ ಮಾಡಿದ ಬಾಗೂರು-ನವಿಲೆ ಸುರಂಗದಿಂದಾಗಿ ಸಂತ್ರಸ್ತರಾದ ಹಳ್ಳಿಗಳ ಪರವಾಗಿ ಒಂದು ದಶಕಗಳ ಕಾಲ ಹೋರಾಟ ನಡೆಸಿದ್ದಾರೆ.
ರೈತ ಹಿತರಕ್ಷಣಾ ಸಮಿತಿ ಸಂಚಾಲಕ ಮತ್ತು ಹಾಸನ ಜಿಲ್ಲಾ ನೀರಾವರಿ ಹೋರಾಟ ಸಮಿತಿಗಳ ಒಕ್ಕೂಟದ ಕಾರ್ಯದರ್ಶಿಯಾಗಿ ಜವಾಬ್ದಾರಿ ನಿರ್ವಹಣೆ. ಇಷ್ಟೇಲ್ಲ ಜನಪರ ಹೋರಾಟ ನಡೆಸುವ ಮೂಲಕ ಜಿಲ್ಲೆಯಲ್ಲಿ ಜನರ ಪ್ರೀತಿ ಗಳಿಸಿದ್ದ ಶಿವಾನಂದ ತಗಡೂರು ಬದುಕಿಗಾಗಿ ಆಯ್ಕೆ ಮಾಡಿಕೊಂಡಿದ್ದು ಪತ್ರಿಕಾ ಕ್ಷೇತ್ರವನ್ನು. ಹಾಸನ ಜಿಲ್ಲೆಯ ಜನಮಿತ್ರ ದಿನ ಪತ್ರಿಕೆ ಮೂಲಕ ಪತ್ರಿಕೋದ್ಯಮ ಪ್ರವೇಶ ಮಾಡಿದ ಶಿವಾನಂದ ಅವರು, ಜ್ಞಾನದೀಪ, ಈ ವಾರ ಕರ್ನಾಟಕ, ಜನವಾಹಿನಿ ಸೇರಿದಂತೆ ಹಲವಾರು ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ.
ವಿಶೇಷವಾಗಿ ವಿಜಯಕರ್ನಾಟಕ ಪತ್ರಿಕೆ ಪ್ರಾರಂಭದಿಂದಲೂ 12 ವರ್ಷಗಳ ಕಾಲ ಹಿರಿಯ ವರದಿಗಾರನಾಗಿ ಕಾರ್ಯ ನಿರ್ವಹಿಸಿದ್ದಾರೆ. ಆನಂತರ ವಿಜಯವಾಣಿ ಪತ್ರಿಕೆ ಪ್ರಾರಂಭವಾದ ಬಳಿಕ ಬೆಂಗಳೂರಿನಲ್ಲಿ ವಿಶೇಷ ಹಿರಿಯ
ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಹಾಸನದಿಂದ ಬೆಂಗಳೂರಿಗೆ ಆಗಮಿಸಿದ ಶಿವಾನಂದ ತಗಡೂರು, ಬೆಂಗಳೂರಿನಲ್ಲಿ ಕೇವಲ ಪತ್ರಿಕಾ
ಕ್ಷೇತ್ರಕ್ಕಷ್ಟೇ ಸೀಮಿತವಾಗದೇ ವೃತ್ತಿಧರ್ಮ ಜತೆಗೆ ಸಾಹಿತ್ಯ, ಸಾಂಸ್ಕೃತಿಕ ಸಂಘಟನೆಗಳಲ್ಲಿ ಸಕ್ರಿಯರಾಗಿ ಹಿರಿಯ ಸಾಹಿತಿಗಳು, ಹೋರಾಟಗಾರರು, ಸಜ್ಜನ
ರಾಜಕಾರಣಿಗಳು, ದಕ್ಷ ಅಧಿಕಾರಿಗಳ ಪ್ರೀತಿ ಗಳಿಸಿದ್ದಾರೆ. ಜನಮಿತ್ರ ಪತ್ರಿಕೆಯ 50ನೇ ವರ್ಷದ ಸಂಭ್ರಮ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಹಾಸನ
ಜಿಲ್ಲಾ ಸಮಾವೇಶಕ್ಕೆ ತಮ್ಮ ಸಂಪಾದಕತ್ವದಲ್ಲಿ ಸ್ಮರಣ ಸಂಚಿಕೆ ತಂದ ಕೀರ್ತಿ ಇವರದ್ದಾಗಿದೆ.
ಹಾಸನ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ 4 ವರ್ಷ ಕಾರ್ಯನಿರ್ವಹಿಸಿದ್ದ ವೇಳೆ, ಬಹಳ ವರ್ಷದ ಕನಸಾಗಿದ್ದ ಪತ್ರಕರ್ತರ ಭವನ ನಿರ್ಮಾಣ ಕೈಗೆತ್ತಿಕೊಂಡು, ಒಂದೇ ವರ್ಷದಲ್ಲಿ ಶಂಕುಸ್ಥಾಪನೆ ಮಾಡಿ ಕಟ್ಟಡ ಪೂರ್ಣಗೊಳಿಸಿ ಉದ್ಘಾಟಿಸಿದ್ದು ಇಡೀ ರಾಜ್ಯಕ್ಕೆ ಮಾದರಿ ಆಗಿದೆ.
ಶ್ರವಣಬೆಳಗೊಳದಲ್ಲಿ ರಾಷ್ಟ್ರೀಯ ಪತ್ರಕರ್ತರ ಸಮ್ಮೇಳನವನ್ನು ಯಶಸ್ವಿಯಾಗಿ ಸಂಘಟಿಸಿದ ಹೆಗ್ಗಳಿಕೆ. ಬೇಲೂರಿನಲ್ಲಿ ರಾಜ್ಯ ಮಟ್ಟದ ಪತ್ರಕರ್ತರ ಸಂಘದ ಪದಾಧಿಕಾರಿಗಳ ಸಮಾವೇಶ. ಮಾಧ್ಯಮ ಅಕಾಡೆಮಿ ಜತೆಯಲ್ಲಿ ಮಾಧ್ಯಮ ಸಂವಾದ ಕಾರ್ಯಕ್ರಮ.
2011ರಿಂದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಉಪಾಧ್ಯಕ್ಷರಾಗಿದ್ದು, ಪ್ರಸ್ತುತ ರಾಜ್ಯಾಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ.
ಹತ್ತು ಹಲವಾರು ಸಂಸ್ಥೆಗಳಲ್ಲಿ ಪದಾಧಿಕಾರಿಯಾಗಿ ಸೇವೆ ಸಲ್ಲಿಸಿದ ಶಿವಾನಂದ ತಗಡೂರು ಅವರಿಗೆ ಅತ್ಯುತ್ತಮ ವಿಮರ್ಶಾತ್ಮಕ ವರದಿಗಾಗಿ ನೀಡುವ ಖಾದ್ರಿಶಾಮಣ್ಣ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ, ಸಂಘ ಸಂಸ್ಥೆಗಳಿಂದ ಸನ್ಮಾನಗಳು ಹುಡುಕಿಕೊಂಡು ಬಂದಿವೆ. ಹಲವಾರು ಬಾರಿ ವಿದೇಶ ಪ್ರವಾಸ. ಶ್ರೀಲಂಕಾ ಪ್ರಧಾನಿ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಪಾಲ್ಗೊಂಡಿರುವುದು ವಿಶೇಷ.
ಪತ್ರಕರ್ತರಲ್ಲಿ ಬೆಟ್ಟದಷ್ಟು ನಿರೀಕ್ಷೆ ಇವೆ
ಶಿವಾನಂದ ತಗಡೂರು ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆಂಬ ಸುದ್ದಿ ರಾಜ್ಯದ ಬಹಳಷ್ಟು ಪತ್ರಕರ್ತರಲ್ಲಿ ನೂರಾರು ಕನಸುಗಳನ್ನು ಬಿತ್ತಿವೆ. ಕಾರ್ಯನಿರತ ಪತ್ರಕರ್ತರಿಗೆ ಸದಸ್ಯತ್ವ ನೀಡುವ ಜತೆಗೆ, ಸಂಘವನ್ನು ಶುದ್ಧೀಕರಿಸುವ ಸವಾಲು ನೂತನ
ಅಧ್ಯಕ್ಷರ ಮುಂದಿದೆ.
ಸಂಘದಿಂದ ನೀಡುವ ಪ್ರಶಸ್ತಿಗೆ ಅರ್ಹರನ್ನು ಗುರುತಿಸಿ ಆಯ್ಕೆ ಮಾಡುವುದು, ಸಂಘದ
ಹಣಕಾಸು ವಹಿವಾಟು ಪಾರದರ್ಶಕವಾಗಿರುವಂತೆ ಜಾಗ್ರತೆ ವಹಿಸಬೇಕಾಗಿದೆ. ಮಾನ್ಯತೆ ಪಡೆದ ಪತ್ರಕರ್ತರಿಗೆ ದೊರೆಯುತ್ತಿರುವ ಉಚಿತ ಬಸ್ ಸೌಲಭ್ಯ, ಆರೋಗ್ಯ ವಿಮೆ ಸೇರಿದಂತೆ ಎಲ್ಲ ಸೌಲಭ್ಯಗಳನ್ನು ರಾಜ್ಯದ ಎಲ್ಲ ಪತ್ರಕರ್ತರಿಗೂ ದೊರೆಯುವಂತೆ ಮಾಡಬೇಕಾಗಿದೆ.
ರೈತಕುಟುಂಬದ ಹಿನ್ನೆಲೆಯಿಂದ ಪತ್ರಿಕಾ ಕ್ಷೇತ್ರಕ್ಕೆ ಬಂದಿರುವ ಶಿವಾನಂದ ತಗಡೂರು ಇಂತಹ ಹತ್ತಾರು ಸವಾಲುಗಳನ್ನು ದಿಟ್ಟವಾಗಿ ಎದುರಿಸಿ, ಸಂಘದ ಘನತೆ ಹೆಚ್ಚಿಸಬೇಕಾಗಿದೆ. ಇದು ರಾಜ್ಯದ ಎಲ್ಲ ಪತ್ರಕರ್ತರೆಲ್ಲರ ಆಶಯ, ಒತ್ತಾಸೆ.
![](https://suddidina.com/wp-content/uploads/2022/04/20210226_111406.jpg)
ಕ್ರೀಡೆ
Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು
![](https://suddidina.com/wp-content/uploads/2024/07/suddidina_paris_Olympic.jpg)
ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.
ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ
![](https://suddidina.com/wp-content/uploads/2024/06/judges_suddidina.jpg)
ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.
ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್ಗಳನ್ನು ಒಳಗೊಂಡಿದೆ.
ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ
![](https://suddidina.com/wp-content/uploads/2024/05/application_invitation_arji_suddidina.jpg)
ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
-
ದಿನದ ಸುದ್ದಿ5 days ago
ಆತ್ಮಕತೆ | ಹೊಸದಾಗಿ ಬಂದ ಹಳೆಯ ಗುರುಗಳು
-
ದಿನದ ಸುದ್ದಿ3 days ago
K-SET| ಕೆಸೆಟ್ ಪರೀಕ್ಷೆ ; ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
-
ದಿನದ ಸುದ್ದಿ5 days ago
ಶಿರೂರು ಗುಡ್ಡಕುಸಿತ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
-
ದಿನದ ಸುದ್ದಿ6 days ago
ಕೃಷಿ ಪಂಡಿತ್, ಆತ್ಮಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ಅತಿಥಿ ಉಪನ್ಯಾಸಕ ಹುದ್ದೆ ; ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ದಾವಣಗೆರೆ ಭಾರೀ ಮಳೆ | ಬೆಳೆ ನಷ್ಟವಾಗಿದ್ದೆಷ್ಟು..?
-
ದಿನದ ಸುದ್ದಿ5 days ago
ನಾಳೆಯಿಂದ ಸಂಸತ್ತಿನ ಬಜೆಟ್ ಅಧಿವೇಶನ
-
ದಿನದ ಸುದ್ದಿ4 days ago
ಬಲ್ಲಿರೇನು ಕೊಬ್ಬರಿ ಎಣ್ಣೆ ಮಹಿಮೆ..!