Connect with us

ದಿನದ ಸುದ್ದಿ

ಮಧ್ಯ ಕರ್ನಾಟಕದ ಯಕ್ಷಗಾನ ಯುವಪ್ರತಿಭೆ ‘ಅಮೂಲ್ಯ ಸಿ.’

Published

on

  • ಡಾ.ಕೆ.ಎ.ಓಬಳೇಶ್

ರ್ನಾಟಕದ ಬಹುತ್ವವೆಲ್ಲ ಸಮನ್ವಯತೆಯನ್ನು ಕಂಡುಕೊಂಡಿರುವುದು ಮಧ್ಯ ಕರ್ನಾಟಕದಲ್ಲಿ. ಈ ಭಾಗವು ಯಾವುದೇ ಅನ್ಯ ಗಡಿಪ್ರಾಂತ್ಯ, ಅನ್ಯ ಭಾಷೆಯ ಪ್ರಭಾವಕ್ಕೆ ಒಳಗಾಗಿರುವುದು ಕಂಡುಬರುವುದಿಲ್ಲ. ಆದರೆ ಇವೆಲ್ಲವುಗಳನ್ನು ಸಮನ್ವಯದ ನೆಲೆಯಲ್ಲಿ ಕಾಪಾಡಿಕೊಂಡು ಬಂದ ವಿಶೇಷತೆ ಇದಕ್ಕಿದೆ. ಹಾಗೆಯೇ ಇದು ಸಾಂಸ್ಕೃತಿಕ ಸಮನ್ವಯತೆಗೂ ವಿಶೇಷತೆ ಮನ್ನಣೆಯನ್ನು ಕಲ್ಪಿಸಿಕೊಂಡು ಬಂದಿದೆ.

ಇಲ್ಲಿ ಹಲವಾರು ಸಾಂಸ್ಕೃತಿಕ ವೈಶಿಷ್ಟ್ಯತೆಗಳು ತನ್ನ ಅನನ್ಯತೆಯನ್ನು ಕಾಯ್ದುಕೊಂಡಿವೆ. ಉತ್ತರ ಕರ್ನಾಟಕಕ್ಕೆ ಹೋದರೆ ಬಯಲಾಟ, ದಕ್ಷಿಣ ಕರ್ನಾಟಕದಲ್ಲಿ ಕಂಸಾಳೆ, ಕರಾವಳಿ ಕರ್ನಾಟಕದಲ್ಲಿ ಯಕ್ಷಗಾನ ಕಲೆಗಳು ವಿಶಿಷ್ಟವಾಗಿ ಗುರುತಿಸಿಕೊಂಡಿವೆ. ಆದರೆ ಮಧ್ಯ ಕರ್ನಾಟಕ ಮಾತ್ರ ಇವೆಲ್ಲವುಗಳನ್ನು ತನ್ನ ಆಂತರ್ಯದಲ್ಲಿ ಪ್ರಾಂತ್ಯಬೇಧ ಮರೆತು ಹುದುಗಿಸಿಕೊಂಡಿದೆ. ಹೀಗಾಗಿ ಮಧ್ಯ ಕರ್ನಾಟಕದಲ್ಲಿ ವಿವಿಧ ಸಾಂಸ್ಕೃತಿಕ ವಲಯದಲ್ಲಿ ಸಾಧನೆಗೈದ ವಿಭಿನ್ನ ಕಲಾ ಪ್ರತಿಭೆಗಳು ಕಂಡುಬರುತ್ತವೆ.

ಇಂತಹ ಕಲಾ ಪ್ರತಿಭೆಗಳಲ್ಲಿ ಅಮೂಲ್ಯ ಸಿ, ಅವರು ಒಬ್ಬರಾಗಿದ್ದಾರೆ. ಮಧ್ಯ ಕರ್ನಾಟಕದ ದಾವಣಗೆರೆ ಭಾಗದಲ್ಲಿ ಯಕ್ಷಗಾನದ ಮೂಲಕ ತನ್ನ ವಿಶಿಷ್ಟ ಪ್ರತಿಭೆಯನ್ನು ಅನಾವರಣಗೊಳಿಸುತ್ತಿರುವ ಅಮೂಲ್ಯ ಅವರ ಕಲಾ ಬದುಕನ್ನು ಅನಾವರಣಗೊಳಿಸುವುದು ಪ್ರಸ್ತುತ ಲೇಖನದ ಆಶಯವಾಗಿದೆ.

ಕುಮಾರಿ ಅಮೂಲ್ಯ ಅವರು ಚಂದ್ರಶೇಖರ್ ಹಾಗೂ ಸವಿತಾ ದಂಪತಿಗಳ ಪುತ್ರಿಯಾಗಿ ದಿನಾಂಕ 4 ಜನವರಿ 2001 ರಂದು ದಾವಣಗೆರೆಯಲ್ಲಿ ಜನಿಸಿದರು. ಇವರ ತಂದೆ ಹೊಸದುರ್ಗ ಮೂಲದವರಾಗಿದ್ದು, ಇವರ ತಾಯಿಯು ಕರಾವಳಿ ಮೂಲದವರಾಗಿದ್ದಾರೆ. ಇವರ ತಾಯಿಯ ತಂದೆ ಉಡುಪಿ ಜಿಲ್ಲೆ ಮುನಿಯಾಲ ಸಮೀಪದ ಕಾಡೊಳೆಯವರು.

ಇವರು ಬಾಲ್ಯದಲ್ಲಿಯೇ ಜೀವನ ನಿರ್ವಹಣೆಗಾಗಿ ದಾವಣಗೆರೆಯಲ್ಲಿ ನೆಲೆಯನ್ನು ಕಂಡುಕೊಂಡರು. ಹಾಗೆಯೇ ಈ ಭಾಗದಲ್ಲಿಯೇ ವಿವಾಹವಾಗಿ ತಮ್ಮ ಬದುಕನ್ನು ಕಟ್ಟಿಕೊಂಡವರು. ಕುಮಾರಿ ಅಮೂಲ್ಯ ಅವರ ತಾಯಿಯ ಮೂಲವು ಕರಾವಳಿ ಮೂಲವಾಗಿದ್ದರು ಯಕ್ಷಗಾನ ಕಲೆಯ ಯಾವುದೇ ನೇರ ಪ್ರಭಾವಗಳಾಗಿರುವುದಿಲ್ಲ. ಆದರೆ ಇವರು ಸೆಂಟ್ ಪಾಲ್ಸ್ ಶಾಲೆಯಲ್ಲಿ ಪ್ರೌಢ ಶಿಕ್ಷಣ ಪಡೆಯುತ್ತಿರುವಾಗ ಯಕ್ಷಗಾನ ಕಲೆಯನ್ನು ಕಂಡು ಆಕರ್ಷಿತರಾಗಿದ್ದರು.

ಯಕ್ಷಗಾನ ಪ್ರತಿಭೆ ಅಮೂಲ್ಯ ಸಿ

ಈ ಶಾಲಾ ಅವಧಿಯಲ್ಲಿನ ಯಕ್ಷಗಾನ ಪ್ರದರ್ಶನ ಕಲೆಯನ್ನು ನೋಡಿ ಪ್ರಭಾವಿತರಾದ ಅಮೂಲ್ಯ ಅವರು ನಾನು ಒಂದಲ್ಲ ಒಂದು ದಿನ ಈ ಕಲೆಯಲ್ಲಿ ತನ್ನನ್ನು ತೊಡಗಿಸಿಕೊಳ್ಳಬೇಕು ಎಂಬ ಹಂಬಲವನ್ನು ಮೈಗೂಡಿಸಿಕೊಂಡಿದ್ದರು. ಆದರೆ ಮಧ್ಯ ಕರ್ನಾಟಕದಲ್ಲಿ ಯಕ್ಷಗಾನವು ಅಷ್ಟೊಂದು ಪ್ರಸಿದ್ಧಿಯಾಗಿರದ ಕಾರಣ ಇವರ ಆಸೆಯು ಬಹುದಿನಗಳ ಕಾಲ ಮರೀಚಿಕೆಯಾಗಿಯೇ ಉಳಿದಿತ್ತು. ಇವರಲ್ಲಿ ಬಹುದಿನಗಳಿಂದಲೂ ಚಿಗುರಿದ ಕನಸನ್ನು ಸಾಕಾರಗೊಳಿಸಿದ್ದು ರಾಘವೇಂದ್ರ ಮಠ.

ರಾಘವೇಂದ್ರ ಗುರುಗಳಲ್ಲಿ ಅತಿಯಾದ ನಂಬಿಕೆಯನ್ನು ಹೊಂದಿದ್ದ ಅಮೂಲ್ಯ ಅವರು ಪ್ರತಿವಾರ ರಾಘವೇಂದ್ರ ಮಠಕ್ಕೆ ಹೋಗಿ ದರ್ಶನ ಪಡೆಯುತ್ತಿದ್ದರು. ಈ ಸಂದರ್ಭದಲ್ಲಿ ಒಮ್ಮೆ ರಾಯರ ಮಠದಲ್ಲಿ ಯಕ್ಷಗಾನ ತರಬೇತಿಯ ಬಗ್ಗೆ ಪ್ರದರ್ಶಿಸಿದ ಜಾಹಿರಾತು ಇವರ ಮನದ ಮೂಸೆಯಲ್ಲಿನ ಆಸೆಗೆ ವೇದಿಕೆಯೊಂದನ್ನು ಕಲ್ಪಿಸಿಕೊಟ್ಟಿತ್ತು. ಆಗ ಈ ಜಾಹಿರಾತು ನೀಡಿದ ಸೀತಾರಾಮ ಆಚಾರ್ಯ ಅವರನ್ನು ಸಂಪರ್ಕಿಸಿದಾಗ ಅಮೂಲ್ಯ ಅವರಿಗಿದ್ದ ಯಕ್ಷಗಾನ ತುಡಿತವನ್ನು ಅರಿತು ತನ್ನ ಶಿಷ್ಯೆಯಾಗಿ ಸ್ವೀಕರಿಸಿ, ‘ಯಕ್ಷ ಸೌರಭ’ ಕಲಾ ತಂಡದಿAದ ಯಕ್ಷಗಾನ ತರಬೇತಿಯನ್ನು ನೀಡುತ್ತ ಬಂದರು.

ಹೀಗೆ ಯಕ್ಷಗಾನ ಕಲಿಕೆಗೆ ಸೀತಾರಾಮ ಆಚಾರ್ಯರಿಂದ ದೀಕ್ಷೆಯನ್ನು ಪಡೆದ ಅಮೂಲ್ಯ ಅವರು ಈ ಕಲೆಯನ್ನು ತನ್ನ ಬದುಕಿನ ಒಂದು ಭಾಗವಾಗಿ ಮುಂದುವರೆಸಿಕೊAಡು ಬಂದಿದ್ದಾರೆ. ಹಾಗೆಯೇ ಈ ಯಕ್ಷಗಾನ ಕಲೆಯ ಮೇಲೆ ವಿಶಿಷ್ಟವಾದ ಕಾಳಜಿ ಮತ್ತು ಆಸ್ಥೆಯನ್ನು ಹೊಂದಿದ್ದು ಮಧ್ಯ ಕರ್ನಾಟಕದಲ್ಲಿ ಕರಾವಳಿಯ ವಿಶಿಷ್ಟ ಕಲೆಯನ್ನು ಅರಳಿಸುವಲ್ಲಿ ಮಹತ್ತರ ಪಾತ್ರವನ್ನು ನಿರ್ವಹಿಸಿಕೊಂಡು ಬಂದಿದ್ದಾರೆ.

ಅಮೂಲ್ಯ ಅವರ ತಂದೆ ಚಂದ್ರಶೇಖರ್ ಅವರು ಅನಾರೋಗ್ಯದಿಂದ ಮರಣ ಹೊಂದಿದ ತರುವಾಯದಲ್ಲಿ ಇವರಿಗೆ ಉಚಿತವಾಗಿ ತರಬೇತಿ ನೀಡುವ ಮೂಲಕ ಸೀತಾರಾಮ ಆಚಾರ್ಯರು ತಮ್ಮ ಔದಾರ್ಯತೆಯನ್ನು ಮರೆಯುತ್ತ ಬಂದಿದ್ದಾರೆ. ಇದಕ್ಕೆ ಪ್ರಮುಖ ಕಾರಣ ಅಮೂಲ್ಯ ಅವರಿಗಿರುವ ಕಲಾಸಕ್ತಿ ಮತ್ತು ಬದ್ಧತೆಯಾಗಿದೆ. ಹೀಗಾಗಿ ಸೀತಾರಾಮ ಆಚಾರ್ಯರು ತಮ್ಮ ಪ್ರೀತಿಯ ಮಗಳಂತೆ ಅಮೂಲ್ಯ ಅವರನ್ನು ಮುನ್ನಡೆಸುತ್ತ ಬಂದಿದ್ದಾರೆ.

ಇದರೊಂದಿಗೆ ತನ್ನೆಲ್ಲ ಕಲೆಯನ್ನು ಸೀತರಾಮ ಆಚಾರ್ಯರು ತನ್ನ ಶಿಷ್ಯೆಗೆ ಧಾರೆಯೆರೆಯುವ ಮೂಲಕ ಮಧ್ಯ ಕರ್ನಾಟಕದಲ್ಲೊಂದು ಅಮೋಘವಾದ ಯಕ್ಷಗಾನ ಪ್ರತಿಭೆಯೊಂದನ್ನು ರೂಪಿಸಿದ್ದಾರೆ. ಇದರ ಫಲವಾಗಿ ಅಮೂಲ್ಯ ಅವರು ಜಿಲ್ಲಾಡಳಿತ, ಕಾಲೇಜು, ವಿವಿಧ ಸಂಘ ಸಂಸ್ಥೆಗಳು ಹಾಗೂ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ತನ್ನ ಯಕ್ಷಗಾನ ಪ್ರತಿಭೆಯನ್ನು ಅನಾವರಣಗೊಳಿಸುತ್ತ ಬಂದಿದ್ದಾರೆ. ಇತ್ತೀಚೆಗೆ ‘ಮಲಬರ್ ಗೋಲ್ಡ್ ಅಂಡ್ ಡೈಮಂಡ್ಸ್’ ಕಂಪನಿಯವರು ಆಯೋಜಿಸಿದ್ದ ಟಾಲೆಂಟ್ ಶೋನಲ್ಲಿ ‘ಗೋಲ್ಡನ್ ಗರ್ಲ್’ ಅವಾರ್ಡ್ ಪಡೆದುಕೊಂಡಿದ್ದಾರೆ.

ಪ್ರಸ್ತುತ ಸಂದರ್ಭದಲ್ಲಿ ಅಮೂಲ್ಯ ಅವರು ದಾವಣಗೆರೆಯ ಎ.ವಿ.ಕಮಲಮ್ಮ ಕಾಲೇಜಿನಲ್ಲಿ ದ್ವಿತೀಯ ಬಿ.ಕಾಂ ಪದವಿಯನ್ನು ಅಧ್ಯಯನ ಮಾಡುತ್ತಿದ್ದು, ಬ್ಯಾಂಕ್ ಉದ್ಯೋಗಿಯಾಗಬೇಕೆಂಬ ಹಂಬಲವನ್ನು ಮೈಗೂಡಿಸಿಕೊಂಡಿದ್ದಾರೆ. ಯಕ್ಷಗಾನ ಮತ್ತು ಶಿಕ್ಷಣವನ್ನು ತನ್ನೆರಡು ಕಣ್ಣುಗಳೆಂದು ನಂಬಿರುವ ಅಮೂಲ್ಯ ಅವರು ಕಲೆಯೊಂದಿಗೆ ಶಿಕ್ಷಣ ಕ್ಷೇತ್ರದಲ್ಲಿಯೂ ಮಹತ್ತರವಾದ ಸಾಧನೆಗೈಯುವ ಹಂಬಲವೊತ್ತಿದ್ದಾರೆ.

ಪ್ರೀತಿಯ ತಂದೆಯ ಅಗಲಿಗೆಯಿಂದ ನೊಂದಿರುವ ಅಮೂಲ್ಯ ಅವರು ತನ್ನ ತಾಯಿಯ ಪ್ರೀತಿ ಮತ್ತು ಗುರುಗಳ ಮಾರ್ಗದರ್ಶನದಲ್ಲಿ ಶಿಕ್ಷಣ ಮತ್ತು ಕಲಾ ಕ್ಷೇತ್ರದಲ್ಲಿ ಮುನ್ನಡೆಯುತ್ತಿದ್ದಾರೆ. ಅಮೂಲ್ಯ ಅವರು ಯಕ್ಷಸೌರಭ ತಂಡದಿಂದ ಯಕ್ಷಗಾನ ತರಬೇತಿಯನ್ನು ಪಡೆಯುತ್ತಲೇ ಕಿರಿಯ ವಿದ್ಯಾರ್ಥಿಗಳಿಗೆ ಗುರುಗಳೊಂದಿಗೆ ತರಬೇತಿಯನ್ನು ನೀಡುವ ಮೂಲಕ ಕಲಾ ಸೇವೆಯನ್ನು ಆರಂಭಿಸಿದ್ದಾರೆ. ಅಮೂಲ್ಯಳ ಉಜ್ವಲ ಭವಿಷ್ಯಕ್ಕಾಗಿ ಮಾವ ಮತ್ತು ಸಹೋದರ ಆಸರೆಯಾಗಿ ನಿಂತಿದ್ದಾರೆ. ಇವರೆಲ್ಲರ ಆಸರೆಯಲ್ಲಿ ಶಿಕ್ಷಣದೊಂದಿಗೆ ಮಧ್ಯ ಕರ್ನಾಟಕದಲ್ಲಿ ಯಕ್ಷಗಾನ ಕಲೆಯನ್ನು ಅರಳಿಸುತ್ತಿರುವ ಅಮೂಲ್ಯ ಅವರ ಮುಂದಿನ ಬದುಕಿನಲ್ಲಿ ಯಶಸ್ಸು ಕಾಣಲೆಂಬುದು ನಮ್ಮ ಹಾರೈಕೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.

ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.

ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

Published

on

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.

ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್‍ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.

ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.

ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.

ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್‍ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್‍ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್‍ಗೆ ಪಡೆಯಲಾಯಿತು.

ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.

ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್‍ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್‍ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending