Connect with us

ದಿನದ ಸುದ್ದಿ

ಅಮಾಯಕ ಡಿಲೆವರಿ ಬಾಯ್ ಮೇಲೆ ಸುಳ್ಳು ಕೇಸ್ ದಾಖಲಿಸಿದ ಮಹಿಳೆ : ಅಸಲಿಗೆ ನಡೆದಿದ್ದೇನು ಗೊತ್ತಾ..!?

Published

on

  • ನಿಶಾಂತ್ ಮಂಡಗದ್ದೆ

ತ್ತರ ಭಾರತೀಯಳಿಂದ ಕರ್ನಾಟಕದಲ್ಲಿ ಕನ್ನಡಿಗನ(ದಕ್ಷಿಣ ಭಾರತೀಯ) ಮೇಲೆ ದಬ್ಬಾಳಿಕೆ. ಆಶ್ಚರ್ಯವೇನಿಲ್ಲ ಕೆಳಗಿನ ಪೂರ್ತಿ ಸ್ಟೋರಿ ಓದಿ. ಅಮಾಯಕ ಡಿಲೆವರಿ ಬಾಯ್ ಮೇಲೆ ಸುಳ್ಳು ಕೇಸ್ ದಾಖಲಿಸಿದ ಮಹಿಳೆ.

“ನಾನು ಅವಳ ಅಪಾರ್ಟ್ಮೆಂಟ್ ಬಾಗಿಲನ್ನು ತಲುಪಿದ ನಂತರ ಅವಳಿಗೆ ಆಹಾರವನ್ನು ಹಸ್ತಾಂತರಿಸಿದೆ ಮತ್ತು ಅವಳು ನನಗೆ ಹಣ ಪಾವತಿಸಬೇಕೆಂದು ನಾನು ಕಾಯುತ್ತಿದ್ದೆ (ಅವಳು ಕ್ಯಾಶ್ ಆನ್ ಡಿಲೆವರಿ ವಿಧಾನವನ್ನು ಆರಿಸಿಕೊಂಡಿದ್ದಳು)” ಎಂದು ಜ಼ೊಮ್ಯಾಟೋ ಡಿಲೆವರಿ ಬಾಯ್ ಕಾಮರಾಜ್ ಹೇಳುತ್ತಾರೆ, ”

ಟ್ರಾಫಿಕ್ ಹಾಗೂ ಗುಂಡಿ ರಸ್ತೆಗಳ ಕಾರಣದಿಂದ ಡಿಲೆವರಿ ತಡವಾದ ಕಾರಣ ನಾನು ಕ್ಷಮೆಯಾಚಿಸಿದೆ. ಆದರೆ ಅವಳು ಮೊದಲಿನಿಂದಲೂ ನನ್ನ ಜೊತೆ ತುಂಬಾ ಅಸಭ್ಯವಾಗಿ ವರ್ತಿಸುತ್ತಿದ್ದಳು ಹಾಗೂ ನನಗೆ ಅರ್ಥವಾಗದ ಹಿಂದಿ ಭಾಷೆಯಲ್ಲಿ ಬೈಯ್ತುತ್ತಿದ್ದಳು.

ನಂತರ ಅವಳು ‘ನೀನು ಯಾಕೆ ತಡವಾಗಿ ಬಂದೆ?’ ನಾನು ಕ್ಷಮೆಯಾಚಿಸುತ್ತಾ ಉತ್ತರಿಸಿದೆ, ಏಕೆಂದರೆ ಹಲವು ಕಡೆ ರಸ್ತೆ ಕಾಮಗಾರಿ ನಡೆಯುತ್ತಿರುವುದರಿಂದ ರಸ್ತೆ ತಡೆಗಳಿವೆ ಮತ್ತು ಟ್ರಾಫಿಕ್ ಜಾಮ್‌ಗಳೂ ಇವೆ. ಆದರೆ ಅವಳು 45-50 ನಿಮಿಷಗಳಲ್ಲಿ ಆದೇಶವನ್ನು ತಲುಪಿಸಬೇಕು ಎಂದು ಅವರು ಒತ್ತಾಯಿಸುತ್ತಲೇ ಇದ್ದರು.

ನಾನು ಎರಡು ವರ್ಷಗಳಿಗಿಂತ ಹೆಚ್ಚು ಕಾಲ ಈ ಕೆಲಸದಲ್ಲಿ ಕೆಲಸ ಮಾಡುತ್ತಿದ್ದೇನೆ ಮತ್ತು ನಾನು ಈ ರೀತಿಯ ತೊಂದರೆ ಎದುರಾಗಿದ್ದು ಇದೇ ಮೊದಲು.” ಎಂದು ಉತ್ತರ ಕೊಟ್ಟೆ. ಗ್ರಾಹಕರಾದ ಹಿತೇಶಾರವರು ಆಹಾರವನ್ನು ನನ್ನಿಂದ ಕಸಿದುಕೊಂಡರು – ಮತ್ತು ನಂತರ ಅದರ ಹಣವನ್ನು ಪಾವತಿಸಲು ನಿರಾಕರಿಸಿದರು ಎಂದು ಕಾಮರಾಜ್ ಹೇಳಿಕೆ ನೀಡಿದ್ದಾರೆ.

ಅವಳು ‘ಜೊಮಾಟೊ ಚಾಟ್’ ಬೆಂಬಲದೊಂದಿಗೆ ಮಾತನಾಡುತ್ತಿದ್ದೇನೆ ಎಂದು ಬಹಳ ಸಮಯವಾದರೂ ಹಣವನ್ನು ಪಾವತಿ ಮಾಡಲಿಲ್ಲ. ಹೇಳಿದರು. ಅವಳಿಗೆ ಹಣ ಪಾವತಿಸಬೇಕೆಂದು ಅವನು ಮನವಿ ಮಾಡಿದೆ,. “ಈ ಸಮಯದಲ್ಲಿ, ಅವಳು ನನ್ನನ್ನು ‘ಗುಲಾಮ’ ಎಂದು ಕರೆದಳು ಮತ್ತು ನಂತರ ಅವಳು ‘ನಿನ್ನ ಕೈಯಲ್ಲಿ ನನಗೆ ಏನೂ ಮಾಡಲು ಆಗುವುದಿಲ್ಲ, ಜ಼ೊಮ್ಯಾಟೋದವರು ನಿನ್ನನ್ನು ಕೆಲಸದಿಂದ ಕಿತ್ತು ಹಾಕುವ ಹಾಗೆ ಮಾಡುತ್ತೇನೆ’ ಎಂದು ಕೂಗಲು ಪ್ರಾರಂಭಿಸಿದಳು.

ಈ ಮಧ್ಯೆ, ಜೊಮಾಟೊ ಕಸ್ಟಮರ್ ಕೇರ್ ಅವರ ಕೋರಿಕೆಯ ಆಧಾರದ ಮೇಲೆ ಅವರು ತಮ್ಮ ಆರ್ಡರ್‌ನ್ನು ರದ್ದುಗೊಳಿಸಿದ್ದಾರೆ ಎಂದು ಹೇಳಿದರು ಮತ್ತು ನಾನು ಅವಳನ್ನು ಆಹಾರವನ್ನು ಹಿಂತಿರುಗಿಸಲು ಕೇಳಿದೆ ಆದರೆ ಅವಳು ಸಹಕರಿಸಲಿಲ್ಲ, ಆಕೆಯ ಕಿರುಚಾಟವನ್ನು ಕೇಳಲಾರದೆ ಆಕೆಯ ಆಹಾರವನ್ನು ತೆಗೆದುಕೊಳ್ಳದೆ ಅಪಾರ್ಟ್ಮೆಂಟ್ ಕಟ್ಟಡವನ್ನು ಬಿಡಲು ಅವನು ನಿರ್ಧರಿಸಿದನೆಂದು ಕಾಮರಾಜ್ ಹೇಳಿದ್ದಾರೆ.

“ಈ ಸಮಯದಲ್ಲಿ, ನಾನು ಲಿಫ್ಟ್‌ನತ್ತ ನಡೆಯುತ್ತಿರುವಾಗ, ಅವಳು ಹಿಂದಿಯಲ್ಲಿ ಅವಾಚ್ಯ ಪದಗಳನ್ನು ಬಳಸಲು ಪ್ರಾರಂಭಿಸಿದಳು. (ನನಗೆ ಹಲವು ಹಿಂದಿಯ ಅವಾಚ್ಯ ಪದಗಳು ತಿಳಿದಿರುವ ಕಾರಣ ಅವಳು ಬೈಯ್ಯುತ್ತಿರುವುದು ಅವಾಚ್ಯವೆಂದು ತಿಳಿಯಿತು) ಅವಳು ಇದ್ದಕ್ಕಿದ್ದಂತೆ ನನ್ನ ಮೇಲೆ ಚಪ್ಪಲಿ ಎಸೆದು ನನ್ನನ್ನು ಹೊಡೆಯಲು ಪ್ರಾರಂಭಿಸಿದಳು.

ನನ್ನ ಸುರಕ್ಷತೆಗಾಗಿ, ಅವಳು ನನ್ನನ್ನು ಹೊಡೆಯುವಾಗ, ಅವಳ ಹೊಡೆತಗಳನ್ನು ರಕ್ಷಿಸಲು ನಾನು ನನ್ನ ಕೈಗಳಿಂದ ಅವಳನ್ನು ತಡೆಯಲು ಪ್ರಯತ್ನಿಸಿದೆ, ಈ ಸಮಯದಲ್ಲಿ, ಅವಳು ನನ್ನ ಕೈಯನ್ನು ದೂರ ತಳ್ಳಲು ಪ್ರಯತ್ನಿಸುತ್ತಿದ್ದಾಗ, ಆಕಸ್ಮಿಕವಾಗಿ ಮೂಗಿನ ಮೇಲೆ ತನ್ನ ಬೆರಳಿನ ಉಂಗುರದಿಂದ ತನ್ನನ್ನು ತಾನೇ ಹೊಡೆದುಕೊಂಡಳು, ಅದು ರಕ್ತಸ್ರಾವಕ್ಕೆ ಕಾರಣವಾಯಿತು”. ಇಷ್ಟು ಡಿಲೆವರಿ ಬಾಯ್ ಕಾಮರಾಜ್ ಹೇಳಿಕೆ ಕೊಟ್ಟಿದ್ದಾರೆ.

ಜ಼ೊಮ್ಯಾಟೊ ಗ್ರಾಹಕಿ ಹಿತೇಶಾ ಮುಖವನ್ನು ನೋಡುವ ಯಾರಾದರೂ ಇದನ್ನು ಅರ್ಥಮಾಡಿಕೊಳ್ಳಬಹುದು ಇದು ಕೈಗಳ ಪಂಚ್‌ನಿಂದ ಆದ ಏಟಲ್ಲ ಸಣ್ಣ ಮಟ್ಟದ ಸಲಾಕೆಯ ತರಹದ(ಉಂಗುರ) ವಸ್ತುವಿನಿಂದ ಆದ ಗಾಯವೆಂದು. ಪಂಚ್ ಮಾಡಿದರೆ ಮೂಗಿನ ಮೇಲೆ ದೊಡ್ಡ ಹೊಡೆತ ಬೀಳುತ್ತದೆ ಹಾಗೂ ಮೂಗಿನ ಆಕಾರ ಕೂಡಾ ವಿಕಾರವಾಗುತ್ತದೆ.

ಇಲ್ಲಿ ಕಾಮರಾಜ್ ಕೂಡ “ನಾನು ಯಾವುದೇ ಉಂಗುರಗಳನ್ನು ಧರಿಸುವುದಿಲ್ಲ” ಅವಳು ಅವನನ್ನು ಲಿಫ್ಟ್ ಬಳಸಿ ಬಿಡಲು ಅನುಮತಿಸಲಿಲ್ಲ, ಆದ್ದರಿಂದ ಅವನು ಮೂರನೇ ಮಹಡಿಗೆ ಮೆಟ್ಟಿಲುಗಳ ಕೆಳಗೆ ಓಡಬೇಕಾಯಿತು ಎಂದು ಕಾಮರಾಜ್ ಹೇಳಿದ್ದಾರೆ.

ಹಿತೇಶಾ ತನ್ನ ಇನ್ಸ್ಟಾಗ್ರಾಮ್ ವೀಡಿಯೊದಲ್ಲಿ ಉಂಗುರವನ್ನು ಧರಿಸಿರುವುದು ಕಂಡುಬರುತ್ತದೆ.

ಉತ್ತರ ಭಾರತದಿಂದ ಕೆಲಸ ಹುಡುಕಿಕೊಂಡು ಕರ್ನಾಟಕಕ್ಕೆ ಬರುವ ಅನೇಕರಿಗೆ ಅದೇನೋ ಗೊತ್ತಿಲ್ಲ ಗಾಂಚಾಲಿಗಳು ಹೆಚ್ಚಾಗೆ ಇರುತ್ತದೆ. ಮೊದಲು ಪ್ರಚೋದಿಸುವುದು, ನಂತರ ಹಲ್ಲೆ ಮಾಡಲು ಪ್ರಯತ್ನಿಸುವುದು, ಕೊನೆಯದಾಗಿ ತಾವೆ ಹಲ್ಲೆಗೊಳಗಾದ ರೀತಿ ನಾಟಕವಾಡುವುದು.

ಇವಳ ಹೊಟ್ಟೆವನ್ನು ಉಚಿತವಾಗಿ ತುಂಬಿಸಿಕೊಳ್ಳುವುದಕ್ಕಾಗಿ ಒಬ್ಬ ಅಮಾಯಕನ ಇಡೀ ಕುಟುಂಬವನ್ನು ಉಪವಾಸ ಕೆಡವಿದ್ದಾಳೆ. ಪೊಲೀಸರು ಸ್ಪಷ್ಟವಾಗಿ ತನಿಖೆ ಮಾಡಿದರೆ ನಿಜವಾದ ಅಪರಾಧಿಗಳು ಯಾರೆಂದು ತಿಳಿಯುವುದರಲ್ಲಿ ಅನುಮಾನವಿಲ್ಲ. ದಿನೇ ದಿನೇ ಉತ್ತರದವರ ಗಾಂಚಾಲಿಗಳು ಹೆಚ್ಚಾಗುತ್ತಲೇ ಇವೆ.

ಇದರ ಜೊತೆ ಟ್ರಾಫಿಕ್ ರೂಲ್ಸ್‌ಗಳನ್ನು ಸರಿಯಾಗಿ ಪಾಲಿಸದ ಉತ್ತರ ಭಾರತೀಯರು ಕರ್ನಾಟಕದ ಪೊಲಿಸರಿಗೆ ಹಿಂದಿಯಲ್ಲಿ ತೆಗಳುವುದು, ಸೋಷಿಯಲ್ ಮಿಡಿಯಾಗಳಲ್ಲಿ ಕರ್ನಾಟಕ ಪೊಲೀಸರ ಬಗ್ಗೆ ಕೆಟ್ಟದಾಗಿ ಬಿಂಬಿಸುವುದು ಈಗೀಗ ಹೆಚ್ಚಾಗೆ ನಡೆಯುತ್ತಿದೆ. ಕನ್ನಡಿಗರಿಗೆ ಸಹನೆ ಹೆಚ್ಚಾಗಿಯೇ ಇರುತ್ತದೆ.

ಆದರೆ ಸಹನೆ ಕಳೆದುಕೊಂಡರೆ ಉತ್ತರದವರೆಲ್ಲಾ ಕರ್ನಾಟಕದಿಂದ ಕಳೆದುಹೋಗುವುದರಲ್ಲಿ ಸಂದೇಹವಿಲ್ಲ. ಬಂದ್ವಾ, ಕೆಲಸ ಮಾಡಿದ್ವಾ, ಸಂಬಳ ತಂಗೊಂಡ್ವಾ, ಹೋದ್ವಾ ಇಷ್ಟ್ರಲ್ಲೇ ಇರಬೇಕು. ಅದು ಬಿಟ್ಟು ನಿಮ್ಮ ಬಾಲ ಬಿಚ್ಚಿದರೆ ಬಾಲ ಕತ್ತರಿಸುವುದು ಕನ್ನಡಿಗರಿಗೆ ಚೆನ್ನಾಗಿ ಗೊತ್ತಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

Published

on

ಸುದ್ದಿದಿನಡೆಸ್ಕ್: 2024-25ನೇ ಸಾಲಿನ ರಾಜ್ಯ ಮುಂಗಡ ಪತ್ರ ಹಿನ್ನೆಲೆಯಲ್ಲಿ ರೈತ ಸಂಘಗಳ ಪ್ರತಿನಿಧಿಗಳು ಹಾಗೂ ಮುಖಂಡರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನಲ್ಲಿಂದು ಸಭೆ ನಡೆಸಿದರು.ಬಳಿಕ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ಮುಂಗಡ ಪತ್ರ ಮಂಡನೆ ಹಿನ್ನೆಲೆಯಲ್ಲಿ ರೈತ ನಾಯಕರೊಂದಿಗೆ ಸಭೆ ನಡೆಸಿ, ಅವರ ಅಭಿಪ್ರಾಯ ಪಡೆಯಲಾಗಿದೆ. ಬಜೆಟ್‌ನಲ್ಲಿ ಸರ್ಕಾರದ ಇತಿಮಿತಿಯಲ್ಲಿ ಏನು ಸೇರಿಸಬೇಕು ಎಂಬ ಬಗ್ಗೆ ಚರ್ಚೆಯಾಗಿದೆ. ರೈತರ ಹಿತ ಕಾಪಾಡುವಲ್ಲಿ ಸರ್ಕಾರ ಬದ್ಧವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಇದೇ ವೇಳೆ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.ಗೃಹಲಕ್ಷ್ಮಿ, ಪಡಿತರ ಸಹಾಯಧನದ ಬಾಕಿಯನ್ನು ಶೀಘ್ರ ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯನ್ನು ನಡೆಸಲು ರಾಜ್ಯ ಸರ್ಕಾರ ಸಿದ್ಧವಿದೆ. ಈ ಸಂಬಂಧ ಹೈಕೋರ್ಟ್ ನೀಡುವ ಆದೇಶವನ್ನು ಪಾಲಿಸಲಾಗುವುದು ಎಂದು ಪುನರುಚ್ಚರಿಸಿದ್ದಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಪಕ್ಷದ ವರಿಷ್ಠರಿಗೆ ಬಿಟ್ಟ ವಿಚಾರ ಎಂದು ಅವರು ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಾರ್ಚ್ 3 ರಂದು ವಿಧಾನಮಂಡಲ ಅಧಿವೇಶನ; 7 ರಂದು ಬಜೆಟ್ ಮಂಡನೆಗೆ ಸರ್ಕಾರ ನಿರ್ಧಾರ

Published

on

ಸುದ್ದಿದಿನಡೆಸ್ಕ್:ಮಾರ್ಚ್ 7 ರಂದು ರಾಜ್ಯ ಸರ್ಕಾರದ ಬಜೆಟ್ ಮಂಡನೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾರ್ಚ್ 3 ರಂದು ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು, ಅಂದು ರಾಜ್ಯಪಾಲರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಮಾರ್ಚ್ 4 ರಿಂದ ಮೂರು ದಿನ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಎಷ್ಟು ದಿನ ಅಧಿವೇಶನ ನಡೆಸಬೇಕು ಎನ್ನುವುದನ್ನು ಕಲಾಪ ಸಲಹಾ ಸಮಿತಿ ನಿರ್ಧಾರ ಮಾಡಲಿದೆ ಎಂದು ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಉತ್ಸವಗಳ ಹೆಸರಲ್ಲಿ ಮೌಢ್ಯ ತೊರೆಯಬೇಕು : ಈಶ್ವರಾನಂದಪುರಿ ಸ್ವಾಮೀಜಿ

Published

on

ಸುದ್ದಿದಿನ,ದಾವಣಗೆರೆ: ನಮಗೆ ಇಂದು ಭಕ್ತಿ ಮತ್ತು ಜ್ಞಾನ ಎರಡೂ ಮುಖ್ಯ. ಭಕ್ತಿ ಹೆಚ್ಚಿಸುವ ದೇವಾಲಯಗಳ ಜತೆಯಲ್ಲೇ ಜ್ಞಾನ ವಿಸ್ತರಿಸುವ ವಿದ್ಯಾಲಯಗಳೂ ಹೆಚ್ಚಬೇಕು ಎಂದು ಹೊಸದುರ್ಗ ಕನಕ ಶಾಖಾ ಮಠದ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ ಹೇಳಿದರು.

ತಾಲೂಕಿನ ಹಳೆಕುಂದುವಾಡ ಗ್ರಾಮದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಶ್ರೀ ಆಂಜನೇಯ ಸ್ವಾಮಿ, ಶ್ರೀ ಬಸವೇಶ್ವರ ದೇವಸ್ಥಾನದ ಉದ್ಘಾಟನೆ, ಶಿಲಾಮೂರ್ತಿ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಇಂದಿನ ಮಕ್ಕಳನ್ನು ಐಎಎಎಸ್, ಕೆಎಎಸ್‌ನಂತಹ ಉನ್ನತ ಶಿಕ್ಷಣ ಹಾಗೂ ಸಂಸ್ಕಾರ ನೀಡಲು ಪಾಲಕರು ಮುಂದಾಗಬೇಕು. ಉತ್ಸವಗಳ ಹೆಸರಲ್ಲಿ ಮೌಢ್ಯ ತೊರೆಯಬೇಕು. ದುಂದುವೆಚ್ಚ ಕಡಿಮೆ ಮಾಡಬೇಕು ಎಂದೂ ಸಲಹೆ ನೀಡಿದರು.

ಶ್ರೀಕೃಷ್ಣನು ಕನಕನಿಗೆ, ಶ್ರೀರಾಮನು ಶಬರಿಗೆ ಒಲಿದಿದ್ದು ಜಾತಿಯಿಂದಲ್ಲ; ಅವರಲ್ಲಿದ್ದ ಭಕ್ತಿಯಿಂದಾಗಿ. ಭಕ್ತಿ ಮತ್ತು ಭಕ್ತನಿಗೆ ಜಾತಿ ಇಲ್ಲ. ಎಲ್ಲ ಸ್ವಾಮೀಜಿಗಳನ್ನು, ವರ್ಗದವರನ್ನು ಒಗ್ಗೂಡಿಸಿದ ಕುಂದುವಾಡ, ಸಾಮರಸ್ಯದ ಗ್ರಾಮವಾಗಿದೆ. ಪ್ರತಿ ಗ್ರಾಮದಲ್ಲೂ ಇಂತಹ ವಾತಾವರಣ ಇರಬೇಕು ಎಂದು ಆಶಿಸಿದರು.

ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಮಾತನಾಡಿ ಆಂಜನೇಯನಿಗೆ ಸೀಮಿತ ಜಾತಿಯ ಭಕ್ತರಿಲ್ಲ. ಆತ ಜಾತ್ಯತೀತ ವ್ಯಕ್ತಿ. ಭಕ್ತಿಗೆ ಹೆಸರಾದ ಆಂಜನೇಯ ಹಾಗೂ ಸಮಾನತೆಗೆ ಹೆಸರಾದ ಬಸವೇಶ್ವರರ ದೇಗುಲ ಪ್ರತಿಷ್ಠಾಪನೆಯನ್ನು ಕುಂದುವಾಡ ಗ್ರಾಮಸ್ಥರು ಭಾವೈಕ್ಯ, ಸೌಹಾರ್ದ ಹಾಗೂ ಸಹಬಾಳ್ವೆಯಿಂದ ಮಾಡುತ್ತಿದ್ದಾರೆ. ಈ ಕುಂದುವಾಡ ಗ್ರಾಮ ಸೌಹಾರ್ದ ಗ್ರಾಮವಾಗಿ ಬದಲಾಗಲಿ ಎಂದು ಹೇಳಿದರು.

ಹದಡಿಯ ಚಂದ್ರಗಿರಿ ಮಠದ ಮುರಳೀಧರ ಸ್ವಾಮೀಜಿ ಮಾತನಾಡಿ ಎಲ್ಲವನ್ನು ಕೊಟ್ಟ ದೇವರನ್ನು ಮರೆಯುತ್ತಿದ್ದೇವೆ. ನಿಸರ್ಗವನ್ನು ಹಾಳು ಮಾಡುತ್ತ, ಮಾಲಿನ್ಯ ಹೆಚ್ಚಿಸುತ್ತಿದ್ದೇವೆ. ನಮ್ಮಲ್ಲಿ ಭಯ ಮೂಡಿಸಲು ಹಿರಿಯರು ಊರಿಗೊಂದು ದೇವಸ್ಥಾನ ನಿರ್ಮಿಸಿದ್ದಾರೆ. ಆದರೆ ನಮ್ಮೊಳಗಿರುವ ದೇವರನ್ನು ನಾವು ಕಾಣಬೇಕು. ಮದಗಳನ್ನು ಕೈಬಿಡಬೇಕು. ಧರ್ಮ ಕಾರ್ಯ, ಪರೋಪಕಾರ ಗುಣ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.

ವಿರಕ್ತಮಠದ ಬಸವಪ್ರಭು ಸ್ವಾಮೀಜಿ ಮಾತನಾಡಿ ಬಸವತತ್ವ ಎಲ್ಲರೂ ಕೂಡಿ ಬಾಳುವುದನ್ನು ಹೇಳಿದೆ. ಎಲ್ಲ ವರ್ಗಗಳಿಗೂ ಬಸವಣ್ಣನವರು ಸಾಮಾಜಿಕ ನ್ಯಾಯ ನೀಡಿದರು. ನಾವಿಂದು ಅವರ ದಾರಿಯಲ್ಲಿ ಸಾಗಬೇಕಿದೆ. ಬಸವಣ್ಣ ಕಂಡು ಕನಸು ಕುಂದುವಾಡ ಗ್ರಾಮದಲ್ಲಿ ಅನಾವರಣವಾಗಿದ್ದು, ಇಲ್ಲಿ ಸದಾ ಶಾಂತಿ ನೆಲೆಸಲಿ ಎಂದು ಆಶಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಎಸ್‌ಎಸ್. ಮಲ್ಲಿಕಾರ್ಜುನ್ ಮಾತನಾಡಿ, ಗ್ರಾಮದವರು ತುಂಬಾ ಒಗ್ಗಟ್ಟಿನಿಂದ ದೇವಾಲಯ ನಿರ್ಮಾಣ ಮಾಡಿರೋದು ಮೆಚ್ಚುವಂತಾಗಿದೆ,
ತಡವಾಗಿಯಾದರೂ ಗ್ರಾಮದಲ್ಲಿ ದೇಗುಲಗಳು ಉತ್ತಮವಾಗಿ ನಿರ್ಮಿತವಾಗಿವೆ. ಗ್ರಾಮದ ಅಭಿವೃದ್ಧಿಗೆ ಎಲ್ಲರೂ ಒಗ್ಗಟ್ಟು ಪ್ರದರ್ಶಿಸಬೇಕು ಎಂದು ಹೇಳಿದರು.

ದಾವಣಗೆರೆ- ಹಳೇ ಕುಂದುವಾಡ ಮುಖ್ಯ ರಸ್ತೆಗೆ ಹೊಂದಿಕೊಂಡ ರಸ್ತೆ ವ್ಯಾಜ್ಯ ನ್ಯಾಯಾಲಯದಲ್ಲಿದ್ದು ಇದನ್ನು ತೆರವುಗೊಳಿಸಿದಲ್ಲಿ ಗ್ರಾಮಸ್ಥರು ಬಯಸಿದಂತೆ 80 ಅಡಿ ರಸ್ತೆ ನಿರ್ಮಾಣ ಮಾಡಲು ಬದ್ಧನಿದ್ದೇನೆ. ಈ ಸಂಬಂಧ ದೂಡಾ ಅಧಿಕಾರಿಗಳು, ಜಮೀನಿನ ಮಾಲೀಕರು, ಗುತ್ತಿಗೆದಾರರನ್ನು ಸೇರಿಸಿ ಸಭೆ ನಡೆಸೋಣ ಎಂದರು.

ಶಾಸಕ ಕೆ.ಎಸ್.ಬಸವಂತಪ್ಪ ಮಾತನಾಡಿ, ಈ ಭಾಗದಲ್ಲಿ ದೇಗುಲಗಳ ಸಂಖ್ಯೆ ಹೆಚ್ಚಿದೆ. ಹಿಂದುಳಿದ ವರ್ಗದ ಮಕ್ಕಳು ವಿದ್ಯಾವಂತರಾದರೆ ಇಂತಹ ಹತ್ತು ದೇವಸ್ಥಾನ ಕಟ್ಟುತ್ತಾರೆ, ಹೀಗಾಗಿ ಶಾಲೆಗಳ ನಿರ್ಮಾಣಕ್ಕೂ ಮಹತ್ವ ನೀಡಿ ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ, ಮೈಲಾರ ಕ್ಷೇತ್ರದ ಕಾರ್ಣಿಕ ನುಡಿಯುವ ರಾಮಪ್ಪಜ್ಜ, ಹಳೆಕುಂದುವಾಡದ ಸ್ವಾಮಿಜಿ ರಾಜಣ್ಣ, ಮುಖಂಡರಾದ ಬಿ.ಜಿ. ಅಜಯಕುಮಾರ್, ಲೋಕಿಕೆರೆ ನಾಗರಾಜ್, ಶ್ರೀನಿವಾಸ ದಾಸಕರಿಯಪ್ಪ, ಎಚ್. ವೆಂಕಟೇಶ್, ಜೆ.ಎನ್. ಶ್ರೀನಿವಾಸ್. ಶ್ವೇತಾ ಶ್ರೀನಿವಾಸ್, ಮುದೇಗೌಡ್ರ ಗಿರೀಶ್, ತಹಸೀಲ್ದಾರ್ ಬಿ.ಎನ್.ಅಶ್ವಥ್, ದೇವಸ್ಥಾನ ಅಭಿವೃದ್ಧಿ ಸಮಿತಿ ಸದಸ್ಯರು, ಗ್ರಾಮದ ಮುಖಂಡರು, ಯುವಕರು, ಗ್ರಾಮಸ್ಥರು ಸೇರಿದಂತೆ ಇತರರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending