ಲೈಫ್ ಸ್ಟೈಲ್
ಜೂನ್ 14 ವಿಶ್ವ ರಕ್ತ ದಾನಿಗಳ ದಿನ : ಮಿಸ್ ಮಾಡ್ದೆ ಓದಿ ಈ ಬರಹ

- ಡಾ.ಬಾಬು ಅಣದೂರೆ
ರಕ್ತದಾನ ಜೀವದಾನ
ದೇಶದಲ್ಲಿ ಅದೆಷ್ಟೋ ಮಂದಿಗೆ ರಕ್ತದ ಅವಶ್ಯಕತೆ ಇದೆ. ಅಪಘಾತ, ಅವಘಡ ಸಂಭವಿಸಿದಾಗ, ವಿವಿಧ ಕಾಯಿಲೆಯಿಂದ ಬಳಲುತ್ತಿರುವಾಗ ಯನಿಟ್ ರಕ್ತಕ್ಕಾಗಿ ಹೋರಾಟ ನಡೆದಿರುತ್ತದೆ. ನಾವು ಸ್ವಯಂಪ್ರೇರಿತವಾಗಿ ನೀಡುವ ಒಂದು ಯೂನಿಟ್ ರಕ್ತವು ಮೂರು ಜೀವಗಳನ್ನು ಉಳಿಸಬಲ್ಲದು. ಅವರನ್ನು ಪ್ರಾಣಾಪಾಯದಿಂದ ಪಾರು ಮಾಡಬಲ್ಲದು. ಆದ್ದರಿಂದ ಈಗ ವಿಶ್ವ ರಕ್ತದಾನಿಗಳ ದಿನವನ್ನು ರಕ್ತದಾನ ಮಾಡುವ ಮೂಲಕ ಅರ್ಥಪೂರ್ಣವಾಗಿ ಆಚರಿಸಬೇಕಾದ ಅಗತ್ಯವಿದೆ.
ರಕ್ತ ದಾನಿಗಳ ದಿನದ ಹಿನ್ನೆಲೆ
ವಿಶ್ವದಾದ್ಯಂತ ಪ್ರತಿ ವರ್ಷ ಜೂನ್ 14ರಂದು `‘ವಿಶ್ವ ರಕ್ತ ದಾನಿಗಳ ದಿನ’ವನ್ನು ಆಚರಿಸಲಾಗುತ್ತದೆ. ಮೊದಲ ಬಾರಿಗೆ ದಕ್ಷಿಣ ಆಫ್ರಿಕಾದ ಜೋಹಾನ್ಸ್ ಬರ್ಗ್ನಲ್ಲಿ 2004ರಲ್ಲಿ ಈ ಆಚರಣೆ ಆರಂಭವಾಯಿತು. ರಕ್ತ ವರ್ಗಾವಣಾ ವಿಜ್ಞಾನದಲ್ಲಿ ನೊಬೆಲ್ ಪ್ರಶಸ್ತಿ ಪಡೆದ ವಿಜ್ಞಾನಿ ಕಾರ್ಲ್ ಲ್ಯಾಂಡ್ ಸ್ಟೀನರ್ ಅವರ ಜನ್ಮದಿನದ ನೆನಪಿಗಾಗಿ ಈ ಆಚರಣೆ. ಈತ ರಕ್ತವನ್ನು ಎ, ಬಿ, ಎಬಿ ಮತ್ತು ಒ ಎಂಬ ಗುಂಪುಗಳನ್ನಾಗಿ ವಿಂಗಡಿಸುವ ಬಗೆಯನ್ನು ಕಂಡು ಹಿಡಿದ. ಇಂದಿಗೂ ರಕ್ತವನ್ನು ಈ ಬಗೆಯಲ್ಲಿಯೇ ವಿಂಗಡಿಸಲಾಗುತ್ತಿದೆ.
ಈ ಆಚರಣೆಯ ಮುಖ್ಯ ಧ್ಯೇಯ
ಸ್ವಯಂಪ್ರೇರಿತ ರಕ್ತದಾನದ ಮಹತ್ವವನ್ನು ಸಾರ್ವಜನಿಕರಿಗೆ ಮನವರಿಕೆ ಮಾಡಿಕೊಡುವುದು ಈ ಆಚರಣೆಯ ಮುಖ್ಯ ಧ್ಯೇಯ. ಅದರ ಜೊತೆಯಲ್ಲಿಯೇ ಸ್ವಯಂಪ್ರೇರಿತ ರಕ್ತದಾನಿಗಳನ್ನು ಅಭಿನಂದಿಸುವುದು, ಎಲ್ಲ ಆರೋಗ್ಯವಂತರನ್ನೂ ಸ್ವಯಂಪ್ರೇರಿತ ರಕ್ತದಾನಕ್ಕೆ ಪ್ರೋತ್ಸಾಹಿಸುವುದು ಈ ಆಚರಣೆಯ ಅಭಿಯಾನದಲ್ಲಿ ಪ್ರಮುಖವಾಗಿವೆ. ವಿಶ್ವದ ಅರ್ಧದಷ್ಟು ರಾಷ್ಟ್ರಗಳಲ್ಲಿ ರಕ್ತದ ಕೊರತೆ ಇದೆ. ಈ ಕೊರತೆಯನ್ನು ನೀಗಿಸುವುದು ಈ ರಕ್ತದಾನ ದಿನದ ಆಚರಣೆಯ ಬಹು ಮುಖ್ಯ ಉದ್ದೇಶ.
ರಕ್ತದಾನಕ್ಕೆ ಕನಿಷ್ಠ ಅರ್ಹತೆಗಳು
- ಆರೋಗ್ಯವಂತ ವ್ಯಕ್ತಿಯಾಗಿರಬೇಕು
- ವಯಸ್ಸು 18 ರಿಂದ 60 ವರ್ಷ
- 45 ಕೆ.ಜಿ.ಗಿಂತಲೂ ಹೆಚ್ಚು ತೂಕವಿರಬೇಕು
- 4.12.5 ಗ್ರಾಂ ಗಿಂತಲೂ ಹೆಚ್ಚು ಹಿಮೊಗ್ಲೋಬಿನ್ ಅಂಶವಿರಬೇಕು
- ಅಂಗೀಕೃತವಾದ ರಕ್ತದ ತಾಪಮಾನ 160/90 ಇಂದ 110/60
ಆರೋಗ್ಯವಂತ ವ್ಯಕ್ತಿಯ ದೇಹದಲ್ಲಿ ಸರಾಸರಿ 5.5ರಿಂದ 6 ಲೀಟರ್ನಷ್ಟು ರಕ್ತ ಇರುತ್ತದೆ. ರಕ್ತದಾನ ಪ್ರಕ್ರಿಯೆಯಲ್ಲಿ ಕೇವಲ 350 ಮಿಲಿಯಷ್ಟೇ ರಕ್ತವನ್ನು ದಾನಿಯಿಂದ ಸ್ವೀಕರಿಸುವುದರಿಂದ ಆರೋಗ್ಯವಂತ ಪುರುಷರು ಹಾಗೂ ಮಹಿಳೆಯರು ಪ್ರತಿ ಮೂರು ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದು. ನಿಯಮಿತವಾಗಿ ರಕ್ತವನ್ನು ನೀಡುವ ಮೂಲಕ ನಿಮ್ಮ ಆರೋಗ್ಯದ ಮಟ್ಟವನ್ನು ಉನ್ನತ ಸ್ತರದಲ್ಲಿ ಕಾಪಾಡಿಕೊಳ್ಳಬಹುದಾಗಿದೆ.
ಯಾರು ರಕ್ತದಾನ ಮಾಡಬಾರದು
ಯಕೃತ್ತು (ಲಿವರ್), ಮೂತ್ರಪಿಂಡ (ಕಿಡ್ನಿ) ಮತ್ತು ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿರುವವರು, ಗರ್ಭಿಣಿಯರು,
ಋತುಸ್ರಾವದಲ್ಲಿರುವ ಮಹಿಳೆಯರು, ಮಗುವಿಗೆ ಹಾಲುಣಿಸುವ ತಾಯಂದಿರು, ರಕ್ತಹೀನತೆ, ಕ್ಯಾನ್ಸರ್, ಕ್ಷಯ, ಅಧಿಕ ರಕ್ತದೊತ್ತಡ, ಅಪಸ್ಮಾರ ಮುಂತಾದ ತೊಂದರೆಗಳಿಂದ ಬಳಲುತ್ತಿರುವವರು ರಕ್ತದಾನ ಮಾಡಬಾರದು.
ಹಾಗೆಯೇ ದೊಡ್ಡ ಪ್ರಮಾಣದ ಶಸ್ತ್ರಚಿಕಿತ್ಸೆಗೆ ಒಳಗಾದವರು ಒಂದು ವರ್ಷದವರೆಗೆ, ರಕ್ತ ವರ್ಗಾವಣೆ ಮಾಡಿಸಿಕೊಂಡವರು ಆರು ತಿಂಗಳವರೆಗೆ, ಮಲೇರಿಯಾ, ಟೈಫಾಯ್ಡ, ಜಾಂಡೀಸ್ನಿಂದ ಬಳಲಿದವರು ಮುಂದಿನ ಆರು ತಿಂಗಳವರೆಗೆ, ಯಾವುದಾದರೂ ಕಾಯಿಲೆಯ ವಿರುದ್ಧ ಲಸಿಕೆಗಳನ್ನು ತೆಗೆದುಕೊಂಡವರು ಮುಂದಿನ ಆರು ತಿಂಗಳವರೆಗೆ ರಕ್ತದಾನ ಮಾಡಬಾರದು.
ರಕ್ತಕ್ಕೆ ಪರ್ಯಾಯವಾದ ವಸ್ತುವಿಲ್ಲ. ರಕ್ತವನ್ನು ಕೃತಕವಾಗಿ ತಯಾರಿಸಲೂ ಸಾಧ್ಯವಿಲ್ಲ. ಹಾಗಾಗಿ ತುರ್ತು ಪರಿಸ್ಥಿತಿಗಳಲ್ಲಿ ದಾನಿಯಿಂದ ಸ್ವೀಕರಿಸಿದ ರಕ್ತವಷ್ಟೇ ರೋಗಿಯ ಜೀವ ಉಳಿಸಲು ಸಾಧ್ಯ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
Photo Gallery | ಚನ್ನಗಿರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಜಾನಪದ ಉತ್ಸವ-2025
ದಿನದ ಸುದ್ದಿ
ಪಕ್ಷಿ ಸಂಕುಲ ಸಂರಕ್ಷಿಸುವ ಮನೋಭಾವ ಅಗತ್ಯ : ಪ್ರಾಚಾರ್ಯ ಎಂ.ನಾಸಿರುದ್ದೀನ್

ಸುದ್ದಿದಿನ,ಚಿತ್ರದುರ್ಗ: ಜಗತ್ತಿನಲ್ಲಿ ಭೂಮಿಯ ಮೇಲೆ ಸಕಲ ಜೀವರಾಶಿಗಳು ಬದುಕಲು ಅವಕಾಶವಿದ್ದು ಪರಿಸರ ಸಂರಕ್ಷಣೆ ಮಾಡುವುದರ ಮೂಲಕ ಪಕ್ಷಿ ಸಂಕುಲ ಸಂರಕ್ಷಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಡಯಟ್ ಪ್ರಾಚಾರ್ಯ ಎಂ.ನಾಸಿರುದ್ದೀನ್ ಹೇಳಿದರು.
ನಗರದ ಡಯಟ್ ಆವರಣದಲ್ಲಿರುವ 50 ಕ್ಕೂ ಹೆಚ್ಚು ಮರಗಳಲ್ಲಿ ಪಕ್ಷಿಗಳಿಗೆ ಆಹಾರ, ನೀರು ಪೂರೈಕೆ ವ್ಯವಸ್ಥೆ ಮಾಡಿ ಮಾತನಾಡಿದ ಅವರು ಪ್ರಸ್ತುತ ಸಂದರ್ಭದಲ್ಲಿ ಬಿಸಿಲಿನ ತಾಪ ಹೆಚ್ಚಾಗಿದ್ದು ಪಕ್ಷಿಗಳಿಗೆ ನೀರು ಮತ್ತು ಆಹಾರವನ್ನು ಪೂರೈಕೆ ಮಾಡುವ ಮೂಲಕ ಪಕ್ಷಿಗಳ ಬಗ್ಗೆ ಕಾಳಜಿಯೊಂದಿಗೆ ಸಂರಕ್ಷಿಸುವ ಭಾವನೆ ಬೆಳೆಸಿಕೊಳ್ಳಬೇಕು ಎಂದರು. ನಮ್ಮ ಮನೆಗಳ ಮೇಲ್ಚಾವಣಿಯಲ್ಲಿ ನೀರು, ಆಹಾರ ವ್ಯವಸ್ಥೆ ಮಾಡುವುದರಿಂದ ಪಕ್ಷಿಗಳನ್ನು ಸಂರಕ್ಷಿಸಲು ಅನುಕೂಲವಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಉಪನ್ಯಾಸಕ ಆರ್.ನಾಗರಾಜು ಕಚೇರಿ ಸಿಬ್ಬಂದಿ ವರ್ಗದವರು ಇದ್ದರು.
ಫೋಟೋ: ನಗರದ ಡಯಟ್ ಆವರಣದಲ್ಲಿರುವ 50 ಕ್ಕೂ ಹೆಚ್ಚು ಮರಗಳಲ್ಲಿ ಪ್ರಾಚಾರ್ಯ ಎಂ.ನಾಸಿರುದ್ದೀನ್ ಪಕ್ಷಿಗಳಿಗೆ ಆಹಾರ, ನೀರು ಪೂರೈಕೆ ವ್ಯವಸ್ಥೆ ಮಾಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕವಿತೆ | ಮತ್ತಿನ ಕುಣಿಕೆ

- ಗುರು ಸುಳ್ಯ
ನಿದೆರೆಗೆ ದೂಡದ ಮದಿರೆಯ
ಅನುಭವ
ಸದಾ ಸಂಕಟಗಳ ಹೆರುವ
ಮತ್ತಿನ ಕುಣಿಕೆ
ನನ್ನ ಮಡಿಲ ಮೇಲೆ ನನ್ನದೇ
ಒಡಲು ಮಲಗಿರಲು
ಮಲಗಲು ಹಂಬಲಿಸುವ
ಮಗುವಿನ ಮನದೊಳಗೆ
ಚಾದರವಿಲ್ಲದೆ ಅಳುವ ರಸ್ತೆಯ
ಬದಿಗಳು ಚಲಿಸುತ್ತಿದೆ
ಅಪ್ಪನ ಕೈ ಹಿಡಿದು
ಅಮ್ಮನ ಕೆನ್ನೆಯ ಮೇಲೆ
ನಡೆದ ನೆನಪುಗಳು
ಆದ ಅಪಘಾತಗಳ ಆಳ
ಅಳೆಯುತ್ತಿವೆ…
ಶತ ಪ್ರಯತ್ನ ಪಟ್ಟರೂ
ತಪ್ಪದ ದಾರಿಗೆ
ಡಾಂಬರು ಹಾಕಿಸಿದವರ
ರಾಜಕೀಯವನ್ನು ಎದುರಿಸುತ್ತಲೇ
ಹಡೆಯಬೇಕಿದೆ ಮುಂದಿನ ದಾರಿಯ
ತಿರುವುಗಳಲ್ಲಿ ಕೈ ಹಿಡಿದು
ಮೆಲ್ಲನೆ ಕರೆದೊಯ್ಯುವ
ಕವಿತೆಗಳನ್ನು
ಎಲ್ಲೆಂದರಲ್ಲಿ ಬಿಟ್ಟು ಬಿಡಲು
ಸಾಧ್ಯವಾಗುತ್ತಿಲ್ಲ
ಉಸಿರ ನಾದದಲ್ಲಿ
ತೇಯ್ದ ಗಂಧ,
ಆಟ ನಿಲ್ಲಲು ಬಿಡದೆ
ಗಮಗಮಿಸುತ್ತಿದೆ..
ಪ್ರವಾಹದಲ್ಲಿ ಕೊಚ್ಚಿಹೋಗುವ
ಮುನ್ಸೂಚನೆಯಿಲ್ಲದೇ
ಮೊದಲ ಮಳೆಯಲ್ಲಿ ನೆನೆದು
ಚಪ್ಪಲಿಗೆ ಅಂಟಿದ ಮಣ್ಣಿನ ಘಮದಂತೆ.
(ಕವಿತೆ – ಗುರು ಸುಳ್ಯ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ6 days ago
ಕವಿತೆ | ನಟಿಸುತ್ತೇನೆ ಈ ಚಿತ್ರಶಾಲೆಯಲ್ಲಿ
-
ದಿನದ ಸುದ್ದಿ4 days ago
ಜನಪದ ಕಲೆ ಗ್ರಾಮೀಣ ಜನರ ಜೀವನಾಡಿ : ಪ್ರಾಚಾರ್ಯೆ ಡಾ.ಶಶಿಕಲಾ.ಎಸ್
-
ದಿನದ ಸುದ್ದಿ5 days ago
ಹೊಸ ಹಣಕಾಸು ವರ್ಷ ಆರಂಭ | ಬ್ಯಾಂಕ್ ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಕಡ್ಡಾಯ ; ಇಲ್ಲದಿದ್ದರೆ ಭಾರೀ ದಂಡ
-
ದಿನದ ಸುದ್ದಿ4 days ago
ದಾವಣಗೆರೆ | ವೃತ್ತಿಪರ ಕೋರ್ಸ್ಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ4 days ago
ಮುಖ್ಯಮಂತ್ರಿ ಪದಕ ; ಮುಖ್ಯ ಪೊಲೀಸ್ ಪೇದೆ ಕೊಟ್ರೇಶ್ ಅಯ್ಕೆ
-
ದಿನದ ಸುದ್ದಿ3 days ago
ದಾವಣಗೆರೆ ವಿ.ವಿ 12ನೇ ಘಟಿಕೋತ್ಸವ | ವಿಶ್ವವಿದ್ಯಾಲಯಗಳಲ್ಲಿ 2500 ಹುದ್ದೆಗಳು ಖಾಲಿ ಇವೆ : ಸಚಿವ ಡಾ.ಎಂ.ಸಿ. ಸುಧಾಕರ್
-
ದಿನದ ಸುದ್ದಿ5 days ago
ದಾವಣಗೆರೆ | ಏಪ್ರಿಲ್ 5 ಮತ್ತು 6 ರಂದು ಜಲಸಾಹಸ ಕ್ರೀಡೆ
-
ದಿನದ ಸುದ್ದಿ1 day ago
ದಾವಣಗೆರೆ | ನಾಳೆ ಡಾ.ಬಾಬು ಜಗಜೀವನ ರಾಂ 118ನೇ ಜನ್ಮ ದಿನಾಚರಣೆ