ದಿನದ ಸುದ್ದಿ
ಮಧ್ಯ ಕರ್ನಾಟಕದ ಯಕ್ಷಗಾನ ಯುವಪ್ರತಿಭೆ ‘ಅಮೂಲ್ಯ ಸಿ.’
- ಡಾ.ಕೆ.ಎ.ಓಬಳೇಶ್
ಕರ್ನಾಟಕದ ಬಹುತ್ವವೆಲ್ಲ ಸಮನ್ವಯತೆಯನ್ನು ಕಂಡುಕೊಂಡಿರುವುದು ಮಧ್ಯ ಕರ್ನಾಟಕದಲ್ಲಿ. ಈ ಭಾಗವು ಯಾವುದೇ ಅನ್ಯ ಗಡಿಪ್ರಾಂತ್ಯ, ಅನ್ಯ ಭಾಷೆಯ ಪ್ರಭಾವಕ್ಕೆ ಒಳಗಾಗಿರುವುದು ಕಂಡುಬರುವುದಿಲ್ಲ. ಆದರೆ ಇವೆಲ್ಲವುಗಳನ್ನು ಸಮನ್ವಯದ ನೆಲೆಯಲ್ಲಿ ಕಾಪಾಡಿಕೊಂಡು ಬಂದ ವಿಶೇಷತೆ ಇದಕ್ಕಿದೆ. ಹಾಗೆಯೇ ಇದು ಸಾಂಸ್ಕೃತಿಕ ಸಮನ್ವಯತೆಗೂ ವಿಶೇಷತೆ ಮನ್ನಣೆಯನ್ನು ಕಲ್ಪಿಸಿಕೊಂಡು ಬಂದಿದೆ.
ಇಲ್ಲಿ ಹಲವಾರು ಸಾಂಸ್ಕೃತಿಕ ವೈಶಿಷ್ಟ್ಯತೆಗಳು ತನ್ನ ಅನನ್ಯತೆಯನ್ನು ಕಾಯ್ದುಕೊಂಡಿವೆ. ಉತ್ತರ ಕರ್ನಾಟಕಕ್ಕೆ ಹೋದರೆ ಬಯಲಾಟ, ದಕ್ಷಿಣ ಕರ್ನಾಟಕದಲ್ಲಿ ಕಂಸಾಳೆ, ಕರಾವಳಿ ಕರ್ನಾಟಕದಲ್ಲಿ ಯಕ್ಷಗಾನ ಕಲೆಗಳು ವಿಶಿಷ್ಟವಾಗಿ ಗುರುತಿಸಿಕೊಂಡಿವೆ. ಆದರೆ ಮಧ್ಯ ಕರ್ನಾಟಕ ಮಾತ್ರ ಇವೆಲ್ಲವುಗಳನ್ನು ತನ್ನ ಆಂತರ್ಯದಲ್ಲಿ ಪ್ರಾಂತ್ಯಬೇಧ ಮರೆತು ಹುದುಗಿಸಿಕೊಂಡಿದೆ. ಹೀಗಾಗಿ ಮಧ್ಯ ಕರ್ನಾಟಕದಲ್ಲಿ ವಿವಿಧ ಸಾಂಸ್ಕೃತಿಕ ವಲಯದಲ್ಲಿ ಸಾಧನೆಗೈದ ವಿಭಿನ್ನ ಕಲಾ ಪ್ರತಿಭೆಗಳು ಕಂಡುಬರುತ್ತವೆ.
ಇಂತಹ ಕಲಾ ಪ್ರತಿಭೆಗಳಲ್ಲಿ ಅಮೂಲ್ಯ ಸಿ, ಅವರು ಒಬ್ಬರಾಗಿದ್ದಾರೆ. ಮಧ್ಯ ಕರ್ನಾಟಕದ ದಾವಣಗೆರೆ ಭಾಗದಲ್ಲಿ ಯಕ್ಷಗಾನದ ಮೂಲಕ ತನ್ನ ವಿಶಿಷ್ಟ ಪ್ರತಿಭೆಯನ್ನು ಅನಾವರಣಗೊಳಿಸುತ್ತಿರುವ ಅಮೂಲ್ಯ ಅವರ ಕಲಾ ಬದುಕನ್ನು ಅನಾವರಣಗೊಳಿಸುವುದು ಪ್ರಸ್ತುತ ಲೇಖನದ ಆಶಯವಾಗಿದೆ.
ಕುಮಾರಿ ಅಮೂಲ್ಯ ಅವರು ಚಂದ್ರಶೇಖರ್ ಹಾಗೂ ಸವಿತಾ ದಂಪತಿಗಳ ಪುತ್ರಿಯಾಗಿ ದಿನಾಂಕ 4 ಜನವರಿ 2001 ರಂದು ದಾವಣಗೆರೆಯಲ್ಲಿ ಜನಿಸಿದರು. ಇವರ ತಂದೆ ಹೊಸದುರ್ಗ ಮೂಲದವರಾಗಿದ್ದು, ಇವರ ತಾಯಿಯು ಕರಾವಳಿ ಮೂಲದವರಾಗಿದ್ದಾರೆ. ಇವರ ತಾಯಿಯ ತಂದೆ ಉಡುಪಿ ಜಿಲ್ಲೆ ಮುನಿಯಾಲ ಸಮೀಪದ ಕಾಡೊಳೆಯವರು.
ಇವರು ಬಾಲ್ಯದಲ್ಲಿಯೇ ಜೀವನ ನಿರ್ವಹಣೆಗಾಗಿ ದಾವಣಗೆರೆಯಲ್ಲಿ ನೆಲೆಯನ್ನು ಕಂಡುಕೊಂಡರು. ಹಾಗೆಯೇ ಈ ಭಾಗದಲ್ಲಿಯೇ ವಿವಾಹವಾಗಿ ತಮ್ಮ ಬದುಕನ್ನು ಕಟ್ಟಿಕೊಂಡವರು. ಕುಮಾರಿ ಅಮೂಲ್ಯ ಅವರ ತಾಯಿಯ ಮೂಲವು ಕರಾವಳಿ ಮೂಲವಾಗಿದ್ದರು ಯಕ್ಷಗಾನ ಕಲೆಯ ಯಾವುದೇ ನೇರ ಪ್ರಭಾವಗಳಾಗಿರುವುದಿಲ್ಲ. ಆದರೆ ಇವರು ಸೆಂಟ್ ಪಾಲ್ಸ್ ಶಾಲೆಯಲ್ಲಿ ಪ್ರೌಢ ಶಿಕ್ಷಣ ಪಡೆಯುತ್ತಿರುವಾಗ ಯಕ್ಷಗಾನ ಕಲೆಯನ್ನು ಕಂಡು ಆಕರ್ಷಿತರಾಗಿದ್ದರು.
ಈ ಶಾಲಾ ಅವಧಿಯಲ್ಲಿನ ಯಕ್ಷಗಾನ ಪ್ರದರ್ಶನ ಕಲೆಯನ್ನು ನೋಡಿ ಪ್ರಭಾವಿತರಾದ ಅಮೂಲ್ಯ ಅವರು ನಾನು ಒಂದಲ್ಲ ಒಂದು ದಿನ ಈ ಕಲೆಯಲ್ಲಿ ತನ್ನನ್ನು ತೊಡಗಿಸಿಕೊಳ್ಳಬೇಕು ಎಂಬ ಹಂಬಲವನ್ನು ಮೈಗೂಡಿಸಿಕೊಂಡಿದ್ದರು. ಆದರೆ ಮಧ್ಯ ಕರ್ನಾಟಕದಲ್ಲಿ ಯಕ್ಷಗಾನವು ಅಷ್ಟೊಂದು ಪ್ರಸಿದ್ಧಿಯಾಗಿರದ ಕಾರಣ ಇವರ ಆಸೆಯು ಬಹುದಿನಗಳ ಕಾಲ ಮರೀಚಿಕೆಯಾಗಿಯೇ ಉಳಿದಿತ್ತು. ಇವರಲ್ಲಿ ಬಹುದಿನಗಳಿಂದಲೂ ಚಿಗುರಿದ ಕನಸನ್ನು ಸಾಕಾರಗೊಳಿಸಿದ್ದು ರಾಘವೇಂದ್ರ ಮಠ.
ರಾಘವೇಂದ್ರ ಗುರುಗಳಲ್ಲಿ ಅತಿಯಾದ ನಂಬಿಕೆಯನ್ನು ಹೊಂದಿದ್ದ ಅಮೂಲ್ಯ ಅವರು ಪ್ರತಿವಾರ ರಾಘವೇಂದ್ರ ಮಠಕ್ಕೆ ಹೋಗಿ ದರ್ಶನ ಪಡೆಯುತ್ತಿದ್ದರು. ಈ ಸಂದರ್ಭದಲ್ಲಿ ಒಮ್ಮೆ ರಾಯರ ಮಠದಲ್ಲಿ ಯಕ್ಷಗಾನ ತರಬೇತಿಯ ಬಗ್ಗೆ ಪ್ರದರ್ಶಿಸಿದ ಜಾಹಿರಾತು ಇವರ ಮನದ ಮೂಸೆಯಲ್ಲಿನ ಆಸೆಗೆ ವೇದಿಕೆಯೊಂದನ್ನು ಕಲ್ಪಿಸಿಕೊಟ್ಟಿತ್ತು. ಆಗ ಈ ಜಾಹಿರಾತು ನೀಡಿದ ಸೀತಾರಾಮ ಆಚಾರ್ಯ ಅವರನ್ನು ಸಂಪರ್ಕಿಸಿದಾಗ ಅಮೂಲ್ಯ ಅವರಿಗಿದ್ದ ಯಕ್ಷಗಾನ ತುಡಿತವನ್ನು ಅರಿತು ತನ್ನ ಶಿಷ್ಯೆಯಾಗಿ ಸ್ವೀಕರಿಸಿ, ‘ಯಕ್ಷ ಸೌರಭ’ ಕಲಾ ತಂಡದಿAದ ಯಕ್ಷಗಾನ ತರಬೇತಿಯನ್ನು ನೀಡುತ್ತ ಬಂದರು.
ಹೀಗೆ ಯಕ್ಷಗಾನ ಕಲಿಕೆಗೆ ಸೀತಾರಾಮ ಆಚಾರ್ಯರಿಂದ ದೀಕ್ಷೆಯನ್ನು ಪಡೆದ ಅಮೂಲ್ಯ ಅವರು ಈ ಕಲೆಯನ್ನು ತನ್ನ ಬದುಕಿನ ಒಂದು ಭಾಗವಾಗಿ ಮುಂದುವರೆಸಿಕೊAಡು ಬಂದಿದ್ದಾರೆ. ಹಾಗೆಯೇ ಈ ಯಕ್ಷಗಾನ ಕಲೆಯ ಮೇಲೆ ವಿಶಿಷ್ಟವಾದ ಕಾಳಜಿ ಮತ್ತು ಆಸ್ಥೆಯನ್ನು ಹೊಂದಿದ್ದು ಮಧ್ಯ ಕರ್ನಾಟಕದಲ್ಲಿ ಕರಾವಳಿಯ ವಿಶಿಷ್ಟ ಕಲೆಯನ್ನು ಅರಳಿಸುವಲ್ಲಿ ಮಹತ್ತರ ಪಾತ್ರವನ್ನು ನಿರ್ವಹಿಸಿಕೊಂಡು ಬಂದಿದ್ದಾರೆ.
ಅಮೂಲ್ಯ ಅವರ ತಂದೆ ಚಂದ್ರಶೇಖರ್ ಅವರು ಅನಾರೋಗ್ಯದಿಂದ ಮರಣ ಹೊಂದಿದ ತರುವಾಯದಲ್ಲಿ ಇವರಿಗೆ ಉಚಿತವಾಗಿ ತರಬೇತಿ ನೀಡುವ ಮೂಲಕ ಸೀತಾರಾಮ ಆಚಾರ್ಯರು ತಮ್ಮ ಔದಾರ್ಯತೆಯನ್ನು ಮರೆಯುತ್ತ ಬಂದಿದ್ದಾರೆ. ಇದಕ್ಕೆ ಪ್ರಮುಖ ಕಾರಣ ಅಮೂಲ್ಯ ಅವರಿಗಿರುವ ಕಲಾಸಕ್ತಿ ಮತ್ತು ಬದ್ಧತೆಯಾಗಿದೆ. ಹೀಗಾಗಿ ಸೀತಾರಾಮ ಆಚಾರ್ಯರು ತಮ್ಮ ಪ್ರೀತಿಯ ಮಗಳಂತೆ ಅಮೂಲ್ಯ ಅವರನ್ನು ಮುನ್ನಡೆಸುತ್ತ ಬಂದಿದ್ದಾರೆ.
ಇದರೊಂದಿಗೆ ತನ್ನೆಲ್ಲ ಕಲೆಯನ್ನು ಸೀತರಾಮ ಆಚಾರ್ಯರು ತನ್ನ ಶಿಷ್ಯೆಗೆ ಧಾರೆಯೆರೆಯುವ ಮೂಲಕ ಮಧ್ಯ ಕರ್ನಾಟಕದಲ್ಲೊಂದು ಅಮೋಘವಾದ ಯಕ್ಷಗಾನ ಪ್ರತಿಭೆಯೊಂದನ್ನು ರೂಪಿಸಿದ್ದಾರೆ. ಇದರ ಫಲವಾಗಿ ಅಮೂಲ್ಯ ಅವರು ಜಿಲ್ಲಾಡಳಿತ, ಕಾಲೇಜು, ವಿವಿಧ ಸಂಘ ಸಂಸ್ಥೆಗಳು ಹಾಗೂ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ತನ್ನ ಯಕ್ಷಗಾನ ಪ್ರತಿಭೆಯನ್ನು ಅನಾವರಣಗೊಳಿಸುತ್ತ ಬಂದಿದ್ದಾರೆ. ಇತ್ತೀಚೆಗೆ ‘ಮಲಬರ್ ಗೋಲ್ಡ್ ಅಂಡ್ ಡೈಮಂಡ್ಸ್’ ಕಂಪನಿಯವರು ಆಯೋಜಿಸಿದ್ದ ಟಾಲೆಂಟ್ ಶೋನಲ್ಲಿ ‘ಗೋಲ್ಡನ್ ಗರ್ಲ್’ ಅವಾರ್ಡ್ ಪಡೆದುಕೊಂಡಿದ್ದಾರೆ.
ಪ್ರಸ್ತುತ ಸಂದರ್ಭದಲ್ಲಿ ಅಮೂಲ್ಯ ಅವರು ದಾವಣಗೆರೆಯ ಎ.ವಿ.ಕಮಲಮ್ಮ ಕಾಲೇಜಿನಲ್ಲಿ ದ್ವಿತೀಯ ಬಿ.ಕಾಂ ಪದವಿಯನ್ನು ಅಧ್ಯಯನ ಮಾಡುತ್ತಿದ್ದು, ಬ್ಯಾಂಕ್ ಉದ್ಯೋಗಿಯಾಗಬೇಕೆಂಬ ಹಂಬಲವನ್ನು ಮೈಗೂಡಿಸಿಕೊಂಡಿದ್ದಾರೆ. ಯಕ್ಷಗಾನ ಮತ್ತು ಶಿಕ್ಷಣವನ್ನು ತನ್ನೆರಡು ಕಣ್ಣುಗಳೆಂದು ನಂಬಿರುವ ಅಮೂಲ್ಯ ಅವರು ಕಲೆಯೊಂದಿಗೆ ಶಿಕ್ಷಣ ಕ್ಷೇತ್ರದಲ್ಲಿಯೂ ಮಹತ್ತರವಾದ ಸಾಧನೆಗೈಯುವ ಹಂಬಲವೊತ್ತಿದ್ದಾರೆ.
ಪ್ರೀತಿಯ ತಂದೆಯ ಅಗಲಿಗೆಯಿಂದ ನೊಂದಿರುವ ಅಮೂಲ್ಯ ಅವರು ತನ್ನ ತಾಯಿಯ ಪ್ರೀತಿ ಮತ್ತು ಗುರುಗಳ ಮಾರ್ಗದರ್ಶನದಲ್ಲಿ ಶಿಕ್ಷಣ ಮತ್ತು ಕಲಾ ಕ್ಷೇತ್ರದಲ್ಲಿ ಮುನ್ನಡೆಯುತ್ತಿದ್ದಾರೆ. ಅಮೂಲ್ಯ ಅವರು ಯಕ್ಷಸೌರಭ ತಂಡದಿಂದ ಯಕ್ಷಗಾನ ತರಬೇತಿಯನ್ನು ಪಡೆಯುತ್ತಲೇ ಕಿರಿಯ ವಿದ್ಯಾರ್ಥಿಗಳಿಗೆ ಗುರುಗಳೊಂದಿಗೆ ತರಬೇತಿಯನ್ನು ನೀಡುವ ಮೂಲಕ ಕಲಾ ಸೇವೆಯನ್ನು ಆರಂಭಿಸಿದ್ದಾರೆ. ಅಮೂಲ್ಯಳ ಉಜ್ವಲ ಭವಿಷ್ಯಕ್ಕಾಗಿ ಮಾವ ಮತ್ತು ಸಹೋದರ ಆಸರೆಯಾಗಿ ನಿಂತಿದ್ದಾರೆ. ಇವರೆಲ್ಲರ ಆಸರೆಯಲ್ಲಿ ಶಿಕ್ಷಣದೊಂದಿಗೆ ಮಧ್ಯ ಕರ್ನಾಟಕದಲ್ಲಿ ಯಕ್ಷಗಾನ ಕಲೆಯನ್ನು ಅರಳಿಸುತ್ತಿರುವ ಅಮೂಲ್ಯ ಅವರ ಮುಂದಿನ ಬದುಕಿನಲ್ಲಿ ಯಶಸ್ಸು ಕಾಣಲೆಂಬುದು ನಮ್ಮ ಹಾರೈಕೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಡಾ. ಶಾಮನೂರು ಶಿವಶಂಕರಪ್ಪ ನಿಧನ ; ವೀರಶೈವ ವಿಧಿವಿಧಾನದಂತೆ ಕಲ್ಲೇಶ್ವರ ಮಿಲ್ನಲ್ಲಿ ಅಂತ್ಯ ಸಂಸ್ಕಾರ
ಸುದ್ದಿದಿನ,ದಾವಣಗೆರೆ:ಮಾಜಿ ಸಚಿವರು ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ; ಶಾಮನೂರು ಶಿವಶಂಕರಪ್ಪನವರು ನಿಧನರಾಗಿದ್ದು ಅವರ ಅಂತ್ಯ ಸಂಸ್ಕಾರವು ಸರ್ಕಾರಿ ಸಕಲ ಗೌರವಗಳೊಂದಿಗೆ ಹಾಗೂ ವೀರಶೈವ ಸಂಪ್ರದಾಯದಂತೆ ಕಲ್ಲೇಶ್ವರ ರೈಸ್ ಮಿಲ್ ಆವರಣದಲ್ಲಿ ಅಪಾರ ಜನಸ್ತೋಮದೊಂದಿಗೆ ಸೋಮವಾರ ಸಂಜೆ ಜರುಗಿತು.
ಡಾ; ಶಾಮನೂರು ಶಿವಶಂಕರಪ್ಪನವರಿಗೆ 95 ವರ್ಷವಾಗಿದ್ದು ವಯೋಸಹಜ ಅನಾರೋಗ್ಯದಿಂದ ಡಿಸೆಂಬರ್ 14 ರಂದು ನಿಧನ ಹೊಂದಿದ್ದರು. 6 ಭಾರಿ ಶಾಸಕರಾಗಿ, ಒಮ್ಮೆ ಸಂಸದರಾಗಿ ಸುಧೀರ್ಘ ರಾಜಕೀಯ ಸೇವೆಯಲ್ಲಿದ್ದ ಇವರು ರಾಜ್ಯ ಸೇರಿದಂತೆ ದಾವಣಗೆರೆಗೆ ಹೊಸ ರೂಪಕೊಟ್ಟಿದ್ದರು.
ಸೋಮವಾರ ಬೆಳಗ್ಗೆ 7.30 ಗಂಟೆಯಿಂದ ಪಾರ್ಥಿವ ಶರೀರಕ್ಕೆ ಸ್ವಗೃಹದಲ್ಲಿ ಕುಟುಂಬಸ್ಥರ ವಿವಿಧ ಪೂಜೆ ಪುನಸ್ಕಾರಗಳೊಂದಿಗೆ ವಿಧಿ ವಿಧಾನಗಳು ನಡೆದು, ಮಧ್ಯಾಹ್ನದಿಂದ ಹೈಸ್ಕೂಲ್ ಮೈದಾನದಲ್ಲಿ ಸಾರ್ವಜನಿಕರ ದರ್ಶನಕ್ಕೆ ಪಾರ್ಥಿವ ಶರೀರವನ್ನು ಇಡಲಾಗಿತ್ತು. ಸಾವಿರಾರು ಜನರು ಆಗಮಿಸಿ ಸರತಿ ಸಾಲಿನಲ್ಲಿ ಅಂತಿಮ ದರ್ಶನ ಪಡೆದರು.
ಮಧ್ಯಾಹ್ನ 3.30 ರಿಂದ ಹೈಸ್ಕೂಲ್ ಮೈದಾನದಿಂದ ಹೊರಟು ಹಳೇ ದಾವಣಗೆರೆ ಮಂಡಿಪೇಟೆ, ಕಾಯಿಪೇಟೆ, ಅರಳಿವೃತ್ತದ ಮೂಲಕ ಕಲ್ಲೇಶ್ವರ ಮಿಲ್ಗೆ ಪಾರ್ಥಿವ ಶರೀರ ತಲುಪಿತು. ಸಂಜೆ 4.30 ರಿಂದ ಅಂತಿಮ ವಿಧಿ ವಿಧಾನಗಳು ನಡೆದವು.
ಅಂತಿಮ ಸಂಸ್ಕಾರದಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು, ರಾಜ್ಯಸಭೆ ವಿರೋಧ ಪಕ್ಷದ ನಾಯಕರು ಹಾಗೂ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು, ಉಪ ಮುಖ್ಯಮಂತ್ರಿಯವರಾದ ಡಿ.ಕೆ.ಶಿವಕುಮಾರ್ ಅವರು, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಅರಣ್ಯ ಸಚಿವರಾದ ಈಶ್ವರ ಖಂಡ್ರೆ, ಬೃಹತ್ ಕೈಗಾರಿಕೆ ಸಚಿವರಾದ ಎಂ.ಬಿ.ಪಾಟೀಲ್ ಅವರು, ಇಂಧನ ಸಚಿವರಾದ ಕೆ.ಜೆ.ಜಾರ್ಜ್ರವರು, ಸಮಾಜ ಕಲ್ಯಾಣ ಸಚಿವರಾದ ಡಾ; ಹೆಚ್.ಸಿ.ಮಹದೇವಪ್ಪ, ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್, ಆಹಾರ ಸಚಿವರಾದ ಕೆ.ಎಚ್.ಮುನಿಯಪ್ಪ, ಅಲ್ಪಸಂಖ್ಯಾತರ ಕಲ್ಯಾಣ, ವಸತಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್, ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಾದ ಎಚ್.ಕೆ ಪಾಟೀಲ, ಜವಳಿ, ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ.ಎಸ್.ಪಾಟೀಲ, ಯೋಜನೆ ಮತ್ತು ಸಾಂಖ್ಯಿಕ ಸಚಿವರಾದ ಡಿ.ಸುಧಾಕರ್ ಸೇರಿದಂತೆ ಶಾಸಕರು ಸೇರಿದಂತೆ ವಿವಿಧ ಮಠಾಧೀಶರು ಭಾಗವಹಿಸಿ ಪುಷ್ಪ ನಮನ ಸಲ್ಲಿಸಿ ಅಂತಿಮ ದರ್ಶನ ಪಡೆದರು.
ಸರ್ಕಾರಿ ಗೌರವಗಳೊಂದಿಗೆ ಅಂತಿಮ ಸಂಸ್ಕಾರ ನೆರವೇರಿಸಲಾಯಿತು. ರಾಷ್ಟ್ರಧ್ವಜವನ್ನು ಪಾರ್ಥಿವ ಶರೀರಕ್ಕೆ ಹೊದಿಸಿ ಪೊಲೀಸ್ ಬ್ಯಾಂಡ್ ಮೂಲಕ ರಾಷ್ಟ್ರಗೀತೆ ನುಡಿಸಿ ಗೌರವ ಸಲ್ಲಿಸಲಾಯಿತು. ನಂತರ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಗೌರವ ಸಲ್ಲಿಸಿ ಅಂತಿಮವಾಗಿ ಶೋಕ ವ್ಯಕ್ತಪಡಿಸಲಾಯಿತು. ರಾಷ್ಟ್ರಧ್ವಜವನ್ನು ಅವರ ಪುತ್ರರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಸ್ತಾಂತರಿಸಿದರು. ನಂತರ ಸಾಂಪ್ರದಾಯಿಕ ಪೂಜೆ, ವಿಧಿ, ವಿಧಾನಗಳೊಂದಿಗೆ ಪಾರ್ಥಿವ ಶರೀರವನ್ನು ಐಕ್ಯ ಮಂಟಪದಲ್ಲಿ ಇಡಲಾಯಿತು.
ಡಾ; ಶಾಮನೂರು ಶಿವಶಂಕರಪ್ಪನವರ ಪುತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್, ಸೊಸೆ ಹಾಗೂ ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್, ಇನ್ನಿಬ್ಬರು ಪುತ್ರರಾದ ಎಸ್.ಎಸ್.ಬಕ್ಕೇಶ್, ಎಸ್.ಎಸ್.ಗಣೇಶ್ ಸೇರಿದಂತೆ ಶಾಮನೂರು ಶಿವಶಂಕರಪ್ಪನವರ ಕುಟುಂಬಸ್ಥರು ಅಂತಿಮ ವಿಧಿ ವಿಧಾನದಲ್ಲಿ ಭಾಗವಹಿಸಿ ಅಂತಿಮ ಸಂಸ್ಕಾರ ನೆರವೇರಿಸಲಾಯಿತು.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಎಸ್.ಆರ್.ಬೊಮ್ಮಾಯಿ, ಗೃಹ ಸಚಿವರಾದ ಜಿ.ಪರಮೇಶ್ವರ್, ಕಂದಾಯ ಸಚಿವರಾದ ಕೃಷ್ಣಬೈರೇಗೌಡ, ಕೃಷಿ ಸಚಿವರಾದ ಚಲುವರಾಯಸ್ವಾಮಿ, ಬಿ.ಜೆ.ಪಿ.ಪಕ್ಷದ ರಾಜ್ಯಾದ್ಯಕ್ಷರಾದ ಬಿ.ವೈ.ವಿಜಯೇಂದ್ರ ಸೇರಿದಂತೆ ಅನೇಕ ಶಾಸಕರು, ವಿಧಾನ ಪರಿಷತ್ ಸದಸ್ಯರು ಅಂತಿಮ ದರ್ಶನ ಪಡೆದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
2027ರ ಜನಗಣತಿ ನಡೆಸಲು ಬಜೆಟ್ ಅಂಗೀಕಾರ
ಸುದ್ದಿದಿನ,ದೆಹಲಿ:2027ರ ಜನಗಣತಿಯನ್ನು ನಡೆಸಲು ಸಂಪುಟವು 11 ಸಾವಿರದ 718 ಕೋಟಿ ರೂಪಾಯಿಗಳ ಬಜೆಟ್ಅನ್ನು ಅಂಗೀಕರಿಸಿದೆ. ಈ ಕುರಿತು ಮಾಹಿತಿ ನೀಡಿದ ಸಚಿವರು, 2027ರ ಜನಗಣತಿಯನ್ನು ಎರಡು ಹಂತಗಳಲ್ಲಿ ನಡೆಸಲಾಗುವುದು ಎಂದು ಹೇಳಿದರು.
ಇದು ಮೊದಲ ಡಿಜಿಟಲ್ ಜನಗಣತಿಯಾಗಲಿದೆ. 2027 ರ ಜನಗಣತಿಯು ಒಟ್ಟಾರೆ 16ನೇ ಮತ್ತು ಸ್ವಾತಂತ್ರ್ಯದ ನಂತರದ 8 ನೇ ಜನಗಣತಿಯಾಗಲಿದೆ. ಭಾರತದ ಜನಗಣತಿಯನ್ನು ವಿಶ್ವದ ಅತಿದೊಡ್ಡ ಆಡಳಿತಾತ್ಮಕ ಮತ್ತು ಸಂಖ್ಯಾಶಾಸ್ತ್ರೀಯ ಕ್ರಮವೆಂದು ಪರಿಗಣಿಸಲಾಗಿದೆ ಎಂದು ಅವರು ತಿಳಿಸಿದರು.
ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು 2026ರ ಹಂಗಾಮಿಗೆ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆಗೆ ಅನುಮೋದನೆ ನೀಡಿದೆ. ಬೆಳೆಗಾರರಿಗೆ ಲಾಭದಾಯಕ ಬೆಲೆಗಳನ್ನು ಒದಗಿಸುವ ಸಲುವಾಗಿ, ಸರ್ಕಾರವು 2018-19 ರ ಕೇಂದ್ರ ಬಜೆಟ್ನಲ್ಲಿ ಎಲ್ಲಾ ಕಡ್ಡಾಯ ಬೆಳೆಗಳ ಎಂಎಸ್ಪಿ ಅನ್ನು ಅಖಿಲ ಭಾರತ ಸರಾಸರಿ ಉತ್ಪಾದನಾ ವೆಚ್ಚದ ಕನಿಷ್ಠ 1.5 ಪಟ್ಟು ಮಟ್ಟದಲ್ಲಿ ನಿಗದಿಪಡಿಸಲಾಗುವುದು ಎಂದು ಘೋಷಿಸಿತ್ತು. ಮಿಲ್ಲಿಂಗ್ ಕೊಬ್ಬರಿಗೆ ಎಂಎಸ್ಪಿಯನ್ನು ಕ್ವಿಂಟಲ್ಗೆ 445 ರೂಪಾಯಿಗಳಿಂದ 12 ಸಾವಿರದ 27 ರೂಪಾಯಿಗಳಿಗೆ ಹೆಚ್ಚಿಸಲಾಗಿದೆ ಮತ್ತು ಅದೇ ಅವಧಿಗೆ ಉಂಡೆ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆ 2026ರ ಹಂಗಾಮಿಗೆ ಕ್ವಿಂಟಲ್ಗೆ 400 ರೂಪಾಯಿಗಳಿಂದ 12 ಸಾವಿರದ 500 ರೂಪಾಯಿಗಳಿಗೆ ಹೆಚ್ಚಿಸಲಾಗಿದೆ.
ಹೆಚ್ಚಿನ ಕನಿಷ್ಠ ಬೆಂಬಲ ಬೆಲೆಯು ತೆಂಗಿನ ಬೆಳೆಗಾರರಿಗೆ ಉತ್ತಮ ಲಾಭದಾಯಕ ಆದಾಯವನ್ನು ಖಚಿತಪಡಿಸುವುದಲ್ಲದೆ, ದೇಶೀಯವಾಗಿ ಮತ್ತು ಅಂತಾರಾಷ್ಟ್ರೀಯವಾಗಿ ತೆಂಗಿನ ಉತ್ಪನ್ನಗಳಿಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ಕೊಬ್ಬರಿ ಉತ್ಪಾದನೆಯನ್ನು ವಿಸ್ತರಿಸಲು ರೈತರನ್ನು ಪ್ರೋತ್ಸಾಹಿಸುತ್ತದೆ ಎಂದು ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೋಲ್ಸೇತು ನೀತಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ; ಸಂಪನ್ಮೂಲಗಳ ನ್ಯಾಯಯುತ ಬಳಕೆಗೆ ಒತ್ತು
ಸುದ್ದಿದಿನ,ದೆಹಲಿ:ಕೇಂದ್ರ ಸರ್ಕಾರವು ’ಕೋಲ್ಸೇತು’ ನೀತಿಯನ್ನು ಅನುಮೋದಿಸಿದೆ. ಇದು ವಿವಿಧ ಕೈಗಾರಿಕಾ ಬಳಕೆಗಳು ಮತ್ತು ರಫ್ತಿಗೆ ಕಲ್ಲಿದ್ದಲು ಸಂಪರ್ಕಗಳ ಹರಾಜಿಗೆ ಹೊಸ ವ್ಯವಸ್ಥೆ ಸೃಷ್ಟಿಸುತ್ತದೆ, ಹಾಗೂ ಸಂಪನ್ಮೂಲಗಳ ನ್ಯಾಯಯುತ ಪ್ರವೇಶ ಮತ್ತು ಅತ್ಯುತ್ತಮ ಬಳಕೆಯನ್ನು ಖಚಿತಪಡಿಸುತ್ತದೆ.
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿಯು ನಿನ್ನೆ ತಡೆರಹಿತ, ದಕ್ಷ ಮತ್ತು ಪಾರದರ್ಶಕ ಬಳಕೆಗಾಗಿ ಕಲ್ಲಿದ್ದಲು ಸಂಪರ್ಕದ ಹರಾಜು ನೀತಿಗೆ ಅನುಮೋದನೆ ನೀಡಿತು.
ನವದೆಹಲಿಯಲ್ಲಿ ನಿನ್ನೆ ಸಂಜೆ ಸಂಪುಟದ ನಿರ್ಧಾರಗಳ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್, 2016ರ ಎನ್ಆರ್ಎಸ್ ನಿಯಂತ್ರಿತವಲ್ಲದ ವಲಯದ ಸಂಪರ್ಕ ಹರಾಜು ನೀತಿಯಲ್ಲಿ ’ಕೋಲ್ಸೇತು’ ಎಂಬ ಪ್ರತ್ಯೇಕ ವ್ಯವಸ್ಥೆಯನ್ನು ಸೇರಿಸುವ ಮೂಲಕ ಯಾವುದೇ ಕೈಗಾರಿಕಾ ಬಳಕೆ ಮತ್ತು ರಫ್ತಿಗೆ ದೀರ್ಘಾವಧಿಯವರೆಗೆ ಹರಾಜು ಆಧಾರದ ಮೇಲೆ ಕಲ್ಲಿದ್ದಲು ಸಂಪರ್ಕಗಳ ಹಂಚಿಕೆಗೆ ಈ ನೀತಿಯು ಅವಕಾಶ ನೀಡುತ್ತದೆ ಎಂದು ಹೇಳಿದರು.
ಕಲ್ಲಿದ್ದಲು ಅಗತ್ಯವಿರುವ ಯಾವುದೇ ದೇಶೀಯ ಖರೀದಿದಾರರು ಅಂತಿಮ ಬಳಕೆಯನ್ನು ಲೆಕ್ಕಿಸದೆ ಸಂಪರ್ಕ ಹರಾಜಿನಲ್ಲಿ ಭಾಗವಹಿಸಬಹುದು ಎಂದು ಅವರು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoಬೆಂಬಲ ಬೆಲೆ | ಮೆಕ್ಕೆಜೋಳ ಖರೀದಿ ಪ್ರಕ್ರಿಯೆ ಪ್ರಾರಂಭ: ಡಿಸಿ ಗಂಗಾಧರಸ್ವಾಮಿ
-
ದಿನದ ಸುದ್ದಿ7 days agoಯಮ ಸ್ವರೂಪಿ ಗ್ಯಾಸ್ ಗೀಸರ್ ಬಳಸೋ ಮುನ್ನ ಎಚ್ಚರ ; ಇವಿಷ್ಟನ್ನು ಪಾಲಿಸಿ ಅಪಾಯ ತಡೆಗಟ್ಟಿ
-
ದಿನದ ಸುದ್ದಿ5 days agoಪತ್ರಿಕೋದ್ಯಮ ಪದವೀಧರರಿಗೆ ಸಿಹಿ ಸುದ್ದಿ | ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ತರಬೇತಿ ; ಅರ್ಜಿ ಆಹ್ವಾನ
-
ದಿನದ ಸುದ್ದಿ3 days agoಕೋಲ್ಸೇತು ನೀತಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ; ಸಂಪನ್ಮೂಲಗಳ ನ್ಯಾಯಯುತ ಬಳಕೆಗೆ ಒತ್ತು
-
ದಿನದ ಸುದ್ದಿ4 days agoಮಹಿಳೆಯರ ಪುನರ್ ವಸತಿ ಯೋಜನೆ | ಅರ್ಜಿ ಆಹ್ವಾನ ; ಅವಧಿ ವಿಸ್ತರಣೆ
-
ದಿನದ ಸುದ್ದಿ4 days agoಅಂಚೆ ಇಲಾಖೆಯಿಂದ ಸೆಲ್ಪ್ ಬುಕ್ಕಿಂಗ್ ಸೌಲಭ್ಯ
-
ದಿನದ ಸುದ್ದಿ3 days ago2027ರ ಜನಗಣತಿ ನಡೆಸಲು ಬಜೆಟ್ ಅಂಗೀಕಾರ
-
ದಿನದ ಸುದ್ದಿ9 hours agoಡಾ. ಶಾಮನೂರು ಶಿವಶಂಕರಪ್ಪ ನಿಧನ ; ವೀರಶೈವ ವಿಧಿವಿಧಾನದಂತೆ ಕಲ್ಲೇಶ್ವರ ಮಿಲ್ನಲ್ಲಿ ಅಂತ್ಯ ಸಂಸ್ಕಾರ


