ದಿನದ ಸುದ್ದಿ
ವಿಶ್ವ ಪಶುವೈದ್ಯ ದಿನ | ಪಶುವೈದ್ಯ ವೃತ್ತಿಯ ಸುತ್ತ ಒಂದು ಪಕ್ಷಿ ನೋಟ
- ಡಾ. ಕಮಲೇಶ್ ಕುಮಾರ್ ಕೆ ಎಸ್,ಪಶುವೈದ್ಯಾಧಿಕಾರಿಗಳು,ಪಶುಚಿಕಿತ್ಸಾಲಯ, ಮತ್ತೂರು,ಶಿವಮೊಗ್ಗ
ಎಲ್ಲಾ ವರ್ಷದ ಏಪ್ರಿಲ್ ಕಡೆಯ ಶನಿವಾರ ವಿಶ್ವ ಪಶುವೈದ್ಯ ದಿನಾಚರಣೆ ಆಚರಿಸುವ ವಿಶ್ವದ ಪಶುವೈದ್ಯರು ಇಡೀ ವಿಶ್ವವೇ ಕರೋನದಿಂದ ತತ್ತರಿಸಿ ಹೋಗಿರುವ ಈ ಸಂದರ್ಭದಲ್ಲಿ ಈ ಬಾರಿ ಒಂದು ಉತ್ತಮ ಗುರಿಯಾದ “ಪರಿಸರ ಸಂರಕ್ಷಣೆಯಿಂದ ಪ್ರಾಣಿ ಹಾಗು ಮನುಷ್ಯರ ಆರೋಗ್ಯ ಸುಧಾರಣೆ” (“Environmental protection for improving animal and human health”) ಎಂಬ ವಿಷಯವನ್ನು ಉತ್ತೇಜಿಸುತ್ತಿದ್ದಾರೆ. ಪರಿಸರ ಸಂರಕ್ಷಣೆಯಿಂದ ಆಗುವ ಮಾಲಿನ್ಯ ತಡೆ, ಕಡಿಮೆ ರೋಗ ಹರಡುವಿಕೆ ಹಾಗೂ ಹೆಚ್ಚುವ ರೋಗ ನಿರೋಧಕ ಶಕ್ತಿಯಿಂದ ಖಂಡಿತವಾಗಿಯೂ ಎಲ್ಲಾ ಜೀವಿಗಳ ಆರೋಗ್ಯ ಸುಧಾರಣೆ ಸಾಧ್ಯವಾಗುತ್ತದೆ.
ರೈತರ ಏಳಿಗೆಗಾಗಿ ಕರೋನಾದಲ್ಲೂ ಪಶುವೈದ್ಯರ ಹೋರಾಟ
ಕರೋನದಿಂದ ಆಗಿರುವ ಇಂಥಹ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಎಲ್ಲ ಉದ್ಯಮಗಳು ಸ್ಥಗಿತವಾಗಿ ದೇಶದ ಆರ್ಥಿಕತೆ ಕುಸಿಯುತ್ತಿದ್ದರು ಸಹ ಹೈನುಗಾರಿಕೆ ಬಡ ರೈತರ ಕೈ ಹಿಡಿದಿದೆ, ನೆಮ್ಮದಿಯಾಗಿ ಜೀವನ ನಡೆಸಿ ನಿಟ್ಟುಸಿರು ಬಿಡಲು ಸಹಾಯ ಹಸ್ತ ನೀಡಿದೆ, ಇದಕ್ಕೆ ಪಶುವೈದ್ಯರು ಎಗ್ಗಿಲ್ಲದೆ ನೀಡುತ್ತಿರುವ ಅಗತ್ಯ ಸೇವೆಯು ಬೆನ್ನೆಲುಬಾಗಿದೆ.
ಪಶುವೈದ್ಯ ವೃತ್ತಿಯ ಇತಿಹಾಸ
ಇತಿಹಾಸದ ಪ್ರಕಾರ ಮೊಟ್ಟಮೊದಲು ಪಶು ವೈದ್ಯಕೀಯ ವಿಜ್ಞಾನದಲ್ಲಿ ಪಾಂಡಿತ್ಯವನ್ನು ಪಡೆದ ವ್ಯಕ್ತಿಯು ಭಾರತೀಯ, ಅವನು ಹಯಘೋಷ ಎಂಬ ಋಷಿಯ ಮಗನಾದ ಶಾಲಿಹೋತ್ರ (2350 BCE) ಎಂಬ ಉಲ್ಲೇಖವಿದೆ.
ಫ್ರಾನ್ಸನ ಜಾನುವಾರುಗಳಲ್ಲಿ ಏಕಾಏಕಿ ಪಿಡುಗು ರೋಗ ಕಾಣಿಸಿಕೊಂಡಾಗ, ಅದಕ್ಕೆ ಪರಿಹಾರ ಕಂಡುಹಿಡಿಯಲೆಂದೇ ಕ್ಲಡ್ ಬೊರ್ಗಲಟ್ (Claude Bourgelat) ಎಂಬಾತನು ಮೊಟ್ಟಮೊದಲ ಪಶು ವೈದ್ಯಕೀಯ ಮಹಾವಿದ್ಯಾಲಯವನ್ನು ಪ್ರಾರಂಭಿಸಿದರು ತದ ನಂತರ ಇನ್ನುಳಿದ ದೇಶಗಳಲ್ಲಿ ಪ್ರಾರಂಭವಾದವು. ಹೀಗೆ ಪಶುವೈದ್ಯ ವಿಜ್ಞಾನವು ಬೆಳೆಯತೊಡಗಿತು.
ಪಶುವೈದ್ಯರು ಹೀಗೆ ಉತ್ತಮರು
ಜಾನುವಾರುಗಳೇ ದೇವರು ಎಂದು ಕಲ್ಪಿಸಿಕೊಂಡಿರುವ ನಮ್ಮ ದೇಶದಲ್ಲಿ, ಕೇವಲ ಪೂಜೆಯ ವಸ್ತುವೆಂದು ನೋಡದೆ ಜಾನುವಾರುಗಳಿಂದ ಆರ್ಥಿಕವಾಗಿ ಸದೃಢತೆ ಹೊಂದಿದ ಸಾಕಷ್ಟು ರೈತರು ನಮ್ಮ ಸುತ್ತಲೂ ಇರುವುದನ್ನು ನಾವೆಲ್ಲರೂ ಗಮನಿಸಿಯೇ ಇರುತೇವೆ. ಅದೆಷ್ಟೋ ಸಣ್ಣ ಹಾಗೂ ಅತೀ ಸಣ್ಣ ರೈತರು ತಮ್ಮಲ್ಲಿರುವ ಬೆರಳೆಣಿಕೆಯಷ್ಟು ಕೋಳಿ, ಕುರಿ, ಮೇಕೆ, ಹಸುಗಳನ್ನು ಕಟ್ಟಿಕೊಂಡು ಉತ್ತಮ ರೀತಿಯಲ್ಲಿ ಜೀವನ ಸಾಗಿಸುತಿರುವುದಕ್ಕೆ ಲೆಕ್ಕವಿಲ್ಲದಷ್ಟು ಉದಾಹರಣೆ ನಮ್ಮ ಬಳಿ ಇವೆ. ಪಶುವೈದ್ಯರು ಜಾನುವಾರು ಸಾಗಾಣಿಕೆ ಹಾಗೂ ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡಿರುವ ರೈತರ ಏಳಿಗೆಗೆ ನೀಡುತ್ತಿರುವ ಸಹಕಾರ ಬಹಳಷ್ಟು.
ಪಶುವೈದ್ಯರಾಗಲು ಇರಲೇಬೇಕಾದ ಗುಣಗಳು
ನಟ ವಿಲ್ ರೋಜರ್ಸ್ಸ ಎಂಬಾತನ “Best doctor in the world is a veterinarian. He can’t ask his patients what’s the matter. He’s just got to know.” ಹೇಳಿಕೆಯಂತೆ ನಮಗೆಲ್ಲ ತಿಳಿದಿರುವ ಹಾಗೆ ಸಾಮಾನ್ಯವಾಗಿ ಪ್ರಾಣಿಗಳು ರೋಗದ ಲಕ್ಷಣಗಳನ್ನು ತೋರಿಸುವುದಿಲ್ಲ, ಪ್ರಾಣಿಯ ವಾರಸುದಾರರ ಹೇಳಿಕೆಯ ಮೇಲೆ ಅವಲಂಬಿತವಾಗಿಯೋ ಇಲ್ಲವಾದಲ್ಲಿ ತಾವಾಗಿಯೇ ಪರೀಕ್ಷಿಸಿ ಅದನ್ನು ಕಂಡು ಹಿಡಿಯ ಬೇಕಾಗಿರುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಹಳೆಯ ಚಿಕಿತ್ಸೆಯ ಅನುಭವ, ಜಾಣ್ಮೆ, ತಾಳ್ಮೆ, ಉತ್ತಮ ದೃಷ್ಟಿ, ಸ್ಪರ್ಶ ಸಂವೇದನೆ ಹಾಗು ಪ್ರಾಣಿಗಳ ಮೇಲಿನ ಪ್ರೀತಿ ಸಾಕಷ್ಟು ಇರಬೇಕಾಗುತ್ತದೆ.
ಪಶುವೈದ್ಯರು ಕೇವಲ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವುದಲ್ಲದೆ ಸಾಕಷ್ಟು ಬಾರಿ ಜಾನುವಾರು ಮಾಲೀಕರ ಮನೆಯ ಬಾಗಿಲಿಗೆ ಹೋಗಿ ಚಿಕಿತ್ಸೆಯನ್ನು ನೀಡಬೇಕಾಗಿರುತ್ತದೆ ಆದ್ದರಿಂದ
ಕೇವಲ ಮಾನಸಿಕರೀತಿಯಿಂದ ಅಲ್ಲದೆ ದೈಹಿಕವಾಗಿಯೂ ಸದೃಢವಾಗಿರಬೇಕಾಗಿರುತ್ತದೆ.
ಪಶುವೈದ್ಯರ ಶ್ರೇಷ್ಠತೆ ಹಾಗು ವೈವಿಧ್ಯತೆ
ವೈದ್ಯರೆಂದರೆ ಅವರ ಜೀವನಾದ್ಯಂತ ಕಲಿಕೆಯು ಅವರ ಜೊತೆಗೂಡಿರುತ್ತದೆ, ಅದೇ ರೀತಿ ಮನುಷ್ಯನನ್ನು ಬಿಟ್ಟು ಬೇರೆಲ್ಲಾ ಜೀವಿಗಳ ಎಲ್ಲ ರೀತಿಯ ರೋಗಗಳಿಗೂ ಚಿಕಿತ್ಸೆ ನೀಡಬಲ್ಲ ಪಶುವೈದ್ಯರು ದಿನನಿತ್ಯವೂ ಸಾಕಷ್ಟು ಕಲಿಯುತ್ತಿರಬೇಕಾಗಿರುತ್ತದೆ. ಹೇಳಬೇಕೆಂದರೆ ಸಾಕಷ್ಟು ಪಶುವೈದ್ಯರು ಸಾಮಾನ್ಯ ಜ್ವರದ ಚಿಕಿತ್ಸೆಯಿಂದ ಹಿಡಿದು ಎಂತಹ ಅರವಳಿಕೆಯಿಂದ ಕೂಡಿದ ಶಾಸ್ತ್ರಚಿಕಿತ್ಸೆಯನ್ನು ಕೂಡ ಮಾಡಬಲ್ಲರು ಹಾಗೂ ತಮ್ಮ ಕಾರ್ಯ ವ್ಯಾಪ್ತಿಯ ಸ್ಥಳದಲ್ಲಿ ಕಂಡು ಬರುವ ರೋಗಗಳನ್ನು ಚಾಣಾಕ್ಷ ರೀತಿಯಿಂದ ಕಂಡು ಹಿಡಿದು ಅದಕ್ಕೆ ಸೂಕ್ತ ರೀತಿಯ ಚಿಕಿತ್ಸೆಯನ್ನು ನೀಡಬಲ್ಲರು.
ವಿಶ್ವದಲ್ಲಿ ಪಶು ವೈದ್ಯಕೀಯ ವಿಜ್ಞಾನವು ಸಾಕಷ್ಟು ಮುಂದುವರೆದಿದೆ ಆದರೂ ಭಾರತವು ಅದರಲ್ಲೇನು ಮಿಗಿಲಿಲ್ಲ. ಆದರೆ ವಾಸ್ತವ ಸ್ಥಿತಿ ಗಮನಿಸಿದರೆ ಇಂದಿಗೂ ಭಾರತದಲ್ಲಿ ಸುಸಜ್ಜಿತವಾದ ಸಲಕರಣೆಗಳನ್ನು ಹೊಂದಿರುವ ಪಶು ಆಸ್ಪತ್ರೆ ಬೆರಳೆಣಿಕೆಯಷ್ಟು ಮಾತ್ರ. ಪ್ರಾಥಮಿಕ ಚಿಕಿತ್ಸೆಯಿಂದ ಹಿಡಿದು ಸೂಪರ್ ಸ್ಪೆಷಾಲಿಟಿ ಚಿಕಿತ್ಸೆಯನ್ನು ಕೂಡ ಒಬ್ಬ ಪಶುವೈದ್ಯನೇ ನೀಡಬೇಕಾಗಿರುತ್ತದೆ. ಇಂತಹ ಸಂದರ್ಭದಲ್ಲೂ ಕೂಡ ನಮ್ಮ ಪಶುವೈದ್ಯರು ದೃತಿಗೆಡದೆ ಸಾಕಷ್ಟು ಮೇಲುಗೈ ಸಾಧಿಸಿದ್ದಾರೆ.
ಜನರಿಗೆ ಸೇವೆಯನ್ನು ಒದಗಿಸುವ ಅಧಿಕಾರಿಗಳಲ್ಲಿ ಸಾಕಷ್ಟು ಹತ್ತಿರವಾಗಿರುವ ಪಶುವೈದ್ಯರು ರೈತರ ಏಳಿಗೆಗೆ ಸಾಕಷ್ಟು ಮಾಹಿತಿಯನ್ನು ನೀಡಬಲ್ಲರು ಹಾಗೂ ಅವರ ದಿನನಿತ್ಯ ಜೀವನದಲ್ಲಿ ವೈಜ್ಞಾನಿಕ ಜೀವನವನ್ನು ಅಳವಡಿಸಿಕೊಳ್ಳಲು ಉಪಕಾರಿಯಾಗಿದ್ದಾರೆ. ಪಶುವೈದ್ಯರು ಕೇವಲ ವೈದ್ಯಕೀಯ ಸೇವೆ ಅಲ್ಲದೆ ಇನ್ನಿತರ ಸೇವೆಯನ್ನು ಒಡಗಿಸುತ್ತಿದ್ದಾರೆ.
- ಪ್ರಾಣಿಗಳಿಂದ ಮಾನವನಿಗೆ ಬರುವ ರೋಗ ತಡೆಗಟ್ಟುವಿಕೆ ಹಾಗೂ ಅದರ ಕುರಿತು ಸಂಶೋಧನೆ (ಉದಾ: ರೇಬಿಸ್, ಹಕ್ಕಿ ಜ್ವರ, ಬ್ರುಸೆಲೋಸಿಸ್)
- ಎಲ್ಲಾ ತರಹದ ಪ್ರಾಣಿ, ಕಾಡು ಪ್ರಾಣಿಗಳ ರಕ್ಷಣೆ, ಚಿಕಿತ್ಸೆ ಹಾಗೂ ರೋಗ ತಡೆಗಟ್ಟುವಿಕೆ.
- ಸಸಾರ ಜನಕ ಆಹಾರ ಪದಾರ್ಥಗಳಾದ ಹಾಲು, ಮಾಂಸ ಹಾಗೂ ಮೊಟ್ಟೆಗಳ (ಪ್ರೊಟೀನ್) ಉತ್ಪಾದನೆಯಿಂದ ಪೌಷ್ಟಿಕ ಆಹಾರ ಉತ್ಪಾದನೆ.
- ಮನುಷ್ಯರ ಔಷಧ ಉತ್ಪಾದನೆ.
- ಜಾನುವಾರುಗಳ ಔಷಧ ಉತ್ಪಾದನೆ.
- ಯಾವುದೇ ರೀತಿಯ ಹೊಸ ಸಂಶೋಧನೆಯು ಮೊದಲು ಪ್ರಾಣಿಗಳೇ ಮೇಲೆ ಪ್ರಯೋಗಿಸಿ ಉತ್ತಮ ಫಲಿತಾಂಶ ಇದ್ದಲ್ಲಿ ನಂತರ ಮಾನವರ ಉಪಯೋಗಕ್ಕೆ ಬಳಕೆ. (ಉದಾ: ಬಾಡಿಗೆ ತಾಯಿಯಿಂದ ಮಗುವಿನ ಜನನ)
- ಸತ್ತ ಜಾನುವಾರುಗಳಿಂದ ವ್ಯವಸಾಯಕ್ಕಾಗಿ ಉತ್ತಮವಾದ ರಾಸಾಯನಿಕ ಉತ್ಪಾದನೆ.
- ಗೊಬ್ಬರ ಉತ್ಪಾದನೆ.
- ಗೋಮೂತ್ರದ ಔಷಧೀಯ ಉಪಯೋಗದ ಕುರಿತು ಸಂಶೋಧನೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ ನಡೆದ ಕೊಲೆಗಳೆಷ್ಟು ? ಅತ್ಯಾಚಾರಗಳೆಷ್ಟು ಗೊತ್ತಾ?
ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಹಾದಿ ಬೀದಿಯಲ್ಲಿ ಹತ್ಯೆಗಳು ಆಗುತ್ತಿವೆ. ಬೆಂಗಳೂರು ನಗರದಲ್ಲಿ ಮಾದಕ ವಸ್ತುಗಳ ದಂಧೆ ಅವ್ಯಾಹತವಾಗಿದೆ.
ಕಳೆದ ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ 430 ಹತ್ಯೆಗಳು ಮತ್ತು 198ಅತ್ಯಾಚಾರ ಪ್ರಕರಣಗಳು ವರದಿಯಾಗಿವೆ. ರಾಜ್ಯಗೃಹ ಇಲಾಖೆ ಕಾರ್ಯನಿರ್ವಹಿಸುತ್ತಿದೆಯೋ ಅಥವಾ ನಿದ್ದೆ ಮಾಡುತ್ತಿದೆಯೋ ? ಎಂದು ಸಾಮಾಜಿಕ ಜಾಲತಾಣದಲ್ಲಿ ಜೆಡಿಎಸ್ ಪ್ರಶ್ನಿಸಿದೆ.ಇದೇ ವೇಳೆ, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದ್ದು, ಅಪರಾಧ ಪ್ರಮಾಣ ಹೆಚ್ಚಳವಾಗಿರುವುದರಿಂದ ಕೂಡಲೇ ಈ ಬಗ್ಗೆ ಕ್ರಮವಹಿಸಬೇಕೆಂದು ಆಗ್ರಹಿಸಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಬಿಜೆಪಿ ನಿಯೋಗ ದೂರು ನೀಡಿದೆ.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಬಿದ್ದಿದೆ. ಹಾದಿಬೀದಿಯಲ್ಲಿ ಕೊಲೆಗಳಾಗುತ್ತಿವೆ. ರಾಜ್ಯವು ಅತ್ಯಾಚಾರಿಗಳ ಆಡಂಬೋಲವಾಗಿದೆ. ಬೆಂಗಳೂರು ಮಹಾನಗರದಲ್ಲಿ ಮಾದಕ ವಸ್ತುಗಳ ದಂಧೆ ಅವ್ಯಾಹತವಾಗಿದೆ. ಕೇವಲ 4 ತಿಂಗಳಲ್ಲಿ ಇಷ್ಟೆಲ್ಲಾ ನಡೆದಿದೆ!! 1/2#ಜನರಿಗಿಲ್ಲ_ನೆಮ್ಮದಿಯ_ಗ್ಯಾರಂಟಿ pic.twitter.com/iu3tqqEYZ3
— Janata Dal Secular (@JanataDal_S) May 18, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ : ಗೃಹ ಸಚಿವ ಡಾ. ಜಿ.ಪರಮೇಶ್ವರ್
ಸುದ್ದಿದಿನ, ತುಮಕೂರು : ರಾಜ್ಯದಲ್ಲಿ ಜನರು ಶಾಂತಿ ಮತ್ತು ನೆಮ್ಮದಿಯಿಂದ ಬದುಕಲು ಯಾವುದೇ ಕ್ರಮ ತೆಗೆದುಕೊಳ್ಳಲು ಸಿದ್ಧ. ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.
ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಶಾಂತಿಯನ್ನು ಕದಡಲು ಎಷ್ಟು ಪ್ರಯತ್ನ ನಡೆಸಿದರೂ ಅದನ್ನು ನಿಯಂತ್ರಿಸುವ ಶಕ್ತಿ ನಮ್ಮ ಸರ್ಕಾರಕ್ಕಿದೆ ಎಂದು ತಿರುಗೇಟು ನೀಡಿದರು. ರಾಜ್ಯದಲ್ಲಿ ಅಪರಾಧ ಪ್ರಕರಣ ಹೆಚ್ಚಳವಾಗುತ್ತಿರುವ ಬಗ್ಗೆ ಪೊಲೀಸ್ ಅಧಿಕಾರಿಗಳೊಂದಿಗೆ ಕೂಲಂಕುಷವಾಗಿ ಚರ್ಚಿಸಿ, ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಡಾ. ಜಿ. ಪರಮೇಶ್ವರ್ ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ವಿಧಾನ ಪರಿಷತ್ ಚುನಾವಣೆ ; 91 ನಾಮಪತ್ರಗಳು ಪುರಸ್ಕೃತ
ಸುದ್ದಿದಿನ ಡೆಸ್ಕ್ : ಕರ್ನಾಟಕ ವಿಧಾನ ಪರಿಷತ್ನ ಚುನಾವಣೆಗೆ ಸಂಬಂಧಪಟ್ಟಂತೆ ಒಟ್ಟು 91ನಾಮಪತ್ರಗಳು ಪುರಸ್ಕೃತಗೊಂಡಿವೆ. ಈಶಾನ್ಯ ಪದವಿಧರ ಕ್ಷೇತ್ರಕ್ಕೆ ಒಟ್ಟು 26 ನಾಮಪತ್ರಗಳು ಪುರಸ್ಕೃತಗೊಂಡಿದೆ.
ಅದೇ ರೀತಿ ಕರ್ನಾಟಕದ ಆಗ್ನೇಯಾ ಶಿಕ್ಷಕರ ಕ್ಷೇತ್ರಕ್ಕೆ 15, ಬೆಂಗಳೂರು ಪದವೀಧರರ ಕ್ಷೇತ್ರಕ್ಕೆ 16, ಕರ್ನಾಟಕ ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ 9, ಕನಾಟಕ ನೈಋತ್ಯ ಪದವೀಧರ ಕ್ಷೇತ್ರಕ್ಕೆ12 ಹಾಗೂ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಒಟ್ಟು 13 ನಾಮಪತ್ರಗಳು ಪುರಸ್ಕೃತಗೊಂಡಿವೆ ಎಂದು ಚುನಾವಣಾ ಆಯೋಗದ ಪ್ರಕಟಣೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ಆತ್ಮಕತೆ | ಕೋರಿನ ತೋಟ ಮತ್ತು ನಮ್ಮೂರ ದೇವರ ಗುಡಿಯಲ್ಲಿ ಪಂಚಾಯ್ತಿ
-
ದಿನದ ಸುದ್ದಿ3 days ago
ವಿಧಾನಪರಿಷತ್ ಚುನಾವಣೆ ; ಇಂದು ನಾಮಪತ್ರ ಸಲ್ಲಿಕೆಗೆ ಕಡೆಯ ದಿನ
-
ದಿನದ ಸುದ್ದಿ3 days ago
ಪೌರತ್ವ ಪ್ರಮಾಣಪತ್ರ ಹಸ್ತಾಂತರ
-
ದಿನದ ಸುದ್ದಿ2 days ago
ಸಂಗೀತಗಾರರ ಹುದ್ದೆಗಳಿಗೆ ನೇಮಕಾತಿ
-
ದಿನದ ಸುದ್ದಿ3 days ago
ದಾವಣಗೆರೆ | ಶಿಕ್ಷಕರ ಹುದ್ದೆಗೆ ನೇರ ಸಂದರ್ಶನ
-
ದಿನದ ಸುದ್ದಿ3 days ago
ಮೊರಾರ್ಜಿ ದೇಸಾಯಿ ವಿಜ್ಞಾನ ಕಾಲೇಜು ; ಪಿಯುಸಿ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ3 days ago
ಪ್ರಜ್ವಲ್ ಪೆನ್ಡ್ರೈವ್ ಪ್ರಕರಣ | ಎಸ್ಐಟಿ ಸೂಕ್ತ ತನಿಖೆ ನಡೆಸುತ್ತಿಲ್ಲ : ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ
-
ದಿನದ ಸುದ್ದಿ4 days ago
ಅಂಧ ಹೆಣ್ಣು ಮತ್ತು ಗಂಡು ಮಕ್ಕಳಿಗೆ ದಾಖಲಾತಿ ಪ್ರಾರಂಭ