ದಿನದ ಸುದ್ದಿ
ವಿಶ್ವ ಮೊಸಳೆಗಳ ದಿನ ; ಮೊಸಳೆ ಬಗ್ಗೆ ನಿಮಗಿಷ್ಟು ತಿಳಿದಿರಲಿ
- ಸಂಜಯ್ ಹೊಯ್ಸಳ
ಪ್ರತಿ ವರ್ಷದ ಜೂನ್ 17 ನ್ನು ವಿಶ್ವ ಮೊಸಳೆ ದಿನವನ್ನಾಗಿ ಆಚರಿಸಲಾಗುತ್ತದೆ. ವಿಶ್ವದಲ್ಲಿ ಪ್ರಮುಖವಾಗಿ 24 ಜಾತಿಯ ಮೊಸಳೆಗಳಿದ್ದು, ಭಾರತದಲ್ಲಿ ಸದ್ಯಕ್ಕೆ 3 ಪ್ರಬೇಧದ ಮೊಸಳೆ ಸಂತತಿಗಳಿವೆ. ಅವುಗಳೆಂದರೆ..
ಉಪ್ಪು ನೀರಿನ ಮೊಸಳೆ (Saltwater crocodile)
ಮಗ್ಗರ್/ಮಾರ್ಷ್ (Mugger)
ಘಾರಿಯಲ್ (Gharial)
ಇವುಗಳಲ್ಲಿ ಕರ್ನಾಟಕದಲ್ಲಿನ ನದಿಗಳಲ್ಲಿ, ಕೆಲವು ದೊಡ್ಡ ಕೆರೆಗಳಲ್ಲಿ ಕಂಡುಬರುವ ಮೊಸಳೆಗಳು ಮಗ್ಗರ್/ಮಾರ್ಷ್ ಮೊಸಳೆಗಳಾಗಿವೆ. ಕರ್ನಾಟಕದಲ್ಲಿ ಮೊಸಳೆಗಳು ಹೆಚ್ಚಾಗಿ ಉತ್ತರ ಕನ್ನಡ ಜಿಲ್ಲೆಯ ಕಾಳಿ ನದಿ ಪಾತ್ರದಲ್ಲಿ ಕಂಡುಬರುತ್ತವೆ. ಇತ್ತೀಚೆಗೆ ಮೊಸಳೆಯ ದವಣೆಗೆ ಸಿಲುಕಿ ಕೆಲವು ಸಾವು ನೋವಿನ ಪ್ರಕರಣಗಳು ಆ ಭಾಗದಲ್ಲಿ ವರದಿಯಾಗಿವೆ.
ಇನ್ನು ಉತ್ತರ ಕರ್ನಾಟಕದ ಭಾಗದ ಕೆಲವು ಪ್ರಮುಖ ನದಿಗಳ ಪಾತ್ರದಲ್ಲೂ ಮೊಸಳೆಗಳು ಆಗಾಗ್ಗೆ ಕಂಡುಬರುತ್ತವೆ. ನಾನು ನೋಡಿದಂತೆ ಉತ್ತರ ಕರ್ನಾಟಕ ಭಾಗಕ್ಕೆ ಹೋಲಿಸಿದರೆ ದಕ್ಷಿಣ ಕರ್ನಾಟಕ ಭಾಗದಲ್ಲಿ ಮೊಸಳೆಗಳ ದಾಳಿ ಪ್ರಕರಣಗಳು ತುಂಬಾ ಕಡಿಮೆ ಎನ್ನಬಹುದು. ಈ ಭಾಗದ ನದಿಗಳಲ್ಲಿ ಮೊಸಳೆಗಳ ಸಂಖ್ಯೆ ಕಡಿಮೆ ಇರುವುದು ಇದಕ್ಕೆ ಕಾರ ಇರಬಹುದು.
ಕಾವೇರಿ ನದಿಯಲ್ಲಿ ಅತಿಹೆಚ್ಚು ಮೊಸಳೆಗಳು ಕಂಡು ಬರುವುದು ಮಂಡ್ಯದ ಶ್ರೀರಂಗಪಟ್ಟಣ ತಾಲ್ಲೂಕಿನ ವಿಶ್ವವಿಖ್ಯಾತ ಪಕ್ಷಿ ಧಾಮವಾದ ರಂಗನತಿಟ್ಟು ಪಕ್ಷಿಧಾಮದಲ್ಲಿ. ಹಿಂದೆ ಪಂಚತಂತ್ರದಲ್ಲಿ ಮೊಸಳೆ ಮತ್ತು ಕೋತಿಕತೆಯಲ್ಲಿ ಮೊಸಳೆಯ ಹೆಂಡತಿಗೆ ಕೋತಿ ನೇರಳೆ ಹಣ್ಣುಗಳನ್ನು ಹೊತ್ತೊಯ್ಯುವ ಕತೆಯಲ್ಲಿ ಗಂಡ ಮತ್ತು ಹೆಂಡತಿ ಮೊಸಳೆಯನ್ನು ಕಲ್ಪಿಸಿಕೊಂಡು ಮಾತ್ರ ನಾನು ಮೊದಲು ಅವುಗಳ ಸಹಜ ಆವಾಸಸ್ಥಾನದಲ್ಲಿ ಮೊಸಳೆಯನ್ನು ನೋಡಿದ್ದು ನಾಗರಹೊಳೆ ಅರಣ್ಯ ವ್ಯಾಪ್ತಿಯಲ್ಲಿ ಹರಿಯುವ ಲಕ್ಷ್ಮಣತೀರ್ಥ ನದಿಯಲ್ಲಿ. ನಂತರ ಬಂಡೀಪುರ ದಟ್ಟಡವಿಯಲ್ಲಿ ಹರಿಯುವ ಮೂಲೆಹೊಳೆ/ ನುಗು ನದಿಯಲ್ಲಿ… ನಂತರದ ದಿನಗಳಲ್ಲಿ ಕಬಿನಿ, ಪಾಲರ್ ಸೇರಿ ಬಹಳಷ್ಟು ಕಡೆ ಬಹಳಷ್ಟು ಮೊಸಳೆಗಳನ್ನು ನೋಡುವ ಅವಕಾಶ ಸಿಕ್ಕಿತು.
ಘಾರಿಯಲ್ ಗಳು ತುಂಬಾ ಅಪರೂಪದ ಮೊಸಳೆ ಸಂತತಿಗಳಾಗಿದ್ದು, ಸದ್ಯ ಉತ್ತರ ಭಾರತದ ಕೆಲವು ನದಿಗಳು ಹಾಗೂ ನೇಪಾಳದಲ್ಲಿ ಮಾತ್ರ ಇವು ಕಾಣಸಿಗುತ್ತಿವೆ. ಇವುಳನ್ನು IUCN red list ಗೆ ಸೇರಿಸಿದ್ದು, ಇವುಗಳ ಸಂರಕ್ಷಣೆಗೆ ವಿಶೇಷ ಗಮನ ನೀಡಲಾಗಿದೆ.
ನಮಗೆಲ್ಲಾ ಗೊತ್ತಿರುವಂತೆ ಜೀವವೈವಿಧ್ಯತೆಯ ರಕ್ಷಣೆಯಲ್ಲಿ ಎಲ್ಲಾ ಜೀವಿಗಳ ಇರುವಿಕೆ ಬಹಳ ಮುಖ್ಯ. ಜಲಚರಗಳಲ್ಲಿ ಅಗ್ರ ಪರಪಕ್ಷಕಗಳಲ್ಲಿ ಒಂದೆನಿಸಿದ ಮೊಸಳೆ ಜಲಚರ ಜೀವಿಗಳ ಸಮತೋಲನ ಸಾಧಿಸಿ ಅಲ್ಲಿನ ಜೀವವೈವಿಧ್ಯ ಕಾಪಾಡುವಲ್ಲಿ ಇವು ಪ್ರಮುಖ ಪಾತ್ರ ವಹಿಸುತ್ತವೆ. ಹೀಗಾಗಿ ನಾವು ಮೊಸಳೆಗಳನ್ನು ಕೂಡ ಇತರ ಪ್ರಾಣಿಗಳಂತೆ ರಕ್ಷಿಸಬೇಕು.
ಮುಖ್ಯವಾಗಿ ಅವುಗಳ ಆವಾಸಸ್ಥಾನವಾದ ನದಿ, ಸರೋವರದಂತಹ ಜಲಮೂಲಗಳನ್ನು ಸಂರಕ್ಷಿಸಬೇಕು. ಅಲ್ಲಿ ಅಕ್ರಮ ಮರಳುಗಾರಿಗೆ ತಡೆದು, ಜಲಮಾಲಿನ್ಯ ನಿಯಂತ್ರಣ ಮಾಡಬೇಕು. ಹಾಗೆ ಪ್ಲಾಸ್ಟಿಕ್ ತ್ಯಾಜ್ಯಗಳು ನದಿ, ಸರೋವರಗಳನ್ನು ಸೇರದಂತೆ ಕ್ರಮವಹಿಸಬೇಕು. ಹಾಗೆಯೇ ಎಲ್ಲಾದರೂ ಮೊಸಳೆಗಳು ಕಂಡುಬಂದರೆ ಗಾಬರಿಯಾಗದೆ ತಕ್ಷಣ ಅರಣ್ಯ ಇಲಾಖೆಯ ಗಮನಕ್ಕೆ ತರಬೇಕು. (ಬರಹ:ಸಂಜಯ್ ಹೊಯ್ಸಳ,ಫೇಸ್ ಬುಕ್ ನಿಂದ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಆಯುರ್ವೇದ ಆರೋಗ್ಯಕರ ಜೀವನ ಶೈಲಿ
ಸುದ್ದಿದಿನ,ದಾವಣಗೆರೆ:ಭಾರತದ ವೈದ್ಯಕೀಯ ಪರಂಪರೆಯು ಅತ್ಯಂತ ಪ್ರಾಚೀನ ಹಾಗೂ ಸಮೃದ್ಧವಾದುದಾಗಿದೆ. ಆಯುರ್ವೇದವು ಕೇವಲ ರೋಗಗಳಿಗೆ ಚಿಕಿತ್ಸೆ ನೀಡುವ ವಿಜ್ಞಾನವಲ್ಲ, ಅದೊಂದು ಆರೋಗ್ಯಕರ ಜೀವನ ಶೈಲಿಯಾಗಿದೆ ಎಂದು ಘನವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ತಿಳಿಸಿದರು.
ಅವರು ಶನಿವಾರ ತಪೋವನ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಹಾಗೂ ನ್ಯಾಚುರೋಪತಿ ಮತ್ತು ಯೋಗ ವಿಜ್ಞಾನ ಸಂಸ್ಥೆಯು ಏರ್ಪಡಿಸಿದ್ದ ದ್ವಿತೀಯ ಘಟಿಕೋತ್ಸವ ಸಮಾರಂಭವನ್ನು ಉದ್ಪಾಟಿಸಿ ಮಾತನಾಡಿದರು.
ಈಗಿನ ದಿನಮಾನಗಳಲ್ಲಿ ಇಡೀ ಜಗತ್ತು ಮಾನಸಿಕ ಒತ್ತಡ ಹಾಗೂ ಪರಿಸರ ಸವಾಲುಗಳನ್ನು ಎದುರಿಸುತ್ತಿದ್ದು, ಇಂತಹ ಸಂದರ್ಭದಲ್ಲಿ ಆಯುರ್ವೇದ, ಯೋಗ ಮತ್ತು ನೈಸರ್ಗಿಕ ಚಿಕಿತ್ಸಾ ಪದ್ಧತಿಗಳ ಪ್ರಸ್ತುತತೆ ಹಾಗೂ ಮಹತ್ವ ಮತ್ತಷ್ಟು ಹೆಚ್ಚಾಗಿದೆ, ವೈದ್ಯರು ತಮ್ಮ ವೃತ್ತಿ ಜೀವನದಲ್ಲಿ ಮಾನವೀಯ ಮೌಲ್ಯಗಳಿಗೆ ಮೊದಲ ಆದ್ಯತೆ ನೀಡಬೇಕು ಎಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ತಿಳಿಸಿದರು.
ಭಾರತದ ವೈದ್ಯಕೀಯ ಪರಂಪರೆಯು ಅತ್ಯಂತ ಪ್ರಾಚೀನ ಹಾಗೂ ಸಮೃದ್ಧವಾದುದಾಗಿದೆ. ಆಯುರ್ವೇದವು ಕೇವಲ ರೋಗಗಳಿಗೆ ಚಿಕಿತ್ಸೆ ನೀಡುವ ವಿಜ್ಞಾನವಲ್ಲ, ಅದೊಂದು ಆರೋಗ್ಯಕರ ಜೀವನ ಶೈಲಿಯಾಗಿದೆ. ಜಗತ್ತು ಮಾನಸಿಕ ಒತ್ತಡ ಹಾಗೂ ಪರಿಸರ ಸವಾಲುಗಳನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲಿ ಆಯುರ್ವೇದ, ಯೋಗ ಮತ್ತು ನೈಸರ್ಗಿಕ ಚಿಕಿತ್ಸಾ ಪದ್ಧತಿಗಳ ಪ್ರಸ್ತುತತೆ ಹಾಗೂ ಮಹತ್ವ ಮತ್ತಷ್ಟು ಹೆಚ್ಚಾಗಿದೆ ಎಂದು ತಿಳಿಸಿದರು.
ಆಧುನಿಕ ತಂತ್ರಜ್ಞಾನ, ಕೃತಕ ಬುದ್ಧಿಮತ್ತೆ (AI) ಮತ್ತು ಡಿಜಿಟಲ್ ಆರೋಗ್ಯ ಸೇವೆಗಳು ಇಂದಿನ ವೈದ್ಯಕೀಯ ಕ್ಷೇತ್ರದ ಚಿತ್ರಣವನ್ನೇ ಸಂಪೂರ್ಣವಾಗಿ ಬದಲಾಯಿಸುತ್ತಿವೆ. ಇಂತಹ ತಾಂತ್ರಿಕ ಕ್ರಾಂತಿಯ ಯುಗದಲ್ಲಿ ಪದವಿ ಪಡೆದು ಹೊರಬರುತ್ತಿರುವ ನೂತನ ವೈದ್ಯರು ಕೇವಲ ಸಾಂಪ್ರದಾಯಿಕ ವೈದ್ಯಕೀಯ ಜ್ಞಾನಕ್ಕೆ ಸೀಮಿತವಾಗದೆ, ಆಧುನಿಕ ವಿಜ್ಞಾನದ ನೂತನ ಆವಿಷ್ಕಾರಗಳನ್ನು ಅಳವಡಿಸಿಕೊಳ್ಳುವ ಮೂಲಕ ಉಭಯ ಕ್ಷೇತ್ರಗಳ ನಡುವೆ ಬಲವಾದ ಸೇತುವೆಯಾಗಿ ಕೆಲಸ ಮಾಡಬೇಕಾದ ತುರ್ತು ಅಗತ್ಯವಿದೆ ಎಂದರು.
ಕೃತಕ ಬುದ್ಧಿಮತ್ತೆಯು ರೋಗನಿರ್ಣಯವನ್ನು ಹೆಚ್ಚು ನಿಖರ ಹಾಗೂ ವೇಗವಾಗಿಸಲು ನೆರವಾದರೆ, ಡಿಜಿಟಲ್ ಆರೋಗ್ಯ ಸೇವೆಗಳು ದೂರದ ಊರುಗಳಿಗೂ ಚಿಕಿತ್ಸೆಯನ್ನು ತಲುಪಿಸಲು ಸಹಕಾರಿಯಾಗಿವೆ. ಆದ್ದರಿಂದ, ಹೊಸ ತಲೆಮಾರಿನ ವೈದ್ಯರು ಕೇವಲ ದಿನನಿತ್ಯದ ಕ್ಲಿನಿಕ್ ಅಥವಾ ಆಸ್ಪತ್ರೆಯ ಚಿಕಿತ್ಸೆಗೆ ಸೀಮಿತವಾಗದೆ, ತಂತ್ರಜ್ಞಾನದ ದತ್ತಾಂಶಗಳನ್ನು ಬಳಸಿಕೊಂಡು ಹೊಸ ರೋಗಗಳಿಗೆ ಪರಿಹಾರ ಕಂಡುಕೊಳ್ಳುವ ಉತ್ತಮ ಸಂಶೋಧಕರಾಗಬೇಕು. ಇದರೊಂದಿಗೆ, ಸಮಾಜದಲ್ಲಿ ತಂತ್ರಜ್ಞಾನ ಮತ್ತು ಆರೋಗ್ಯದ ಕುರಿತು ಇರುವ ತಪ್ಪು ಕಲ್ಪನೆಗಳನ್ನು ದೂರಾಗಿಸಿ, ಮಾನವೀಯ ಕಾಳಜಿಯೊಂದಿಗೆ ಜನರನ್ನು ಸನ್ಮಾರ್ಗದಲ್ಲಿ ಮುನ್ನಡೆಸುವ ನೈಜ ಮಾರ್ಗದರ್ಶಕರಾಗಿ ಹೊರಹೊಮ್ಮಬೇಕಿದೆ ಎಂದು ತಿಳಿಸಿದರು.
ವೈದ್ಯಕೀಯ ಸೇವೆಯು ಅತ್ಯಂತ ಪವಿತ್ರವಾದ ಮಾನವೀಯ ಸೇವೆಯಾಗಿದೆ. ರೋಗಿಗಳಿಗೆ ಔಷಧಿಗಿಂತ ಮುಂಚಿತವಾಗಿ ವೈದ್ಯರ ಪ್ರೀತಿಯ ನುಡಿಗಳು ಹಾಗೂ ಸಕಾರಾತ್ಮಕ ನಡವಳಿಕೆಯ ಅಗತ್ಯವಿರುತ್ತದೆ. ಆದ್ದರಿಂದ ವೈದ್ಯರು ತಮ್ಮ ವೃತ್ತಿ ಜೀವನದಲ್ಲಿ ಮಾನವೀಯ ಮೌಲ್ಯಗಳಿಗೆ ಮೊದಲ ಆದ್ಯತೆ ನೀಡಬೇಕು. ಕೇಂದ್ರ ಸರ್ಕಾರದ ಆಯುಷ್ ಮಂತ್ರಾಲಯವು ಸಾಂಪ್ರದಾಯಿಕ ಚಿಕಿತ್ಸಾ ಪದ್ಧತಿಗಳ ಅಭಿವೃದ್ಧಿಗೆ ಶ್ರಮಿಸುತ್ತಿದ್ದು, ಗುಜರಾತ್ನ ಜಾಮ್ನಗರದಲ್ಲಿ ವಿಶ್ವ ಆರೋಗ್ಯ ಸಂಸ್ಥೆ, ಗ್ಲೋಬಲ್ ಟ್ರೆಡಿಷನಲ್ ಮೆಡಿಸಿನ್ ಸೆಂಟರ್’ ಸ್ಥಾಪಿಸುತ್ತಿದೆ ಎಂದು ತಿಳಿಸಿದರು.
ರಾಜ್ಯಸಭಾ ಸದಸ್ಯರಾದ ಶ್ರೀ ನಾರಾಯಣಸಾ ಭಾಂಡಗೆ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಮಾಜಿ ಡೀನ್ ಡಾ: ಶ್ರೀನಿವಾಸ್ ಬನ್ನಿಗೊಳ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಪ್ರೊ. ಎಸ್.ವಿ.ಹಲಸೆ, ತಪೋವನ ಸಂಸ್ಥೆಯ ಅಧ್ಯಕ್ಷ ಡಾ. ಶಶಿಕುಮಾರ್ ವಿ.ಎಂ, ಆಯುರ್ವೇದ ಕಾಲೇಜಿನ ಪ್ರಾಚಾರ್ಯರಾದ ಡಾ. ಅಶ್ವಿನಿ ಕೆ.ಆರ್., ಡಾ.ಸುಮನ ಭಟ್ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ.
ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಸತಿ ಯೋಜನೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ.
ಈ ಯೋಜನೆಯಡಿ ಸೌಲಭ್ಯ ಒದಗಿಸಲು ನಿಗಧಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲಾತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಕಚೇರಿಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days ago10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..
-
ದಿನದ ಸುದ್ದಿ5 days agoರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ
-
ದಿನದ ಸುದ್ದಿ4 days agoವಸತಿ ಯೋಜನೆಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days agoಉಚಿತ ಕೋಳಿ ಸಾಕಾಣಿಕೆ ತರಬೇತಿ: ಅರ್ಜಿ ಆಹ್ವಾನ
-
ದಿನದ ಸುದ್ದಿ5 days agoಕೃಷಿ ಪಂಡಿತ ಹಾಗೂ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ: ಅರ್ಜಿ ಆಹ್ವಾನ
-
ದಿನದ ಸುದ್ದಿ1 day agoದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ
-
ದಿನದ ಸುದ್ದಿ30 minutes agoಆಯುರ್ವೇದ ಆರೋಗ್ಯಕರ ಜೀವನ ಶೈಲಿ

