ದಿನದ ಸುದ್ದಿ
ಹಣದುಬ್ಬರ, ಕೋವಿಡ್ ನಿಭಾಯಿಸುವ ಭಾರತೀಯ ಮಾದರಿಗೆ ವಿಶ್ವದ ಆರ್ಥಿಕ ತಜ್ಞರ ಪ್ರಶಂಸೆ: ಗೃಹ ಸಚಿವ ಅಮಿತ್ ಶಾ
![](https://suddidina.com/wp-content/uploads/2018/07/Amith-shah-suddidina.jpg)
ಸುದ್ದಿದಿನ ಡೆಸ್ಕ್ : ಆರ್ಥಿಕ ಪುನಶ್ಚೇತನಕ್ಕೆ ಪ್ರಧಾನಿ ನರೇಂದ್ರ ಮೋದಿ ( Narendra Modi ) ನೇತೃತ್ವದ ಕೇಂದ್ರ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದ್ದು, ಪರಿಣಾಮಕಾರಿ ಕ್ರಮಗಳಿಂದಾಗಿ ಆರ್ಥಿಕ ಅಭಿವೃದ್ಧಿ ದರದಲ್ಲಿ ( GDP) ಭಾರತ ಜಾಗತಿಕವಾಗಿ ಮುಂಚೂಣಿಯಲ್ಲಿದೆ ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ( Amit Shah) ಹೇಳಿದ್ದಾರೆ.
ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ( Banglore) ನಿನ್ನೆ ನಡೆದ ’ಸಂಕಲ್ಪದಿಂದ ಸಿದ್ಧಿ’ ( Sankalp Se Siddhi )
ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಅವರು, ಪ್ರಸ್ತುತ ಭಾರತದ ಅಭಿವೃದ್ಧಿ ದರ ಶೇಕಡ 7.4ರಷ್ಟಿದ್ದು, ಚೀನಾ ಶೇಕಡ 3.3ಮತ್ತು ಬ್ರೆಜಿಲ್ ಶೇಕಡ 1.7ರಷ್ಟು ಅಭಿವೃದ್ಧಿ ದರ ಹೊಂದಿವೆ ಎಂದು ತಿಳಿಸಿದರು.
ಕಳೆದ ಎಂಟು ವರ್ಷಗಳಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಾನವೀಯ ಮುಖವಿರುವ ಆರ್ಥಿಕತೆಯನ್ನು ಪರಿಚಯಿಸಿದ್ದು, ಸಮಾಜದ ಕಟ್ಟಕಡೆಯ ಜನರ ಏಳಿಗೆಗೆ ಹಲವಾರು ಕಲ್ಯಾಣ ಕ್ರಮಗಳನ್ನು ಕೈಗೊಂಡಿದ್ದಾರೆ. ಕೇಂದ್ರ ಸರ್ಕಾರದಿಂದ ಬಡವರಿಗೆ ಮನೆ, ಶೌಚಾಲಯ, ವಿದ್ಯುತ್, ಆರೋಗ್ಯ ವಿಮೆ, ನೀರಿನ ಸಂಪರ್ಕ ಮತ್ತು ಉಚಿತ ಪಡಿತರವನ್ನು ಒದಗಿಸುವ ಪ್ರಯತ್ನಗಳು ಮುಂದುವರೆದಿವೆ ಎಂದು ಅಮಿತ್ ಶಾ ತಿಳಿಸಿದರು.
ಕೋವಿಡ್ ಮತ್ತು ಹಣದುಬ್ಬರವನ್ನು ನಿಭಾಯಿಸುವ ಭಾರತೀಯ ಮಾದರಿಯನ್ನು ವಿಶ್ವದಾದ್ಯಂತ ಅರ್ಥಶಾಸ್ತ್ರಜ್ಞರು ಪ್ರಶಂಸೆ ಮಾಡಿದ್ದಾರೆ ಎಂದು ಗೃಹ ಸಚಿವರು ತಿಳಿಸಿದರು.
ಇದನ್ನೂ ಓದಿ | ಆಕಾಶವಾಣಿ, ಎಫ್ಎಂ, ದೂರದರ್ಶನ ಚಾನಲ್ಗಳಿಗೆ ಅತಿ ಹೆಚ್ಚು ಜನ ಮನ್ನಣೆ: ಕೇಂದ್ರ ವಾರ್ತಾ ಸಚಿವ ಅನುರಾಗ್ ಸಿಂಗ್ ಠಾಕೂರ್
ಇತರ ದೇಶಗಳು ಉದ್ಯಮಗಳಿಗೆ ಬೇಡಿಕೆಯನ್ನು ಹೆಚ್ಚಿಸುವ ಮತ್ತು ಪ್ಯಾಕೇಜ್ಗಳನ್ನು ಘೋಷಿಸುವತ್ತ ಗಮನಹರಿಸಿದಾಗ, ಪ್ರಧಾನಮಂತ್ರಿಗಳು ಪರಿಹಾರವನ್ನು ಹುಡುಕುವತ್ತ ಗಮನಹರಿಸಿದರು ಮತ್ತು ಲಸಿಕೆಯನ್ನು ಕಂಡುಹಿಡಿಯಲು ವಿಜ್ಞಾನಿಗಳನ್ನು ಪ್ರೋತ್ಸಾಹಿಸಿದರು ಎಂದು ಸಚಿವ ಅಮಿತ್ ಶಾ ತಿಳಿಸಿದರು.
ದೇಶದಲ್ಲಿ ವಿಶ್ವದ ಅತಿದೊಡ್ಡ ಲಸಿಕೆ ಕಾರ್ಯಕ್ರಮವನ್ನು ಜಾರಿಗೊಳಿಸಲಾಗಿದ್ದು, ಮೇಕ್ ಇನ್ ಇಂಡಿಯಾ, ಆತ್ಮ ನಿರ್ಭರ್ ಭಾರತ್ ಅಭಿಯಾನಗಳ ಮೂಲಕ ಸ್ವದೇಶಿ ಸ್ವಾವಲಂಬನೆಗೆ ಒತ್ತು ನೀಡಲಾಗಿದೆ ಎಂದು ಅಮಿತ್ ಶಾ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ಕ್ರೀಡೆ
Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು
![](https://suddidina.com/wp-content/uploads/2024/07/suddidina_paris_Olympic.jpg)
ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.
ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ
![](https://suddidina.com/wp-content/uploads/2024/06/judges_suddidina.jpg)
ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.
ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್ಗಳನ್ನು ಒಳಗೊಂಡಿದೆ.
ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ
![](https://suddidina.com/wp-content/uploads/2024/05/application_invitation_arji_suddidina.jpg)
ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
-
ದಿನದ ಸುದ್ದಿ6 days ago
ಆತ್ಮಕತೆ | ಹೊಸದಾಗಿ ಬಂದ ಹಳೆಯ ಗುರುಗಳು
-
ದಿನದ ಸುದ್ದಿ3 days ago
K-SET| ಕೆಸೆಟ್ ಪರೀಕ್ಷೆ ; ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
-
ದಿನದ ಸುದ್ದಿ5 days ago
ಶಿರೂರು ಗುಡ್ಡಕುಸಿತ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
-
ದಿನದ ಸುದ್ದಿ5 days ago
ಅತಿಥಿ ಉಪನ್ಯಾಸಕ ಹುದ್ದೆ ; ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ದಾವಣಗೆರೆ ಭಾರೀ ಮಳೆ | ಬೆಳೆ ನಷ್ಟವಾಗಿದ್ದೆಷ್ಟು..?
-
ದಿನದ ಸುದ್ದಿ6 days ago
ಕೃಷಿ ಪಂಡಿತ್, ಆತ್ಮಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ನಾಳೆಯಿಂದ ಸಂಸತ್ತಿನ ಬಜೆಟ್ ಅಧಿವೇಶನ
-
ದಿನದ ಸುದ್ದಿ4 days ago
ಬಲ್ಲಿರೇನು ಕೊಬ್ಬರಿ ಎಣ್ಣೆ ಮಹಿಮೆ..!