ದಿನದ ಸುದ್ದಿ
ಯೋಗ ದೇಹ ಮತ್ತು ಮನಸ್ಸುಗಳ ಸಮ್ಮಿಲನ : ಪ್ರಾಂಶುಪಾಲ ಡಾ.ಅಮೃತೇಶ್ವರ ಬಿ.ಜಿ
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2024/06/yoga_day_channagiri_suddidina_college.jpg&description=ಯೋಗ ದೇಹ ಮತ್ತು ಮನಸ್ಸುಗಳ ಸಮ್ಮಿಲನ : ಪ್ರಾಂಶುಪಾಲ ಡಾ.ಅಮೃತೇಶ್ವರ ಬಿ.ಜಿ', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2024/06/yoga_day_channagiri_suddidina_college.jpg&description=ಯೋಗ ದೇಹ ಮತ್ತು ಮನಸ್ಸುಗಳ ಸಮ್ಮಿಲನ : ಪ್ರಾಂಶುಪಾಲ ಡಾ.ಅಮೃತೇಶ್ವರ ಬಿ.ಜಿ', 'pinterestShare', 'width=750,height=350'); return false;" title="Pin This Post">
ಸುದ್ದಿದಿನ,ಚನ್ನಗಿರಿ:ಯೋಗದ ಉಗಮ ಸ್ಥಾನ ಭಾರತ. ಇದು ದೇಹ ಮನಸ್ಸು ಮತ್ತು ಆತ್ಮಗಳ ಸಮ್ಮಿಲನವನ್ನು ಹಾಗೂ ಅನುಸಂಧಾನವನ್ನು ಮಾಡುತ್ತದೆ ಎಂದು ಪ್ರಾಂಶುಪಾಲ ಡಾ.ಅಮೃತೇಶ್ವರ ಬಿ.ಜಿ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
ತಾಲೂಕಿ ಶ್ರೀ ಶ್ರೀ ಶಿವಲಿಂಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಐಕ್ಯೂಎಸಿ ಮತ್ತು ಎನ್ ಎಸ್ ಎಸ್ ವತಿಯಿಂದ ಇಂದು ಅಂತರರಾಷ್ಟ್ರೀಯ ಯೋಗದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇಂದು ಅಂತರಾಷ್ಟ್ರೀಯ ಯೋಗ ದಿನ ಸರಿಸುಮಾರು ಹತ್ತು ವರ್ಷದಿಂದ ನಿರಂತರವಾಗಿ ಯೋಗ ದಿನಾಚರಣೆಯನ್ನು ಅಧಿಕೃತವಾಗಿ ಆಚರಿಸಿಕೊಂಡು ಬಂದಿದ್ದೇವೆ ,ಸರಿ ಸುಮಾರು ಐದು ಸಾವಿರ ವರ್ಷಗಳ ಇತಿಹಾಸವನ್ನು ಹೊಂದಿರುವ ಆಯುಷ್ ಯೋಗ ದಿನಾಚರಣೆ ವಿಶ್ವದ 142 ದೇಶಗಳು ಇಂದು ಆರೋಗ್ಯ ಸ್ವಾಸ್ಥಕ್ಕಾಗಿ ಯೋಗವನ್ನು ಆಚರಿಸುತ್ತಿವೆ ಎಂದರು.
ಯೋಗದಿಂದ ಮನುಕುಲಕ್ಕೆ ಹಲವಾರು ಪ್ರಯೋಜನಗಳಿವೆ ಭಾರತೀಯ ಋಷಿಮುನಿಗಳು ಸಂತರು ಯೋಗದ ಮಹತ್ವ ಹಾಗೂ ಪ್ರಯೋಜನಗಳನ್ನು ತಿಳಿಸಿದ್ದಾರೆ. ಇದನ್ನು ಇಡೀ ಜಗತ್ತಿಗೆ ಪರಿಚಯಿಸುವ ಜವಾಬ್ದಾರಿ ಭಾರತೀಯರದಾಗಿದೆ. ಬದಲಾದ ಜೀವನ ಶೈಲಿ ಒತ್ತಡದ ಹಾಗೂ ಧಾವಂತದ ಬದುಕು ದೈನಂದಿನ ಸಮಸ್ಯೆಗಳಿಂದ ಬಳಲುತ್ತಿರುವ ಇಂದಿನ ಬದುಕಿಗೆ ಯೋಗ ಪರಿಹಾರವನ್ನು ನೀಡುತ್ತದೆ ಯೋಗದಿಂದ ರೋಗ ಮುಕ್ತ ಎನ್ನುವ ಹೇಳಿಕೆ ಅರ್ಥಪೂರ್ಣವಾದದ್ದು ಹಲವು ಮಾರಣಾಂತಿಕ ರೋಗಗಳಿಗೆ ಹಾಗೂ ಸಮಸ್ಯೆಗಳಿಗೆ ಯೋಗ ರಾಮಬಾಣವಾಗಿದೆ ಸಕಾರಣವಾಗಿ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುವ ತುರ್ತು ಹಿಂದಿನ ಅವಶ್ಯಕತೆಯಾಗಿದೆ ಎಂದು ಹೇಳಿದರು.
ಪ್ರಸ್ತುತ ಯೋಗೂತ್ಸವ ಕಾರ್ಯಕ್ರಮ ದ ಉದ್ದೇಶ ಮತ್ತು ಆಶಯಗಳು ನಾವುಗಳು ತಿಳಿಯಬೇಕಿದೆ ಈ ವರ್ಷದ ಘೋಷ ವಾಕ್ಯ ಏನೆಂದರೆ ಮಹಿಳಾ ಸಬಲೀಕರಣಕ್ಕಾಗಿ ಯೋಗ ಈ ಉದ್ದೇಶಿತ ಘೋಷ ವಾಕ್ಯದೊಂದಿಗೆ ಮಹಿಳಾ ಸಬಲೀಕರಣ ಮತ್ತು ಅದರ ಅವಶ್ಯಕತೆ ಕುರಿತಂತೆ ಚಚ್ಚಿಸುವ ಅನಿವಾರ್ಯತೆ ಇಂದಿನ ದಾಗಿದೆ ಎಂದರು.
ಮಹಿಳೆಯರು ಅದರಲ್ಲೂ ವಿಶೇಷವಾಗಿ ಗೃಹಿಣಿಯರು ದಿನದ 24 ಗಂಟೆಗಳಲ್ಲಿ 16 ಗಂಟೆಗಳು ಒತ್ತಡದ ಜೀವನದಲ್ಲಿ ಕೌಟುಂಬಿಕ ಗೃಹ ಕೃತ್ಯಗಳನ್ನು ನಡೆಸಿ ವೈಯಕ್ತಿಕ ಹಿತಾಸಕ್ತಿಗಳನ್ನು ಬದಿ ಗಿಟ್ಟು ಕುಟುಂಬದ ಏಳಿಗೆಗಾಗಿ ಶ್ರಮಿಸುತ್ತಿದ್ದಾರೆ ಅವರಿಗೆ ಈ ಯೋಗದ ಅವಶ್ಯಕತೆ ಇದೆ ಅವರು ಕೂಡ ಸಮಾಜವನ್ನು ಸದೃಢಗೊಳಿಸಲು ಸ್ವಾವಲಂಬನೆಯ ಬದುಕನ್ನ ಕಟ್ಟಿ ಕೊಡುವ ನಿಟ್ಟಿನಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ.
ತಮ್ಮ ವೈಯಕ್ತಿಕ ಸಮಸ್ಯೆಗಳಾದ ಪಿಸಿಓಡಿ ರಕ್ತ ಹೀನತೆ ಬಂಜೆತನ ಬೊಜ್ಜು ಒಬೆಸಿಟಿ ಮುಂತಾದ ಕಾಯಿಲೆಗಳಿಂದ ಬಳಲುತ್ತಿದ್ದರು ಕೌಟುಂಬಿಕ ಹಿತಕ್ಕಾಗಿ ನಿರಂತರ ಶ್ರಮ ವನ್ನು ಹಾಕುವುದರ ಮೂಲಕ ಕುಟುಂಬದ ಹಾಗೂ ಸಮಾಜದ ಹಿತಕ್ಕಾಗಿ ಮುಡಿಪಾಗಿದ್ದಾರೆ ಇಂತಹ ಸಂದರ್ಭದಲ್ಲಿ ಅವರು ಕೂಡ ದಿನದ 24 ಗಂಟೆಗಳಲ್ಲಿ ಕನಿಷ್ಠ ಒಂದು ಗಂಟೆಯಾದರೂ ಯೋಗವನ್ನು ಮಾಡುವುದರ ಮೂಲಕ ಅವರು ಆರೋಗ್ಯವಂತರಾಗಿ ಸಮಾಜವನ್ನು ಆರೋಗ್ಯಯುತವಾಗಿ ಮಾಡುವ ಸಂಕಲ್ಪವನ್ನು ಮಾಡಬೇಕಿದೆ ಎಂದು ಸೂಚಿಸಿದರು.
ಈ ಸಂದರ್ಭದಲ್ಲಿ ಐಕ್ಯೂಎಸಿಯ ಸಂಯೋಜಕರಾದ ಪ್ರೊ.ವಿಜಯ್ ಕುಮಾರ್, ದೈಹಿಕ ಶಿಕ್ಷಣ ನಿರ್ದೇಶಕರಾದ ಕಲ್ಲೇಶಪ್ಪ, ಡಾ.ಪಾರ್ವತಿ, ಪ್ರೊ.ಶಕುಂತಲಾ, ಪ್ರೊ.ದಾಕ್ಷಾಯಿಣಿ ಡೋಗ್ರೆ, ಪ್ರೊ. ಸುಪ್ರಿಯಾ ಬುಟ್ಟೆ ಹಾಗೂ ವಿದ್ಯಾರ್ಥಿಗಳು ಮತ್ತು ಕಾಲೇಜಿನ ಬೋಧಕ – ಬೋಧಕೇತರ ವರ್ಗದವರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯು ಒಟ್ಟಾರೆ ಶೇಕಡ 81.99 ರಷ್ಟು ಸಾಧನೆ ಮಾಡಿದ್ದು, ರಾಜ್ಯದಲ್ಲಿ 25 ನೇ ಸ್ಥಾನ ಪಡೆದಿದೆ. ಈ ಬಾರಿಯೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಅತಿ ಹೆಚ್ಚು ಶೇಕಡ 90.91 ರಷ್ಟು ಫಲಿತಾಂಶ ಪಡೆದು ಮೇಲುಗೈ ಸಾಧಿಸಿದ್ದಾರೆ.
ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 20,810 ವಿದ್ಯಾರ್ಥಿಗಳ ಪೈಕಿ 16,046 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಶೇಕಡ 77.11 ರಷ್ಟು ಹಾಗೂ ಹೊಸದಾಗಿ ಪರೀಕ್ಷೆ ಬರೆದ (Freshers) 18,949 ವಿದ್ಯಾರ್ಥಿಗಳಲ್ಲಿ 15,540 ಮಂದಿ ಉತ್ತೀರ್ಣರಾಗಿದ್ದಾರೆ ಶೇಕಡ 82.01 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ವಿಭಾಗವಾರು ಫಲಿತಾಂಶದ ವಿಶ್ಲೇಷಣೆ
ವಿಜ್ಞಾನ ವಿಭಾಗ (Science): ಜಿಲ್ಲೆಯಲ್ಲಿ ಅತಿ ಹೆಚ್ಚು ಸಾಧನೆ ಈ ವಿಭಾಗದಲ್ಲಿ ದಾಖಲಾಗಿದೆ. ಒಟ್ಟು 12,536 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,936 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 87.24). ಹೊಸ ವಿದ್ಯಾರ್ಥಿಗಳ ಪೈಕಿ 11,770 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,736 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 90.91 ರಷ್ಟು ಅದ್ಭುತ ಫಲಿತಾಂಶ ಬಂದಿದೆ.
ವಾಣಿಜ್ಯ ವಿಭಾಗ (Commerce)
ಈ ವಿಭಾಗದಲ್ಲಿ ಹಾಜರಾದ 4,295 ವಿದ್ಯಾರ್ಥಿಗಳಲ್ಲಿ 3,075 ಮಂದಿ ಉತ್ತೀರ್ಣರಾಗಿದ್ದಾರೆ (ಶೇ. 71.59). ಹೊಸ ವಿದ್ಯಾರ್ಥಿಗಳ ಪೈಕಿ 3858 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 2960 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 76.72 ರಷ್ಟು ಫಲಿತಾಂಶ ಬಂದಿದೆ.
ಕಲಾ ವಿಭಾಗ (Arts): ಕಲಾ ವಿಭಾಗದಲ್ಲಿ ಒಟ್ಟು 3,979 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 2,035 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 51.14). ಹೊಸ ವಿದ್ಯಾರ್ಥಿಗಳ ಪೈಕಿ 3321 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 1880 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 56.61 ರಷ್ಟು ಫಲಿತಾಂಶ ಬಂದಿದೆ.
ಜಿಲ್ಲೆಯ ಒಟ್ಟಾರೆ ಫಲಿತಾಂಶದಲ್ಲಿ ವಿಜ್ಞಾನ ವಿಭಾಗವು ಪ್ರಥಮ ಸ್ಥಾನದಲ್ಲಿದ್ದರೆ, ವಾಣಿಜ್ಯ ಮತ್ತು ಕಲಾ ವಿಭಾಗಗಳು ನಂತರದ ಸ್ಥಾನ ಪಡೆದಿವೆ ಎಂದು ಉಪ ನಿರ್ದೇಶಕ ಪಳಿನಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ
ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಇಂದು ನಡೆದ ಉಪ ಚುನಾವಣೆಯು ಅತ್ಯಂತ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಒಟ್ಟಾರೆ ಶೇ. 68.55ರಷ್ಟು ಮತದಾನ ದಾಖಲಾಗಿದೆ.
ಬೆಳಿಗ್ಗೆಯಿಂದಲೇ ಮತಗಟ್ಟೆಗಳ ಮುಂದೆ ಮತದಾರರು ಉತ್ಸಾಹದಿಂದ ಸರದಿಯಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು. ಚುನಾವಣಾ ಆಯೋಗದ ಕಟ್ಟುನಿಟ್ಟಿನ ಕ್ರಮಗಳು ಹಾಗೂ ಪೊಲೀಸ್ ಬಂದೋಬಸ್ತ್ನಿಂದಾಗಿ ಯಾವುದೇ ಅಹಿತಕರ ಘಟನೆಗಳಿಲ್ಲದೆ ಮತದಾನ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು.
ಯುವಕರು ಹಾಗೂ ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮತದಾನ ಮಾಡಿದ್ದು ಕಂಡುಬಂದಿತು. ಚುನಾವಣಾ ಸಿಬ್ಬಂದಿ ಹಾಗೂ ಭದ್ರತಾ ಪಡೆಯ ಸಹಕಾರದೊಂದಿಗೆ ಮತದಾನ ಪ್ರಕ್ರಿಯೆಯು ಸುಗಮವಾಗಿ ಜರುಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ
ಸುದ್ದಿದಿನಡೆಸ್ಕ್:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಹದಡಿ ಗ್ರಾಮದ ಮತಗಟ್ಟೆಯಲ್ಲಿ ತೃತೀಯ ಲಿಂಗತ್ವ ಮತದಾರರು ಮತಗಟ್ಟೆಗೆ ಆಗಮಿಸಿ ಸಂತೋಷದಿಂದ ಮತ ಚಲಾಯಿಸಿದರು.
ಸಮಾಜದ ಪ್ರತಿಯೊಬ್ಬರಿಗೂ ಸಮಾನ ಹಕ್ಕು ಎಂಬ ಸಂದೇಶವನ್ನು ಸಾರಿದ ಕ್ಷಣ! ತಮ್ಮ ಅಮೂಲ್ಯ ಮತದಾನದ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಿದ ತೃತೀಯ ಲಿಂಗತ್ವ ಮತದಾರರಿಗೆ ಅಭಿನಂದನೆಗಳು ಎಂದು ಜಿಲ್ಲಾ ಪಂಚಾಯತ್ ಸಿಇಓ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ7 days agoಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ
-
ಅಂತರಂಗ4 days agoಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ
-
ದಿನದ ಸುದ್ದಿ7 days agoಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ: ಡಾ. ಪ್ರಭಾ ಮಲ್ಲಿಕಾರ್ಜುನ
-
ದಿನದ ಸುದ್ದಿ2 days agoಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ
-
ದಿನದ ಸುದ್ದಿ4 days agoಸುಸೂತ್ರ ಮತದಾನಕ್ಕೆ ಜಿಲ್ಲಾಡಳಿತದ ಸಕಲ ಸಿದ್ಧತೆ
-
ದಿನದ ಸುದ್ದಿ3 days agoಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ3 days agoಪರಿಶಿಷ್ಟ ಪಂಗಡದ ಮಕ್ಕಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಆಹ್ವಾನ
-
ದಿನದ ಸುದ್ದಿ21 hours agoದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ


