ದಿನದ ಸುದ್ದಿ
ಬುಕ್ ಮಾಡಿದ್ದು ಚಿನ್ನದ ನಾಣ್ಯ, ಬಂದದ್ದು ಖಾಲಿ ಬಾಕ್ಸ್
ಫ್ಲಿಪ್ ಕಾರ್ಟ್ ಆನ್ಲೈನ್ ಖರೀದಿ ತಾಣದಲ್ಲಿ ಚಿನ್ನದ ನಾಣ್ಯಗಳನ್ನು ಬುಕ್ ಮಾಡಿದ್ದ ಬೆಂಗಳೂರಿನ ಖಾಸಗಿ ಕಂಪನಿಯೊದರ ಉದ್ಯೋಗಿಗೆ ಖಾಲಿ ಬಾಕ್ಸ್ ತಲುಪಿದ್ದು, ಈ ಸಂಬಂಧ ಎಚ್ಎಎಲ್ ಪೊಲೀಸರು ಫ್ಲಿಪ್ ಕಾರ್ಟ್ ಹಾಗೂ ಪಿವಿಸಿ ಲಾಜಿಸ್ಟಿಕ್ಸ್ ಸಂಸ್ಥೆ ವಿರುದ್ಧ ದೂರು ದಾಖಲಾಗಿದೆ.
ಸುದ್ದಿದಿನ ಡೆಸ್ಕ್: ಫ್ಲಿಪ್ ಕಾರ್ಟ್ ಆನ್ಲೈನ್ ಖರೀದಿ ತಾಣದಲ್ಲಿ ಚಿನ್ನದ ನಾಣ್ಯಗಳನ್ನು ಬುಕ್ ಮಾಡಿದ್ದ ಬೆಂಗಳೂರಿನ ಖಾಸಗಿ ಕಂಪನಿಯೊದರ ಉದ್ಯೋಗಿಗೆ ಖಾಲಿ ಬಾಕ್ಸ್ ತಲುಪಿದ್ದು, ಈ ಸಂಬಂಧ ಎಚ್ಎಎಲ್ ಪೊಲೀಸರು ಫ್ಲಿಪ್ ಕಾರ್ಟ್ ಹಾಗೂ ಪಿವಿಸಿ ಲಾಜಿಸ್ಟಿಕ್ಸ್ ಸಂಸ್ಥೆ ವಿರುದ್ಧ ದೂರು ದಾಖಲಾಗಿದೆ.
ಬೆಂಗಳೂರಿನ ಖಾಸಗಿ ಸಂಸ್ಥೆಯ ಉದ್ಯೋಗಿ ಅಮಿತ್ ಕುಮಾರ್ ಗರ್ಗ್ ಅವರು 20 ಗ್ರಾಂ ಚಿನ್ನದ ನಾಣ್ಯಗಳನ್ನು ಬುಕ್ ಮಾಡಿ ಆನ್ಲೈನ್ನಲ್ಲಿ 61,755 ರೂ. ಸಲ್ಲಿಸಿದ್ದರು. ಫ್ಲಿಪ್ ಕಾರ್ಟ್ನ ಡೆಲಿವರಿ ಬಾಯ್ ಬಂದಾಗ ಅವರ ಮುಂದೆಯೇ ಪಾರ್ಸೆಲ್ ತೆರೆದಾಗ ಅದರಲ್ಲಿ ಏನೂ ಇಲ್ಲದಿರುವುದು ಗಮನಕ್ಕೆ ಬಂತು. ಇದನ್ನು ವಿಚಾರಿಸಿದಾಗ ಸಂಸ್ಥೆಯವರನ್ನೇ ಕೇಳಬೇಕು ಎಂದು ಡೆಲಿವರಿ ಬಾಯ್ ಉತ್ತರಿಸಿದ್ದ. ಈ ಎಲ್ಲ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಇದನ್ನು ಸಾಕ್ಷಿಯಾಗಿ ಸಲ್ಲಿಸಿ ಅಮಿತ್ ಅವರು ದೂರು ದಾಖಲಿಸಿದ್ದರು, ಈ ಸಂಬಂಧ ಪೊಲೀಸರು ಎರಡೂ ಸಂಸ್ಥೆ ವಿರುದ್ಧ ಕ್ರಮ ಕೈಗೊಂಡಿದ್ದಾರೆ.
ದಿನದ ಸುದ್ದಿ
ಶಿವಮೊಗ್ಗಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ
ಸುದ್ದಿದಿನ, ಶಿವಮೊಗ್ಗ : ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿ ಮಾತನಾಡಲಿದ್ದಾರೆ.
ಯುವಜನರು, ಮಹಿಳೆಯರು, ರೈತರು ಸೇರಿ ಸುಮಾರು ಎರಡೂವರೆ ಲಕ್ಷಕ್ಕೂ ಹೆಚ್ಚು ಜನರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಶಿವಮೊಗ್ಗದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚುನಾವಣಾ ಬಾಂಡ್ ಕುರಿತ ದತ್ತಾಂಶ ಬಿಡುಗಡೆ
ಸುದ್ದಿದಿನ,ನವದೆಹಲಿ : ಚುನಾವಣಾ ಬಾಂಡ್ ಕುರಿತಂತೆ ಸುಪ್ರೀಂಕೋರ್ಟ್ನ ರಿಜಿಸ್ಟ್ರಿ ಇಂದ ಲಭ್ಯವಾದ ಅಂಕಿಕೃತ ದತ್ತಾಂಶ ಮಾದರಿಯನ್ನು ಚುನಾವಣಾ ಆಯೋಗ ಭಾನುವಾರ ತನ್ನ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿದೆ. www.eci.gov.in/candidate-politicalparty ವೆಬ್ಸೈಟ್ನಲ್ಲಿ ಈ ದತ್ತಾಂಶ ಲಭ್ಯವಿರುತ್ತದೆ.
ಸುಪ್ರೀಂಕೋರ್ಟ್ ನಿರ್ದೇಶಿಸಿದಂತೆ ರಾಜಕೀಯ ಪಕ್ಷಗಳು ಚುನಾವಣಾ ಬಾಂಡ್ ಕುರಿತ ದತ್ತಾಂಶಗಳನ್ನು ಮೊಹರು ಹಾಕಿದ ಲಕೋಟೆಯಲ್ಲಿ ಸಲ್ಲಿಸಿದ್ದವು ಎಂದು ಚುನಾವಣಾ ಆಯೋಗದ ಹೇಳಿಕೆ ತಿಳಿಸಿದೆ. ರಾಜಕೀಯ ಪಕ್ಷಗಳಿಂದ ಸ್ವೀಕರಿಸಿದ ಮೊಹರು ಹಾಕಿದ ಲಕೋಟೆಗಳನ್ನು ತೆರೆಯದೇ ಸುಪ್ರೀಂಕೋರ್ಟ್ಗೆ ಸಲ್ಲಿಸಲಾಗಿತ್ತು.
ಇದೇ 15ರಂದು ಸುಪ್ರೀಂಕೋರ್ಟ್ ನೀಡಿದ ಆದೇಶದ ಮೇರೆಗೆ ಸುಪ್ರೀಂಕೋರ್ಟ್ನ ರಿಜಿಸ್ಟ್ರಿ, ಭೌತಿಕ ಪ್ರತಿ ಹಾಗೂ ಅದರ ಡಿಜಿಟಲ್ ದಾಖಲೆಯಿರುವ ಪೆನ್ಡ್ರೈವ್ ಒಳಗೊಂಡ ಮೊಹರು ಹಾಕಿದ ಲಕೋಟೆಯನ್ನು ಹಿಂತಿರುಗಿಸಿತ್ತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ರಶ್ಮಿ ಚಂದ್ರಗಿರಿ ಅವರಿಗೆ ಪಿಎಚ್.ಡಿ ಪದವಿ
ಸುದ್ದಿದಿನ,ಹಾವೇರಿ : ನಗರದ ರಶ್ಮಿ ಚಂದ್ರಗಿರಿ ಅವರು ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಮಂಡಿಸಿದ “ದಲಿತ ಬಂಡಾಯ ಕಾದಂಬರಿಗಳಲ್ಲಿ ಸಾಂಸ್ಕೃತಿಕ ನೆಲೆಗಳು” ಎಂಬ ಮಹಾಪ್ರಬಂಧಕ್ಕೆ ಕರ್ನಾಟಕ ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ ಪ್ರಧಾನ ಮಾಡಿದೆ.
ಇವರಿಗೆ ಡಾ.ಬಿಎಸ್.ಭಜಂತ್ರಿ , ಸಹಾಯಕ ಪ್ರಧ್ಯಾಪಕರು ಕರ್ನಾಟಕ ಕಲಾ ಮಹಾವಿದ್ಯಾಲಯ ಧಾರವಾಡ ಇವರು ಮಾರ್ಗದರ್ಶನ ಮಾಡಿದ್ದರು.
ಬರವಣಿಗೆಯಲ್ಲಿ ತೊಡಗಿಸಿಕೊಂಡಿರುವ ರಶ್ಮಿ ಚಂದ್ರಗಿರಿಯವರ ಹಲವು ಲೇಖನಗಳು ನಿಯತಕಾಲಿಕೆಗಳಲ್ಲಿ ಪ್ರಕಟಗೊಂಡಿವೆ. ಪ್ರಸ್ತುತ ಇವರು ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸಿತ್ತಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243