ರಾಜಕೀಯ
ನಾನೇನೋ ಲಕ್ಕಿಡಿಪ್ ಸಿಎಂ, ನಿಮ್ಮ ಸಿಎಂ ಕಥೆ ಏನು? : ಬಿಜೆಪಿಗೆ ಪ್ರಶ್ನೆಗಳ ಮೂಲಕವೇ ಬಿಸಿ ಮುಟ್ಟಿಸಿದ ಹೆಚ್.ಡಿ.ಕುಮಾರಸ್ವಾಮಿ
ಸುದ್ದಿದಿನ,ಬೆಂಗಳೂರು: ತಮ್ಮನ್ನು ಲಕ್ಕಿಡಿಪ್ ಎಂದ ಬಿಜೆಪಿಗೆ ತಿರುಗೇಟು ನೀಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ಬಿಜೆಪಿಯ ಕುಟುಂಬ ರಾಜಕಾರಣದ ಜನ್ಮ ಜಾಲಾಡಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಬಿಜೆಪಿಗೆ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.
ನಾನು ಲಕ್ಕಿಡಿಪ್ ಸಿಎಂ, ಏನೀಗ? ಈಗ ಪಟ್ಟದಲ್ಲಿ ಕೂತಿರುವ ನಿಮ್ಮ ಸಿಎಂ ಅವರೇನು ಚುನಾವಣೆಯಲ್ಲಿ ಜನಾದೇಶ ಪಡೆದ ಘೋಷಿತ ಮುಖ್ಯಮಂತ್ರಿಯಾ? ಅವರೂ ಲಕ್ಕಿಡಿಪ್ಪು ಎಂಬುದನ್ನು ಮರೆತರೆ ಹೇಗೆ? ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಸಿಎಂ ಬೊಮ್ಮಾಯಿ ಅವರ ಹೆಸರು ಪ್ರಸ್ತಾಪ ಮಾಡದೆಯೇ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಅಧಿಕಾರದ ನೆರಳೂ ಕಾಣದೆ ಬೆಂಗೆಟ್ಟಿದ್ದ ಬಿಜೆಪಿಗೆ ರಾಜ್ಯದಲ್ಲಿ ಕುರ್ಚಿರುಚಿ ತೋರಿಸಿದ ಅಂದಿನ 20:20 ಸರ್ಕಾರದ ಡಿಸಿಎಂ ಆಗಿದ್ದ ನಿಮ್ಮವರನ್ನೇ ಕೇಳಿ. ನಿಮ್ಮಲ್ಲೆಷ್ಟು ಲಕ್ಕಿಡಿಪ್ʼಗಳಿದ್ದಾರೆ ಎಂಬುದನ್ನು ಅವರೇ ಹೇಳುತ್ತಾರೆ, ಸತ್ಯ ಸಾಕ್ಷಾತ್ಕಾರ ಮಾಡಿಸುತ್ತಾರೆ ಎಂದು ಪರೋಕ್ಷವಾಗಿ ಮಾಜಿ ಸಿಎಂ ಯಡಿಯೂರಪ್ಪ ಅವರ ಹೆಸರೆತ್ತದೆಯೇ ಬಿಜೆಪಿಗೆ ತಿರುಗೇಟು ನೀಡಿದ್ದಾರೆ.
ಲಕ್ಕಿಡಿಪ್ ಸಿಎಂ ಎಂದರೆ ಅಪಮಾನವೇನೂ ಅಲ್ಲ ನನಗೆ. ಆಕಸ್ಮಿಕ ಮುಖ್ಯಮಂತ್ರಿ ಎಂದು ಅನೇಕ ಸಲ ಹೇಳಿದ್ದೇನೆ. ಆದರೆ, ʼಆಪರೇಷನ್ ಕಮಲದ ಸಿಎಂʼ ಎನ್ನುವುದಕ್ಕಿಂತಾ ಕೀಳಾ ಅದು? ಯಾವುದು ಮೇಲು? ಯಾವುದು ಕೀಳು? ಸ್ವಲ್ಪ ಹೇಳಿ? ಎಂದು ಬಿಜೆಪಿಯ ಬಿಜೆಪಿಯ ಅಪರೇಶನ್ ಕಮಲದ ರಾಜಕಾರಣವನ್ನು ಪ್ರಶ್ನೆ ಮಾಡಿದ್ದಾರೆ.
ಇನ್ನು, ಜಗತ್ತಿನ ಅಂಕುಡೊಂಕಿನ ಮಾತು ಹಾಗಿರಲಿ. ಪ್ರಧಾನಿಮಂತ್ರಿ ಸಂಚರಿಸಿದ ರಸ್ತೆಯನ್ನೇ ನೋಡಿದರೆ ಸಾಕು, ಅರಿವಾಗುತ್ತದೆ ನಿಮ್ಮ ಅಂಕೆಷ್ಟು, ಡೊಂಕೆಷ್ಟು!!. ʼಮಿಷನ್ ದಕ್ಷಿಣ್ʼ ಮೂಲ ತಾತ್ಪರ್ಯ ಏನು? ಮೈಸೂರಿನಲ್ಲಿ ಯೋಗಾಸನ, ಹೈದರಾಬಾದ್ʼನಲ್ಲಿ ಮಂಥನ. ಅದರ ಮರ್ಮ ಅರಿಯದವರು ಯಾರೂ ಇಲ್ಲ ಎಂದು ಹೆಚ್ ಡಿಕೆ ಟೀಕಿಸಿದ್ದಾರೆ.
ಕರ್ನಾಟಕದಲ್ಲಿ ನೀವು ಅಧಿಕಾರಕ್ಕೆ ಬಂದಿದ್ದೇ ಜೆಡಿಎಸ್ ಕೃಪೆಯಿಂದ. ಸ್ವಪಕ್ಷವನ್ನೇ ಒಡೆದು ನನ್ನ ಜತೆ ಬರಲು ರೆಡಿ ಇದ್ದ ಆ ನಿಮ್ಮ ನಾಯಕರನ್ನು ನಾನೇ ತಡೆಯದೇ ಇದ್ದಿದ್ದರೆ, ನೀವು ಮತ್ತು ನಿಮ್ಮ ಪಕ್ಷ ಆವತ್ತೇ ನಡುನೀರಿನಲ್ಲಿ ಮುಳುಗಿಹೋಗುತ್ತಿದ್ದಿರಿ. ಅನುಮಾನ ಇದ್ದರೆ ಒಮ್ಮೆ ಅವರನ್ನೇ ಕೇಳಿ. ನನ್ನ ನಡುಕದ ಬಗ್ಗೆ ಆಮೇಲೆ ಮಾತನಾಡಿ ಎಂದು 2006ರ ಸರಕಾರ ರಚನೆಯ ಸಂದರ್ಭವನ್ನು ಬಿಜೆಪಿಗೆ ನೆನಪಿಸಿದ್ದಾರೆ.
ಕುಟುಂಬ ರಾಜಕಾರಣದ ಕೊಂಡಿಗಳ ಬಗ್ಗೆ ಹೇಳಿದ್ದೀರಿ. ಈಗಾಗಲೇ ಪಟ್ಟಿ ಕೊಟ್ಟಿದ್ದೇನೆ. ಮತ್ತೆ ನಿಮ್ಮ ಅವಗಾಹನೆಗೆ, ಇಲ್ಲಿದೆ ನೋಡಿ,
1.ಯಡಿಯೂರಪ್ಪ & ಸನ್ಸ್
2.ರವಿ ಸುಬ್ರಹ್ಮಣ್ಯ-ತೇಜಸ್ವಿಸೂರ್ಯ
3.ಅಶೋಕ್-ರವಿ
4.ವಿ.ಸೋಮಣ್ಣ-ಅರುಣ್ ಸೋಮಣ್ಣ
5.ಅರವಿಂದ ಲಿಂಬಾಳಿ-ರಘು
6.ಎಸ್.ಆರ್.ವಿಶ್ವನಾಥ್-ವಾಣಿ ವಿಶ್ವನಾಥ್
7.ಜಗದೀಶ ಶೆಟ್ಟರ್-ಪ್ರದೀಪ್ ಶೆಟ್ಟರ್
8.ಮುರುಗೇಶ ನಿರಾಣಿ-ಹನುಮಂತ ನಿರಾಣಿ
9.ಜಿ.ಎಸ್.ಬಸವರಾಜು-ಜ್ಯೋತಿ ಗಣೇಶ್
10.ಜಾರಕಿಹೊಳಿ ಕುಟುಂಬ
11.ಕತ್ತಿ ಕುಟುಂಬ
12.ಜೊಲ್ಲೆ ಕುಟುಂಬ
13.ಅಂಗಡಿ ಕುಟುಂಬ
14.ಉದಾಸಿ ಕುಟುಂಬ
15.ಶ್ರೀರಾಮುಲು ಕುಟುಂಬ
16.ರೆಡ್ಡಿ ಬ್ರದರ್ಸ್
ನಿಮ್ಮ ಪರಿವಾರ ಪುರಾಣ ಇನ್ನೂ ಇದೆ. ‘ಬಿಜೆಪಿ ಕುಟುಂಬ ಕೊಂಡಿಗಳ ಆಡಂಬೋಲ’ ಎನ್ನುವುದೂ ಗೊತ್ತಿದೆ ಎಂದು ಕಮಲ ಪಾಳೆಯದಲ್ಲಿರುವ ಕುಟುಂಬ ರಾಜಕಾರಣವನ್ನು ಅವರು ಪಟ್ಟಿ ಮಾಡಿದ್ದಾರೆ.
ರಾಷ್ಟ್ರವ್ಯಾಪಿ ವ್ಯಾಪಿಸಿರುವ ಕಮಲದ ಕುಟುಂಬವ್ಯಾಧಿ ಕೊಂಡಿಗಳನ್ನು ಬಿಚ್ಚಬೇಕೆ?, ನೀವು ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಗೌರಿಶಂಕರದಷ್ಟು ಎತ್ತರ ಕಾಣುವ ʼಬಿಜೆಪಿ ಪರಿವಾರ ಪರ್ವತʼಗಳ ಬಗ್ಗೆ ಹೇಳಬೇಕಾದರೆ ‘ಪರಿವಾರಕೋಟಿ’ಯನ್ನೇ ಬರೆಯಬಹುದು ಎಂದು ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ.
Yes. I am Lucky dip CM, what now? Did your CM get the people's mandate in the election? How can you forget that your CM is lucky too? 1/9
— H D Kumaraswamy (@hd_kumaraswamy) July 6, 2022
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಚನ್ನಗಿರಿ | ಕೆ ಹೊಸಳ್ಳಿ ಗ್ರಾಮದ ಶಾಲೆ ಎದುರೇ ಕೆರೆ ; ಸಾವಿನ ಸನಿಹ ಮಕ್ಕಳ ಕಲಿಕೆ : ಕಾಂಪೌಂಡ್ ನಿರ್ಮಿಸಲು ಗ್ರಾಮಸ್ಥರ ಮನವಿಗೆ ಕಿವಿಗೊಡದ ಅಧಿಕಾರಿಗಳು
ಸುದ್ದಿದಿನ,ಚನ್ನಗಿರಿ:ತಾಲೂಕಿನ ಕೆ ಹೊಸಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ತಡೆಗೋಡೆ (ಕಾಂಪೌಂಡ್) ಕಾಣದೇ ಇಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಪ್ರತಿ ದಿನವೂ ಅಪಾಯದ ನಡುವೆಯೇ ತಮ್ಮ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಆಟ-ಪಾಠ ಕಾಣುವಂತಾಗಿದೆ ಎಂಬ ಆರೋಪದ ಜೊತೆಗೆ ಕಾಳಜಿಯ ಒತ್ತಾಯ ಕೇಳಿ ಬರುತ್ತಿದೆ.
ಶಾಲೆಯ ಎದುರೇ ಕೆರೆ ಮತ್ತು ಗ್ರಾಮದ ಸಂಪರ್ಕಿಸುವ ರಸ್ತೆ ಜೊತೆಗೆ ವಿದ್ಯುತ್ ಸಂಪರ್ಕವುಳ್ಳ ಟ್ರ್ಯಾನ್ಫರ್ಮರ್ ಹಾಗೂ ಬೋರ್ವೆಲ್ ಇದೆ. ಅಲ್ಲದೇ ತೆರೆದ ಒಳಚರಂಡಿ ಸಹ ಇದೆ. ಹೀಗೆ ಅಪಾಯಕ್ಕೆ ಕಾದು ಕುಳಿತು ಜೀವ ಬಲಿ ಪಡೆಯುವಂತಹ ಪರಿಸ್ಥಿತಿ ಇದ್ದು, ಶಾಲೆಗೆ ತಡೆಗೋಡೆ ಇಲ್ಲದೇ ಮಕ್ಕಳ ಜೀವಕ್ಕೆ ರಕ್ಷಣೆ ಇಲ್ಲದಂತಾಗಿ 20 ರಿಂದ 30 ವಿದ್ಯಾರ್ಥಿಗಳ ಜೀವದ ಪ್ರಶ್ನೆಯಾಗಿ ಉಳಿದಿದೆ.
ಹೀಗೆ ವಿದ್ಯಾರ್ಥಿಗಳು ಆಟದ ವೇಳೆಯಲ್ಲಾಗಲೀ ಅಥವಾ ಶಾಲೆಗೆ ಬರುವಾಗ, ಮನೆಗೆ ಹೋಗುವಾಗ ಈ ಯಾವುದಾದರೂ ಅಪಾಯಕ್ಕೆ ಸಿಲುಕಿದರೆ ಅಮೂಲ್ಯ ಜೀವ ಬಲಿಯಾಗಲಿದೆ. ಅಕ್ಷರ ಜ್ಞಾನ ಪಡೆಯಲು ಬರುವ ವಿದ್ಯಾರ್ಥಿಗಳಿಗೆ ಶಾಲೆಯೇ ಭವಿಷ್ಯ ಕಟ್ಟಿಕೊಡುವ ಬದಲು ಜೀವ ಬಲಿಪಡೆಯುವ ವಾತಾವರಣ ನಿರ್ಮಾಣವಾಗಿದ್ದು, ಇದಕ್ಕೆ ಹೊಸದಾಗಿ ನಿರ್ಮಾಣವಾಗಬೇಕಿರುವ ಶಾಲಾ ಕಾಂಪೌಂಡ್ 4 ವರ್ಷಗಳೇ ಕಳೆದರೂ ನಿರ್ಮಾಣ ಕಾಣದಂತಾಗಿದೆ ಎಂಬುದು ಈ ಶಾಲೆಯ ಕೆಲ ಹಳೇ ವಿದ್ಯಾರ್ಥಿಗಳ ಮುತುವರ್ಜಿಯಾಗಿದೆ.
ಈ ಶಾಲೆಗೆ ಹಿಂದೆ ಶಾಲಾ ಕಾಂಪೌಂಡ್ ದುರಸ್ತಿಯಲ್ಲಿದ್ದ ಕಾರಣ ಹೊಸ ಕಾಂಪೌಂಡ್ ನಿರ್ಮಾಣಕ್ಕಾಗಿ 2021-22ರ ವರ್ಷದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಅಧಿನಿಯಮ -2005 ರ ಮಹಾತ್ಮ ಗಾಂಧಿ ನರೇಗಾ ಕಾಮಗಾರಿಯಡಿ 4 ಲಕ್ಷ ರೂ. ಮಂಜೂರು ಆಗಿತ್ತು. ಸುಮಾರು ನಾಲ್ಕು ವರ್ಷಗಳೇ ಕಳೆದರೂ ಇನ್ನೂ ಈ ಶಾಲೆಗೆ ಕಾಂಪೌಂಡ್ ಮರೀಚಿಕೆಯಾಗಿದೆ ಎನ್ನುತ್ತಾರೆ ಹಳೇ ವಿದ್ಯಾರ್ಥಿ ಮಂಜುನಾಥ್ ಆರ್.
“ರಸ್ತೆಯ ಸಂಪರ್ಕಕ್ಕೆ ಹತ್ತಿರವಾಗಿದ್ದು, ಮಕ್ಕಳಿಗೆ ಅಪಘಾತ ಆಗುವ ಸಂದರ್ಭ ಇದೆ ಮತ್ತು ಶಾಲೆಯ ಮುಂಭಾಗದಲ್ಲಿ ಗ್ರಾಮದ ಕೆರೆ ಇದ್ದು ಕೆರೆವು ಸಂಪೂರ್ಣವಾಗಿ ನೀರಿನಿಂದ ತುಂಬಿದೆ ಇದರಿಂದ ಮಕ್ಕಳ ಜೀವಕ್ಕೆ ತೊಂದರೆ ಆಗುವ ಸಂಭವ ಸಹ ಇದೆ. ಈ ಎಲ್ಲ ತೊಂದರೆಗಳಿಗೂ ಗ್ರಾಮ ಪಂಚಾಯಿತಿಯ ಅಧ್ಯಕ್ಷರು, ಸದಸ್ಯರು ಮತ್ತು ಗ್ರಾಮ ಲೆಕ್ಕಾಧಿಕಾರಿಗಳು ನಿರ್ಲಕ್ಷತನ ಎಂದು ಹೇಳಬಹುದು. ಶಾಸಕರು ಸಹ ಇದರ ಬಗ್ಗೆ ಹೆಚ್ಚಿನ ಗಮನವಹಿಸಬೇಕಾಗಿದೆ.”
|ಹಳೇ ವಿದ್ಯಾರ್ಥಿ ಮಂಜುನಾಥ್
“ಶಾಲೆಯ ಕಾಂಪೌಂಡ್ ನಿರ್ಮಾಣ ವಿಚಾರವಾಗಿ ನಾನೂ ಸಹ ಪಿಡಿಓಗೆ ಸಾಕಷ್ಟು ಮನವಿ ಸಾಕಾಗಿದೆ. ಯಾವುದೇ ಸರಿಯಾದ ಸ್ಪಂದನೆ ಇಲ್ಲ. ಕಾಂಪೌಂಡ್ ನಿರ್ಮಾಣ ವಿಚಾರದಲ್ಲಿ ಹಿಂದೆ ಅಡೆ-ತಡೆಯೂ ಉಂಟಾಯಿತು. ಹೀಗಾಗಿ ನರೇಗಾ ಯೋಜನೆಯ ಕಾರ್ಮಿಕರು ನಿರ್ಮಾಣಕ್ಕೆ ಮುಂದಾಗದಂತಾಯಿತು. ಶಾಲೆಗೆ ಕಾಂಪೌಂಡ್ ಇಲ್ಲದೇ ಅಪಾಯದ ವಾತಾವರಣವಿರುವ ಕಾರಣ ಯಾವುದೇ ಪಠ್ಯೇತರ ಚಟುವಟಿಕೆಗಳು ನಡೆಸಲು ಆಗುತ್ತಿಲ್ಲ. ಮಕ್ಕಳ ಜೀವವನ್ನು ನಾನು ಕಾವಲುಗಾರನಾಗಿ ಕಾಯುತ್ತಿದ್ದೇನೆ. ಶಾಲೆಗೆ ಕಾಂಪೌಂಡ್ ಇಲ್ಲದೇ ತೆರೆದ ಪ್ರದೇಶವಾಗಿರುವ ಕಾರಣ ಮದ್ಯ ವ್ಯಸನಿಗಳ ತಾಣವಾಗಿದ್ದು, ದಿನವೂ ಮದ್ಯದ ಬಾಟಲ್, ಪೌಚ್ಗಳ ಸ್ವಚ್ಚಗೊಳಿಸಿ ಶಾಲೆಯೊಳಗೆ ಕರ್ತವ್ಯಕ್ಕೆ ತೆರಳುವಂತಾಗಿದೆ.”
| ಜಯರಾಜ್, ಮುಖ್ಯೋಪಾದ್ಯಾಯರು
“ಇನ್ನೆರಡು ದಿನಗಳಲ್ಲಿ ನಿರ್ಮಾಣ ಕಾರ್ಯ ಪ್ರಗತಿಗೆ
ನರೇಗಾ ಯೋಜನೆಯಡಿಯ ಈ ಕಾಮಗಾರಿ ಕೈಗೊಳ್ಳಲು ಉದ್ಯೋಗ ಖಾತ್ರಿ ಕಾರ್ಡ್ವುಳ್ಳ ಕಾರ್ಮಿಕರು ಮುಂದಾಗುತ್ತಿಲ್ಲ. ಕಾಂಪೌಂಡ್ ನಿರ್ಮಾಣದಲ್ಲಿ ತಡವಾಗುತ್ತಿರುವುದಾಗಲೀ, ಅಡೆ-ತಡೆ ಬಗ್ಗೆಯಾಗಲೀ ನನಗೆ ಯಾವುದೇ ಮಾಹಿತಿ ಇಲ್ಲ. ಇದೀಗ ಶಾಲೆಯ ಹಳೇ ವಿದ್ಯಾರ್ಥಿಗಳು ಸಹಕಾರ ನೀಡಲು ಮುಂದಾಗಿದ್ದು, ಇನ್ನೆರಡು ದಿನಗಳಲ್ಲಿ ನಿರ್ಮಾಣ ಕಾರ್ಯ ಪ್ರಗತಿಗೆ ಬರಲಿದೆ”
| ರಶ್ಮಿ, ಪ್ರಭಾರ ಪಿಡಿಓ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕರ್ತವ್ಯ ಲೋಪ | ಆಯುಕ್ತೆ ಮಂಜುಶ್ರೀ, ಜಂಟಿ ನಿರ್ದೇಶಕಿ ಕೆ.ಆರ್.ಕವಿತಾ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ:ದಿ ಅಕಾಡೆಮಿ ಆಫ್ ಜನರಲ್ ಎಜುಕೇಶನ್, ಮಣಿಪಾಲ ಇಲ್ಲಿ ನಡೆದಿರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಯ ನೇಮಕಾತಿ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ತಡೆಹಿಡಿಯುವಂತೆ ತಕರಾರು ಅರ್ಜಿ ಸಲ್ಲಿಸಿ 5 ತಿಂಗಳಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತೆ ಮಂಜುಶ್ರೀ ಎನ್ ಹಾಗೂ ಮಂಗಳೂರು ಪ್ರಾದೇಶಿಕ ಕಛೇರಿಯ ಜಂಟಿ ನಿರ್ದೇಶಕಿ ಕೆ.ಆರ್.ಕವಿತಾ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಡಾ.ಕೆ.ಎ.ಓಬಳಪ್ಪ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.
ಡಾ.ಕೆ.ಎ.ಓಬಳಪ್ಪ ಇವರು ದಿ ಅಕಾಡೆಮಿ ಆಫ್ ಜನರಲ್ ಎಜುಕೇಶನ್, ಮಣಿಪಾಲ ಇಲ್ಲಿ ಅಧಿಸೂಚನೆ ಹೊರಡಿಸಿರುವ ಕನ್ನಡ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಅರ್ಜಿ ಸಲ್ಲಿಸಿದ್ದು, ಸಂದರ್ಶನಕ್ಕೂ ಹಾಜರಾಗಿರುತ್ತಾರೆ. ಆದರೆ ಅಂತಿಮವಾಗಿ ಆಯ್ಕೆಯಾದ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು ಪಾರದರ್ಶಕವಾಗಿ ಪ್ರಕಟಿಸದೆ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರೆಸಿರುತ್ತಾರೆ.
ಮಾಹಿತಿಹಕ್ಕು ಅಡಿಯಲ್ಲಿ ಅಂತಿಮವಾಗಿ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ದೃಢೀಕರಿಸಿ ನೀಡುವಂತೆ ಕೋರಿದಾಗಲೂ ಮಾಹಿತಿ ನೀಡದೆ ನಿರಾಕರಿಸಿರುತ್ತಾರೆ. ಯು.ಜಿ.ಸಿ ನಿಯಮಾವಳಿ ಪ್ರಕಾರ 1:5 ಅನುಪಾತದಲ್ಲಿ ಸಂದರ್ಶನಕ್ಕೆ ಆಹ್ವಾನಿಸದೆ ವಿಷಯವಾರು ಮತ್ತು ಮೀಸಲಾತಿವಾರು 1:10, 1:15 ಅನುಪಾತದವರೆಗೂ ಮನಸ್ಸಿಚ್ಚೆಯಂತೆ ಸಂದರ್ಶನಕ್ಕೆ ಆಹ್ವಾನ ನೀಡಿ, ಕಾನೂನುಬಾಹಿರವಾಗಿ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರೆಸಿರುತ್ತಾರೆ.
ಹೀಗಾಗಿ ಅಂತಿಮ ಆಯ್ಕೆ ಪಟ್ಟಿಯನ್ನು ಪಾರದರ್ಶಕವಾಗಿ ಪ್ರಕಟಿಸುವರೆಗೂ ಈ ನೇಮಕಾತಿ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ತಡೆಹಿಡಿಯುವಂತೆ ಕಾಲೇಜು ಶಿಕ್ಷಣ ಆಯುಕ್ತರು ಹಾಗೂ ಪ್ರಾದೇಶಿಕ ಜಂಟಿ ನಿರ್ದೇಶಕರುಗಳಿಗೆ ತಕರಾರು ಅರ್ಜಿ ಸಲ್ಲಿಸಿದ್ದರು. ಆದರೆ ತಕರಾರು ಅರ್ಜಿ ಸಲ್ಲಿಸಿ 5 ತಿಂಗಳು ಕಳೆದರೂ ಯಾವುದೇ ಸ್ಪಷ್ಟನೆ ನೀಡದೆ ನಿಯಮಬಾಹಿರವಾಗಿ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರೆಸಲಾಗಿರುತ್ತದೆ. ಆದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನರೇಗಾ ಕಾರ್ಮಿಕ ಕೆಲಸದ ಸ್ಥಳದಲ್ಲಿ ನಿಧನ : ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭೇಟಿ
ಸುದ್ದಿದಿನ,ದಾವಣಗೆರೆ:ನವೆಂಬರ್ 10 ರ ಬೆಳಿಗ್ಗೆ 10 ಗಂಟೆ ಸುಮಾರಿಗೆ, ಹೊನ್ನಾಳಿ ತಾಲ್ಲೂಕು ಹಿರೇಗೋಣಿಗೆರೆ ಗ್ರಾಮದ ಅರಣ್ಯ ಪ್ರದೇಶದಲ್ಲಿ ಇರುವ ಸರ್ವೆ ನಂ 67ರಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿಯಲ್ಲಿ ಕಂದಕ ನಿರ್ಮಾಣ ಕೆಲಸದ ಕೂಲಿ ಕೆಲಸದಲ್ಲಿ ನಿರತರಾಗಿದ್ದ ಜಿಕ್ರಿಯಾ ಸಬಾದ್ ಬಿನ್ ನಿಯಾಸಾಬ್ ಸುಮಾರು ವಯಸ್ಸು 61, ಜಾಬ್ ಕಾರ್ಡ್ ಸಂಖ್ಯೆ ಕೆಎನ್ -12-005-037-004/396, ಹಠಾತ್ತನೆ ಕುಸಿದು ಬಿದ್ದು ಸ್ಥಳದಲ್ಲೇ ನಿಧನರಾಗಿರುವರು.
ಘಟನಾ ಸ್ಥಳಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್ ಅವರು ಭೇಟಿ ನೀಡಿ ಕಾರ್ಮಿಕರೊಂದಿಗೆ ಸಂವಾದ ನಡೆಸಿದರು. ಕಾಮಗಾರಿ ಸ್ಥಳಗಳಲ್ಲಿ ನಿಯಮಿತ ಆರೋಗ್ಯ ತಪಾಸಣೆ ಮತ್ತು ಸುರಕ್ಷತೆಯ ಮಹತ್ವವನ್ನು ಒತ್ತಿ ಹೇಳಿದರು. ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಮತ್ತು ಅವರಿಗೆ ಎಲ್ಲಾ ಸರ್ಕಾರಿ ಸವಲತ್ತುಗಳು ಮತ್ತು ಸಹಾಯವನ್ನು ಆದಷ್ಟು ಬೇಗ ನೀಡಲಾಗುವುದು ಎಂದು ಭರವಸೆ ನೀಡಿದರು.
ಈ ವೇಳೆ ಹೊನ್ನಾಳಿ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ, ಹೊನ್ನಾಳಿ ವಲಯ ಅರಣ್ಯ ಅಧಿಕಾರಿ ಮತ್ತು ಹಿರೇಗೋಣಿಗೆರೆ ಗ್ರಾಮ ಪಂಚಾಯತ್ ಪಿಡಿಓ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoಕರ್ತವ್ಯ ಲೋಪ | ಆಯುಕ್ತೆ ಮಂಜುಶ್ರೀ, ಜಂಟಿ ನಿರ್ದೇಶಕಿ ಕೆ.ಆರ್.ಕವಿತಾ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ6 days agoಕರ್ತವ್ಯ ಲೋಪ ; ಪಿ.ಮಣಿವಣ್ಣನ್, ಕ್ರೈಸ್ ಇ.ಡಿ ಕಾಂತರಾಜು ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoಸಚಿವ ಪ್ರಿಯಾಂಕ ಖರ್ಗೆ ಪಂಚಾಯತ್ ರಾಜ್ ಇಲಾಖೆ ನಿರ್ಲಕ್ಷ್ಯ | ದೂರು ನೀಡಿ 6 ತಿಂಗಳಾದರೂ ಯಾವುದೇ ಕ್ರಮವಿಲ್ಲ ; ವಕೀಲ ಡಾ.ಕೆ.ಎ.ಓಬಳಪ್ಪ ಆರೋಪ
-
ದಿನದ ಸುದ್ದಿ5 days agoಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ | 8 ಕುಲಸಚಿವರು, 10 ಹಣಕಾಸು ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು
-
ದಿನದ ಸುದ್ದಿ5 days agoಹೊಳಲ್ಕೆರೆ | ಕೆ.ಟಿ.ಪಿ.ಪಿ ನಿಯಮ ಉಲ್ಲಂಘನೆ ; ನಕಲಿ ಜಿ.ಎಸ್.ಟಿ ಬಿಲ್ಲುಗಳ ಮೂಲಕ ಖರೀದಿ ವ್ಯವಹಾರ ಪ್ರಾಂಶುಪಾಲ ಡಾ ಎಸ್.ಪಿ ರವಿ ವಿರುದ್ಧ ಲೋಕಾಯುಕ್ತಕ್ಕೆ ವಕೀಲ ಡಾ.ಓಬಳೇಶ್ ದೂರು
-
ದಿನದ ಸುದ್ದಿ2 days agoಕರ್ತವ್ಯ ಲೋಪ | ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ ಕೆ ವಿರುದ್ಧ ಲೋಕಾಯುಕ್ತಕ್ಕೆ ದೂರು
-
ದಿನದ ಸುದ್ದಿ4 days agoನರೇಗಾ ಕಾರ್ಮಿಕ ಕೆಲಸದ ಸ್ಥಳದಲ್ಲಿ ನಿಧನ : ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭೇಟಿ
-
ದಿನದ ಸುದ್ದಿ4 days agoಇದೇ 15 ರಂದು ನರೇಗಾ ಕೂಲಿಕಾರರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ

