Connect with us

ದಿನದ ಸುದ್ದಿ

ಅಮಾಯಕ ಡಿಲೆವರಿ ಬಾಯ್ ಮೇಲೆ ಸುಳ್ಳು ಕೇಸ್ ದಾಖಲಿಸಿದ ಮಹಿಳೆ : ಅಸಲಿಗೆ ನಡೆದಿದ್ದೇನು ಗೊತ್ತಾ..!?

Published

on

  • ನಿಶಾಂತ್ ಮಂಡಗದ್ದೆ

ತ್ತರ ಭಾರತೀಯಳಿಂದ ಕರ್ನಾಟಕದಲ್ಲಿ ಕನ್ನಡಿಗನ(ದಕ್ಷಿಣ ಭಾರತೀಯ) ಮೇಲೆ ದಬ್ಬಾಳಿಕೆ. ಆಶ್ಚರ್ಯವೇನಿಲ್ಲ ಕೆಳಗಿನ ಪೂರ್ತಿ ಸ್ಟೋರಿ ಓದಿ. ಅಮಾಯಕ ಡಿಲೆವರಿ ಬಾಯ್ ಮೇಲೆ ಸುಳ್ಳು ಕೇಸ್ ದಾಖಲಿಸಿದ ಮಹಿಳೆ.

“ನಾನು ಅವಳ ಅಪಾರ್ಟ್ಮೆಂಟ್ ಬಾಗಿಲನ್ನು ತಲುಪಿದ ನಂತರ ಅವಳಿಗೆ ಆಹಾರವನ್ನು ಹಸ್ತಾಂತರಿಸಿದೆ ಮತ್ತು ಅವಳು ನನಗೆ ಹಣ ಪಾವತಿಸಬೇಕೆಂದು ನಾನು ಕಾಯುತ್ತಿದ್ದೆ (ಅವಳು ಕ್ಯಾಶ್ ಆನ್ ಡಿಲೆವರಿ ವಿಧಾನವನ್ನು ಆರಿಸಿಕೊಂಡಿದ್ದಳು)” ಎಂದು ಜ಼ೊಮ್ಯಾಟೋ ಡಿಲೆವರಿ ಬಾಯ್ ಕಾಮರಾಜ್ ಹೇಳುತ್ತಾರೆ, ”

ಟ್ರಾಫಿಕ್ ಹಾಗೂ ಗುಂಡಿ ರಸ್ತೆಗಳ ಕಾರಣದಿಂದ ಡಿಲೆವರಿ ತಡವಾದ ಕಾರಣ ನಾನು ಕ್ಷಮೆಯಾಚಿಸಿದೆ. ಆದರೆ ಅವಳು ಮೊದಲಿನಿಂದಲೂ ನನ್ನ ಜೊತೆ ತುಂಬಾ ಅಸಭ್ಯವಾಗಿ ವರ್ತಿಸುತ್ತಿದ್ದಳು ಹಾಗೂ ನನಗೆ ಅರ್ಥವಾಗದ ಹಿಂದಿ ಭಾಷೆಯಲ್ಲಿ ಬೈಯ್ತುತ್ತಿದ್ದಳು.

ನಂತರ ಅವಳು ‘ನೀನು ಯಾಕೆ ತಡವಾಗಿ ಬಂದೆ?’ ನಾನು ಕ್ಷಮೆಯಾಚಿಸುತ್ತಾ ಉತ್ತರಿಸಿದೆ, ಏಕೆಂದರೆ ಹಲವು ಕಡೆ ರಸ್ತೆ ಕಾಮಗಾರಿ ನಡೆಯುತ್ತಿರುವುದರಿಂದ ರಸ್ತೆ ತಡೆಗಳಿವೆ ಮತ್ತು ಟ್ರಾಫಿಕ್ ಜಾಮ್‌ಗಳೂ ಇವೆ. ಆದರೆ ಅವಳು 45-50 ನಿಮಿಷಗಳಲ್ಲಿ ಆದೇಶವನ್ನು ತಲುಪಿಸಬೇಕು ಎಂದು ಅವರು ಒತ್ತಾಯಿಸುತ್ತಲೇ ಇದ್ದರು.

ನಾನು ಎರಡು ವರ್ಷಗಳಿಗಿಂತ ಹೆಚ್ಚು ಕಾಲ ಈ ಕೆಲಸದಲ್ಲಿ ಕೆಲಸ ಮಾಡುತ್ತಿದ್ದೇನೆ ಮತ್ತು ನಾನು ಈ ರೀತಿಯ ತೊಂದರೆ ಎದುರಾಗಿದ್ದು ಇದೇ ಮೊದಲು.” ಎಂದು ಉತ್ತರ ಕೊಟ್ಟೆ. ಗ್ರಾಹಕರಾದ ಹಿತೇಶಾರವರು ಆಹಾರವನ್ನು ನನ್ನಿಂದ ಕಸಿದುಕೊಂಡರು – ಮತ್ತು ನಂತರ ಅದರ ಹಣವನ್ನು ಪಾವತಿಸಲು ನಿರಾಕರಿಸಿದರು ಎಂದು ಕಾಮರಾಜ್ ಹೇಳಿಕೆ ನೀಡಿದ್ದಾರೆ.

ಅವಳು ‘ಜೊಮಾಟೊ ಚಾಟ್’ ಬೆಂಬಲದೊಂದಿಗೆ ಮಾತನಾಡುತ್ತಿದ್ದೇನೆ ಎಂದು ಬಹಳ ಸಮಯವಾದರೂ ಹಣವನ್ನು ಪಾವತಿ ಮಾಡಲಿಲ್ಲ. ಹೇಳಿದರು. ಅವಳಿಗೆ ಹಣ ಪಾವತಿಸಬೇಕೆಂದು ಅವನು ಮನವಿ ಮಾಡಿದೆ,. “ಈ ಸಮಯದಲ್ಲಿ, ಅವಳು ನನ್ನನ್ನು ‘ಗುಲಾಮ’ ಎಂದು ಕರೆದಳು ಮತ್ತು ನಂತರ ಅವಳು ‘ನಿನ್ನ ಕೈಯಲ್ಲಿ ನನಗೆ ಏನೂ ಮಾಡಲು ಆಗುವುದಿಲ್ಲ, ಜ಼ೊಮ್ಯಾಟೋದವರು ನಿನ್ನನ್ನು ಕೆಲಸದಿಂದ ಕಿತ್ತು ಹಾಕುವ ಹಾಗೆ ಮಾಡುತ್ತೇನೆ’ ಎಂದು ಕೂಗಲು ಪ್ರಾರಂಭಿಸಿದಳು.

ಈ ಮಧ್ಯೆ, ಜೊಮಾಟೊ ಕಸ್ಟಮರ್ ಕೇರ್ ಅವರ ಕೋರಿಕೆಯ ಆಧಾರದ ಮೇಲೆ ಅವರು ತಮ್ಮ ಆರ್ಡರ್‌ನ್ನು ರದ್ದುಗೊಳಿಸಿದ್ದಾರೆ ಎಂದು ಹೇಳಿದರು ಮತ್ತು ನಾನು ಅವಳನ್ನು ಆಹಾರವನ್ನು ಹಿಂತಿರುಗಿಸಲು ಕೇಳಿದೆ ಆದರೆ ಅವಳು ಸಹಕರಿಸಲಿಲ್ಲ, ಆಕೆಯ ಕಿರುಚಾಟವನ್ನು ಕೇಳಲಾರದೆ ಆಕೆಯ ಆಹಾರವನ್ನು ತೆಗೆದುಕೊಳ್ಳದೆ ಅಪಾರ್ಟ್ಮೆಂಟ್ ಕಟ್ಟಡವನ್ನು ಬಿಡಲು ಅವನು ನಿರ್ಧರಿಸಿದನೆಂದು ಕಾಮರಾಜ್ ಹೇಳಿದ್ದಾರೆ.

“ಈ ಸಮಯದಲ್ಲಿ, ನಾನು ಲಿಫ್ಟ್‌ನತ್ತ ನಡೆಯುತ್ತಿರುವಾಗ, ಅವಳು ಹಿಂದಿಯಲ್ಲಿ ಅವಾಚ್ಯ ಪದಗಳನ್ನು ಬಳಸಲು ಪ್ರಾರಂಭಿಸಿದಳು. (ನನಗೆ ಹಲವು ಹಿಂದಿಯ ಅವಾಚ್ಯ ಪದಗಳು ತಿಳಿದಿರುವ ಕಾರಣ ಅವಳು ಬೈಯ್ಯುತ್ತಿರುವುದು ಅವಾಚ್ಯವೆಂದು ತಿಳಿಯಿತು) ಅವಳು ಇದ್ದಕ್ಕಿದ್ದಂತೆ ನನ್ನ ಮೇಲೆ ಚಪ್ಪಲಿ ಎಸೆದು ನನ್ನನ್ನು ಹೊಡೆಯಲು ಪ್ರಾರಂಭಿಸಿದಳು.

ನನ್ನ ಸುರಕ್ಷತೆಗಾಗಿ, ಅವಳು ನನ್ನನ್ನು ಹೊಡೆಯುವಾಗ, ಅವಳ ಹೊಡೆತಗಳನ್ನು ರಕ್ಷಿಸಲು ನಾನು ನನ್ನ ಕೈಗಳಿಂದ ಅವಳನ್ನು ತಡೆಯಲು ಪ್ರಯತ್ನಿಸಿದೆ, ಈ ಸಮಯದಲ್ಲಿ, ಅವಳು ನನ್ನ ಕೈಯನ್ನು ದೂರ ತಳ್ಳಲು ಪ್ರಯತ್ನಿಸುತ್ತಿದ್ದಾಗ, ಆಕಸ್ಮಿಕವಾಗಿ ಮೂಗಿನ ಮೇಲೆ ತನ್ನ ಬೆರಳಿನ ಉಂಗುರದಿಂದ ತನ್ನನ್ನು ತಾನೇ ಹೊಡೆದುಕೊಂಡಳು, ಅದು ರಕ್ತಸ್ರಾವಕ್ಕೆ ಕಾರಣವಾಯಿತು”. ಇಷ್ಟು ಡಿಲೆವರಿ ಬಾಯ್ ಕಾಮರಾಜ್ ಹೇಳಿಕೆ ಕೊಟ್ಟಿದ್ದಾರೆ.

ಜ಼ೊಮ್ಯಾಟೊ ಗ್ರಾಹಕಿ ಹಿತೇಶಾ ಮುಖವನ್ನು ನೋಡುವ ಯಾರಾದರೂ ಇದನ್ನು ಅರ್ಥಮಾಡಿಕೊಳ್ಳಬಹುದು ಇದು ಕೈಗಳ ಪಂಚ್‌ನಿಂದ ಆದ ಏಟಲ್ಲ ಸಣ್ಣ ಮಟ್ಟದ ಸಲಾಕೆಯ ತರಹದ(ಉಂಗುರ) ವಸ್ತುವಿನಿಂದ ಆದ ಗಾಯವೆಂದು. ಪಂಚ್ ಮಾಡಿದರೆ ಮೂಗಿನ ಮೇಲೆ ದೊಡ್ಡ ಹೊಡೆತ ಬೀಳುತ್ತದೆ ಹಾಗೂ ಮೂಗಿನ ಆಕಾರ ಕೂಡಾ ವಿಕಾರವಾಗುತ್ತದೆ.

ಇಲ್ಲಿ ಕಾಮರಾಜ್ ಕೂಡ “ನಾನು ಯಾವುದೇ ಉಂಗುರಗಳನ್ನು ಧರಿಸುವುದಿಲ್ಲ” ಅವಳು ಅವನನ್ನು ಲಿಫ್ಟ್ ಬಳಸಿ ಬಿಡಲು ಅನುಮತಿಸಲಿಲ್ಲ, ಆದ್ದರಿಂದ ಅವನು ಮೂರನೇ ಮಹಡಿಗೆ ಮೆಟ್ಟಿಲುಗಳ ಕೆಳಗೆ ಓಡಬೇಕಾಯಿತು ಎಂದು ಕಾಮರಾಜ್ ಹೇಳಿದ್ದಾರೆ.

ಹಿತೇಶಾ ತನ್ನ ಇನ್ಸ್ಟಾಗ್ರಾಮ್ ವೀಡಿಯೊದಲ್ಲಿ ಉಂಗುರವನ್ನು ಧರಿಸಿರುವುದು ಕಂಡುಬರುತ್ತದೆ.

ಉತ್ತರ ಭಾರತದಿಂದ ಕೆಲಸ ಹುಡುಕಿಕೊಂಡು ಕರ್ನಾಟಕಕ್ಕೆ ಬರುವ ಅನೇಕರಿಗೆ ಅದೇನೋ ಗೊತ್ತಿಲ್ಲ ಗಾಂಚಾಲಿಗಳು ಹೆಚ್ಚಾಗೆ ಇರುತ್ತದೆ. ಮೊದಲು ಪ್ರಚೋದಿಸುವುದು, ನಂತರ ಹಲ್ಲೆ ಮಾಡಲು ಪ್ರಯತ್ನಿಸುವುದು, ಕೊನೆಯದಾಗಿ ತಾವೆ ಹಲ್ಲೆಗೊಳಗಾದ ರೀತಿ ನಾಟಕವಾಡುವುದು.

ಇವಳ ಹೊಟ್ಟೆವನ್ನು ಉಚಿತವಾಗಿ ತುಂಬಿಸಿಕೊಳ್ಳುವುದಕ್ಕಾಗಿ ಒಬ್ಬ ಅಮಾಯಕನ ಇಡೀ ಕುಟುಂಬವನ್ನು ಉಪವಾಸ ಕೆಡವಿದ್ದಾಳೆ. ಪೊಲೀಸರು ಸ್ಪಷ್ಟವಾಗಿ ತನಿಖೆ ಮಾಡಿದರೆ ನಿಜವಾದ ಅಪರಾಧಿಗಳು ಯಾರೆಂದು ತಿಳಿಯುವುದರಲ್ಲಿ ಅನುಮಾನವಿಲ್ಲ. ದಿನೇ ದಿನೇ ಉತ್ತರದವರ ಗಾಂಚಾಲಿಗಳು ಹೆಚ್ಚಾಗುತ್ತಲೇ ಇವೆ.

ಇದರ ಜೊತೆ ಟ್ರಾಫಿಕ್ ರೂಲ್ಸ್‌ಗಳನ್ನು ಸರಿಯಾಗಿ ಪಾಲಿಸದ ಉತ್ತರ ಭಾರತೀಯರು ಕರ್ನಾಟಕದ ಪೊಲಿಸರಿಗೆ ಹಿಂದಿಯಲ್ಲಿ ತೆಗಳುವುದು, ಸೋಷಿಯಲ್ ಮಿಡಿಯಾಗಳಲ್ಲಿ ಕರ್ನಾಟಕ ಪೊಲೀಸರ ಬಗ್ಗೆ ಕೆಟ್ಟದಾಗಿ ಬಿಂಬಿಸುವುದು ಈಗೀಗ ಹೆಚ್ಚಾಗೆ ನಡೆಯುತ್ತಿದೆ. ಕನ್ನಡಿಗರಿಗೆ ಸಹನೆ ಹೆಚ್ಚಾಗಿಯೇ ಇರುತ್ತದೆ.

ಆದರೆ ಸಹನೆ ಕಳೆದುಕೊಂಡರೆ ಉತ್ತರದವರೆಲ್ಲಾ ಕರ್ನಾಟಕದಿಂದ ಕಳೆದುಹೋಗುವುದರಲ್ಲಿ ಸಂದೇಹವಿಲ್ಲ. ಬಂದ್ವಾ, ಕೆಲಸ ಮಾಡಿದ್ವಾ, ಸಂಬಳ ತಂಗೊಂಡ್ವಾ, ಹೋದ್ವಾ ಇಷ್ಟ್ರಲ್ಲೇ ಇರಬೇಕು. ಅದು ಬಿಟ್ಟು ನಿಮ್ಮ ಬಾಲ ಬಿಚ್ಚಿದರೆ ಬಾಲ ಕತ್ತರಿಸುವುದು ಕನ್ನಡಿಗರಿಗೆ ಚೆನ್ನಾಗಿ ಗೊತ್ತಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ತತ್ವಪದಗಳು ಸಾರ್ವಕಾಲಿಕ ಬೆಳಕನಿಧಿ: ಕಾ.ತ.ಚಿಕ್ಕಣ್ಣ

Published

on

ಸುದ್ದಿದಿನ,ಬೆಂಗಳೂರು:ತತ್ವಪದಗಳು ಎಲ್ಲ ಕಾಲಕ್ಕೂ ಸಲ್ಲುವಂತಹ ಬೆಳಕನ್ನು ನೀಡುವ ಸೃಜನಶೀಲ ಸಂರಚನೆಗಳಾಗಿವೆ ಎಂದು ಕರ್ನಾಟಕ ಸರ್ಕಾರದ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಶ್ರೀ ಕಾ.ತ.ಚಿಕ್ಕಣ್ಣ ಅವರು ಅಭಿಪ್ರಾಯಪಟ್ಟರು.

ಬೆಂಗಳೂರಿನ ಕೆ.ನಾರಾಯಣಪುರದ ಕ್ರಿಸ್ತು ಜಯಂತಿ ಡೀಮ್ಡ್ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗ ಹಾಗೂ ಕರ್ನಾಟಕ ಸರ್ಕಾರದ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಕನ್ನಡ ತತ್ವಪದ ಸಾಹಿತ್ಯ: ಸಾಂಸ್ಕೃತಿಕ ಅನುಸಂಧಾನ’ ವಿಷಯ ಕುರಿತಾದ ಒಂದು ದಿನದ ರಾಷ್ಟ್ರೀಯ ವಿಚಾರಸಂಕಿರಣದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ತತ್ವಪದ ಸಾಹಿತ್ಯ ರೂಪುಗೊಂಡಿದ್ದ ಕಾಲವನ್ನು ಕತ್ತಲಯುಗ ಎಂದು ಕರೆದು ವಿಸ್ಮೃತಿಗೆ ತಳ್ಳಲಾಗಿತ್ತು. ಆದರೆ ಆ ಕತ್ತಲೆಯುಗದಲ್ಲಿಯೇ ಜಗತ್ತಿಗೆ ಮಹೋನ್ನತ ಬೆಳಕು ನೀಡುವ ನುಡಿರತ್ನಗಳು ರಚನೆಗೊಂಡಿದ್ದವು. ತತ್ವಪದಕಾರರು ಪರಂಪರೆಯೊಂದಿಗೆ ಸಂವಾದ ನಡೆಸುತ್ತಾ ವರ್ತಮಾನಕ್ಕೆ ಸೂಕ್ತವಾಗಿ ಅನ್ವಯವಾಗುವ ಹಾಗೂ ಭವಿಷ್ಯಕ್ಕೆ ಬೇಕಾದ ಜಾಗೃತಿಯನ್ನು ನೀಡುವ ಮೂಲಕ ಕನ್ನಡ ಸಂಸ್ಕೃತಿಯಲ್ಲಿ ತಮ್ಮದೇ ಆದ ಮೌಲ್ಯಯುತ ಸ್ಥಾನವನ್ನು ಪಡೆದುಕೊಂಡಿವೆ. ಸಮಾಜದಲ್ಲಿರುವ ಜಾತಿಭೇದ, ಲಿಂಗಭೇದ, ವರ್ಣಭೇದ ಮೊದಲಾದ ವಿಷಕಾರಿ ಮನಸ್ಥಿತಿಗೆ ತತ್ವಪದಕಾರರು ತಮ್ಮ ನುಡಿ-ನಡೆಗಳ ಮೂಲಕ ಚಿಕಿತ್ಸೆ ನೀಡುವ ಮೂಲಕ ಬದುಕಿನ ಸತ್ಯ ಮತ್ತು ಸಾರ್ಥಕತೆಯನ್ನು ಸಾಧಿಸಿತೋರಿದ್ದಾರೆ ಎಂದು ತಿಳಿಸಿದರು.

ವಿಶ್ವಾತ್ಮಕವಾದ ಸಂವೇದನೆಯ ತತ್ವಪದ ಸಾಹಿತ್ಯ

ವಿಚಾರಸಂಕಿರಣವನ್ನು ಉದ್ಘಾಟನೆ ಮಾಡಿದ ಕ್ರಿಸ್ತು ಜಯಂತಿ ವಿವಿಯ ಸಂಸೋಧನೆ ಮತ್ತು ಅಭಿವೃದ್ಧಿ ವಿಭಾಗದ ನಿರ್ದೇಶಕರಾದ ಫಾ.ಡಾ.ಮರಿಯಾಲಾಲ್ ಜೋಸೆಫ್ ಅವರು, ಕನ್ನಡದ ತತ್ವಪದಗಳು ಜನಸಾಮಾನ್ಯರ ವೇದಗಳಾಗಿವೆ. ಕನ್ನಡ ಸಾಹಿತ್ಯಕ್ಕೆ ಸಂಗೀತಾತ್ಮಕ ಶಾಸ್ತ್ರೀಯ ಸಂರಚನೆಯ ಜೊತೆಗೆ ವಿಶ್ವಾತ್ಮಕವಾದ ಸಂವೇದನೆಯ ಮೂಲಕ ಮಹತ್ತರವಾದ ಕೊಡುಗೆ ನೀಡಿದ್ದು ತತ್ವಪದ ಸಾಹಿತ್ಯ.

ಮಧ್ಯಯುಗೀನ ಕಾಲದ ಭಕ್ತಿಚಳವಳಿಯ ಭಾಗವಾಗಿ ಮೂಡಿಬಂದ ವಚನ ಸಾಹಿತ್ಯ ಹಾಗೂ ಕೀರ್ತನ ಸಾಹಿತ್ಯಗಳು ಕರ್ನಾಟಕದಲ್ಲಿ ಮೂಡಿಸಿದ ಸಾಂಸ್ಕೃತಿಕ ಚೈತನ್ಯಶೀಲತೆಯನ್ನು ನಂತರದಲ್ಲಿ ಮುಂದುವರೆಸುವ ಮೂಲಕ ಮತ್ತಷ್ಟು ಎತ್ತರಕ್ಕೆ ಕೊಂಡೊಯ್ದದ್ದು ತತ್ವಪದ ಸಾಹಿತ್ಯವಾಗಿದೆ. ಇಂದಿನ ಆವೇಗದ ಆಧುನಿಕ ಜಗತ್ತಿಗೆ ತತ್ವಪದಕಾರರು ನೀಡಿದ ಅರಿವಿನ ಬೆಳಕು ಅತ್ಯಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.

ನಿಜತ್ವ ಬೆಳಗುವ ದಾರಿದೀಪ ತತ್ವಪದಗಳು-ಪದ್ಮಾಲಯ ನಾಗರಾಜ್: ಪ್ರಧಾನಗೋಷ್ಠಿಯ ಅಧ್ಯಕ್ಷತೆ ವಹಿಸಿ ತತ್ವಪದಗಳ ಸಾಂಸ್ಕೃತಿಕ ಮಹತ್ವ ಕುರಿತು ಮಾತನಾಡಿದ ಅಚಲ ಸಾಧಕರಾದ ಪದ್ಮಾಲಯ ನಾಗರಾಜ್ ಅವರು, ಜಗತ್ತಿನಾದ್ಯಂತ ಇಂದು ನಡೆಯುತ್ತಿರುವ ಅಧಿಕಾರ ಹಾಗೂ ವ್ಯಾಪಾರದಾಹೀ ರಾಜಕೀಯ ಲಂಪಟ, ಆರ್ಥಿಕ ಲಂಪಟ ಹಾಗೂ ಸಾಮಾಜಿಕ ಅಸಮಾನ ಸೃಷ್ಟಿಗಳು ಮಾನವಲೋಕವನ್ನು ಭ್ರಮೆ ಮತ್ತು ಅಸತ್ಯದತ್ತ ಕೊಂಡೊಯ್ಯುತ್ತಿವೆ. ಅವೈಜ್ಞಾನಿಕ ಕಲ್ಪನೆಗಳನ್ನು ಹುಟ್ಟುಹಾಕುತ್ತಾ ವಾಸ್ತವಿಕತೆಯಿಂದ ದೂರಮಾಡುತ್ತಿವೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ನಿರಂತರ ಆಗುವಿಕೆಯ ಅನಂತವಿಶ್ವದಲ್ಲಿ ನಾವೊಂದು ಬಿಂದುವೆಂಬ ಸತ್ಯದರ್ಶನ ಮಾಡಿಸುವ ಮೂಲಕ ನಿಜತ್ವವನ್ನು ಬೆಳಗುವ ದಾರದೀಪವಾಗಿವೆ ತತ್ವಪದಗಳು ಎಂದು ತಿಳಿಸಿದರು.

‘ತತ್ವಪದಕಾರ್ತಿಯರ ಲೋಕದೃಷ್ಠಿ’ಯನ್ನು ಕುರಿತು ವಿಚಾರಮಂಡನೆ ಮಾಡಿದ ಡಾ.ಶೋಭಾರಾಣಿ ಎನ್. ಅವರು, ‘ತತ್ವಪದಕಾರ್ತಿಯರು ಸಂಸಾರದ ಸಹಯಾನದೊಂದಿಗೇ ಅಧ್ಯಾತ್ಮಿಕ ಸಾಧನೆಯನ್ನು ಮಾಡಬಹುದೆಂದು ಸಾಧಿಸಿತೋರಿದ್ದಾರೆ. ನಿರ್ಭೀತ ನುಡಿಕಾರರು ತತ್ವಪದಕಾರ್ತಿಯರು. ಮಹಿಳಾ ತತ್ವಪದಕಾರರ ಇನ್ನೂ ಎಷ್ಟೋ ತತ್ವಪದಗಳು ಸಂಗ್ರಹವಾಗಬೇಕಿದೆ’ ಎಂದು ಅಭಿಪ್ರಯಪಟ್ಟರು.

‘ಕನ್ನಡ ತತ್ವಪದಗಳು ಮತ್ತು ಬಹುತ್ವ ಭಾರತ’ ಕುರಿತು ಮಾತನಾಡಿದ ರವಿ ಕಂಬಳಿ ಅವರು, ಬಹುಸಂಸ್ಕೃತಿಗಳಿರುವ ಭಾರತದಲ್ಲಿ ಏಕರೂಪೀತನದ ಯಾಜಮಾನ್ಯ ಹೇರುವ ದೌರ್ಜನ್ಯ ಹಾಗೂ ಸಮಸ್ಯೆಗಳಿಗೆ ಪ್ರತಿಕ್ರಿಯೆಯಾಗಿ ಕನ್ನಡ ತತ್ವಪದಕಾರರು ಬಹುತ್ವವನ್ನು ತಮ್ಮ ಸಾಹಿತ್ಯದ ಆಶಯ ಹಾಗೂ ಬದುಕಿನ ಆಚರಣೆಯನ್ನಾಗಿ ಮಾಡಿಕೊಂಡರು. ಮೌಢ್ಯರಹಿತವಾದ ಸಮಸಮಾಜ ಕಲ್ಪನೆ ಅವರದಾಗಿತ್ತು. ತಮಗಿಂತಲೂ ಹಿಂದೆ ಹಲವು ಬಗೆಯ ಬಹುತ್ವದ ಮಾದರಿಗಳನ್ನು ಪ್ರತಿಪಾದಿಸಿದ್ದ ವಚನಕಾರರು ಇವರಿಗೆ ಆದರ್ಶವಾಗಿದ್ದರು ಎಂದು ತಿಳಿಸಿದರು.

ವಿಚಾರಸಂಕಿರಣದ ಭಾಗವಾಗಿ ಹೊರತರಲಾಗಿದ್ದ ‘ಕನ್ನಡ ತತ್ವಪದ ಸಾಹಿತ್ಯ

ಸಾಂಸ್ಕೃತಿಕ ಅನುಸಂಧಾನ-ಸಂಪುಟ 1 ಮತ್ತು 2’ ಕೃತಿಗಳನ್ನು ಲೋಕಾರ್ಪಣೆಗೊಳಿಸಲಾಯಿತು. ಪ್ರಸಿದ್ಧ ಗಾಯಕರಾದ ಶ್ರೀ ಖಾಸೀಂ ಮಲ್ಲಿಗೆ ಮಡುವು ತತ್ವಪದ ಗಾಯನವನ್ನು ಪ್ರಸ್ತುತಪಡಿಸಿದರು. ಪರ್ಯಾಯಗೋಷ್ಠಿಗಳಲ್ಲಿ 6೦ಕ್ಕೂ ಹೆಚ್ಚು ಸಂಶೋಧಕರು ಪ್ರಬಂಧ ಮಂಡನೆ ಮಾಡಿದರು.

ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದ ಮಾನವಿಕ ವಿಭಾಗದ ಡೀನರಾದ ಡಾ.ಗೋಪಕುಮಾರ್ ಎ.ವಿ. ಅವರು ಮುಖ್ಯ ಅತಿಥಿಯಾಗಿದ್ದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಕ್ಯಾಪ್ಟನ್ ಡಾ.ಸರ್ವೇಶ್ ಬಿ.ಎಸ್. ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ವಿಚಾರಸಂಕಿರಣದ ಸಂಯೋಜಕರಾದ ಡಾ.ಕಿರಣಕುಮಾರ್ ಹೆಚ್.ಜಿ ಅವರು ವಂದಿಸಿದರು.

ಕನ್ನಡ ಪ್ರಾಧ್ಯಾಪಕರಾದ ಡಾ.ಕುಪ್ಪನಹಳ್ಳಿ ಎಂ.ಭೈರಪ್ಪ ಅವರು ನಿರೂಪಿಸಿದರು. ಕನ್ನಡ ಪ್ರಾಧ್ಯಾಪಕರಾದ ಪ್ರೊ.ಚಂದ್ರಶೇಖರ್ ಎನ್., ಡಾ.ಸೈಯದ್ ಮುಯಿನ್, ಡಾ.ರವಿಶಂಕರ್ ಎ.ಕೆ., ತತ್ವಪದಕಾರರ ಅಧ್ಯಯನ ಕೇಂದ್ರದ ಸಿಬ್ಬಂದಿವರ್ಗದವರಾದ ರಜತಾ ಶೆಟ್ಟಿ ಹಾಗೂ ಸುಪ್ರಿಯಾ ಅವರು ಉಪಸ್ಥಿತರಿದ್ದರು. 200ಕ್ಕೂ ಹೆಚ್ಚು ಅಧ್ಯಾಪಕರು, ಸಂಶೋಧಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಕಲಿ ಜಿ.ಎಸ್.ಟಿ ಬಿಲ್ಲುಗಳ ಮೂಲಕ ಅವ್ಯವಹಾರ | ಕೊಪ್ಪಳ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಾ. ಗಣಪತಿ ಕೆ. ಲಮಾಣಿ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ಕೊಪ್ಪಳ:ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ಕೊಪ್ಪಳ ಇಲ್ಲಿ 2022-23 ರಿಂದ 2024-25ನೇ ಸಾಲಿನ ಅವಧಿಯಲ್ಲಿ ವಿದ್ಯಾರ್ಥಿಗಳಿಂದ ಸಂಗ್ರಹಿಸಿದ ಅರೇ ಸರ್ಕಾರಿ ಖಾತೆಯ ಅನುದಾನದಲ್ಲಿ ನಕಲಿ ಜಿ.ಎಸ್.ಟಿ ಬಿಲ್ಲುಗಳ ಮೂಲಕ ನಿಯಮಬಾಹಿರವಾಗಿ ಖರೀದಿ ಪ್ರಕ್ರಿಯೆಗೆ ಮುಂದಾಗಿ ಲಕ್ಷಾಂತರ ರೂಪಾಯಿಗಳನ್ನು ವಂಚಿಸಿರುವ ಪ್ರಾಂಶುಪಾಲರಾದ ಡಾ. ಗಣಪತಿ ಕೆ. ಲಮಾಣಿ ಇವರ ವಿರುದ್ಧ ಸೂಕ್ತ ಕಾನೂನುಕ್ರಮ ಜರುಗಿಸುವಂತೆ ವಕೀಲ ಡಾ.ಕೆ.ಎ.ಓಬಳೇಶ್ ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದಾರೆ.

ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ಕೊಪ್ಪಳ ಇವರಿಂದ ಅರೇ ಸರ್ಕಾರಿ ಖಾತೆಯ ಅನುದಾನದ ಬಳಕೆಯ ಅಧಿಕೃತ ದಾಖಲೆಗಳನ್ನು ಪಡೆದು, ಪರಿಶೀಲನೆ ಮಾಡಿದಾಗ ಕೆ.ಟಿ.ಪಿ.ಪಿ ನಿಯಮ ಉಲ್ಲಂಘನೆ ಮಾಡಿರುವುದು ಮಾತ್ರವಲ್ಲದೆ, ವೆಂಕಟೇಶ್ ಟ್ರೇರ‍್ಸ್, ಕುಕನೂರು ಮತ್ತು ವೆಂಕಟೇಶ್ ಟ್ರೇರ‍್ಸ್, ತಳಕಲ್ಲ ಎಂಬ ಒಂದೇ ಹೆಸರಿನ ಏಜೆನ್ಸಿಯ ಮೂಲಕ ಎರಡು ಸ್ಥಳಗಳ ಹೆಸರಿನಲ್ಲಿ ನಕಲಿ ಜಿ.ಎಸ್.ಟಿ ಬಿಲ್ಲುಗಳನ್ನು ಸೃಷ್ಟಿಸಿಕೊಂಡು ಲಕ್ಷಾಂತರ ರೂಪಾಯಿ ಅನುದಾನವನ್ನು ವಂಚನೆ ಮಾಡಿರುವುದು ಕಂಡುಬದಿರುತ್ತದೆ.

ಪ್ರಾಂಶುಪಾಲರಿಗೆ ಈ ಬಗ್ಗೆ ಸ್ಪಷ್ಟನೆ ನೀಡುವಂತೆ ಮನವಿ ಸಲ್ಲಿಸಲಾಗಿತ್ತು. 3 ತಿಂಗಳು ಕಳೆದರೂ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರು ಯಾವುದೇ ಪ್ರತ್ಯುತ್ತರ ನೀಡದ ಕಾರಣ, ನಕಲಿ ಜಿ.ಎಸ್.ಟಿ ಮೂಲಕ ಹಣ ವಂಚಿಸಿರುವ ಪ್ರಕರಣವನ್ನು ತನಿಖೆಗೆ ಒಳಪಡಿಸುವಂತೆ ಲೋಕಾಯುಕ್ತಗೆ ದೂರು ನೀಡಿ, ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳೇಶ್ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ದಿನದ ಸುದ್ದಿ

ಫಾಸ್ಟ್ ಫುಡ್ ತಯಾರಿಕೆ ಉಚಿತ ತರಬೇತಿ

Published

on

ಸುದ್ದಿದಿನ,ದಾವಣಗೆರೆ:ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯಿಂದ ಫಾಸ್ಟ್ ಫುಡ್ ತಯಾರಿಕೆ ಕುರಿತ 12 ದಿನಗಳ ಉಚಿತ ತರಬೇತಿ ಆಯೋಜಿಸಲಾಗಿದೆ.

ತರಬೇತಿಯು ಫೆಬ್ರವರಿ 16 ರಿಂದ ಹಮ್ಮಿಕೊಳ್ಳಲಾಗಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕರು ಅರ್ಜಿಯನ್ನು ಸಲ್ಲಿಸಬಹುದು. 18 ರಿಂದ 50 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಗ್ರಾಮೀಣ ಭಾಗದ ಬಿಪಿಎಲ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಅನ್ನು ಕಡ್ಡಾಯವಾಗಿ ಹೊಂದಿರಬೇಕು. ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು. ತರಬೇತಿ ಅವಧಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್ ಸಂಖ್ಯೆ: 9481506564, 9740982585, 9380162042, 9241482541, 9113880324 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending