Connect with us

ದಿನದ ಸುದ್ದಿ

ಮಧ್ಯ ಕರ್ನಾಟಕದ ಯಕ್ಷಗಾನ ಯುವಪ್ರತಿಭೆ ‘ಅಮೂಲ್ಯ ಸಿ.’

Published

on

  • ಡಾ.ಕೆ.ಎ.ಓಬಳೇಶ್

ರ್ನಾಟಕದ ಬಹುತ್ವವೆಲ್ಲ ಸಮನ್ವಯತೆಯನ್ನು ಕಂಡುಕೊಂಡಿರುವುದು ಮಧ್ಯ ಕರ್ನಾಟಕದಲ್ಲಿ. ಈ ಭಾಗವು ಯಾವುದೇ ಅನ್ಯ ಗಡಿಪ್ರಾಂತ್ಯ, ಅನ್ಯ ಭಾಷೆಯ ಪ್ರಭಾವಕ್ಕೆ ಒಳಗಾಗಿರುವುದು ಕಂಡುಬರುವುದಿಲ್ಲ. ಆದರೆ ಇವೆಲ್ಲವುಗಳನ್ನು ಸಮನ್ವಯದ ನೆಲೆಯಲ್ಲಿ ಕಾಪಾಡಿಕೊಂಡು ಬಂದ ವಿಶೇಷತೆ ಇದಕ್ಕಿದೆ. ಹಾಗೆಯೇ ಇದು ಸಾಂಸ್ಕೃತಿಕ ಸಮನ್ವಯತೆಗೂ ವಿಶೇಷತೆ ಮನ್ನಣೆಯನ್ನು ಕಲ್ಪಿಸಿಕೊಂಡು ಬಂದಿದೆ.

ಇಲ್ಲಿ ಹಲವಾರು ಸಾಂಸ್ಕೃತಿಕ ವೈಶಿಷ್ಟ್ಯತೆಗಳು ತನ್ನ ಅನನ್ಯತೆಯನ್ನು ಕಾಯ್ದುಕೊಂಡಿವೆ. ಉತ್ತರ ಕರ್ನಾಟಕಕ್ಕೆ ಹೋದರೆ ಬಯಲಾಟ, ದಕ್ಷಿಣ ಕರ್ನಾಟಕದಲ್ಲಿ ಕಂಸಾಳೆ, ಕರಾವಳಿ ಕರ್ನಾಟಕದಲ್ಲಿ ಯಕ್ಷಗಾನ ಕಲೆಗಳು ವಿಶಿಷ್ಟವಾಗಿ ಗುರುತಿಸಿಕೊಂಡಿವೆ. ಆದರೆ ಮಧ್ಯ ಕರ್ನಾಟಕ ಮಾತ್ರ ಇವೆಲ್ಲವುಗಳನ್ನು ತನ್ನ ಆಂತರ್ಯದಲ್ಲಿ ಪ್ರಾಂತ್ಯಬೇಧ ಮರೆತು ಹುದುಗಿಸಿಕೊಂಡಿದೆ. ಹೀಗಾಗಿ ಮಧ್ಯ ಕರ್ನಾಟಕದಲ್ಲಿ ವಿವಿಧ ಸಾಂಸ್ಕೃತಿಕ ವಲಯದಲ್ಲಿ ಸಾಧನೆಗೈದ ವಿಭಿನ್ನ ಕಲಾ ಪ್ರತಿಭೆಗಳು ಕಂಡುಬರುತ್ತವೆ.

ಇಂತಹ ಕಲಾ ಪ್ರತಿಭೆಗಳಲ್ಲಿ ಅಮೂಲ್ಯ ಸಿ, ಅವರು ಒಬ್ಬರಾಗಿದ್ದಾರೆ. ಮಧ್ಯ ಕರ್ನಾಟಕದ ದಾವಣಗೆರೆ ಭಾಗದಲ್ಲಿ ಯಕ್ಷಗಾನದ ಮೂಲಕ ತನ್ನ ವಿಶಿಷ್ಟ ಪ್ರತಿಭೆಯನ್ನು ಅನಾವರಣಗೊಳಿಸುತ್ತಿರುವ ಅಮೂಲ್ಯ ಅವರ ಕಲಾ ಬದುಕನ್ನು ಅನಾವರಣಗೊಳಿಸುವುದು ಪ್ರಸ್ತುತ ಲೇಖನದ ಆಶಯವಾಗಿದೆ.

ಕುಮಾರಿ ಅಮೂಲ್ಯ ಅವರು ಚಂದ್ರಶೇಖರ್ ಹಾಗೂ ಸವಿತಾ ದಂಪತಿಗಳ ಪುತ್ರಿಯಾಗಿ ದಿನಾಂಕ 4 ಜನವರಿ 2001 ರಂದು ದಾವಣಗೆರೆಯಲ್ಲಿ ಜನಿಸಿದರು. ಇವರ ತಂದೆ ಹೊಸದುರ್ಗ ಮೂಲದವರಾಗಿದ್ದು, ಇವರ ತಾಯಿಯು ಕರಾವಳಿ ಮೂಲದವರಾಗಿದ್ದಾರೆ. ಇವರ ತಾಯಿಯ ತಂದೆ ಉಡುಪಿ ಜಿಲ್ಲೆ ಮುನಿಯಾಲ ಸಮೀಪದ ಕಾಡೊಳೆಯವರು.

ಇವರು ಬಾಲ್ಯದಲ್ಲಿಯೇ ಜೀವನ ನಿರ್ವಹಣೆಗಾಗಿ ದಾವಣಗೆರೆಯಲ್ಲಿ ನೆಲೆಯನ್ನು ಕಂಡುಕೊಂಡರು. ಹಾಗೆಯೇ ಈ ಭಾಗದಲ್ಲಿಯೇ ವಿವಾಹವಾಗಿ ತಮ್ಮ ಬದುಕನ್ನು ಕಟ್ಟಿಕೊಂಡವರು. ಕುಮಾರಿ ಅಮೂಲ್ಯ ಅವರ ತಾಯಿಯ ಮೂಲವು ಕರಾವಳಿ ಮೂಲವಾಗಿದ್ದರು ಯಕ್ಷಗಾನ ಕಲೆಯ ಯಾವುದೇ ನೇರ ಪ್ರಭಾವಗಳಾಗಿರುವುದಿಲ್ಲ. ಆದರೆ ಇವರು ಸೆಂಟ್ ಪಾಲ್ಸ್ ಶಾಲೆಯಲ್ಲಿ ಪ್ರೌಢ ಶಿಕ್ಷಣ ಪಡೆಯುತ್ತಿರುವಾಗ ಯಕ್ಷಗಾನ ಕಲೆಯನ್ನು ಕಂಡು ಆಕರ್ಷಿತರಾಗಿದ್ದರು.

ಯಕ್ಷಗಾನ ಪ್ರತಿಭೆ ಅಮೂಲ್ಯ ಸಿ

ಈ ಶಾಲಾ ಅವಧಿಯಲ್ಲಿನ ಯಕ್ಷಗಾನ ಪ್ರದರ್ಶನ ಕಲೆಯನ್ನು ನೋಡಿ ಪ್ರಭಾವಿತರಾದ ಅಮೂಲ್ಯ ಅವರು ನಾನು ಒಂದಲ್ಲ ಒಂದು ದಿನ ಈ ಕಲೆಯಲ್ಲಿ ತನ್ನನ್ನು ತೊಡಗಿಸಿಕೊಳ್ಳಬೇಕು ಎಂಬ ಹಂಬಲವನ್ನು ಮೈಗೂಡಿಸಿಕೊಂಡಿದ್ದರು. ಆದರೆ ಮಧ್ಯ ಕರ್ನಾಟಕದಲ್ಲಿ ಯಕ್ಷಗಾನವು ಅಷ್ಟೊಂದು ಪ್ರಸಿದ್ಧಿಯಾಗಿರದ ಕಾರಣ ಇವರ ಆಸೆಯು ಬಹುದಿನಗಳ ಕಾಲ ಮರೀಚಿಕೆಯಾಗಿಯೇ ಉಳಿದಿತ್ತು. ಇವರಲ್ಲಿ ಬಹುದಿನಗಳಿಂದಲೂ ಚಿಗುರಿದ ಕನಸನ್ನು ಸಾಕಾರಗೊಳಿಸಿದ್ದು ರಾಘವೇಂದ್ರ ಮಠ.

ರಾಘವೇಂದ್ರ ಗುರುಗಳಲ್ಲಿ ಅತಿಯಾದ ನಂಬಿಕೆಯನ್ನು ಹೊಂದಿದ್ದ ಅಮೂಲ್ಯ ಅವರು ಪ್ರತಿವಾರ ರಾಘವೇಂದ್ರ ಮಠಕ್ಕೆ ಹೋಗಿ ದರ್ಶನ ಪಡೆಯುತ್ತಿದ್ದರು. ಈ ಸಂದರ್ಭದಲ್ಲಿ ಒಮ್ಮೆ ರಾಯರ ಮಠದಲ್ಲಿ ಯಕ್ಷಗಾನ ತರಬೇತಿಯ ಬಗ್ಗೆ ಪ್ರದರ್ಶಿಸಿದ ಜಾಹಿರಾತು ಇವರ ಮನದ ಮೂಸೆಯಲ್ಲಿನ ಆಸೆಗೆ ವೇದಿಕೆಯೊಂದನ್ನು ಕಲ್ಪಿಸಿಕೊಟ್ಟಿತ್ತು. ಆಗ ಈ ಜಾಹಿರಾತು ನೀಡಿದ ಸೀತಾರಾಮ ಆಚಾರ್ಯ ಅವರನ್ನು ಸಂಪರ್ಕಿಸಿದಾಗ ಅಮೂಲ್ಯ ಅವರಿಗಿದ್ದ ಯಕ್ಷಗಾನ ತುಡಿತವನ್ನು ಅರಿತು ತನ್ನ ಶಿಷ್ಯೆಯಾಗಿ ಸ್ವೀಕರಿಸಿ, ‘ಯಕ್ಷ ಸೌರಭ’ ಕಲಾ ತಂಡದಿAದ ಯಕ್ಷಗಾನ ತರಬೇತಿಯನ್ನು ನೀಡುತ್ತ ಬಂದರು.

ಹೀಗೆ ಯಕ್ಷಗಾನ ಕಲಿಕೆಗೆ ಸೀತಾರಾಮ ಆಚಾರ್ಯರಿಂದ ದೀಕ್ಷೆಯನ್ನು ಪಡೆದ ಅಮೂಲ್ಯ ಅವರು ಈ ಕಲೆಯನ್ನು ತನ್ನ ಬದುಕಿನ ಒಂದು ಭಾಗವಾಗಿ ಮುಂದುವರೆಸಿಕೊAಡು ಬಂದಿದ್ದಾರೆ. ಹಾಗೆಯೇ ಈ ಯಕ್ಷಗಾನ ಕಲೆಯ ಮೇಲೆ ವಿಶಿಷ್ಟವಾದ ಕಾಳಜಿ ಮತ್ತು ಆಸ್ಥೆಯನ್ನು ಹೊಂದಿದ್ದು ಮಧ್ಯ ಕರ್ನಾಟಕದಲ್ಲಿ ಕರಾವಳಿಯ ವಿಶಿಷ್ಟ ಕಲೆಯನ್ನು ಅರಳಿಸುವಲ್ಲಿ ಮಹತ್ತರ ಪಾತ್ರವನ್ನು ನಿರ್ವಹಿಸಿಕೊಂಡು ಬಂದಿದ್ದಾರೆ.

ಅಮೂಲ್ಯ ಅವರ ತಂದೆ ಚಂದ್ರಶೇಖರ್ ಅವರು ಅನಾರೋಗ್ಯದಿಂದ ಮರಣ ಹೊಂದಿದ ತರುವಾಯದಲ್ಲಿ ಇವರಿಗೆ ಉಚಿತವಾಗಿ ತರಬೇತಿ ನೀಡುವ ಮೂಲಕ ಸೀತಾರಾಮ ಆಚಾರ್ಯರು ತಮ್ಮ ಔದಾರ್ಯತೆಯನ್ನು ಮರೆಯುತ್ತ ಬಂದಿದ್ದಾರೆ. ಇದಕ್ಕೆ ಪ್ರಮುಖ ಕಾರಣ ಅಮೂಲ್ಯ ಅವರಿಗಿರುವ ಕಲಾಸಕ್ತಿ ಮತ್ತು ಬದ್ಧತೆಯಾಗಿದೆ. ಹೀಗಾಗಿ ಸೀತಾರಾಮ ಆಚಾರ್ಯರು ತಮ್ಮ ಪ್ರೀತಿಯ ಮಗಳಂತೆ ಅಮೂಲ್ಯ ಅವರನ್ನು ಮುನ್ನಡೆಸುತ್ತ ಬಂದಿದ್ದಾರೆ.

ಇದರೊಂದಿಗೆ ತನ್ನೆಲ್ಲ ಕಲೆಯನ್ನು ಸೀತರಾಮ ಆಚಾರ್ಯರು ತನ್ನ ಶಿಷ್ಯೆಗೆ ಧಾರೆಯೆರೆಯುವ ಮೂಲಕ ಮಧ್ಯ ಕರ್ನಾಟಕದಲ್ಲೊಂದು ಅಮೋಘವಾದ ಯಕ್ಷಗಾನ ಪ್ರತಿಭೆಯೊಂದನ್ನು ರೂಪಿಸಿದ್ದಾರೆ. ಇದರ ಫಲವಾಗಿ ಅಮೂಲ್ಯ ಅವರು ಜಿಲ್ಲಾಡಳಿತ, ಕಾಲೇಜು, ವಿವಿಧ ಸಂಘ ಸಂಸ್ಥೆಗಳು ಹಾಗೂ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ತನ್ನ ಯಕ್ಷಗಾನ ಪ್ರತಿಭೆಯನ್ನು ಅನಾವರಣಗೊಳಿಸುತ್ತ ಬಂದಿದ್ದಾರೆ. ಇತ್ತೀಚೆಗೆ ‘ಮಲಬರ್ ಗೋಲ್ಡ್ ಅಂಡ್ ಡೈಮಂಡ್ಸ್’ ಕಂಪನಿಯವರು ಆಯೋಜಿಸಿದ್ದ ಟಾಲೆಂಟ್ ಶೋನಲ್ಲಿ ‘ಗೋಲ್ಡನ್ ಗರ್ಲ್’ ಅವಾರ್ಡ್ ಪಡೆದುಕೊಂಡಿದ್ದಾರೆ.

ಪ್ರಸ್ತುತ ಸಂದರ್ಭದಲ್ಲಿ ಅಮೂಲ್ಯ ಅವರು ದಾವಣಗೆರೆಯ ಎ.ವಿ.ಕಮಲಮ್ಮ ಕಾಲೇಜಿನಲ್ಲಿ ದ್ವಿತೀಯ ಬಿ.ಕಾಂ ಪದವಿಯನ್ನು ಅಧ್ಯಯನ ಮಾಡುತ್ತಿದ್ದು, ಬ್ಯಾಂಕ್ ಉದ್ಯೋಗಿಯಾಗಬೇಕೆಂಬ ಹಂಬಲವನ್ನು ಮೈಗೂಡಿಸಿಕೊಂಡಿದ್ದಾರೆ. ಯಕ್ಷಗಾನ ಮತ್ತು ಶಿಕ್ಷಣವನ್ನು ತನ್ನೆರಡು ಕಣ್ಣುಗಳೆಂದು ನಂಬಿರುವ ಅಮೂಲ್ಯ ಅವರು ಕಲೆಯೊಂದಿಗೆ ಶಿಕ್ಷಣ ಕ್ಷೇತ್ರದಲ್ಲಿಯೂ ಮಹತ್ತರವಾದ ಸಾಧನೆಗೈಯುವ ಹಂಬಲವೊತ್ತಿದ್ದಾರೆ.

ಪ್ರೀತಿಯ ತಂದೆಯ ಅಗಲಿಗೆಯಿಂದ ನೊಂದಿರುವ ಅಮೂಲ್ಯ ಅವರು ತನ್ನ ತಾಯಿಯ ಪ್ರೀತಿ ಮತ್ತು ಗುರುಗಳ ಮಾರ್ಗದರ್ಶನದಲ್ಲಿ ಶಿಕ್ಷಣ ಮತ್ತು ಕಲಾ ಕ್ಷೇತ್ರದಲ್ಲಿ ಮುನ್ನಡೆಯುತ್ತಿದ್ದಾರೆ. ಅಮೂಲ್ಯ ಅವರು ಯಕ್ಷಸೌರಭ ತಂಡದಿಂದ ಯಕ್ಷಗಾನ ತರಬೇತಿಯನ್ನು ಪಡೆಯುತ್ತಲೇ ಕಿರಿಯ ವಿದ್ಯಾರ್ಥಿಗಳಿಗೆ ಗುರುಗಳೊಂದಿಗೆ ತರಬೇತಿಯನ್ನು ನೀಡುವ ಮೂಲಕ ಕಲಾ ಸೇವೆಯನ್ನು ಆರಂಭಿಸಿದ್ದಾರೆ. ಅಮೂಲ್ಯಳ ಉಜ್ವಲ ಭವಿಷ್ಯಕ್ಕಾಗಿ ಮಾವ ಮತ್ತು ಸಹೋದರ ಆಸರೆಯಾಗಿ ನಿಂತಿದ್ದಾರೆ. ಇವರೆಲ್ಲರ ಆಸರೆಯಲ್ಲಿ ಶಿಕ್ಷಣದೊಂದಿಗೆ ಮಧ್ಯ ಕರ್ನಾಟಕದಲ್ಲಿ ಯಕ್ಷಗಾನ ಕಲೆಯನ್ನು ಅರಳಿಸುತ್ತಿರುವ ಅಮೂಲ್ಯ ಅವರ ಮುಂದಿನ ಬದುಕಿನಲ್ಲಿ ಯಶಸ್ಸು ಕಾಣಲೆಂಬುದು ನಮ್ಮ ಹಾರೈಕೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಡಾ.ಕೆ.ಎ ಓಬಳೇಶ್ ಅವರು ಕುವೆಂಪು ವಿಶ್ವವಿದ್ಯಾಲಯದಿಂದ ಕನ್ನಡ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಐದು ಚಿನ್ನದ ಪದಕ ಹಾಗೂ ನಾಲ್ಕು ನಗದು ಬಹುಮಾನಗಳೊಂದಿಗೆ ಪಡೆದುಕೊಂಡು, ಚಿನ್ನದ ಹುಡುಗ ಎಂಬ ಕೀರ್ತಿಯನ್ನು ಕುವೆಂಪು ವಿಶ್ವವಿದ್ಯಾಲಯದಿಂದ ಪಡೆದುಕೊಂಡಿರುತ್ತಾರೆ. ಮೂರು ವರ್ಷಗಳ ಕಾಲ ದಾವಣಗೆರೆಯ ವಿವಿಧ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆಯನ್ನು ಸಲ್ಲಿಸಿರುತ್ತಾರೆ. ನಂತರದಲ್ಲಿ ಕನ್ನಡ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿಯನ್ನು ಪಡೆದ ಇವರು, ಇದೇ ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿರುತ್ತಾರೆ. ಸಂಶೋಧನೆ ಹಾಗೂ ಬರವಣಿಗೆಯಲ್ಲಿ ಆಸಕ್ತಿಯುಳ್ಳ ಇವರು ಸುಮಾರು ಮೂರು ವರ್ಷಗಳಿಂದ ವಿವಿಧ ಪತ್ರಕೆಗಳಲ್ಲಿ ತಮ್ಮ ಲೇಖನಗಳನ್ನು ಪ್ರಕಟಿಸುತ್ತ ಬಂದಿರುತ್ತಾರೆ. ಭೀಮವಾದ ಮಾಸ ಪತ್ರಿಕೆಯಲ್ಲಿ ದಲಿತ ಹೋರಾಟ ಕಥನ ಎಂಬ ಅಂಕಣವನ್ನು ಸತತವಾಗಿ ಮೂರು ವರ್ಷಗಳಿಂದ ಮುಂದುವರೆಸಿಕೊಂಡು ಬಂದಿರುತ್ತಾರೆ. ಸಾಹಿತ್ಯ ಕ್ಷೇತ್ರದಲ್ಲಿ ಆಸಕ್ತಿಯುಳ್ಳ ಇವರು 'ಅಸ್ಮಿತೆ ಮತ್ತು ಆತ್ಮವಿಮರ್ಶೆ' ಎಂಬ ಕೃತಿಯನ್ನು ಹಾಗೂ 'ವಿವೇಕಯಾನ' ಎಂಬ ನಾಟಕವನ್ನು ರಚಿಸಿರುತ್ತಾರೆ. ವಿವೇಕಯಾನ ನಾಟಕ ಕೃತಿಯು ನಾಟಕ ಅಕಾಡೆಮಿಯ ಪ್ರಶಸ್ತಿಗೆ ಭಾಜನವಾಗಿರುತ್ತದೆ. ಕಾವ್ಯ ರಚನೆಯಲ್ಲಿಯು ಆಸಕ್ತಿಯನ್ನು ಹೊಂದಿರುವ ಇವರಿಗೆ ೨೦೧೪ರಲ್ಲಿ 'ಸಾಹಿತ್ಯ ಸಿರಿ' ರಾಜ್ಯ ಪ್ರಶಸ್ತಿಯು ಲಭಿಸಿರುತ್ತದೆ. ಇಮೇಲ್: eakantagiri@gmail.com. ಮೊ: 9538345639/ 9591420216 )

ದಿನದ ಸುದ್ದಿ

‘ಹಿಟ್ಲರ್ ಕಲ್ಯಾಣ’ದ ನಾಯಕನ ಬದುಕಿನ ಪಯಣ ಹೀಗಿತ್ತು

Published

on

ಸುದ್ದಿದಿನ ಡೆಸ್ಕ್:ಆರಂಭಿಕ ಜೀವನ – 1978ರಲ್ಲಿ ಬೆಂಗಳೂರಿನಲ್ಲಿ ಜನಿಸಿದ ದಿಲೀಪ್ ರಾಜ್ ಅವರು ಕಾಲೇಜು ದಿನಗಳಿಂದಲೇ ಕಲೆಯತ್ತ ಒಲವು ಹೊಂದಿದ್ದರು.

ಚಲನಚಿತ್ರ ರಂಗ – 2005ರಲ್ಲಿ ‘ಬಾಯ್ ಫ್ರೆಂಡ್’ ಚಿತ್ರದ ಮೂಲಕ ಎಂಟ್ರಿ ಕೊಟ್ಟ ಅವರು, 2007ರಲ್ಲಿ ಪುನೀತ್ ರಾಜ್‌ಕುಮಾರ್ ಅವರ ‘ಮಿಲನ’ ಚಿತ್ರದಲ್ಲಿ ಹೇಮಂತ್ ಎಂಬ ವಿಲನ್ ಪಾತ್ರದ ಮೂಲಕ ಎಲ್ಲರ ಗಮನ ಸೆಳೆದರು.

ಇತ್ತೀಚಿನ ಜನಪ್ರಿಯತೆ – ‘ಲವ್ ಮಾಕ್ಟೇಲ್’ ಸಿನಿಮಾ ಮತ್ತು ಕಿರುತೆರೆಯಲ್ಲಿ ನಟ-ನಿರ್ಮಾಪಕರಾಗಿ ದೊಡ್ಡ ಹೆಸರು ಮಾಡಿದ್ದರು.

ದಿಲೀಪ್ ರಾಜ್ ಅವರ ಸಾವು ಕೇವಲ ಒಂದು ಕುಟುಂಬಕ್ಕೆ ಮಾತ್ರವಲ್ಲದೆ ಇಡೀ ಚಿತ್ರರಂಗಕ್ಕೆ ದೊಡ್ಡ ನಷ್ಟ. ಇವರ ಈ ಹಠಾತ್ ನಿಧನವು ಒತ್ತಡದ ಜೀವನಶೈಲಿ ಮತ್ತು ಆರೋಗ್ಯದ ಕಡೆಗೆ ನಾವು ನೀಡಬೇಕಾದ ಹೆಚ್ಚಿನ ಗಮನದ ಬಗ್ಗೆ ಎಚ್ಚರಿಕೆ ನೀಡುವಂತಿದೆ.

Continue Reading

ದಿನದ ಸುದ್ದಿ

ಬ್ಯಾಕ್‌ಲಾಗ್ ನಿಯಮಾವಳಿ ಉಲ್ಲಂಘನೆ ; ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕ ಕರಿಚಣ್ಣನವರ್ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಹರಿಹರ ನಗರದ ಮಾತೃಶ್ರೀ ರುದ್ರಮಾಂಬಾ ಬಸವಾರ್ಯ ಪ್ರೌಢಶಾಲೆಯ ಕನ್ನಡ ಶಿಕ್ಷಕರ ಬ್ಯಾಕ್‌ಲಾಗ್ (ಪರಿಶಿಷ್ಟ ಜಾತಿ) ನೇಮಕಾತಿಯಲ್ಲಿನ ಅಕ್ರಮಗಳನ್ನು ತನಿಖೆಗೆ ಒಳಪಡಿಸಿ ಆಡಳಿತ ಮಂಡಳಿ ಹಾಗೂ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ದೂರು ನೀಡಿ ವರ್ಷಗಳೇ ಕಳೆದರೂ ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರಾದ ಶ್ರೀ ಕೃಷ್ಣಾಜಿ ಎಸ್. ಕರಿಚಣ್ಣನವರ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ದಾವಣಗೆರೆ ಜಿಲ್ಲಾ ಹರಿಹರ ನಗರದ ಮಾತೃಶ್ರೀ ರುದ್ರಮಾಂಬ ಬಸವಾರ್ಯ ಪ್ರೌಢಶಾಲೆಯಲ್ಲಿನ ಕನ್ನಡ ಶಿಕ್ಷಕರ ಬ್ಯಾಕ್‌ಲಾಗ್ (ಪರಿಶಿಷ್ಟ ಜಾತಿ) ನೇಮಕಾತಿಯು ನಿಯಮಬಾಹಿರವಾಗಿ ನಡೆದಿರುವ ಮಾಹಿತಿಯ ಆಧಾರದ ಮೇಲೆ ಆಯುಕ್ತರು ಹಾಗೂ ನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ, ಆಯುಕ್ತರ ಕಛೇರಿ, ಬೆಂಗಳೂರು ಇವರಿಗೆ ದೂರು ನೀಡಿ, ಬ್ಯಾಕ್‌ಲಾಗ್ ನಿಯಮಕ್ಕೆ ವಿರುದ್ಧವಾಗಿ ಸಂದರ್ಶನ ನಡೆಸಿ, ನೇಮಕಾತಿ ಪ್ರಕ್ರಿಯೆಗೆ ಮುಂದಾಗಿರುವ ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಮೂಖ್ಯೋಪಧ್ಯಾಯರು, ವಿಷಯ ಪರಿವೀಕ್ಷಕರು, ವಿಷಯ ತಜ್ಞರು ಹಾಗೂ ಆಡಳಿತ ಮಂಡಳಿಯ ಸದಸ್ಯರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು, ಕೈಗೊಂಡ ಕ್ರಮದ ವರದಿಯನ್ನು ದೂರು ಅರ್ಜಿ ತಲುಪಿದ ಒಂದು ತಿಂಗಳ ಒಳಗಾಗಿ ನೀಡುವಂತೆ ಮನವಿ ಮಾಡಲಾಗಿತ್ತು. ಆದರೆ ವರ್ಷಗಳೇ ಕಳೆದರೂ ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ.

ವಯಸ್ಸು ಮತ್ತು ಮೆರಿಟ್ ಆಧಾರದಲ್ಲಿ ನೇಮಕಾತಿ ನಡೆಸದೆ ಸಂದರ್ಶನ ನಡೆಸಿ ಬ್ಯಾಕ್‌ಲಾಗ್ ನಿಯಮವನ್ನು ಉಲ್ಲಂಘನೆ ಮಾಡಿರುವುದು ತನಿಖೆಯಲ್ಲಿ ಕಂಡುಬAದಿರುತ್ತದೆ. ಆದರೆ ತಪ್ಪಿತಸ್ಥ ಅಧಿಕಾರಿಗಳು ಹಾಗೂ ಆಡಳಿತ ಮಂಡಳಿಯ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಕಾರಣ ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರಾದ ಕೃಷ್ಣಾಜಿ ಎಸ್. ಕರಿಚಣ್ಣನವರ್ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಿಸಿ, ಬ್ಯಾಕ್‌ಲಾಗ್ ನಿಯಮಗಳನ್ನು ಉಲ್ಲಂಘಿಸಿ ಸಂದರ್ಶನ ನಡೆಸಲು ಕಾರಣರಾದವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ಇವರಿಗೆ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿ ಅವ್ಯವಹಾರ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ನಾಗರಾಜ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: ನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿಗಳ ಅವ್ಯವಹಾರ ನಡೆಸಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕೊಡಚಗೊಂಡನಹಳ್ಳಿ, ನ್ಯಾಮತಿ ತಾಲ್ಲೂಕು ಇಲ್ಲಿನ ಪ್ರಾಂಶುಪಾಲರಾದ ನಾಗರಾಜ ಜಿ.ಎಂ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ದಾವಣಗೆರೆ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ವಸತಿ ಶಾಲೆಗಳಲ್ಲಿ ನಕಲಿ ಬಿಲ್ಲುಗಳ ಮೂಲಕ ಸರ್ಕಾರದ ಅನುದಾನವನ್ನು ವಂಚಿಸುತ್ತಿರುವ ವಿಷಯ ತಿಳಿದು ಪ್ರಾಂಶುಪಾಲರು, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕೊಡಚಗೊಂಡನಹಳ್ಳಿ, ನ್ಯಾಮತಿ ತಾಲ್ಲೂಕು ಇವರು ನೀಡಿರುವ 37 ಬಿಲ್ಲುಗಳನ್ನು ಪರಿಶೀಲನೆ ಮಾಡಿದಾಗ, ಇವುಗಳಲ್ಲಿನ ಬಹುತೇಕ ಜಿ.ಎಸ್.ಟಿ ಬಿಲ್ಲುಗಳಲ್ಲಿ ದಿನಾಂಕವೇ ಇರುವುದಿಲ್ಲ.

ಇನ್ನೂ ಕೆಲವು ಬಿಲ್ಲುಗಳನ್ನು ಹೊರ ರಾಜ್ಯದಿಂದ ಪಡೆಯಲಾಗಿರುತ್ತದೆ. ಆದ್ದರಿಂದ ಮರು ಲೆಕ್ಕಪರಿಶೋಧನೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending