Connect with us

ದಿನದ ಸುದ್ದಿ

ಇಂದು ಅಂತಾರಾಷ್ಟ್ರೀಯ ಯೋಗ ದಿನ; ಭಾರತ ಸೇರಿ ವಿಶ್ವಾದ್ಯಂತ ಆಚರಣೆ

Published

on

ಸುದ್ದಿದಿನಡೆಸ್ಕ್:ಅಂತಾರಾಷ್ಟ್ರೀಯ ಯೋಗ ದಿನವನ್ನು ಇಂದು ದೇಶಾದ್ಯಂತ ಆಚರಿಸಲಾಗುತ್ತಿದೆ. ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿನ ಅಂತಾರಾಷ್ಟ್ರೀಯ ಸಮಾವೇಶ ಕೇಂದ್ರದಲ್ಲಿ ಮುಖ್ಯ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ದಾಲ್ ಸರೋವರದ ತೀರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಸಮಾಜದ ಎಲ್ಲ ವರ್ಗಗಳ ಸುಮಾರು 7 ಸಾವಿರ ಜನರು ಈ ಯೋಗೋತ್ಸವದಲ್ಲಿ ಪಾಲ್ಗೊಂಡಿದ್ದರು.
ಬಳಿಕ, ಯೋಗ ದಿನದ ಅಂಗವಾಗಿ ವಿಶ್ವದ ಎಲ್ಲಾ ಭಾಗಗಳಲ್ಲೂ ಯೋಗಾಸನ ಮಾಡುತ್ತಿರುವ ಜನರಿಗೆ ಮತ್ತು ದೇಶವಾಸಿಗಳಿಗೆ ಶುಭಾಷಯಗಳನ್ನು ತಿಳಿಸಿದ ಪ್ರಧಾನಿ ಅವರು, ಅಂತಾರಾಷ್ಟ್ರೀಯ ಯೋಗ ದಿನ 10 ವರ್ಷಗಳ ಐತಿಹಾಸಿಕ ಪಯಣವನ್ನು ಪೂರ್ಣಗೊಳಿಸಿದೆ. ತಾವು 2014ರಲ್ಲಿ ವಿಶ್ವಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನವನ್ನು ಪ್ರಸ್ತಾಪಿಸಿದ್ದು, ಭಾರತದ ಈ ಪ್ರಸ್ತಾವನೆಗೆ 177 ರಾಷ್ಟ್ರಗಳು ಬೆಂಬಲಿಸಿ, ಯೋಗ ದಿನವನ್ನು ಅಂಗೀಕರಿಸಿದೆ. ಅಂದಿನಿಂದಲೂ ಯೋಗ ದಿನ ಹೊಸ ದಾಖಲೆಗಳನ್ನು ಮಾಡುತ್ತಾ ಬಂದಿದೆ ಎಂದರು.

ಯೋಗಾಸನದ ಪ್ರಯೋಜನಗಳ ಬಗ್ಗೆ ಪ್ರತಿಪಾದಿಸಿದ ಪ್ರಧಾನಿ ಅವರು, ವಿಶ್ವಾದ್ಯಂತ ಯೋಗ ಮಾಡುವವರ ಸಂಖ್ಯೆ ನಿರಂತರವಾಗಿ ಹೆಚ್ಚುತ್ತಿದೆ. ಯೋಗವು ಸಕಾರಾತ್ಮಕ ಶಕ್ತಿಯನ್ನು ನೀಡುವುದರಿಂದ ಜನರು ಯೋಗಾಭ್ಯಾಸವನ್ನು ಅಳವಡಿಸಿಕೊಳ್ಳುತ್ತಿದ್ದಾರೆ. ಯೋಗಾಸನದಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಸಲಿದೆ. ಸಮಾಜದಲ್ಲಿ ಸ್ವಾಸ್ಥ್ಯಕ್ಕೆ ಯೋಗ ಅಗತ್ಯ ಎಂದು ಹೇಳಿದರು.

ಈ ವರ್ಷ 101 ವರ್ಷದ ಫ್ರಾನ್ಸ್ನ ಮಹಿಳಾ ಯೋಗ ಶಿಕ್ಷಕಿಗೆ ಪದ್ಮಶ್ರೀ ಪ್ರಶಸಿ ಪ್ರಧಾನ ಮಾಡಲಾಯಿತು. ಅವರು, ಭಾರತಕ್ಕೆ ಭೇಟಿ ನೀಡದಿದ್ದರೂ ತಮ್ಮ ಇಡೀ ಜೀವನವನ್ನು ಯೋಗದ ಬಗ್ಗೆ ಜಾಗೃತಿ ಮೂಡಿಸಲು ಮುಡುಪಾಗಿಟ್ಟಿದ್ದಾರೆ. ಇಂದು ವಿಶ್ವಾದ್ಯಂತ ಪ್ರತಿಷ್ಠಿತ ವಿಶ್ವವಿದ್ಯಾಲಯಗಳು ಮತ್ತು ಸಂಸ್ಥೆಗಳಲ್ಲಿ ಯೋಗವನ್ನು ಅಳವಡಿಸಿಕೊಳ್ಳಲಾಗಿದೆ. ಯೋಗ ಕುರಿತ ಸಂಶೋಧನಾ ಪತ್ರಗಳನ್ನು ಪ್ರಕಟಿಸಲಾಗಿದೆ ಎಂದು ಪ್ರಧಾನಿ ಹೇಳಿದರು.

ಜಮ್ಮು-ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಕೇಂದ್ರ ಸಚಿವ ಪ್ರತಾಪ್ ರಾವ್ ಗಣಪತ್ ರಾವ್ ಜಾಧವ್ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ವಿಶ್ವಾದ್ಯಾಂತ ಭಾರತೀಯ ರಾಯಭಾರಿ ಕಚೇರಿಗಳಲ್ಲಿ ಯೋಗ ದಿನವನ್ನು ಆಯೋಜಿಸಲಾಗಿದೆ. ಸಮಾಜಕ್ಕೆ ಮತ್ತು ಸ್ವಯಂಗಾಗಿ ಯೋಗ ಎಂಬುದು ಈ ವರ್ಷದ ಘೋಷವಾಕ್ಯವಾಗಿದ್ದು, ಸಾಮಾಜಿಕ ಸಾಮರಸ್ಯ ಮತ್ತು ವೈಯಕ್ತಿಕ ಕ್ಷೇಮದಲ್ಲಿ ಯೋಗ ಪ್ರಮುಖ ಪಾತ್ರ ವಹಿಸುತ್ತದೆ. ಯೋಗಾಭ್ಯಾಸದ ಮೂಲಕ ಜಾಗತಿಕ ಆರೋಗ್ಯ ಮತ್ತು ಕ್ಷೇಮ ಉತ್ತೇಜಿಸುವ ಸಂದೇಶದೊಂದಿಗೆ ಲಕ್ಷಾಂತರ ಜನರನ್ನು ಒಟ್ಟಿಗೆ ಸೇರಿಸುವ ಉದ್ದೇಶವನ್ನು ಈ ಆಚರಣೆ ಹೊಂದಿದೆ.

ಯೋಗದ ಪ್ರಯೋಜನಗಳ ಬಗ್ಗೆ ಪ್ರಧಾನಿ ಅವರು, ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಪತ್ರ ಬರೆದಿದ್ದು, ಗ್ರಾಮೀಣ ಭಾಗದಲ್ಲಿ ಯೋಗವನ್ನು ವ್ಯಾಪಕಗೊಳಿಸಿ, ಬೇರು ಮಟ್ಟದಲ್ಲಿ ಜನರ ಪಾಲ್ಗೊಳ್ಳುವಿಕೆಯನ್ನು ಉತ್ತೇಜಿಸುವಂತೆ ಕರೆ ನೀಡಿದ್ದಾರೆ.

2015ರಲ್ಲಿ ಅಂತಾರಾಷ್ಟ್ರೀಯ ಯೋಗ ದಿನ ಆರಂಭವಾದಗಿನಿಂದಲೂ ಪ್ರಧಾನಿ ಅವರು ಯೋಗವನ್ನು ಉತ್ತೇಜಿಸುತ್ತ ವಿಶ್ವಾದ್ಯಾಂತ ಅನೇಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದಾರೆ.

ದೆಹಲಿಯ ಕರ್ತವ್ಯ ಪಥ, ಚಂಡಿಗಢ, ಡೆಹರಾಡೂನ್, ರಾಂಚಿ, ಲಖನೌ, ಮೈಸೂರು ಮತ್ತು ನ್ಯೂಯಾರ್ಕ್ನ ವಿಶ್ವಸಂಸ್ಥೆಯ ಪ್ರಧಾನ ಕಚೇರಿ ಇದರಲ್ಲಿ ಸೇರಿವೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ |ಅ.23ರಂದು ಜಿಲ್ಲಾ ಮಾದಿಗ ಛಲವಾದಿ ಸಮುದಾಯಗಳ ಒಕ್ಕೂಟದಿಂದ ಬೃಹತ್ ಪ್ರತಿಭಟನೆ

Published

on

ಸುದ್ದಿದಿನ,ದಾವಣಗೆರೆ: ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ಆದೇಶದಂತೆ ಒಳ ಮೀಸಲಾತಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಅ. 23 ರಂದು ಬೃಹತ್ ಪ್ರತಿಭಟನೆಯನ್ನು ನಗರದಲ್ಲಿ ಹಮ್ಮಿಕೊಳ್ಳ ಲಾಗಿದೆ ಎಂದು ಜಿಲ್ಲಾ ಮಾದಿಗ ಛಲವಾದಿ ಸಮುದಾಯಗಳ ಒಕ್ಕೂಟದ ರವಿನಾರಾಯಣ್ ತಿಳಿಸಿದ್ದಾರೆ.

ಭಾನುವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಅಂದು ಬೆಳಗ್ಗೆ 10ಕ್ಕೆ ಡಾ. ಬಿ.ಆರ್.‌ ಅಂಬೇಡ್ಕರ್ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಪ್ರಾರಂಭಿಸಲಾಗುವುದು ಎಂದಿದ್ದಾರೆ.

ಜಯದೇವ ವೃತ್ತ, ಅಶೋಕ ರಸ್ತೆ, ಉಪ ವಿಭಾಗಾಧಿಕಾರಿ ಕಚೇರಿಯವರೆಗೆ ಮೆರವಣಿಗೆ ನಡೆಸಿ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮುಖಂಡರು

ಮಾದಿಗ ಸಮುದಾಯದ ಜನಸಂಖ್ಯೆ ಆಧಾರದಲ್ಲಿ ಒಳ ಮೀಸಲಾತಿ ವರ್ಗೀಕರಣ ಮಾಡಲು ಒತ್ತಾಯಿಸಿ ಕಳೆದ ಮೂರು ದಶಕದಿಂದ ನಡೆಸಿದ ನಿರಂತರ ಹೋರಾಟದ ಫಲವಾಗಿ ಈಗ ಒಳ ಮೀಸಲಾತಿ ದೊರಕುವ ಸಮಯ ಬಂದಿದೆ. ಸರ್ವೋಚ್ಚ ನ್ಯಾಯಾಲಯ ಅ. 1 ರಂದು ಒಳ ಮೀಸಲಾತಿ ಕಲ್ಪಿಸುವ ಅಧಿಕಾರ ಮತ್ತು ಹೊಣೆಗಾರಿಕೆ ಆಯಾಯ ರಾಜ್ಯ ಸರ್ಕಾರಗಳಿಗೆ ಇದೆ ಎಂಬುದನ್ನು ಸ್ಪಷ್ಟವಾಗಿ ತಿಳಿಸಿದೆ. ಅದರ ಅನ್ವಯ ರಾಜ್ಯ ಸರ್ಕಾರ ಕೂಡಲೇ ಒಳ ಮೀಸಲಾತಿ ಸೌಲಭ್ಯ ಒದಗಿಸಬೇಕು ಎಂದು ಒತ್ತಾಯಿಸಿದರು.

ನಿವೃತ್ತ ಜಿಲ್ಲಾ ಪೊಲೀಸ್ ಅಧೀಕ್ಷಕ ಎನ್. ರುದ್ರಮುನಿ ಮಾತನಾಡಿ, ಒಳ ಮೀಸಲಾತಿ ನೀಡದೇ ಇರುವುದರಿಂದ ಅನೇಕ ಸಮುದಾಯಗಳಿಗೆ ಅನ್ಯಾಯ ಆಗುತ್ತಿದೆ. ತುಟಿ ಮೇಲಿನ ಅನುಕಂಪ ಬೇಕಾಗಿಲ್ಲ. ಸುಪ್ರೀಂ ಕೋರ್ಟ್ ನ ಸಾಂವಿಧಾನಿಕ ಪೀಠ ನೀಡಿರುವ ತೀರ್ಪು ನಂತೆ ಕೂಡಲೇ ಒಳ ಮೀಸಲಾತಿ ಜಾರಿ ಮಾಡಬೇಕು. ಅಲ್ಲಿಯವರೆಗೆ ರಾಜ್ಯದಲ್ಲಿ ನಡೆಯುವ ಎಲ್ಲ ಸರ್ಕಾರಿ ಮತ್ತು ಅರೆ ಸರ್ಕಾರಿ ನೇಮಕಾತಿ ಸ್ಥಗಿತಗೊಳಿಸಬೇಕು. ಹಣಕಾಸಿನ ಮತ್ತು ಇತರೆ ಸೌಲಭ್ಯಗಳನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

ಈಗಾಗಲೇ ಸರ್ಕಾರದಲ್ಲಿ ಇರುವ ಲಭ್ಯವಿರುವ ದತ್ತಾಂಶಗಳ ಆಧಾರದಲ್ಲಿ ಒಳ ಮೀಸಲಾತಿ ನೀಡುವುದಕ್ಕೆ ಯಾವುದೇ ಅಡ್ಡಿ ಆತಂಕ ಇಲ್ಲ. ಆದರೂ, ಸರ್ಕಾರ ಮೀನಾಮೇಷ ಎಣಿಸುತ್ತಿರುವುದನ್ನು ಒಕ್ಕೂಟ ತೀವ್ರವಾಗಿ ಖಂಡಿಸುತ್ತದೆ. ಸರ್ಕಾರ ಈಗ ನಡೆಸುತ್ತಿರುವ ಹೋರಾಟಕ್ಕೆ ಸ್ಪಂದಿಸದಿ ದ್ದಲ್ಲಿ ಮುಂದಿನ ದಿನಗಳಲ್ಲಿ ಅಮರಣಾಂತ ಉಪವಾಸ ಸತ್ಯಾಗ್ರಹ ಒಳಗೊಂಡಂತೆ ತೀವ್ರ ಸ್ವರೂಪದ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಒಳ ಮೀಸಲಾತಿ ಜಾರಿಗೆ ಬರುವವರೆಗೂ ಹೋರಾಟ ನಿಲ್ಲಿಸುವ ಮಾತೇ ಇಲ್ಲ. ಒಳ ಮೀಸಲಾತಿ ಜಾರಿಗೊಳಿಸಲೇಬೇಕು ಎಂದು ಒತ್ತಾಯಿಸಿದರು.

ನಿವೃತ್ತ ಜಿಲ್ಲಾ ಪೊಲೀಸ್ ಅಧೀಕ್ಷಕ ಎನ್. ರುದ್ರಮುನಿ, ಬಿ.ಎಸ್. ಪುರುಷೋತ್ತಮ್, ಎಚ್. ಮಲ್ಲೇಶ್, ಬಿ.ಎಚ್. ಉದಯ್ ಕುಮಾರ್, ಎಂ. ಹಾಲೇಶ್, ಎಲ್.ಎಚ್. ಸಾಗರ್, ಆಲೂರು ನಿಂಗರಾಜ್, ಬಿ.ಎಂ. ನಿರಂಜನ್, ಹೆಗ್ಗೆರೆ ರಂಗಪ್ಪ, ಕೆ.ಎಸ್. ಗೋವಿಂದರಾಜ್, ಎಸ್. ಮಲ್ಲಿಕಾರ್ಜುನ್, ಎಚ್.ಕೆ. ಬಸವರಾಜ್, ಕೆ. ಏಕಾಂತಪ್ಪ, ಕುಂದುವಾಡ ಮಂಜುನಾಥ್, ನಾಗಭೂಷಣ್, ಓಂಕಾರಪ್ಪ, ಸೋಮಲಾಪುರ ಹನುಮಂತಪ್ಪ ಇತರರು ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ನೀರಿನಲ್ಲಿ ಕರಗುವ ರಸಗೊಬ್ಬರ ಘಟಕಕ್ಕೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ತೋಟಗಾರಿಕೆ ಇಲಾಖೆಯಿಂದ ನೀರಿನಲ್ಲಿ ಕರಗುವ ರಸಗೊಬ್ಬರ ಘಟಕಕ್ಕೆ ಸಹಾಯಧನ ನೀಡಲು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದ ರೈತರಿಂದ ಆರ್ಜಿ ಆಹ್ವಾನಿಸಲಾಗಿದೆ.

ನೀರಿನಲ್ಲಿ ಕರಗುವ ರಸಗೊಬ್ಬರ ಘಟಕದ ಪ್ರತಿ ಹೆಕ್ಟೇರ್‍ಗೆ ವೆಚ್ಚ ರೂ.50000 ಇದ್ದು. ಸಾಮಾನ್ಯ ವರ್ಗದ ರೈತರಿಗೆ ಶೇ.40 ರಂತೆ ರೂ.20000 ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಶೇ.50ರಂತೆ ರೂ.25000 ಸಹಾಯಧನವನ್ನು ನೀಡಲಾಗುವುದು.

ತೋಟಗಾರಿಕೆ ಬೆಳೆಗಳನ್ನು ಬೆಳೆಯುವ ರೈತರು ಅನುಮೋದಿತ ಕಂಪನಿಯಿಂದ ರಸಗೊಬ್ಬರ ಖರೀದಿಸಿದ ಮೊತ್ತದ ಬಿಲ್ಲುಗಳನ್ನು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ, ಜಗಳೂರು ಇಲ್ಲಿಗೆ ಅ.30 ರೊಳಗೆ ಸಲ್ಲಿಸಿದ್ದಲ್ಲಿ ನೇರವಾಗಿ ರೈತರ ಖಾತೆಗೆ ಜಮಾ ಮಾಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಪ್ರಸನ್ನ ಕುಮಾರ್.ಜಿ.ಹೆಚ್ ರೈ.ಸಂ.ಕೇಂದ್ರ ಕಸಬಾ ಮತ್ತು ಬಿಳಿಚೋಡು ಮೊ.ಸಂ. 9108338179, ಸುನೀಲ್ ಕುಮಾರ್. ಹೆಚ್.ಟಿ ರೈ.ಸಂ. ಕೇಂದ್ರ ಸೂಕ್ತ ಮೊ.ಸಂ. 7899942287 ಹಾಗೂ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ, ಜಗಳೂರು ಇಲ್ಲಿ ಸಂಪರ್ಕಿಸಲು ತಿಳಿಸಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬೆಂಚ್ ಪ್ರೆಸ್ ಸ್ಪರ್ಧೆ|ಕರ್ನಾಟಕ ತಂಡ ಪ್ರಥಮ ತರಬೇತುದಾರರಾದ ಎಚ್.ದಾದಾಪೀರ್ ಗೆ ಅಭಿನಂದನೆ

Published

on

ಸುದ್ದಿದಿನ,ದಾವಣಗೆರೆ: ಗೋವಾ ರಾಜ್ಯದ ವಾಸ್ಕೋಡಿಗಾಮದಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರಮಟ್ಟದ ಪುರುಷರ ಹಾಗೂ ಮಹಿಳೆಯರ ಬೆಂಚ್ ಪ್ರೆಸ್ ಸ್ಪರ್ಧೆಯಲ್ಲಿ ಕರ್ನಾಟಕ ತಂಡವು ಪ್ರಥಮ ಸ್ಥಾನ ಪಡೆದಿದೆ.

ದಾವಣಗೆರೆಯ ಪೊಲೀಸ್ ಇಲಾಖೆಯ ಹೆಮ್ಮೆಯ ಕ್ರೀಡಾಪಟು ಏಕಲವ್ಯ ಪ್ರಶಸ್ತಿ ಪುರಸ್ಕøತರಾದ ಎಚ್. ದಾದಾಪೀರ್ ಇವರು ಕರ್ನಾಟಕ ರಾಜ್ಯ ತಂಡಕ್ಕೆ ತರಬೇತಿದಾರರಾಗಿದ್ದರು.

ಕರ್ನಾಟಕ ತಂಡವು ಪ್ರಥಮ ಸ್ಥಾನ ಪಡೆಯಲು ಶ್ರಮಿಸಿದ ಹೆಚ್.ದಾದಾಪೀರ್ ಅವರನ್ನು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಸಂಸದರಾದ ಡಾ|| ಪ್ರಭಾ ಮಲ್ಲಿಕಾರ್ಜುನ್, ದಾವಣಗೆರೆ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀಮತಿ ಉಮಾ ಪ್ರಶಾಂತ್, ಮೀಸಲು ಪಡೆಯ ಡಿವೈಎಸ್ಪಿ ಪಿ.ಬಿ.ಪ್ರಕಾಶ್, ಗ್ರೂಪ್ ಆಫ್ ಐರನ್ ಗೇಮ್, ನಗರಸಭೆ ವ್ಯಾಯಾಮ ಶಾಲೆ, ಬೀರೇಶ್ವರ ವ್ಯಾಯಾಮ ಶಾಲೆಗಳ ಎಲ್ಲಾ ಹಿರಿಯ ಮತ್ತು ಕಿರಿಯ ಕ್ರೀಡಾಪಟುಗಳು ಅಭಿನಂದಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending